My Blog List

Wednesday, April 30, 2008

ಇಂದಿನ ಇತಿಹಾಸ History Today ಏಪ್ರಿಲ್ 30

ಇಂದಿನ ಇತಿಹಾಸ

ಏಪ್ರಿಲ್ 30

ಜಗತ್ತಿನ ಅರ್ಧದಷ್ಟು ಭಾಗಕ್ಕೆ ಪೆಗಾಸಸ್ ಮೈನೈರ್ ಜಿಟಿ 450 ಮೈಕ್ರೋಲೈಟ್ ವಿಮಾನದ ಮೂಲಕ ಸುತ್ತು ಹಾಕುವ ಮೂಲಕ ವಿಶ್ವದಾಖಲೆ ನಿರ್ಮಿಸಿದ ಬ್ರಿಟನ್ನಿನ ಅಂಧ ವಿಮಾನಯಾನಿ ಮೈಲ್ಸ್ ಹಿಲ್ಟನ್ ಬಾರ್ಬರ್ ತನ್ನ ಸಹ ಚಾಲಕ ರಿಚರ್ಡ್ ಮೆರೆಡಿತ್ ಹಾರ್ಡಿ ಜೊತೆಗೆ ಸಿಡ್ನಿಯ ಬ್ಯಾಂಕ್ಸ್ ಟೌನ್ ವಿಮಾನ ನಿಲ್ದಾಣಕ್ಕೆ ವಾಪಸಾದರು. ಮಾರ್ಚ್ 7ರಂದು ಲಂಡನ್ ಸಮೀಪದ ಬ್ರಿಗ್ಗಿನ್ ಹಿಲ್ ಏರ್ ಫೀಲ್ಡ್ ನಿಂದ 55 ದಿನಗಳ ತಮ್ಮ ಯಾನ ಆರಂಭಿಸಿದ್ದ ಅವರು ವಿಶ್ವದ 21 ರಾಷ್ಟ್ರಗಳ ಮೇಲೆ ಹಾರಾಡಿದರು.

2007: ದೇಶದಲ್ಲಿ ಇದೇ ಪ್ರಪ್ರಥಮ ಬಾರಿಗೆ ಮಹಿಳಾ ನೌಕರರನ್ನು ರಾತ್ರಿ ವೇಳೆಯಲ್ಲಿ ದುಡಿಸಿಕೊಳ್ಳುವುದನ್ನು ನಿಷೇಧಿಸಲು ರಾಜ್ಯ ಸರ್ಕಾರವು ಕರ್ನಾಟಕ ಅಂಗಡಿಗಳು ಮತ್ತು ವಾಣಿಜ್ಯ ಸಂಸ್ಥೆಗಳ ಕಾಯ್ದೆ- 1961ಕ್ಕೆ ತಿದ್ದುಪಡಿ ಮಾಡಿತು. ಕರ್ನಾಟಕ ಅಂಗಡಿಗಳು ಮತ್ತು ವಾಣಿಜ್ಯ ಸಂಸ್ಥೆಗಳ ಕಾಯ್ದೆ 2007ನ್ನು ರಾಜ್ಯಪಾಲರ ಒಪ್ಪಿಗೆ ಪಡೆದ ಬಳಿಕ ಈದಿನ ರಾಜ್ಯಪತ್ರದಲ್ಲಿ (ಗೆಜೆಟ್) ಇದನ್ನು ಪ್ರಕಟಿಸಲಾಯಿತು. ಕಾನೂನು 15 ದಿನಗಳಲ್ಲಿ ಜಾರಿಗೆ ಬರುವುದು. ರಾತ್ರಿ ವೇಳೆ ಮಹಿಳೆಯನ್ನು ದುಡಿಸಿಕೊಳ್ಳುವುದು ಅಪರಾಧ ಎಂಬ ಕಾನೂನು ಅನುಷ್ಠಾನಗೊಳಿಸುವಲ್ಲಿ ಕರ್ನಾಟಕ ಪ್ರಥಮ ರಾಜ್ಯವಾಗಲಿದ್ದು, ಕಾಯ್ದೆ ಜಾರಿಯ ಬಳಿಕ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳ ಕಾಯ್ದೆಯ ಅಡಿಯಲ್ಲಿ ಬರುವ ಅಂಗಡಿ, ವಾಣಿಜ್ಯ ಸಂಸ್ಥೆಗಳಲ್ಲಿ ಮಹಿಳಾ ನೌಕರರು ರಾತ್ರಿ 8 ಗಂಟೆಯ ಬಳಿಕ ದುಡಿಯವಂತಿಲ್ಲ. ಮುದ್ರಣ ಮಾಧ್ಯಮ, ಖಾಸಗಿ ಸಂಸ್ಥೆಗಳು, ಕಚೇರಿಗಳು, ಹೋಟೆಲುಗಳು ಮತ್ತು ಮನರಂಜನಾ ಸಂಸ್ಥೆಗಳಲ್ಲಿ ರಾತ್ರಿ 8 ಗಂಟೆ ಬಳಿಕ ಮಹಿಳೆಯರನ್ನು ದುಡಿಸಿಕೊಂಡರೆ ಅಪರಾಧವಾಗುತ್ತದೆ. ಕಾನೂನು ಉಲ್ಲಂಘನೆಗೆ 6 ತಿಂಗಳು ಶಿಕ್ಷೆ, 10ರಿಂದ 20ಸಾವಿರ ರೂ ದಂಡ ವಿಧಿಸಬಹುದಾಗಿದೆ. ಐಟಿ ಮತ್ತು ಬಿಟಿ ಕ್ಷೇತ್ರವು 2002ರಲ್ಲೇ ರಿಯಾಯ್ತಿ ಪಡೆದ ಕಾರಣ ಈ ಕ್ಷೇತ್ರವನ್ನು ಕಾಯ್ದೆಯಿಂದ ಹೊರಗಿಡಲಾಯಿತು.

2007: ಕರ್ನಾಟಕದ 10 ಜಿಲ್ಲೆಗಳ 68 ತಾಲ್ಲೂಕುಗಳ ಆಯ್ದ ಹೋಬಳಿಗಳಲ್ಲಿ ಹವಾಮಾನ ಅಧಾರಿತ ಕೃಷಿ ವಿಮೆ ಜಾರಿಗೊಳಿಸಲು ರಾಜ್ಯ ಸರ್ಕಾರ ನಿರ್ಧರಿಸಿತು. ಕರ್ನಾಟಕವಲ್ಲದೆ ಮಹಾರಾಷ್ಟ್ರ ಮತ್ತು ಜಾರ್ಖಂಡ್ ರಾಜ್ಯಗಳಲ್ಲಿಈ ಯೋಜನೆ ಪ್ರಾಯೋಗಿಕವಾಗಿ ಜಾರಿಗೊಳ್ಳುವುದು.

2007: ಜಗತ್ತಿನ ಅರ್ಧದಷ್ಟು ಭಾಗಕ್ಕೆ ಪೆಗಾಸಸ್ ಮೈನೈರ್ ಜಿಟಿ 450 ಮೈಕ್ರೋಲೈಟ್ ವಿಮಾನದ ಮೂಲಕ ಸುತ್ತು ಹಾಕುವ ಮೂಲಕ ವಿಶ್ವದಾಖಲೆ ನಿರ್ಮಿಸಿದ ಬ್ರಿಟನ್ನಿನ ಅಂಧ ವಿಮಾನಯಾನಿ ಮೈಲ್ಸ್ ಹಿಲ್ಟನ್ ಬಾರ್ಬರ್ ತನ್ನ ಸಹ ಚಾಲಕ ರಿಚರ್ಡ್ ಮೆರೆಡಿತ್ ಹಾರ್ಡಿ ಜೊತೆಗೆ ಸಿಡ್ನಿಯ ಬ್ಯಾಂಕ್ಸ್ ಟೌನ್ ವಿಮಾನ ನಿಲ್ದಾಣಕ್ಕೆ ವಾಪಸಾದರು. ಮಾರ್ಚ್ 7ರಂದು ಲಂಡನ್ ಸಮೀಪದ ಬ್ರಿಗ್ಗಿನ್ ಹಿಲ್ ಏರ್ ಫೀಲ್ಡ್ ನಿಂದ 55 ದಿನಗಳ ತಮ್ಮ ಯಾನ ಆರಂಭಿಸಿದ್ದ ಅವರು ವಿಶ್ವದ 21 ರಾಷ್ಟ್ರಗಳ ಮೇಲೆ ಹಾರಾಡಿದರು.

2006: ಆಫ್ಘಾನಿಸ್ಥಾನದ ತಾಲೀಬಾನ್ ಉಗ್ರರು ತಾವು ಅಪಹರಿಸಿ ಒತ್ತೆ ಇಟ್ಟುಕೊಂಡಿದ್ದ ಭಾರತದ ಹೈದರಾಬಾದ್ ಮೂಲದ ದೂರಸಂಪರ್ಕ ಎಂಜಿನಿಯರ್ ಕೆ. ಸೂರ್ಯನಾರಾಯಣ (41) ಅವರನ್ನು ತಪ್ಪಿಸಿಕೊಳ್ಳಲು ಯತ್ನಿಸಿದಾಗ ಬರ್ಬರವಾಗಿ ಕೊಂದುಹಾಕಿದರು. ಅಪಹರಣಗೊಂಡಿದ್ದ ಸ್ಥಳಕ್ಕೆ ಅತಿ ಸಮೀಪದಲ್ಲೇ ಈ ಕೃತ್ಯ ನಡೆಯಿತು. ಜಬುಲ್ ಪ್ರಾಂತ್ಯದ ಕ್ವಾಲತ್ ಹಾಗೂ ಘಜ್ನಿ ಮಧ್ಯೆ ಹಳ್ಳವೊಂದರಲ್ಲಿ ಸೂರ್ಯನಾರಾಯಣ ಅವರ ರುಂಡವಿಲ್ಲದ ದೇಹ ಬೆಳಿಗ್ಗೆ ಪತ್ತೆಯಾಗಿ ಅವರ ಹತ್ಯೆ ಘಟನೆ ಬೆಳಕಿಗೆ ಬಂತು. ಸೂರ್ಯನಾರಾಯಣ ಅವರು ಬಹರೇನ್ ಮೂಲದ ಅಲ್- ಮೊಯ್ಡ್ ಕಂಪನಿಗಾಗಿ ಕೆಲಸ ಮಾಡುತಿದ್ದು, ಈ ಕಂಪನಿ ಆಘ್ಘಾನಿಸ್ಥಾನದ ಟೆಲಿಕಾಂ ಕಂಪನಿಗಾಗಿ ಕೆಲಸ ಮಾಡುತ್ತಿತ್ತು. ಉಗ್ರರು ಮೇ 28ರಂದು ಸೂರ್ಯನಾರಾಯಣ ಅವರನ್ನು ಅಪಹರಿಸಿದ್ದರು.

1993: ಮಹಿಳಾ ಟೆನಿಸ್ ಪಟು ಮೋನಿಕಾ ಸೆಲೆಸ್ ಗೆ ಜರ್ಮನಿಯ ಹ್ಯಾಂಬರ್ಗಿನಲ್ಲಿ ಟೆನಿಸ್ ಪಂದ್ಯ ನಡೆಯುತ್ತಿದ್ದಾಗ ವ್ಯಕ್ತಿಯೊಬ್ಬ ಹಿಂದಿನಿಂದ ಚೂರಿ ಹಾಕಿದ. ಮೋನಿಕಾ ವಿರುದ್ಧ ಸೆಣಸುತ್ತಿದ್ದ ಸ್ಟೆಫಿ ಗ್ರಾಫ್ ಅಭಿಮಾನಿ ತಾನೆಂದು ಹೇಳಿಕೊಂಡ ಆ ವ್ಯಕ್ತಿಯನ್ನು ನಂತರ ದಂಡನೆಗೆ ಗುರಿಪಡಿಸಲಾಯಿತು.

1945: ಜರ್ಮನಿಯ ಸರ್ವಾಧಿಕಾರಿ ಅಡಾಲ್ಫ್ ಹಿಟ್ಲರ್ ಮತ್ತು ಆತನ ಪತ್ನಿ ಇವಾ ಬ್ರೌನ್ ಬರ್ಲಿನ್ನಿನ ಚಾನ್ಸಲರಿ ಕಟ್ಟಡದ ತಳಭಾಗದ ಬಂಕರಿನಲ್ಲಿ ಆತ್ಮಹತ್ಯೆ ಮಾಡಿಕೊಂಡರು.

1944: ಖ್ಯಾತ ನೃತ್ಯಪಟು ಸೋನಾಲ್ ಮಾನ್ ಸಿಂಗ್ ಹುಟ್ಟಿದ ದಿನ. ಇವರು ಭರತನಾಟ್ಯ, ಕೂಚಿಪುಡಿ ಮತ್ತು ಒಡಿಸ್ಸಿ ನೃತ್ಯಗಳಲ್ಲಿ ಪ್ರಾವೀಣ್ಯ ಪಡೆದಿರುವ ವ್ಯಕ್ತಿ.

1927: ಎಂ. ಫಾತಿಮಾ ಬೀವಿ ಜನ್ಮದಿನ. ಇವರು ಭಾರತದ ಸುಪ್ರೀಂಕೋರ್ಟ್ ನ್ಯಾಯಾಧೀಶಕ್ಕೆ ಸ್ಥಾನಕ್ಕೆ ಏರಿದ ಮೊತ್ತ ಮೊದಲ ಭಾರತೀಯ ಮಹಿಳೆ.

1870: ಚಲನಚಿತ್ರ ನಿರ್ದೇಶಕ ಧುಂಡಿರಾಜ್ ಗೋವಿಂದ್ `ದಾದಾಸಾಹೇಬ್' ಫಾಲ್ಕೆ (1870-1944) ಜನ್ಮದಿನ. ಭಾರತೀಯ ಚಿತ್ರೋದ್ಯಮದ ಜನಕ ಎಂದೇ ಖ್ಯಾತರಾದ ಇವರು ಭಾರತದ ಮೊತ್ತ ಮೊದಲ ಮೂಕಿ ಚಿತ್ರ `ರಾಜಾ ಹರಿಶ್ಚಂದ್ರ'ವನ್ನು ನಿರ್ಮಿಸಿದರು.

1789: ಜಾರ್ಜ್ ವಾಷಿಂಗ್ಟನ್ ಅವರು ಅಮೆರಿಕದ ಪ್ರಪ್ರಥಮ ಅಧ್ಯಕ್ಷರಾದರು.

(ಸಂಗ್ರಹ: ನೆತ್ರಕೆರೆ ಉದಯಶಂಕರ)

Tuesday, April 29, 2008

ಡಿ.ಡಿ, ಬ್ಯಾಂಕರ್ಸ್ ಚೆಕ್ ಮಾನ್ಯವಾಗಲಿಲ್ಲ..! (ಗ್ರಾಹಕ ಜಾಗೃತಿ)

ಡಿ.ಡಿ, ಬ್ಯಾಂಕರ್ಸ್ ಚೆಕ್ ಮಾನ್ಯವಾಗಲಿಲ್ಲ..!

ಬ್ಯಾಂಕು ನೀಡಿದ ಎರಡು ಡಿಮ್ಯಾಂಡ್ ಡ್ರಾಫ್ಟ್ ಬ್ಯಾಂಕರ್ಸ್ ಚೆಕ್ಗಳೂ 'ಸಹಿ ಪೂರ್ಣವಿಲ್ಲ, ಪಂಚಿಂಗ್ ಅಪೂರ್ಣ, ಜಂಟಿ ಸಹಿ ಅಗತ್ಯ' ಷರಾಗಳೊಂದಿಗೆ ವಾಪಸಾದವು... ಕಂಪೆನಿ ಅಗತ್ಯ ಉಪಕರಣ ಕಳುಹಿಸಲು ನಿರಾಕರಿಸಿತು...



ನೆತ್ರಕೆರೆ ಉದಯಶಂಕರ


ಇಂದಿನ ಪರಿಸ್ಥಿತಿಯಲ್ಲಿ ಯಾರಿಗಾದರೂ ಹಣ ಕಳುಹಿಸಬೇಕಾಗಿದ್ದರೆ ಸುಲಭದ ವಿಧಾನ ಬ್ಯಾಂಕುಗಳಲ್ಲಿ ಡಿಮ್ಯಾಂಡ್ ಡ್ರಾಫ್ಟ್ (ಡಿ.ಡಿ)/ ಬ್ಯಾಂಕರ್ಸ್ ಚೆಕ್ ಪಡೆದು ಕಳುಹಿಸುವುದು. ಹೀಗೆ ಡಿ.ಡಿ. ನೀಡಲು ಬ್ಯಾಂಕುಗಳು ಸೂಕ್ತ ಕಮಿಷನ್ ಪಡೆಯುತ್ತವೆ. ಬ್ಯಾಂಕುಗಳು ನೀಡಿದ ಇಂತಹ ಡಿ.ಡಿ.ಗಳು ಮಾನ್ಯವಾಗದೆ ವಾಪಸಾದರೆ?

ಗ್ರಾಹಕ ಸಂರಕ್ಷಣಾ ಕಾಯ್ದೆ ನಿಮ್ಮ ನೆರವಿಗೆ ಬರುತ್ತದೆ. ಬಾಗಲಕೋಟೆಯ ಜಿಲ್ಲಾ ಗ್ರಾಹಕ ನ್ಯಾಯಾಲಯ ಇಂತಹ ಪ್ರಕರಣವೊಂದರಲ್ಲಿ ಗ್ರಾಹಕರೊಬ್ಬರಿಗೆ ನ್ಯಾಯ ದೊರಕಿಸಿದೆ.

ಈ ಪ್ರಕರಣದ ಅರ್ಜಿದಾರರು: ಮುಧೋಳ ತಾಲ್ಲೂಕು ಲೋಕಾಪುರದ ನಿವಾಸಿ, ಛಾಯಾಗ್ರಾಹಕ ಬಿ.ಎ. ಹುಣಸಿಕಟ್ಟಿ. ಪ್ರತಿವಾದಿಗಳು: (1) ಬಾಗಲಕೋಟೆ ಜಿಲ್ಲಾ ಸೆಂಟ್ರಲ್ ಕೋ ಆಪರೇಟಿವ್ ಬ್ಯಾಂಕ್ ಆಡಳಿತ ನಿರ್ದೇಶಕರು, ಬಾಗಲಕೋಟೆ ಮತ್ತು (2) ಬಾಗಲಕೋಟೆ ಜಿಲ್ಲಾ ಸೆಂಟ್ರಲ್ ಕೋ ಆಪರೇಟಿವ್ ಬ್ಯಾಂಕ್ ಶಾಖಾ ಮ್ಯಾನೇಜರ್, ಲೋಕಾಪುರ, ಮುಧೋಳ ತಾಲ್ಲೂಕು.

ಅರ್ಜಿದಾರ ಬಿ.ಎ. ಹುಣಸಿಕಟ್ಟಿ ಅವರು ಲೋಕಾಪುರದಲ್ಲಿ ಒಂದು ಗಣಕೀಕೃತ ಫೋಟೋ ಸ್ಟುಡಿಯೋ ಇಟ್ಟುಕೊಂಡಿದ್ದು, ಕೆಲವೊಂದು ಕಂಪ್ಯೂಟರ್ ಸಲಕರಣೆಗಳಿಗಾಗಿ ಮುಂಬೈಯ ರೊಲೆಕ್ಸ್ ಕಂಪ್ಯೂಟರ್ಸ್ ಸಂಸ್ಥೆಗೆ ಬೇಡಿಕೆ ಸಲ್ಲಿಸಿದರು. ಈ ಬೇಡಿಕೆ ಜೊತೆಗೆ ಎರಡನೇ ಪ್ರತಿವಾದಿಯಿಂದ 4150 ರೂಪಾಯಿಗಳ ಒಂದು ಡಿಮ್ಯಾಂಡ್ ಡ್ರಾಫ್ಟ್ ಬ್ಯಾಂಕರ್ಸ್ ಚೆಕ್ಕನ್ನು 7-6-2006ರಂದು ಪಡೆದು ಕಳುಹಿಸಿದ್ದರು. ಆದರೆ ರೊಲೆಕ್ಸ್ ಕಂಪ್ಯೂಟರ್ಸ್ ಸಂಸ್ಥೆಯು ಆ ಡಿ.ಡಿ.ಯನ್ನು ಬ್ಯಾಂಕಿಗೆ ಕಳುಹಿಸಿದಾಗ 'ಸಹಿ ಪೂರ್ಣವಿಲ್ಲ, ವ್ಯತ್ಯಾಸ ಇದೆ ಹಾಗೂ ಪಂಚಿಂಗ್ ಕೂಡಾ ಅಪೂರ್ಣ' ಎಂಬ ಷರಾದೊಂದಿಗೆ ವಾಪಸಾಯಿತು. ಹೀಗಾಗಿ ರೊಲೆಕ್ಸ್ ಸಂಸ್ಥೆಯು ಕಂಪ್ಯೂಟರ್ ಸಲಕರಣೆಗಳನ್ನು ಕಳುಹಿಸಿಕೊಡಲಿಲ್ಲ.

ಅರ್ಜಿದಾರರು ಈ ವಿಚಾರವನ್ನು ಎರಡನೇ ಪ್ರತಿವಾದಿಗೆ ತಿಳಿಸಿ, ಕಂಪ್ಯೂಟರ್ ಉಪಕರಣ ಬರದೇ ಇದ್ದುದರಿಂದ ತಮಗಾದ ನಷ್ಟದ ಬಗ್ಗೆ ವಿವರಿಸಿದರು. ಆಗ ಎರಡನೇ ಪ್ರತಿವಾದಿ ಇನ್ನೊಂದು ಬ್ಯಾಂಕರ್ಸ್ ಚೆಕ್ ಪಡೆದುಕೊಳ್ಳುವಂತೆ ಸಲಹೆ ಮಾಡಿದರು.

ಅರ್ಜಿದಾರರು 1-7-2006ರಂದು 4450 ರೂಪಾಯಿಗಳ ಇನ್ನೊಂದು ಬ್ಯಾಂಕರ್ಸ್ ಚೆಕ್ ಪಡೆದು ಮುಂಬೈಗೆ ಕಳುಹಿಸಿಕೊಟ್ಟರು. ಆದರೆ ಅದು ಕೂಡಾ 'ಜಂಟಿ ಸಹಿ ಬೇಕು' ಎಂಬ ಷರಾದೊಂದಿಗೆ ವಾಪಸಾಯಿತು.

ಈ ಎರಡು ಬ್ಯಾಂಕರ್ಸ್ ಚೆಕ್ಕುಗಳನ್ನು ನೀಡುವಾಗಲೂ ಎರಡನೇ ಪ್ರತಿವಾದಿ ಬ್ಯಾಂಕ್ ಅದಕ್ಕಾಗಿ ಕಮೀಷನ್ ಪಡೆದುಕೊಂಡಿತ್ತು. ಇದಲ್ಲದೇ ಎರಡು ಬಾರಿಯೂ ಬ್ಯಾಂಕರ್ಸ್ ಚೆಕ್ ನೀಡುವಾಗ ಬ್ಯಾಂಕ್ ವಹಿಸಿದ ನಿರ್ಲಕ್ಷ್ಯದ ಪರಿಣಾಮವಾಗಿ ಅದು ಅಮಾನ್ಯಗೊಂಡು ಅರ್ಜಿದಾರರು ವ್ಯವಹಾರದಲ್ಲಿ ತೀವ್ರ ನಷ್ಟ ಅನುಭವಿಸುವಂತಾಯಿತು.

ಹೀಗಾಗಿ ಅರ್ಜಿದಾರರು ಬಾಗಲಕೋಟೆ ಜಿಲ್ಲಾ ಗ್ರಾಹಕ ನ್ಯಾಯಾಲಯಕ್ಕೆ ದೂರು ನೀಡಿದರು. ಅಗತ್ಯ ಕಂಪ್ಯೂಟರ್ ಉಪಕರಣಗಳು ಸಕಾಲದಲ್ಲಿ ಬಾರದೇ ಇದ್ದುದರಿಂದ ತಮಗೆ ವ್ಯವಹಾರದಲ್ಲಿ ಸುಮಾರು 60,000 ರೂಪಾಯಿ ನಷ್ಟವಾದುದರ ಜೊತೆಗೆ, ಆ ಉಪಕರಣಗಳನ್ನು ಹುಬ್ಬಳ್ಳಿಗೆ ಹೋಗಿ ತರಲೂ ಹಣ ವೆಚ್ಚ ಮಾಡಬೇಕಾಯಿತು, ಸಮಯವೂ ಹಾಳಾಯಿತು. ಡಿ.ಡಿ. ನೀಡಲು ಕಮೀಷನ್ ಪಡೆದು ಅವುಗಳನ್ನು ಸಮರ್ಪಕವಾಗಿ ನೀಡದೇ ಇದ್ದುದರಿಂದ ಉಂಟಾದ ಸೇವಾಲೋಪವೇ ತಮ್ಮ ನಷ್ಟಕ್ಕೆ ಕಾರಣ ಎಂದು ದೂರಿದ ಅರ್ಜಿದಾರರು ತಮಗೆ 60,000 ರೂಪಾಯಿಗಳ ಪರಿಹಾರ ಕೊಡಿಸಬೇಕು ಎಂದು ಪ್ರಾರ್ಥಿಸಿದರು.

ಅಧ್ಯಕ್ಷ ಎ.ಎಂ. ಪತ್ತಾರ, ಸದಸ್ಯರಾದ ಗಿರಿಜಾ ಆರ್. ಅಡಕೆನ್ನವರ ಮತ್ತು ಡಾ. ಉದಯ ಎಸ್. ಹೆರೆಂಜಲ್ ಅವರನ್ನು ಒಳಗೊಂಡ ಪೀಠವು ಅರ್ಜಿದಾರರ ಪರ ವಕೀಲ ಎನ್. ಎಲ್. ಬಟಕುರ್ಕಿ, ಪ್ರತಿವಾದಿ ಪರ ವಕೀಲರಾದ ಎಂ. ಎಸ್. ಹುಯಿಲಗೋಳ ಅವರ ಅಹವಾಲುಗಳನ್ನು ಆಲಿಸಿ ಸಾಕ್ಷ್ಯಾಧಾರಗಳನ್ನು ಪರಿಶೀಲಿಸಿತು.

ಅರ್ಜಿದಾರರು ಡಿ.ಡಿ. ಮಾನ್ಯವಾಗದೇ ವಾಪಸ್ ಬಂದದ್ದನ್ನು ತಮಗೆ ತಿಳಿಸಿರಲಿಲ್ಲ, ಎರಡನೇ ಪ್ರತಿವಾದಿಗೆ ಬರೆದ ಪತ್ರದಲ್ಲಿ ತಮಗೆ 600 ರೂಪಾಯಿ ವೆಚ್ಚವಾಗಿದೆ ಎಂದು ತಿಳಿಸಿದ್ದರು ಎಂದು ಪ್ರತಿಪಾದಿಸಿದ ಎರಡನೇ ಪ್ರತಿವಾದಿಯು, ಅರ್ಜಿದಾರರು ಕೋರಿರುವಷ್ಟು ಪರಿಹಾರ ನೀಡಲು ಸಾಧ್ಯವಿಲ್ಲ, ಡಿ.ಡಿ.ಗಳಿಗೆ ಎರಡು ಸಹಿಗಳ ಅಗತ್ಯ ಇಲ್ಲ, ಸಂಬಂಧಪಟ್ಟವರ ಸಹಿ ಮಾತ್ರ ಹಾಕಲಾಗುತ್ತದೆ. ಆದ್ದರಿಂದ ಅರ್ಜಿಯನ್ನು ವಜಾ ಮಾಡಬೇಕು ಎಂದು ಮನವಿ ಮಾಡಿದರು.

ಡಿ.ಡಿ.ಗಳನ್ನು ಪರಿಶೀಲಿಸಿದಾಗ ಎರಡರಲ್ಲೂ ಇಬ್ಬರ ಸಹಿ ಇಲ್ಲದೇ ಇರುವುದು, ಸರಿಯಾಗಿ ಪಂಚ್ ಮಾಡದೇ ಇರುವುದು ಸ್ಪಷ್ಟವಾಗುತ್ತದೆ. ಸಂಬಂಧಪಟ್ಟವರ ಸಹಿಯಷ್ಟೇ ಸಾಕು ಎಂಬ ವಾದ ಮುಂದಿಟ್ಟ ಪ್ರತಿವಾದಿಗಳು ಅದನ್ನು ಸಾಬೀತು ಪಡಿಸುವ ದಾಖಲೆ ಸಲ್ಲಿಸಿಲ್ಲ ಎಂಬುದನ್ನು ನ್ಯಾಯಾಲಯ ಗಮನಿಸಿತು.

ಎರಡೂ ಡಿ.ಡಿ.ಗಳು ವಾಪಸ್ ಬಂದದ್ದು ಎರಡನೇ ಪ್ರತಿವಾದಿಯ ತಪ್ಪಿನಿಂದ ಹೊರತು ಅರ್ಜಿದಾರರ ಲೋಪದಿಂದ ಅಲ್ಲ., ಡಿ.ಡಿ. ವಾಪಸ್ ಬಂದ ಬಗ್ಗೆ ವಕೀಲರ ಮುಖಾಂತರ ನೀಡಲಾದ ನೋಟಿಸಿನಲ್ಲಿ ಗಮನ ಸೆಳೆದುದನ್ನು ಋಜುವಾತುಪಡಿಸುವ ಅಂಚೆ ದಾಖಲೆಗಳನ್ನು ಅರ್ಜಿದಾರರು ಹಾಜರು ಪಡಿಸಿದ್ದನ್ನೂ ನ್ಯಾಯಾಲಯ ಗಮನಕ್ಕೆ ತೆಗೆದುಕೊಂಡಿತು. ಡಿ.ಡಿ.ಗಳು ಅಮಾನ್ಯಗೊಂಡ ಬಗ್ಗೆ ತಮಗೆ ಮಾಹಿತಿ ಇರಲಿಲ್ಲ ಎಂದು ವಾದಿಸಿದ ಪ್ರತಿವಾದಿಗಳು ಅದನ್ನು ಸಾಬೀತು ಪಡಿಸುವ ದಾಖಲೆ ಸಲ್ಲಿಸಿಲ್ಲ ಎಂದೂ ನ್ಯಾಯಾಲಯ ಹೇಳಿತು.

ತಮಗೆ 60,000 ರೂಪಾಯಿ ನಷ್ಟವಾಗಿದೆ ಎಂದು ಪ್ರಮಾಣ ಪತ್ರದಲ್ಲಿ ತಿಳಿಸಿದ್ದರೂ ಅದನ್ನು ಸಾಬೀತು ಪಡಿಸುವ ದಾಖಲೆಗಳನ್ನು ಅರ್ಜಿದಾರರೂ ಸಲ್ಲಿಸಿಲ್ಲ. ಆದರೂ ಎರಡನೇ ಪ್ರತಿವಾದಿ ಎರಡು ಬಾರಿ ವಹಿಸಿದ ನಿರ್ಲಕ್ಷ್ಯದಿಂದ ಆರ್ಥಿಕ ನಷ್ಟ ಹಾಗೂ ಮಾನಸಿಕ ನೋವು ಅನುಭವಿಸಿರುವುದು ದಿಟ ಎಂದು ಎಂದು ಹೇಳಿದ ನ್ಯಾಯಾಲಯ, ಅರ್ಜಿದಾರರು ಪರಿಹಾರಕ್ಕೆ ಅರ್ಹರು ಎಂದು ಅಭಿಪ್ರಾಯ ವ್ಯಕ್ತ ಪಡಿಸಿತು.

ಈ ಹಿನ್ನೆಲೆಯಲ್ಲಿ ಅರ್ಜಿದಾರರ ದೂರನ್ನು ಭಾಗಶಃ ಅಂಗೀಕರಿಸಿದ ನ್ಯಾಯಾಲಯ ಅಮಾನ್ಯಗೊಂಡ ಎರಡೂ ಡಿ.ಡಿ.ಗಳನ್ನು ವಾಪಸ್ ಪಡೆದು 8600 ರೂಪಾಯಿಗಳನ್ನು 5000 ರೂಪಾಯಿಗಳ ಪರಿಹಾರ ಮತ್ತು 2000 ರೂಪಾಯಿಗಳ ಖಟ್ಲೆ ವೆಚ್ಚ ಸಹಿತವಾಗಿ ಅರ್ಜಿದಾರರಿಗೆ ಮರುಪಾವತಿ ಮಾಡಬೇಕು ಎಂದು ಎರಡನೇ ಪ್ರತಿವಾದಿಗೆ ಆದೇಶ ನೀಡಿತು.

ಇಂದಿನ ಇತಿಹಾಸ History Today ಏಪ್ರಿಲ್ 29

ಇಂದಿನ ಇತಿಹಾಸ

ಏಪ್ರಿಲ್ 29

ಉಕ್ಕು ಉದ್ಯಮ ದೊರೆ ಅನಿವಾಸಿ ಭಾರತೀಯ ಲಕ್ಷ್ಮಿ ಮಿತ್ತಲ್ ಅವರು ಸತತ ಮೂರನೇ ವರ್ಷ ಬ್ರಿಟಿನ್ನಿನ ಅತಿ ಶ್ರೀಮಂತ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಹಿಂದುಜಾ ಸಹೋದರರು ಮತ್ತು ಲಾರ್ಡ್ ಸ್ವರಾಜ್ ಪಾಲ್ ಕ್ರಮವಾಗಿ ಎರಡು ಮತ್ತು ಮೂರನೇ ಸ್ಥಾನ ಪಡೆದರು.


2007: ಕಂಡು ಕೇಳರಿಯದ ನೈಜ ಗೋವಿನ ರಥೋತ್ಸವದೊಂದಿಗೆ ಶಿವಮೊಗ್ಗ ಜಿಲ್ಲೆಯ ಹೊಸನಗರದಲ್ಲಿ ಶ್ರೀ ರಾಮಚಂದ್ರಾಪುರ ಮಠವು ಸಂಘಟಿಸಿದ್ದ 10 ದಿನಗಳ ವಿಶ್ವ ಗೋ ಸಮ್ಮೇಳನಕ್ಕೆ ಸಡಗರದ ತೆರೆ ಬಿದ್ದಿತು. ಲಕ್ಷಾಂತರ ಮಂದಿ ಸಂಭ್ರಮೋತ್ಸಾಹದೊಂದಿಗೆ ಗೋ ರಥೋತ್ಸವ ವೀಕ್ಷಿಸಿದರು. ಅಭೂತಪೂರ್ವ ಕಾರ್ಯಕ್ರಮದಲ್ಲಿ ದೇಶದ ವಿವಿಧ ಭಾಗಗಳಿಂದ ಆಗಮಿಸಿದ್ದ ಭಕ್ತರು, ಕಲಾ, ಭಜನಾ, ಸಂಕೀರ್ತನಾ ತಂಡಗಳು ಭಾಗವಹಿಸಿದ್ದವು. ಕುದುರೆ ಸಾರೋಟು, ನಾಲ್ಕು ಆನೆಗಳು, ಸಶಸ್ತ್ರ ದಳದವರೂ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು. ಈ ಸಂದರ್ಭದಲ್ಲಿ ನಡೆದ ಗೋ ತುಲಾಭಾರ ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ತರಳಬಾಳು ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ, ರಾಘವೇಶ್ವರ ಭಾರತೀ ಸ್ವಾಮೀಜಿ, ಪೇಜಾವರ ಮಠದ ವಿಶ್ವೇಶ ತೀರ್ಥ ಸ್ವಾಮೀಜಿ, ಮಧ್ಯ ಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್, ಆರೆಸ್ಸೆಸ್ ಸರಸಂಘ ಚಾಲಕ ಕೆ.ಸಿ. ಸುದರ್ಶನ್ ಪಾಲ್ಗೊಂಡಿದ್ದರು.

2007: ಭಾರತದ ಗೌರವ್ ಘಾಯ್ ಅವರು ಬೀಜಿಂಗಿನಲ್ಲಿ ಮುಕ್ತಾಯವಾದ ಐದು ಲಕ್ಷ ಡಾಲರ್ ಬಹುಮಾನ ಮೊತ್ತದ ಪ್ರಥಮ ಫೈನ್ ವ್ಯಾಲಿ ಬೀಜಿಂಗಿನ ಓಪನ್ ಗಾಲ್ಫ್ ಟೂರ್ನಿಯಲ್ಲಿ ಪ್ರಶಸ್ತಿ ಗೆದ್ದುಕೊಂಡರು.

2007: ಉಕ್ಕು ಉದ್ಯಮ ದೊರೆ ಅನಿವಾಸಿ ಭಾರತೀಯ ಲಕ್ಷ್ಮಿ ಮಿತ್ತಲ್ ಅವರು ಸತತ ಮೂರನೇ ವರ್ಷ ಬ್ರಿಟಿನ್ನಿನ ಅತಿ ಶ್ರೀಮಂತ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಹಿಂದುಜಾ ಸಹೋದರರು ಮತ್ತು ಲಾರ್ಡ್ ಸ್ವರಾಜ್ ಪಾಲ್ ಕ್ರಮವಾಗಿ ಎರಡು ಮತ್ತು ಮೂರನೇ ಸ್ಥಾನ ಪಡೆದರು.

2006: ಖಾದ್ರಿ ಶಾಮಣ್ಣ ಸ್ಮಾರಕ ಟ್ರಸ್ಟ್ ನೀಡುವ ಪ್ರತಿಷ್ಠಿತ `ಖಾದ್ರಿ ಶಾಮಣ್ಣ ಪತ್ರಿಕೋದ್ಯಮ ಪ್ರಶಸ್ತಿ' ಹಿರಿಯ ಪತ್ರಕರ್ತ, ಸಂಯುಕ್ತ ಕರ್ನಾಟಕ ಪತ್ರಿಕೆಯ ಸಂಪಾದಕೀಯ ಸಲಹೆಗಾರ ಎನ್.ವಿ. ಜೋಶಿ ಅವರಿಗೆ ಲಭಿಸಿತು. ಇಲ್ಲಿಯವರೆಗೆ ಹಿರಿಯ ಪತ್ರಕರ್ತರಾದ ಎನ್. ಎಸ್. ಸೀತಾರಾಮ ಶಾಸ್ತ್ರಿ, ಅಮ್ಮೆಂಬಳ ಆನಂದ, ಸಿ.ಜಿ.ಕೆ.ರೆಡ್ಡಿ, ಬಾಸು ಕೃಷ್ಣಮೂರ್ತಿ, ಮಿಂಚು ಶ್ರೀನಿವಾಸ, ಎಸ್.ವಿ. ಜಯಶೀಲರಾವ್, ಎಂ.ಬಿ.ಸಿಂಗ್, ಜಿ.ನಾರಾಯಣ, ಎಸ್. ಪಟ್ಟಾಭಿರಾಮನ್, ಸಿ.ವಿ. ರಾಜಗೋಪಾಲ, ಸುರೇಂದ್ರ ದಾನಿ, ತುಮಕೂರಿನ ಪ್ರಜಾ ಪ್ರಗತಿ ಸಂಪಾದಕ ನಾಗಣ್ಣ ಅವರು ಈ ಪ್ರಶಸ್ತಿಯನ್ನು ಪಡೆದಿದ್ದರು.

2001: ಅಮೆರಿಕದ ಕೋಟ್ಯಧೀಶ ಡೆನ್ನಿಸ್ ಟಿಟೋ ಜಗತ್ತಿನಲ್ಲಿ ಮೊತ್ತ ಮೊದಲ ಬಾರಿಗೆ ಖಾಸಗಿಯಾಗಿ ಬಾಹ್ಯಾಕಾಶ ಪ್ರವಾಸ ಕೈಗೊಂಡ ವ್ಯಕ್ತಿ ಎಂಬ ಹೆಗ್ಗಳಿಕೆ ಪಡೆದುಕೊಂಡರು. 60 ವರ್ಷ ವಯಸ್ಸಿನ ಇವರು ಬೈಕನೂರ್ ಬಾಹ್ಯಾಕಾಶ ಕೇಂದ್ರದಿಂದ ರಷ್ಯದ ರಾಕೆಟ್ ಮೂಲಕ 20 ದಶಲಕ್ಷ ಡಾಲರ್ ವೆಚ್ಚದಲ್ಲಿ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ `ಮೋಜಿನ ಹಾರಾಟ' ನಡೆಸಿದರು.

2002ರ ಮೇ ತಿಂಗಳಲ್ಲಿ ದಕ್ಷಿಣ ಆಫ್ರಿಕದ ಮಾರ್ಕ್ ಶಟ್ಲ್ವರ್ತ್ ಎರಡನೇ ಖಾಸಗಿ ಬಾಹ್ಯಾಕಾಶ ಪ್ರವಾಸಿ ಎಂಬ ಹೆಸರಿಗೆ ಪಾತ್ರರಾದರು.

1937: ವ್ಯಾಲೇಸ್ ಕಾರೋಥೆರ್ಸ್ ಆತ್ಮಹತ್ಯೆ ಮಾಡಿಕೊಂಡ. ಇದಕ್ಕೆ ಕೇವಲ ಎರಡು ತಿಂಗಳು ಮೊದಲು ಆತ ನೈಲಾನ್ ಪೇಟೆಂಟ್ ಪಡೆದಿದ್ದ.

1929: ಶಿಶು ಸಾಹಿತ್ಯ ಕ್ಷೇತ್ರದಲ್ಲಿ ಮಹತ್ತರ ಸಾಧನೆ ಮಾಡಿದ ಸಿಸು ಸಂಗಮೇಶ (29-4-1929ರಿಂದ 29-5-2001) ಅವರು ವಿಜಾಪುರ ಜಿಲ್ಲೆಯ ಬಾಗೇವಾಡಿ ಹತ್ತಿರದ ಯಕನಾಳ ಗ್ರಾಮದಲ್ಲಿ ಸಿದ್ದರಾಮಪ್ಪ-- ಗೌರಮ್ಮ ದಂಪತಿಯ ಮಗನಾಗಿ ಜನಿಸಿದರು. ಅವರ ಮೊದಲಿನ ಹೆಸರು ಸಂಗಮೇಶ ಸಿದ್ದಾಮಪ್ಪನಗೊಂಡ. 80ಕ್ಕೂ ಹೆಚ್ಚು ಕೃತಿಗಳ ಪ್ರಕಟಣೆ ಮೂಲಕ ಶಿಶು ಸಾಹಿತ್ಯಕ್ಕೆ ವಿಶೇಷ ಕೊಡುಗೆ ನೀಡಿರುವ ಸಿಸು ಸಂಗಮೇಶ ಅವರು ಇತರ ವಿಚಾರಗಳಿಗೆ ಸಂಬಂಧಿಸಿದಂತೆ 30ಕ್ಕೂ ಹೆಚ್ಚು ಕೃತಿಗಳನ್ನು ಪ್ರಕಟಿಸ್ದಿದಾರೆ.

1848: ಭಾರತದ ಖ್ಯಾತ ವರ್ಣಚಿತ್ರಗಾರ ರಾಜಾ ರವಿ ವರ್ಮ (1848-1912) ಜನ್ಮದಿನ.

1630: ಮರಾಠಾ ಸಾಮ್ರಾಜ್ಯದ ಸ್ಥಾಪಕ ಛತ್ರಪತಿ ಶಿವಾಜಿ ಮಹಾರಾಜ ಅವರು ಈದಿನ ಮಹಾರಾಷ್ಟ್ರದ ಶಿವನೇರಿ ದುರ್ಗದಲ್ಲಿ ಜನಿಸಿದರು.

1236: ಭಾರತದ ಪ್ರಮುಖ ದೊರೆಗಳಲ್ಲಿ ಒಬ್ಬನಾದ ಗುಲಾಮ ಮನೆತನದ ಮೂರನೇ ಇಲ್ತಮಿಷ್ ಮೃತನಾದ. ಇಲ್ತಮಿಷ್ ಗುಲಾಮನಾಗಿ ತನ್ನ ಬದುಕು ಆರಂಭಿಸಿದರೂ ತನ್ನ ಯಜಮಾನ ಕುತ್ಬ್-ಉದ್-ದಿನ್ ಐಬಕ್ನ ಪುತ್ರಿಯನ್ನು ಮದುವೆಯಾದ. ನಂತರ 1211ರಲ್ಲಿ ಐಬಕ್ನ ಉತ್ತರಾಧಿಕಾರಿಯಾದ. ಈತ ದೆಹಲಿಯನ್ನು ರಾಜಧಾನಿಯನ್ನಾಗಿ ಮಾಡಿಕೊಂಡು ಅಲ್ಲಿ ಕುತುಬ್ ಮಿನಾರ್ ಕಟ್ಟಿಸಿದ.

(ಸಂಗ್ರಹ: ನೆತ್ರಕೆರೆ ಉದಯಶಂಕರ)

Monday, April 28, 2008

ಇಣಚಿ ಮತ್ತು ಪುಟ್ಟ

ಇಣಚಿ ಮತ್ತು ಪುಟ್ಟ

ಬಾಬಾ ಇಣಚಿ,ಬಾಬಾ ಇಣಚಿ
ನಿನಗೆ ನಾನು ಹಣ್ಣು ಕೊಡುವೆ ಬಾಬಾ
ನಿನ್ನನು ನಾನು ಸಾಕಿ ಸಲಹುವೆನು ಬಾಬಾ.


ಅಂಬಟೆ ಮತ್ತು ಉಪ್ಪಿನಕಾಯಿ

ಅಂಬಟೆ ಎರಡು ಬಿದ್ದಿತ್ತು
ಉಪ್ಪಿನಕಾಯಿ ಆಯಿತು
ಮರದಲಿ ಅಂಬಟೆ ಮುಗಿಯತು
ಉಪ್ಪಿನಕಾಯಿ ಮುಗಿಯಿತು.

-ಮಧು ಭಟ್ ಪೂರ್ಲುಪ್ಪಾಡಿ
10ನೇ ತರಗತಿ.
ಶ್ರೀ ವಿವೇಕ ಬಾಲ ಮಂದಿರ.

ಇಂದಿನ ಇತಿಹಾಸ History Today ಏಪ್ರಿಲ್ 28

ಇಂದಿನ ಇತಿಹಾಸ

ಏಪ್ರಿಲ್ 28

ಇಟೆಲಿಯ ಸರ್ವಾಧಿಕಾರಿ ಬೆನಿಟೋ ಮುಸ್ಸೋಲಿನಿ ಮತ್ತು ಆತನ ಪ್ರೇಯಸಿ ಕ್ಲಾರಾ ಪೆಟಾಸ್ಸಿಯನ್ನು ಅವರು ರಾಷ್ಟ್ರದಿಂದ ಪರಾರಿಯಾಗಲು ಯತ್ನಿಸುತ್ತಿದ್ದಾಗ ಕ್ಲೊಲಲಾಯಿತು. ತಲೆಕೆಳಗಾಗಿ ನೇತಾಡುತ್ತಿದ್ದ ಅವರ ಶವಗಳು ಮಿಲಾನ್ನ ಪಿಯಾಝಾ ಲೊರೆಟೊದಲ್ಲಿ ಪತ್ತೆಯಾದವು.

2006: ಎಚ್.ಟಿ. ಮೀಡಿಯಾ ಲಿಮಿಟೆಡ್ ಉಪಾಧ್ಯಕ್ಷೆ ಶೋಭನಾ ಭಾರ್ತಿಯಾ ಮತ್ತು ಪಯೋನೀರ್ ಸಂಪಾದಕ ಚಂದನ್ ಮಿತ್ರ ಅವರನ್ನು ರಾಜ್ಯಸಭಾ ಸದಸ್ಯರಾಗಿ ನೇಮಕ ಮಾಡಿದ್ದನ್ನು ಪ್ರಶ್ನಿಸಿ ಸಲ್ಲಿಸಲಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾ ಮಾಡಿತು. ಸಾರ್ವಜನಿಕ ಹಿತಾಸಕ್ತಿ ವ್ಯಾಜ್ಯಗಳ ಕೇಂದ್ರ (ಸಿಪಿಐಎಲ್) ತನ್ನ ಅರ್ಜಿಯಲ್ಲಿ ಮೇಲ್ಮನೆಗೆ ಮಾಡಲಾದ ಇವರಿಬ್ಬರ ನಾಮಕರಣ ಸಂವಿಧಾನದ 80 (3) ವಿಧಿಯಡಿಯಲ್ಲಿ ಸೂಚಿತವಾಗಿರುವ ಸಾಹಿತ್ಯ, ವಿಜ್ಞಾನ, ಕಲೆ ಮತ್ತು ಸಮಾಜ ಸೇವೆ ಈ ವರ್ಗಗಳ ವ್ಯಾಪ್ತಿಗೆ ಬರುವುದಿಲ್ಲ ಎಂದು ಹೇಳಿತ್ತು. ನ್ಯಾಯಮೂರ್ತಿ ರುಮಾ ಪಾಲ್ ನೇತೃತ್ವದ ಪೀಠವು ಸಮಾಜ ಸೇವೆ ಶಬ್ಧದ ಅರ್ಥವ್ಯಾಪ್ತಿ ಇಂತಹ ಪ್ರಕರಣಗಳು ಒಳಗೊಳ್ಳುವಷ್ಟು ವಿಶಾಲವಾಗಿದೆ ಎಂದು ಹೇಳಿ ಅರ್ಜಿಯನ್ನು ವಜಾ ಮಾಡಿದರು.

2006: ಯುತ್ ಐಕಾನ್ ಹೆಸರಿನ ಮೊಹರು ಮಾಡಲಾದ ಸ್ಪೈಟ್ ಬಾಟಲಿಯೊಳಗೆ ಸತ್ತ ಕೀಟಗಳು ಇದ್ದುದುದಕ್ಕಾಗಿ 1.20 ಲಕ್ಷ ರೂಪಾಯಿಗಳ ಪರಿಹಾರವನ್ನು ಗ್ರಾಹಕನಿಗೆ ನೀಡುವಂತೆ ದೆಹಲಿಯ ಗ್ರಾಹಕ ನ್ಯಾಯಾಲಯವೊಂದು ಕೋಕಾ-ಕೋಲಾ ಕಂಪೆನಿಗೆ ಆದೇಶಿಸಿತು.

2006: ಹೌ ಓಪಲ್ ಮೆಹ್ತಾ ಗಾಟ್ ಕಿಸ್ಡ್, ಗಾಟ್ ವೈಲ್ಡ್ ಅಂಡ್ ಗಾಟ್ ಎ ಲೈಫ್ ಕಾದಂಬರಿ ಕರ್ತೃ ಭಾರತೀಯ ಮೂಲದ ಲೇಖಕಿ ಕಾವ್ಯ ವಿಶ್ವನಾಥನ್ ಕೃತಿಚೌರ್ಯ ಒಪ್ಪಿಕೊಂಡ ಹಿನ್ನೆಲೆಯಲ್ಲಿ ಕಾದಂಬರಿ ಪ್ರಕಟಿಸಿದ ಪ್ರಕಾಶನ ಸಂಸ್ಥೆಯ ಲಿಟ್ಲ್ ಬ್ರೌನ್ ಕಾದಂಬರಿಯೆಲ್ಲ ಪ್ರತಿಗಳನ್ನು ಮಾರುಕಟ್ಟೆಯಿಂದ ವಾಪಸ್ ಪಡೆಯಲು ನಿರ್ಧರಿಸಿತು.

2006: ಪಣಜಿ ಸಮೀಪದ ವಾಸೊದಲ್ಲಿ ಭಾರತೀಯ ಕರಾವಳಿ ಕಾವಲು ಪಡೆಗೆ ಅತ್ಯಂತ ದೊಡ್ಡದಾದ ಅತ್ಯಾಧುನಿಕ ಕರಾವಳಿ ಕಡಲು ಪಹರೆ ನೌಕೆ 105 ಮೀಟರ್ ಉದ್ದದ ಐಜಿಜಿಎಸ್ ಸಂಕಲ್ಪ ಸೇರ್ಪಡೆಗೊಂಡಿತು.

2006: ಲಾಟರಿ ಟಿಕೆಟ್ಟುಗಳ ಮಾರಾಟದ ಮೇಲೆ ರಾಜ್ಯ ಸರ್ಕಾರಗಳು ತೆರಿಗೆ ವಿಧಿಸುವಂತಿಲ್ಲ ಎಂದು ಭಾರತದ ಸುಪ್ರೀಂಕೋರ್ಟ್ ತೀರ್ಪು ನೀಡಿತು. ನ್ಯಾಯಮೂರ್ತಿ ರುಮಾ ಪಾಲ್ ನೇತೃತ್ವದ ಪಂಚಸದಸ್ಯ ಸಂವಿಧಾನ ಪೀಠವು 1986ರಲ್ಲಿ ಸುಪ್ರೀಂಕೋರ್ಟ್ ನೀಡಿದ್ದ ತೀರ್ಪನ್ನು ತಳ್ಳಿಹಾಕಿ ಈ ತೀರ್ಪನ್ನು ನೀಡಿತು. ಲಾಟರಿ ಟಿಕೆಟ್ಟುಗಳ ಮಾರಾಟವನ್ನು ವಸ್ತುಗಳ ಮಾರಾಟಕ್ಕೆ ಸಮಾನವಾಗಿ ನೋಡಲಾಗದು. ಆದ್ದರಿಂದ ಅದರ ಮೇಲೆ ತೆರಿಗೆ ವಿಧಿಸುವಂತಿಲ್ಲ ಎಂದು ಸುಪ್ರೀಂಕೋರ್ಟ್ ಪಂಚಸದಸ್ಯ ಪೀಠ ಹೇಳಿತು. ಲಾಟರಿ ಟಿಕೆಟ್ಟುಗಳ ಮಾರಾಟದ ಮೇಲೆ ತೆರಿಗೆ ವಿಧಿಸಬಹುದು ಎಂದು 1986ರಲ್ಲಿ ನೀಡಲಾಗಿದ್ದ ತನ್ನ ತೀರ್ಪಿನಲ್ಲಿ ಸುಪ್ರೀಂಕೋರ್ಟ್ ಹೇಳಿತ್ತು.

1946: ಭಾಷೆ ಹಾಗೂ ಕೋಶ ವಿಜ್ಞಾನಿ, ಸಂಶೋಧಕ ಪ್ರೊ. ಎ.ವಿ. ನಾವಡ ಅವರು ಮಂಗಳೂರು ಸಮೀಪದ ಕೋಟೆಕಾರಿನಲ್ಲಿ ಕವಿ ಅಮ್ಮೆಂಬಳ ಶಂಕರನಾರಾಯಣ ನಾವಡ- ಪಾರ್ವತಿ ದಂಪತಿಯ ಪುತ್ರರಾಗಿ ಜನಿಸಿದರು.

1945: ಇಟೆಲಿಯ ಸರ್ವಾಧಿಕಾರಿ ಬೆನಿಟೋ ಮುಸ್ಸೋಲಿನಿ ಮತ್ತು ಆತನ ಪ್ರೇಯಸಿ ಕ್ಲಾರಾ ಪೆಟಾಸ್ಸಿಯನ್ನು ಅವರು ರಾಷ್ಟ್ರದಿಂದ ಪರಾರಿಯಾಗಲು ಯತ್ನಿಸುತ್ತಿದ್ದಾಗ ಕ್ಲೊಲಲಾಯಿತು. ತಲೆಕೆಳಗಾಗಿ ನೇತಾಡುತ್ತಿದ್ದ ಅವರ ಶವಗಳು ಮಿಲಾನ್ನ ಪಿಯಾಝಾ ಲೊರೆಟೊದಲ್ಲಿ ಪತ್ತೆಯಾದವು.

1937: ಇರಾಕಿನ ಪದಚ್ಯುತ ಅಧ್ಯಕ್ಷ ಸದ್ದಾಂ ಹುಸೇನ್ ಜನ್ಮದಿನ. 1979ರಿಂದ ಇತ್ತೀಚೆಗೆ ಅಮೆರಿಕ ಪಡೆಗಳು ದಾಳಿ ನಡೆಸುವವರೆಗೂ ಈತ ಇರಾಕಿನ ಅಧ್ಯಕ್ಷನಾಗಿದ್ದ.

1928: ಇ.ಎಂ. ಶೂಮೇಕರ್ (1928-97) ಹುಟ್ಟಿದ ದಿನ. ಅಮೆರಿಕದ ಖಭೌತ ತಜ್ಞನಾದ ಈತ ಚಂದ್ರನ ಮಣ್ಣಿನ ಪದರ ಹಾಗೂ ಒಡೆದ ಕಲ್ಲುಗಳಿಗೆ `ರಿಗೋಲಿತ್' ಎಂದು ಹೆಸರಿಟ್ಟ. 1994ರಲ್ಲಿ ಗುರುಗ್ರಹಕ್ಕೆ ಡಿಕ್ಕಿ ಹೊಡೆದ ಪಿ/ಶೂಮೇಕರ್-ಲೆವಿ 9 ಧೂಮಕೇತುವನ್ನೂ ಈತ ಸಂಶೋಧಿಸಿದ.

1924: ಕೆನ್ನೆತ್ ಕೌಂಡಾ ಜನ್ಮದಿನ. 1961ರಲ್ಲಿ ಜಾಂಬಿಯಾಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಈತ 1991ರವರೆಗೂ ಅಲ್ಲಿನ ಅಧ್ಯಕ್ಷನಾಗಿದ್ದ.

1865: ಸ್ಯಾಮುಯೆಲ್ ಕ್ಯುನಾರ್ಡ್ 77ನೇ ವಯಸಿನಲ್ಲಿ ಮೃತನಾದ. ಬ್ರಿಟಿಷ್ ವರ್ತಕನಾದ ಈತ ಬ್ರಿಟಿಷ್ ಸ್ಟೀಮ್ ಶಿಪ್ ಕಂಪೆನಿಯ ಸ್ಥಾಪಕ. ಈ ಕಂಪೆನಿಗೆ ಆತನ ಹೆಸರನ್ನೇ ಇಡಲಾಗಿತ್ತು.

(ಸಂಗ್ರಹ: ನೆತ್ರಕೆರೆ ಉದಯಶಂಕರ)

Sunday, April 27, 2008

ಇಂದಿನ ಇತಿಹಾಸ History Today ಏಪ್ರಿಲ್ 27

ಇಂದಿನ ಇತಿಹಾಸ

ಏಪ್ರಿಲ್ 27


ಗಂಗೊಳ್ಳಿಯಿಂದ ಮಂಗಳೂರಿನವರೆಗೆ ಅರಬ್ಬಿ ಸಮುದ್ರದಲ್ಲಿ 150 ಕಿ.ಮೀ. ದೂರವನ್ನು ಸತತ 24 ಗಂಟೆಗಳ ಕಾಲ ಈಜಿ ಕ್ರಮಿಸುವ ಮೂಲಕ ಬೆಂಗರೆ ದಯಾನಂದ ಖಾರ್ವಿ ಹೊಸ ದಾಖಲೆ ನಿರ್ಮಿಸಿದರು.



2007: ಗಾಲಿ ಕುರ್ಚಿಗೆ ಅಂಟಿಕೊಂಡೇ ಜೀವಿಸುತ್ತಿರುವ ಖಭೌತ ವಿಜ್ಞಾನಿ ಸ್ಟೀಫನ್ ಹಾಕಿನ್ಸ್ ಅವರು `ಬಾಹ್ಯಾಕಾಶದಲ್ಲಿ ತೂಕರಹಿತ ಅನುಭವ'ದ ತಮ್ಮ ಕನಸನ್ನು ನನಸಾಗಿಸಿಕೊಂಡರು. ಫ್ಲಾರಿಡಾ ಮೂಲದ ಜೀರೋ ಗ್ರಾವಿಟಿ ಕಾರ್ಪೊರೇಷನ್ ಬೋಯಿಂಗ್ 747 ವಿಮಾನದಲ್ಲಿ ಶೂನ್ಯ ಗುರುತ್ವಾಕರ್ಷಣೆ ನಿರ್ಮಿಸಿ ಸ್ಟೀಫನ್ ಅವರಿಗೆ ಈ ವಿಶಿಷ್ಟ ಅನುಭವ ದಕ್ಕುವಂತೆ ಮಾಡಿತು. `ವೊರ್ಮಿಟ್ ಕಾಮೆಟ್' ಹೆಸರಿನ ಪರಿವರ್ತಿತ ವಿಮಾನದಲ್ಲಿ ಅಟ್ಲಾಂಟಿಕ್ ಸಾಗರದ ಮೇಲೆ ಸಾಗುವಾಗ ಈ ಅನುಭವವನ್ನು ಹಾಕಿನ್ಸ್ ಪಡೆದರು. 9,754 ಮೀಟರ್ (32,000 ಅಡಿ ಎತ್ತರಕ್ಕೆ ಏರಿ 7315 ಮೀಟರಿನಷ್ಟು ಕೆಳಕ್ಕೆ ವಿಶಿಷ್ಟ ರೀತಿಯಲ್ಲಿ ಬರುವಾಗ ಹಾಕಿನ್ಸ್ ಜೊತೆಗಿದ್ದ ವೈದ್ಯರು ಮತ್ತು ದಾದಿಯರೂ ಈ ತೂಕರಹಿತ ಅನುಭವ ಪಡೆದರು.

2007: ಬ್ರಿಟಿಷರ ಒಡೆದು ಆಳುವ ಕುಟಿಲ ನೀತಿಯಿಂದಾಗಿಯೇ ಗೋಹತ್ಯೆ ಕಾಯ್ದೆ ಜಾರಿಗೆ ಬಂತು ಎಂದು ಸ್ವದೇಶೀ ಬಚಾವೋ ಆಂದೋಲನದ ನೇತಾರ ರಾಜೀವ ದೀಕ್ಷಿತ್ ಶಿವಮೊಗ್ಗದ ಹೊಸನಗರದಲ್ಲಿ ಶ್ರೀರಾಮಚಂದ್ರಾಪುರ ಮಠ ಸಂಘಟಿಸಿದ ವಿಶ್ವ ಗೋ ಸಮ್ಮೇಳನದಲ್ಲಿ ಅಭಿಪ್ರಾಯ ಪಟ್ಟರು. ಸಮ್ಮೇಳನದ ಏಳನೇ ದಿನ ಅವರು ಗೋ ಮಹಿಮಾ ಗೋಷ್ಠಿಯಲ್ಲಿ ಪಾಲ್ಗೊಂಡರು.

2007: ನಕಲಿ ಪಾಸ್ಪೋರ್ಟ್ ಬಳಸಿ ಮಾನವ ಕಳ್ಳಸಾಗಣೆ ನಡೆಸಿದ ಆರೋಪಕ್ಕೆ ಒಳಗಾದ ತೆಲಂಗಾಣ ರಾಷ್ಟ್ರ ಸಮಿತಿ (ಟಿ ಆರ್ ಎಸ್) ಶಾಸಕ ಕೆ. ಲಿಂಗಯ್ಯ ಅವರು ಹೈದರಾಬಾದಿನ 7ನೇ ಮೆಟ್ರೋಪಾಲಿಟನ್ ನ್ಯಾಯಾಲಯದಲ್ಲಿ ಶರಣಾಗತರಾದರು.

2007: ಕೃಷ್ಣಾ ನದಿ ನೀರು ಬಳಕೆಗೆ ಸಂಬಂಧಿಸಿದಂತೆ ಕರ್ನಾಟಕದ ವಿರುದ್ಧ ಆಂಧ್ರಪ್ರದೇಶ ಸಲ್ಲಿಸಿದ್ದ ಅರ್ಜಿಯನ್ನು ಕೃಷ್ಣಾ ಜಲ ನ್ಯಾಯ ಮಂಡಳಿಯು ವಜಾ ಮಾಡಿತು.

2007: ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಅವರನ್ನು ಬಹಿರಂಗವಾಗಿ ಚುಂಬಿಸಿ ವಿವಾದಕ್ಕೆ ಗುರಿಯಾಗಿದ್ದ ಹಾಲಿವುಡ್ ನಟ ರಿಚರ್ಡ್ ಗೇರ್ ಅವರು ಶುಕ್ರವಾರ ಈ ಘಟನೆಗೆ ಕ್ಷಮೆ ಯಾಚಿಸಿದರು. ಯಾವುದೇ ಮನ ನೋಯಿಸುವಂತಹ ತಪ್ಪು ಮಾಡ್ದಿದರೆ ದಯವಿಟ್ಟು ಕ್ಷಮಿಸಿ ಎಂಬುದಾಗಿ ಅವರು ಹೇಳಿಕೆಯಲ್ಲಿ ತಿಳಿಸಿದರು.

2007: ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು (ಸಿ ಇ ಟಿ) ತಮಿಳುನಾಡಿನಲ್ಲಿ ರದ್ದು ಪಡಿಸಿದ ತಮಿಳುನಾಡು ಸರ್ಕಾರದ ನಿರ್ಣಯವನ್ನು ಮದ್ರಾಸ್ ಹೈಕೋರ್ಟ್ ಎತ್ತಿ ಹಿಡಿಯಿತು. ತಮಿಳುನಾಡು ಸರ್ಕಾರವು ಅಂಗೀಕರಿಸಿದ ತಮಿಳುನಾಡು (ವೃತ್ತಿ ಶಿಕ್ಷಣ ಸಂಸ್ಥೆಗಳ ಪ್ರವೇಶ) ಕಾಯ್ದೆಯ (2006) ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಹಲವಾರು ರಿಟ್ ಅರ್ಜಿಗಳನ್ನು ಹೈಕೋರ್ಟ್ ವಜಾ ಮಾಡಿತು.

2006: ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ 6000 ಕೋಟಿ ರೂಪಾಯಿ ಅಂದಾಜು ವೆಚ್ಚದ ಬೆಂಗಳೂರು ಮೆಟ್ರೊ ರೈಲು ಯೋಜನೆಗೆ ಕೇಂದ್ರ ಸಚಿವ ಸಂಪುಟ ಮಂಜೂರಾತಿ ನೀಡಿತು. ಇದರೊಂದಿಗೆ 33 ಕಿ.ಮೀ. ಉದ್ದದ ಮೆಟ್ರೊ ರೈಲು ಯೋಜನೆಗೆ ಇದ್ದ ಕೊನೆಯ ಅಡ್ಡಿ ನಿವಾರಣೆ ಆಯಿತು. ಈ ಯೋಜನೆ 2011ಕ್ಕೆ ಪೂರ್ಣಗೊಳ್ಳಬೇಕು.

2006: ಹಿರಿಯ ಸಾಹಿತಿ, ಸಂಶೋಧಕ ಪ್ರೊ. ಎಲ್. ಬಸವರಾಜು ಅವರಿಗೆ ರಾಜ್ಯ ಸರ್ಕಾರದ 2005ನೇ ಸಾಲಿನ ಬಸವ ಪುರಸ್ಕಾರ ರಾಷ್ಟ್ರೀಯ ಪ್ರಶಸ್ತಿ ಲಭಿಸಿತು.

2006: ನೇಪಾಳದ ಹಿರಿಯ ಮುಖಂಡ ಗಿರಿಜಾ ಪ್ರಸಾದ್ ಕೊಯಿರಾಲ ಅವರು ನೇಪಾಳ ಕಾಂಗ್ರೆಸ್ ಸಂಸದೀಯ ಪಕ್ಷದ ನಾಯಕರಾಗಿ ಅವಿರೋಧ ಆಯ್ಕೆಯಾದರು. ಇದೇ ವೇಳೆಯಲ್ಲಿ ಬಾಲಿವುಡ್ ನಟಿ ಮನಿಶಾ ಕೊಯಿರಾಲ ಅವರ ತಂದೆ, ಪ್ರಕಾಶ ಕೊಯಿರಾಲ ಅವರನ್ನು ನೇಪಾಳ ಕಾಂಗ್ರೆಸ್ಸಿನ ಪ್ರಾಥಮಿಕ ಸದಸ್ಯತ್ವದಿಂದ ಉಚ್ಚಾಟಿಸಲಾಯಿತು. ಈ ಇಬ್ಬರೂ ಧುರೀಣರು ಸಮೀಪ ಸಂಬಂಧಿಗಳು.

2006: ಹಿರಿಯ ಕವಿ ಪ್ರೊ. ಕೆ.ಎಸ್. ನಿಸಾರ್ ಅಹಮದ್ ಅವರು ಪ್ರತಿಷ್ಠಿತ 2006ನೇ ಸಾಲಿನ ಮಾಸ್ತಿ ಪ್ರಶಸ್ತಿಗೆ ಆಯ್ಕೆಯಾದರು.

2006: ಜಮ್ಮುವಿನ ಭದೇವ್ ವಿಧಾನಸಭಾ ಕ್ಷೇತ್ರಕ್ಕಾಗಿ ನಡೆದ ಉಪ ಚುನಾವಣೆಯಲ್ಲಿ ಜಮ್ಮು ಕಾಶ್ಮೀರ ಮುಖ್ಯಮಂತ್ರಿ ಗುಲಾಂ ನಬಿ ಆಜಾದ್ ದಾಖಲೆ ಜಯ ಸಾಧಿಸಿದರು. ಎದುರಾಳಿ ಬಿಜೆಪಿ ಅಭ್ಯರ್ಥಿ ವಿರುದ್ಧ ಹಿಂದಿನ ಎಲ್ಲ ದಾಖಲೆಗಳನ್ನು ಮುರಿದ ಅವರು 66,129 ಮತಗಳ ಪೈಕಿ 62,072 ಮತಗಳನ್ನು ಬಗಲಿಗೆ ಹಾಕಿಕೊಂಡರು.

2006: ಗಂಗೊಳ್ಳಿಯಿಂದ ಮಂಗಳೂರಿನವರೆಗೆ ಅರಬ್ಬಿ ಸಮುದ್ರದಲ್ಲಿ 150 ಕಿ.ಮೀ. ದೂರವನ್ನು ಸತತ 24 ಗಂಟೆಗಳ ಕಾಲ ಈಜಿ ಕ್ರಮಿಸುವ ಮೂಲಕ ಬೆಂಗರೆ ದಯಾನಂದ ಖಾರ್ವಿ ಹೊಸ ದಾಖಲೆ ನಿರ್ಮಿಸಿದರು.

2006: ಮಾರ್ಚ್ 31ಕ್ಕೆ ಕೊನೆಗೊಂಡ ಹಣಕಾಸು ವರ್ಷದಲ್ಲಿ ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ (ಆರ್ಐಎಲ್) 9069 ಕೋಟಿ ರೂಪಾಯಿ ನಿವ್ವಳ ಲಾಭ ಗಳಿಸಿದ್ದು, ಖಾಸಗಿ ಕ್ಷೇತ್ರದಲ್ಲಿನ ಭಾರತೀಯ ಕಂಪೆನಿಯೊಂದು ಗಳಿಸಿದ ಅತ್ಯಧಿಕ ಲಾಭ ಇದು ಎಂದು ಆರ್ಐಎಲ್ ಅಧ್ಯಕ್ಷ , ಆಡಳಿತ ನಿರ್ದೇಶಕ ಮುಖೇಶ ಅಂಬಾನಿ ಮುಂಬೈಯಲ್ಲಿ ಪ್ರಕಟಿಸಿದರು.

1960: ರಕ್ಷಣಾ ಪಡೆಗಳ ಉನ್ನತಾಧಿಕಾರಿಗಳಿಗೆ ತರಬೇತಿ ನೀಡುವ ಸಲುವಾಗಿ ನವದೆಹಲಿಯಲ್ಲಿ ನ್ಯಾಷನಲ್ ಡಿಫೆನ್ಸ್ ಕಾಲೇಜನ್ನು ಆರಂಭಿಸಲಾಯಿತು.

1959: ಕಮಾಂಡರ್ ಕವಾಸ್ ಮಣೇಕ್ ಶಾ ನಾನಾವತಿ ತನ್ನ ಬ್ರಿಟಿಷ್ ಪತ್ನಿ ಸಿಲ್ವಿಯಾಳ ಪ್ರಿಯಕರ ಪ್ರೇಮ್ ಅಹುಜಾನನ್ನು ಗುಂಡಿಟ್ಟು ಕೊಂದ. ಈ ಪ್ರಕರಣ ದೇಶಾದ್ಯಂತ ಭಾರೀ ಕುತೂಹಲ ಕೆರಳಿಸಿತು. ಇದೊಂದು ಅಪಘಾತ ಎಂದು ಬಿಂಬಿಸಿದ ಪರಿಣಾಮವಾಗಿ ಆತನ ಪರ ಅನುಕಂಪದ ಹೊಳೆ ಹರಿಯಿತು. ಮುಂಬೈ ಸೆಷನ್ಸ್ ಕೋರ್ಟ್ ಆತ ನಿರಪರಾಧಿ ಎಂದೂ ತೀರ್ಪಿತ್ತಿತು. ನಂತರ ಸುಪ್ರೀಂಕೋರ್ಟ್ ಅದನ್ನು ತಳ್ಳಿಹಾಕಿ ನಾನಾವತಿ ಅಪರಾಧಿ ಎಂದು ತೀರ್ಪು ನೀಡಿತು. ಈ ಘಟನೆ ನಡೆಯದೇ ಇರುತ್ತಿದ್ದರೆ ನಾನಾವತಿ ಭಾರತದ ಮೊದಲ ಏರ್ ಕ್ರಾಫ್ಟ್ ಕ್ಯಾರಿಯರ್ ಐಎನ್ಎಸ್ ವಿಕ್ರಾಂತ್ ನ ಮೊದಲ ಕಮಾಂಡರ್ ಆಗುತ್ತಿದ್ದ.

1897: ಅಮೋಘ ಭಾಷಣಕಾರ, ಸಾಹಿತ್ಯ, ಪತ್ರಿಕಾರಂಗಗಳಲ್ಲಿ ವಿಶಿಷ್ಟ ರೀತಿಯಲ್ಲಿ ಸೇವೆ ಸಲ್ಲಿಸಿದ ತಿರುಮಲೆ ತಾತಾಚಾರ್ಯ ಶರ್ಮ (ತಿ.ತಾ. ಶರ್ಮ) (27-4-1897 ರಿಂದ 20-10-1973) ಅವರು ಚಿಕ್ಕಬಳ್ಳಾಪುರದ ರಾಜಗುರು ಮನೆತನದಲ್ಲಿ ಶ್ರೀನಿವಾಸ ತಾತಾಚಾರ್ಯ- ಜಾನಕಿಯಮ್ಮ ತಿರುಮಲ ದಂಪತಿಯ ಪುತ್ರರಾಗಿ ಈ ದಿನ ಜನಿಸಿದರು.

1896: ನೈಲಾನ್ ಕಂಡು ಹಿಡಿದ ವ್ಯಾಲೇಸ್ ಹ್ಯೂಂ ಕ್ಯಾರೂತರ್ಸ್ ಈ ದಿನ ಜನಿಸಿದರು.

1882: ಅಮೆರಿಕದ ತತ್ವಜ್ಞಾನಿ, ಕವಿ, ಪ್ರಬಂಧಕಾರ ರಾಲ್ಫ್ ವಾಲ್ಡೊ ಎಮರ್ಸನ್ 78ನೇ ವಯಸ್ಸಿನಲ್ಲಿ ಮೆಸಾಚ್ಯುಸೆಟ್ಸಿನ ಕಾಂಕಾರ್ಡಿನಲ್ಲಿ ಮೃತನಾದ.

1857: ಆಧುನಿಕ ಸಂಖ್ಯಾಶಾಸ್ತ್ರದ ಹರಿಕಾರ ಕಾರ್ಲ್ ಪಿಯರ್ ಸನ್ ಜನನ.

1521: ಪೋರ್ಚುಗೀಸ್ ಸಂಶೋಧಕ ಫರ್ಡಿನಾಂಡ್ ಮೆಗೆಲ್ಲನ್ ವಿಶ್ವ ಪರ್ಯಟನೆಗಾಗಿ ಹೊರಟಿದ್ದಾಗ ಫಿಲಿಪ್ಪೀನ್ಸ್ ಜನರಿಂದ ಹತನಾದ. ಫಿಲಿಪ್ಪೀನ್ಸಿನಲ್ಲೇ ಆತ ಹತನಾದರೂ ಆತನ ನೌಕೆ ಬಾಸ್ಕಿನ ಜುವಾನ್ ಸೆಬಾಸ್ಟಿಯನ್ ಡೆಲ್ ಕ್ಯಾನೊ ನೇತೃತ್ವದಲ್ಲಿ ಪಶ್ಚಿಮಾಭಿಮುಖವಾಗಿ ಸ್ಪೇನಿನತ್ತ ಯಾನ ಮುಂದುವರಿಸಿ ಜಗತ್ತಿಗೆ ಸುತ್ತು ಹಾಕಿದ ಮೊದಲ ನೌಕೆ ಎಂಬ ಹೆಗ್ಗಳಿಕೆಯನ್ನು ಪಡೆಯಿತು.

(ಸಂಗ್ರಹ: ನೆತ್ರಕೆರೆ ಉದಯಶಂಕರ)

Saturday, April 26, 2008

ಇಂದಿನ ಇತಿಹಾಸ History Today ಏಪ್ರಿಲ್ 26

ಇಂದಿನ ಇತಿಹಾಸ

ಏಪ್ರಿಲ್ 26

ಖ್ಯಾತ ಇತಿಹಾಸ ತಜ್ಞ, ಸಂಶೋಧಕ, ಸಾಹಿತಿ, ಪ್ರಾಧ್ಯಾಪಕ ಸೂರ್ಯನಾಥ ಕಾಮತ್ ಅವರು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ಉಪೇಂದ್ರ ಕಾಮತ್- ಪದ್ಮಾವತಮ್ಮ ದಂಪತಿಯ ಪುತ್ರನಾಗಿ ಜನಿಸಿದರು. 70ಕ್ಕೂ ಹೆಚ್ಚು ಕೃತಿಗಳನ್ನು ಪ್ರಕಟಿಸಿರುವ ಕಾಮತ್ ರಾಜ್ಯ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ಬೆಂಗಳೂರು ವಿವಿಯ ಸಂಶೋಧನಾ ಪ್ರಶಸ್ತಿ, ತುಳು ಅಕಾಡೆಮಿ ಪ್ರಶಸ್ತಿ, ಚುಂಚಶ್ರೀ ಪ್ರಶಸ್ತಿ, ಚಿದಾನಂದ ಪ್ರಶಸ್ತಿ, ರಾಜ್ಯೋತ್ಸವ ಪ್ರಶಸ್ತಿ ಇತ್ಯಾದಿ ಗೌರವಗಳಿಗೆ ಪಾತ್ರರಾಗಿದ್ದಾರೆ.

2007: ಸೇಂಟ್ ಲೂಸಿಯಾದ ಗ್ರಾಸ್ ಐಲೆಟ್ ನಲ್ಲಿ ನಡೆದ ವಿಶ್ವಕಪ್ ಕ್ರಿಕೆಟ್ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾದ ಅನುಭವಿ ವೇಗಿ ಗ್ಲೆನ್ ಮೆಕ್ ಗ್ರಾ ಅವರು ತನ್ನ ಕೊನೆಯ ಅಂತರರಾಷ್ಟ್ರೀಯ ಪಂದ್ಯದಲ್ಲಿ ನೂತನ ವಿಶ್ವಕಪ್ ದಾಖಲೆ ನಿರ್ಮಿಸಿದರು. ಒಂಬತ್ತನೇ ವಿಶ್ವಕಪ್ ಕ್ರಿಕೆಟ್ ನಲ್ಲಿ `ಶ್ರೇಷ್ಠ ಆಟಗಾರ' ಶ್ರೇಯ ಪಡೆದು ಮುಂಚೂಣಿಯಲ್ಲಿ ನಿಂತಿರುವ ಮೆಕ್ ಗ್ರಾ ಈ ಟೂರ್ನಿಯಲ್ಲಿ 25 ವಿಕೆಟ್ ಗಳನ್ನು ಕಬಳಿಸಿ ವಿಶ್ವದಾಖಲೆ ಸ್ಥಾಪಿಸಿದರು. ಶ್ರೀಲಂಕೆಯ ಮುತ್ತಯ್ಯ ಮುರಳೀಧರನ್ (23) ಮತ್ತು ಆಸ್ಟ್ರೇಲಿಯಾದ ಇನ್ನೊಬ್ಬ ಬೌಲರ್ ಶಾನ್ ಟೈಟ್ (23) ಅವರು ಮೆಕ್ ಗ್ರಾ ಜೊತೆಗೆ ಪೈಪೋಟಿಯಲ್ಲಿ ಇರುವ ಇತರ ಪಟುಗಳು.

2007: ಬಹುಸಂಖ್ಯಾತ ಜನರನ್ನು ಕಾಡುವ ಮಧುಮೇಹ ರೋಗಕ್ಕೆ ಕಾರಣವಾಗುವ ವಂಶವಾಹಿಯನ್ನು (ಜೀನ್) ಪತ್ತೆ ಹಚ್ಚಿರುವುದಾಗಿ ವಿಜ್ಞಾನಿಗಳ ತಂಡವೊಂದು `ಜನರಲ್ ಸೈನ್ಸ್ ಅಂಡ್ ನೇಚರ್ ಜೆನೆಟಿಕ್ಸ್' ನಿಯತಕಾಲಿಕದಲ್ಲಿ ಪ್ರಕಟಿಸಿತು. ವಿಶದಲ್ಲಿ ಮಧುಮೇಹದಿಂದ ಬಳಲುತ್ತಿರುವ 20 ಕೋಟಿಗೂ ಅಧಿಕ ಮಂದಿಗೆ ಇದು ವರದಾನ ಆಗಬಲ್ಲುದು.

2007: ರಾಯಚೂರಿನ ಮಾನ್ವಿ ತ್ಲಾಲೂಕಿನ ನೀರಮಾನ್ವಿ ಗ್ರಾಮದಲ್ಲಿ ಕೊಳವೆ ಬಾವಿಯೊಳಕ್ಕೆ ಬಿದ್ದ ಸಂದೀಪ ಕಡೆಗೂ ಜೀವಂತವಾಗಿ ಮೇಲೆ ಬರಲಾಗದೆ ಕೊಳವೆ ಬಾವಿಯಲ್ಲೇ ಅಸು ನೀಗಿದ. ಸತತ 57 ಗಂಟೆಗಳ ರಕ್ಷಣಾ ಕಾರ್ಯಾಚರಣೆ ಕೊನೆಗೂ ಫಲ ನೀಡಲಿಲ್ಲ.

2007: ಭಾರತದರ್ಶನ ಉಪನ್ಯಾಸ ಮಾಲಿಕೆಯಿಂದ ಖ್ಯಾತರಾಗಿದ್ದ ರಾಷ್ಟ್ರೋತ್ಥಾನ ಪರಿಷತ್ ಕಾರ್ಯಕರ್ತ, ಅವಿವಾಹಿತ ವಿದ್ಯಾನಂದ ಶೆಣೈ (56) ಅವರು ಬೆಂಗಳೂರಿನಲ್ಲಿ ನಿಧನರಾದರು. ಶೃಂಗೇರಿ ಪುರಸಭೆಯ ಸದಸ್ಯರೂ ಆಗಿದ್ದ ವಿದ್ಯಾನಂದ ಶೆಣೈ ರಾಜ್ಯದಲ್ಲಿ ಭಾರತ ದರ್ಶನ ಉಪನ್ಯಾಸ ಮಾಲಿಕೆಯ ಮೂಲಕ 1100ಕ್ಕೂ ಅಧಿಕ ಉಪನ್ಯಾಸ ನೀಡಿದ್ದರು. ಅವರು ಹೊರತಂದಿದ್ದ `ಭಾರತ ದರ್ಶನ' ಧ್ವನಿಸುರುಳಿಯ 50,000 ಸೆಟ್ಗಳು ಮಾರಾಟವಾಗಿ ದಾಖಲೆ ನಿರ್ಮಾಣವಾಗಿತ್ತು.

2007: ಮಲೇಶ್ಯಾವು ಈದಿನ ಕ್ವಾಲಾಲಂಪುರದಲ್ಲಿ ನಡೆದ ವರ್ಣರಂಜಿತ ಸಮಾರಂಭದಲ್ಲಿ 45 ವರ್ಷದ ಥಂಕು ಮಿಜಾನ್ ಜೈನಲ್ ಅಬಿದಿನ್ ಅವರನ್ನು ತನ್ನ ನೂತನ ದೊರೆಯಾಗಿ ಘೋಷಿಸಿತು. ತೈಲ ಸಮೃದ್ಧ ತೆರೆಂಗ್ಗನು ರಾಜ್ಯದದವರಾದ ಥಂಕು ಮಿಜಾನ್ ಅವರು ಎರಡನೆಯ ಅತ್ಯಂತ ಕಿರಿಯ ದೊರೆಯಾಗಿದ್ದು ಹೊಸ ತಲೆಮಾರಿನ ಶ್ರದ್ಧಾವಂತ ಮುಸ್ಲಿಮ. ಮಲೇಶ್ಯಾದ ಸಂವಿಧಾನಬದ್ಧವಾದ ವಿಶಿಷ್ಠ ಸರದಿ ದೊರೆತನ ವ್ಯವಸ್ಥೆ ಪ್ರಕಾರ ಥಂಕು ಅವರು ಐದು ವರ್ಷ ಕಾಲ ರಾಜ್ಯಭಾರ ಮಾಡುವರು. ಮಲೇಶ್ಯಾವು ಒಂಬತ್ತು ಮಂದಿ ಸುಲ್ತಾನರನ್ನು ಹೊಂದಿದ್ದು ಪ್ರತಿಯೊಬ್ಬರೂ ಸರದಿಯಂತೆ ಐದು ವರ್ಷಗಳ ಕಾಲ ಆಳ್ವಿಕೆ ನಡೆಸುತ್ತಾರೆ. ಆದರೆ ಈ ಸಲದ ಸುಲ್ತಾನರು ಅತ್ಯಂತ ಯುವ ತಲೆಮಾರಿನವರೂ ಶ್ರದ್ಧಾವಂತ ಮುಸ್ಲಿಮರೂ ಆಗಿರುವುದು ವಿಶೇಷ. 2.60 ಕೋಟಿ ಜನಸಂಖ್ಯೆಯಲ್ಲಿ ಅರ್ಧದಷ್ಟು ಮುಸ್ಲಿಮರನ್ನು ಹೊಂದಿರುವ ಮಲೇಶ್ಯಾ, ಆಧುನಿಕ ರಾಷ್ಟ್ರವಾಗ್ದಿದರೂ, 1980ರಿಂದ ಇಸ್ಲಾಮಿಕ್ ಸಂಪ್ರದಾಯ ಹೆಚ್ಚು ಬಲವಾಗಿ ಬೇರೂರಿದೆ.

2007: ಖ್ಯಾತ ಕೃಷಿ ವಿಜ್ಞಾನಿ ಎಂ.ಎಸ್. ಸ್ವಾಮಿನಾಥನ್ ಅವರು ರಾಜ್ಯಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದರು. 81 ವರ್ಷದ ಸ್ವಾಮಿನಾಥನ್ ಅವರನ್ನು ಈ ತಿಂಗಳ ಆದಿಯಲ್ಲಿ ಮೇಲ್ಮನೆ ಸದಸ್ಯರಾಗಿ ನಾಮಕರಣ ಮಾಡಲಾಗಿತ್ತು. ಅವರು ಇಂಗ್ಲಿಷ್ ನಲ್ಲಿ ಪ್ರತಿಜ್ಞೆ ಸ್ವೀಕರಿಸಿದರು.

2007: ಛತ್ರಪತಿ ಶಿವಾಜಿ ಕುರಿತ ವಿವಾದಾತ್ಮಕ `ಎ ಹಿಂದು ಕಿಂಗ್ ಇನ್ ಇಸ್ಲಾಮಿಕ್ ಇಂಡಿಯಾ' ಪುಸ್ತಕದ ಮೇಲೆ ಮಹಾರಾಷ್ಟ್ರ ಸರ್ಕಾರವು ವಿಧಿಸಿದ್ದ ನಿಷೇಧವನ್ನು ಮುಂಬೈ ಹೈಕೋರ್ಟ್ ತಳ್ಳಿ ಹಾಕಿತು. ಅಮೆರಿಕನ್ ಲೇಖಕ ಜೇಮ್ಸ್ ಲೈನ್ ಈ ಪುಸ್ತಕವನ್ನು ಬರೆದಿದ್ದಾರೆ. ಪುಸ್ತಕದಲ್ಲಿ ಶಿವಾಜಿ ಬಗ್ಗೆ ಕೆಲವು ಟೀಕೆಗಳಿವೆ ಎಂಬ ಕಾರಣಕ್ಕಾಗಿ ಸರ್ಕಾರವು ಅದನ್ನು ನಿಷೇಧಿಸಿತ್ತು. ನ್ಯಾಯಮೂರ್ತಿ ಎಫ್.ಐ. ರೆಬೆಲ್ಲೋ, ನ್ಯಾಯಮೂರ್ತಿ ವಿ.ಕೆ. ತಾಹಿಲ್ ರಮಣಿ ಮತ್ತು ನ್ಯಾಯಮೂರ್ತಿ ಅಭಯ್ ಓಕ್ ಅವರನ್ನು ಒಳಗೊಂಡ ಪೂರ್ಣಪೀಠವು 2004ರಲ್ಲಿ ವಿಧಿಸಲಾದ ನಿಷೇಧವನ್ನು ತಳ್ಳಿಹಾಕಿ ತೀರ್ಪು ನೀಡಿತು.

2006: ಕೊಲಂಬೊ ಸೇನಾ ಮುಖ್ಯ ಕಚೇರಿ ಮೇಲೆ ಮಾನವಬಾಂಬ್ ದಾಳಿ ನಡೆದ ಹಿನ್ನೆಲೆಯಲ್ಲಿ ಶ್ರೀಲಂಕಾ ವಾಯುಪಡೆಯು ಈಶಾನ್ಯ ಪ್ರದೇಶದ ತಮಿಳು ಬಂಡುಕೋರರ ಆಯ್ದ ನೆಲೆಗಳ ಮೇಲೆ ವಾಯುದಾಳಿ ಆರಂಭಿಸಿತು.

2006: ಸ್ವಾತಂತ್ರ್ಯ ಹೋರಾಟಗಾರ, ಕರ್ನಾಟಕ ಖಾದಿ ಗ್ರಾಮೋದ್ಯೋಗ ಮಂಡಳಿ ಮಾಜಿ ಅಧ್ಯಕ್ಷ ಪಿ. ವೆಂಕೋಬರಾವ್ (84) ಬೆಂಗಳೂರಿನ ಶ್ರೀರಾಮಪುರದಲ್ಲಿನ ತಮ್ಮ ನಿವಾಸದಲ್ಲಿ ನಿಧನರಾದರು. ಮಹಾತ್ಮ ಗಾಂಧೀಜಿ ಮತ್ತು ವಿನೋಬಾ ಭಾವೆ ಅವರ ಶಿಷ್ಯರಾಗಿ ಅವರ ಆಶ್ರಮಗಳಲ್ಲಿ ನೆಲೆಸಿದ್ದ ವೆಂಕೋಬರಾವ್ ಕ್ವಿಟ್ ಇಂಡಿಯಾ ಚಳವಳಿ, ವಿನೋಬಾ ಭಾವೆ ಅವರ ಭೂದಾನ ಯಾತ್ರೆಗಳಲ್ಲಿ ಪಾಲ್ಗೊಂಡ್ದಿದರು. ಜೀವನ ಚರಿತ್ರೆ, ಅನುವಾದ, ಕವನ ಪ್ರಾಕಾರಗಳಲ್ಲಿ 25 ಪುಸ್ತಕಗಳನ್ನು ರಚಿಸಿದ್ದು, ಅವರ 1200 ಪುಟಗಳ ಗಾಂಧಿ ಚರಿತ ಮಾನಸ ಗ್ರಂಥಕ್ಕೆ ದೇಜಗೌ ಟ್ರಸ್ಟ್ ವಿಶ್ವ ಮಾನವ ಪ್ರಶಸ್ತಿ ನೀಡಿ ಗೌರವಿಸಿತ್ತು.

2006: ತಮ್ಮ 17ನೇ ವಯಸ್ಸಿನಲ್ಲಿ ಹೌ ಓಪಲ್ ಮೆಹ್ತಾ ಗಾಟ್ ಕಿಸ್ಸಡ್, ಗಾಟ್ ವೈಲ್ಡ್ ಅಂಡ್ ಗಾಟ್ ಎ ಲೈಫ್ ಕಾದಂಬರಿ ಬರೆದು ಅಪಾರ ಖ್ಯಾತಿಯ ಜೊತೆಗೇ ಕೃತಿ ಚೌರ್ಯದ ವಿವಾದದಲ್ಲಿಯೂ ಸಿಲುಕಿದ ಭಾರತೀಯ ಮೂಲದ ಹಾರ್ವರ್ಡ್ ಯುವತಿ ಹಾರ್ವರ್ಡ್ ವಿವಿ ವಿದ್ಯಾರ್ಥಿನಿ ಕಾವ್ಯ ವಿಶ್ವನಾಥನ್ ಅವರು ತಮ್ಮ ಕಾದಂಬರಿಯಲ್ಲಿ ಬೇರೆ ಕಾದಂಬರಿಯ ಕೆಲವೊಂದು ಬರಹಗಳನ್ನು ಬಳಸಿಕೊಂಡಿದ್ದಾಗಿ ಒಪ್ಪಿಕೊಂಡರು. ಓಪಲ್ ಮೆಹ್ತಾ ಪ್ರಕಟಿಸಿದ ಲಿಟಲ್ ಬ್ರೌನ್ ಕಂಪೆನಿಗೆ ಪತ್ರ ಬರೆದ ಇನ್ನೊಂದು ಪ್ರಕಾಶನ ಸಂಸ್ಥೆ ರ್ಯಾಂಡಮ್ ಹೌಸ್ ಓಪಲ್ ಮೆಹ್ತಾ ಹಾಗೂ ಅಮೆರಿಕದ ಬರಹಗಾರ ಮೆಗನ್ ಮ್ಯಾಕ್ ಕ್ಯಾಫರ್ಟಿ ಅವರ ಸ್ಲೊಪ್ಪಿ ಫರ್ಸ್ಟ್ ಮತ್ತು ಸೆಕೆಂಡ್ ಹೆಲ್ಪಿಂಗ್ ನಡುವೆ ಸಾಮ್ಯತೆ ಇದೆ ಎಂದು ಆಕ್ಷೇಪಿಸಿತ್ತು.

2006: ಗುಜರಾತ್ ಸಹಕಾರ ಹಾಲು ಮಾರಾಟ ಒಕ್ಕೂಟದ (ಜಿಸಿಎಂಎಂಎಫ್) ನೂತನ ಅಧ್ಯಕ್ಷರಾಗಿ ಪಾರ್ಥಿ ಭಟೋಲ್ ಆಯ್ಕೆಯಾದರು. 33 ವರ್ಷಗಳಿಂದ ಅಧ್ಯಕ್ಷರಾಗಿದ್ದ ಡಾ. ವರ್ಗೀಸ್ ಕುರಿಯನ್ ಅವರು ಹಿಂದಿನ ತಿಂಗಳು ಈ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

2006: ಭಾರತದ ಮಾಜಿ ಅಟಾರ್ನಿ ಜನರಲ್ ಸೋಲಿ ಜೆ. ಸೊರಾಬ್ಜಿ ಅವರು ನ್ಯಾಯಮೂರ್ತಿ ಕೆ.ಎಸ್. ಹೆಗ್ಡೆ ಚಾರಿಟಬಲ್ ಫೌಂಡೇಷನ್ ಪ್ರಶಸ್ತಿಗೆ ಆಯ್ಕೆಯಾದರು

1992: ಜ್ಞಾನಪೀಠ ಪ್ರಶಸ್ತಿ ವಿಜೇತ ವಿ.ಕೃ. ಗೋಕಾಕ್ ಅವರು ಈದಿನ ನಿಧನರಾದರು.

1986: ಸೋವಿಯತ್ ಒಕ್ಕೂಟದ ಚೆರ್ನೋಬಿಲ್ ಪರಮಾಣು ಸ್ಥಾವರದಲ್ಲಿ ಜಗತ್ತಿನ ಅತಿಭೀಕರ ವಿಕಿರಣ ಸೋರಿಕೆ ದುರಂತ ಘಟಿಸಿತು. ಸ್ಥಾವರದ ರಿಯಾಕ್ಟರಿನಲ್ಲಿ ಸ್ಫೋಟ ಹಾಗೂ ಬೆಂಕಿ ಸಂಭವಿಸಿ ಸೋರಿಕೆಯಾದ ವಿಕಿರಣ ಪರಿಸರವನ್ನು ಸೇರಿ ಕನಿಷ್ಠ 31 ಮಂದಿ ತತ್ ಕ್ಷಣವೇ ಅಸುನೀಗಿದರು.

1955: ಕಲಾವಿದೆ ಜಯಶ್ರೀ ಅರವಿಂದ್ ಜನನ.

1954: ಕಲಾವಿದ ರವೀಂದ್ರ ಕುಮಾರ ವಿ. ಜನನ.

1946: ಭಾರತೀಯ ಕ್ರಿಕೆಟ್ ಅಂಪೈರ್ ವಿ.ಕೆ. ರಾಮಸ್ವಾಮಿ ಜನ್ಮದಿನ.

1937: ಖ್ಯಾತ ಇತಿಹಾಸ ತಜ್ಞ, ಸಂಶೋಧಕ, ಸಾಹಿತಿ, ಪ್ರಾಧ್ಯಾಪಕ ಸೂರ್ಯನಾಥ ಕಾಮತ್ ಅವರು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ಉಪೇಂದ್ರ ಕಾಮತ್- ಪದ್ಮಾವತಮ್ಮ ದಂಪತಿಯ ಪುತ್ರನಾಗಿ ಜನಿಸಿದರು. 70ಕ್ಕೂ ಹೆಚ್ಚು ಕೃತಿಗಳನ್ನು ಪ್ರಕಟಿಸಿರುವ ಕಾಮತ್ ರಾಜ್ಯ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ಬೆಂಗಳೂರು ವಿವಿಯ ಸಂಶೋಧನಾ ಪ್ರಶಸ್ತಿ, ತುಳು ಅಕಾಡೆಮಿ ಪ್ರಶಸ್ತಿ, ಚುಂಚಶ್ರೀ ಪ್ರಶಸ್ತಿ, ಚಿದಾನಂದ ಪ್ರಶಸ್ತಿ, ರಾಜ್ಯೋತ್ಸವ ಪ್ರಶಸ್ತಿ ಇತ್ಯಾದಿ ಗೌರವಗಳಿಗೆ ಪಾತ್ರರಾಗಿದ್ದಾರೆ.

1937: ಸ್ಪಾನಿಷ್ ಅಂತರ್ ಯುದ್ಧದ ಸಂದರ್ಭದಲ್ಲಿ ಜರ್ಮನ್ ವಿಮಾನಗಳು ಗುಯೆರ್ನಿಕಾದ ಬಾಸ್ಕ್ ಟೌನ್ ಮೇಲೆ ದಾಳಿ ನಡೆಸಿದವು. ನಾಗರಿಕ ಪ್ರದೇಶದ ಮೇಲೆ ನಡೆದ ಮೊತ್ತ ಮೊದಲ ಬಾಂಬ್ ದಾಳಿ ಇದು. ಈ ದಾಳಿಯಿಂದ ಆದ ಜೀವಹಾನಿಯನ್ನು ಪಾಬ್ಲೊಪಿಕಾಸೋ ತನ್ನ `ಗುಯೆರ್ನಿಕಾ' ಗೋಡೆ ಚಿತ್ರಗಳಲ್ಲಿ ಚಿತ್ರಿಸಿದ್ದಾನೆ.

1931: ಕಲಾವಿದ ವಿ. ರಾಮಸ್ವಾಮಿ ಜನನ.

1927: ಕಲಾವಿದ ಶಿವಪ್ಪ ಎಚ್. ತರಲಘಟ್ಟಿ ಜನನ.

1920: ಭಾರತೀಯ ಗಣಿತ ತಜ್ಞ ಶ್ರೀನಿವಾಸ ರಾಮಾನುಜಂ ಅವರು ತಮ್ಮ 32ನೇ ವಯಸ್ಸಿನಲ್ಲಿ ಕ್ಷಯ ರೋಗಕ್ಕೆ ತುತ್ತಾಗಿ ನಿಧನರಾದರು.

1887: ಮೈಸೂರಿನ ವೀಣಾವಾದನ ಝೇಂಕಾರವನ್ನು ಮತ್ತಷ್ಟು ಎತ್ತರಕ್ಕೆ ಕೊಂಡೊಯ್ದ ವೀಣೆ ವೆಂಕಟಗಿರಿಯಪ್ಪ (26-4-1887ರಿಂದ 30-1-1952) ಅವರು ವೆಂಕಟರಾಮಯ್ಯ- ನರಸಮ್ಮ ದಂಪತಿಯ ಮಗನಾಗಿ ಹೆಗ್ಗಡದೇವನ ಕೋಟೆಯಲ್ಲಿ ಜನಿಸಿದರು. ತಾತ ದೊಡ್ಡ ಸುಬ್ಬರಾಯರಿಂದಲೇ ವೀಣೆ ಪಾಠ ಆರಂಭಿಸಿದ ವೆಂಕಟರಾಮಯ್ಯ ಮುಂದೆ ಮೈಸೂರು ಮಹಾರಾಜರ ಆಸ್ಥಾನ ವಿದ್ವಾಂಸರಾಗಿ ನೇಮಕಗೊಂಡು ಮಹಾರಾಜರ ಪ್ರೋತ್ಸಾಹದಿಂದ ಪಾಶ್ಚಾತ್ಯ ಸಂಗೀತ ಪಿಯಾನೋ, ಕೆರಮಿಮ್ ವಾದನ ಕಲೆಯನ್ನೂ ಕಲಿತು ವೀಣೆಯೊಂದಿಗೆ ಅವುಗಳಲ್ಲೂ ಪ್ರವೀಣರಾದರು.

1806: ಸ್ಕಾಟಿಷ್ ಮತಪ್ರಚಾರಕ ಅಲೆಗ್ಸಾಂಡರ್ ಡಫ್ (1806-78) ಹುಟ್ಟಿದ ದಿನ. ಈತ ಕಲಕತ್ತಾ ವಿಶ್ವವಿದ್ಯಾಲಯ ಸ್ಥಾಪನೆಗೆ ನೆರವಾದ.

(ಸಂಗ್ರಹ: ನೆತ್ರಕೆರೆ ಉದಯಶಂಕರ)

Friday, April 25, 2008

Vachana ವಚನ (ಹೇಳಲಿಚ್ಛಿಸುವನು ವೀರಹನುಮನು)

ಹೇಳಲಿಚ್ಛಿಸುವನು ವೀರಹನುಮನು...

ನಾನು ನಾನು ಎನ್ನಬೇಡ
ನೀನು ಎಂದು ಕುಗ್ಗಬೇಡ
ನಿನಗೆ ನೀನು ಬಯ್ಯಬೇಡ
ಬೇರೆಯವರ ತಪ್ಪು ನೋಡಬೇಡ
ಹೊಗಳಕೆಗೆ ಉಬ್ಬಬೇಡ
ತೆಗಳಿಕೆಗೆ ಕುಗ್ಗಬೇಡ
ದುಷ್ಟರೊಡನೆ ಬೆರೆಯಬೇಡ
ಎಂದು ಹೇಳಲಿಚ್ಛಿಸುವನು ನಮ್ಮ
ವೀರಹನುಮನು.


-ಅನುಪ ಕೃಷ್ಣ ಭಟ್ ನೆತ್ರಕೆರೆ

ಇಂದಿನ ಇತಿಹಾಸ History Today ಏಪ್ರಿಲ್ 25

ಇಂದಿನ ಇತಿಹಾಸ

ಏಪ್ರಿಲ್ 25

ಶ್ರೀಶ್ರೀ ರವಿಶಂಕರ ಗುರೂಜಿ ಅವರಿಗೆ ತೈವಾನ್ ಸಾಂಸ್ಕತಿಕ ಮತ್ತು ಮಾನವ ಜೀವನ ಶಿಕ್ಷಣ ಸಂಸ್ಥೆಯು ಫರ್ವೆಂಟ್ ಗ್ಲೋಬಲ್ ಲವ್ ಆಫ್ ಲೈಫ್-2006 ಪ್ರಶಸ್ತಿಯನ್ನು ನೀಡಿತು.


2007; ಸೌರವ್ಯೂಹದಿಂದ 20 ಜ್ಯೋತಿರ್ ವರ್ಷಗಳಷ್ಟು ದೂರದಲ್ಲಿ ಒಂದು ಗ್ರಹವನ್ನು ಖಗೋಳ ಶಾಸ್ತ್ರಜ್ಞರು ಪತ್ತೆ ಹಚ್ಚಿದ್ದು ಅದರಲ್ಲಿ ಜೈವಿಕಾಂಶ ಇರಬಹುದು ಎಂದು ಪ್ರಕಟಿಸಿದರು. ಹೊಸ ಗ್ರಹವು ಭೂಗ್ರಹಕ್ಕಿಂತ ಐದು ಪಟ್ಟು ದೊಡ್ಡದಾಗಿದ್ದು, ಸೌರವ್ಯೂಹಕ್ಕೆ ಸನಿಹದಲ್ಲಿರುವ ಕೆಂಪು ಕುಬ್ಜ ತಾರೆ ಗ್ಲೆಸೆ-581ನ್ನು ಸುತ್ತುತ್ತಿದೆ, ಇದು ತುಲಾ ನಕ್ಷತ್ರ ರಾಶಿಯಲ್ಲಿದೆ ಎಂದು ಹೊಸ ಗ್ರಹವನ್ನು ಪತ್ತೆ ಹಚ್ಚಿದ ಸ್ವಿಜರ್ ಲೆಂಡಿನ ಜಿನೀವಾ ಖಗೋಳಾಲಯದ ವಿಜ್ಞಾನಿಗಳಾದ ಸಿಫೈನ್ ಉಡ್ರಿ ಮತ್ತು ಸಹೋದ್ಯೋಗಿಗಳು ಹೇಳಿದರು.

2006: ಡಕಾಯತಿಯಿಂದ ರಾಜಕೀಯಕ್ಕೆ ಸೇರಿದ್ದ ಚಂಬಲ್ ರಾಣಿ ಕುಖ್ಯಾತಿಯ ಫೂಲನ್ ದೇವಿಯನ್ನು ಹತ್ಯೆಗೈದ ಪ್ರಮುಖ ಆರೋಪಿ ಶೇರ್ ಸಿಂಗ್ ರಾಣಾನನ್ನು ದೆಹಲಿ ಪೊಲೀಸರ ತನಿಖಾ ತಂಡವು ದೆಹಲಿಯಲ್ಲಿ ಬಂಧಿಸಿತು. ತಿಹಾರ್ ಸೆರೆಮನೆಯಿಂದ ಪರಾರಿಯಾಗಿ, ಎರಡು ವರ್ಷಗಳ ಬಳಿಕ ಆರೋಪಿ ಸೆರೆ ಸಿಕ್ಕಿದ. ಫೂಲನ್ ದೇವಿಯನ್ನು ದೆಹಲಿಯಲ್ಲಿ ಅವರ ಮನೆ ಎದುರಲ್ಲಿ 2001ರ ಜುಲೈಯಲ್ಲಿ ಹತ್ಯೆ ಮಾಡಲಾಗಿತ್ತು ಹತ್ಯೆಯಾದ ಎರಡೇ ದಿನದಲ್ಲಿ ಶೇರ್ ಸಿಂಗ್ ನನ್ನು ಡೆಹರಾಡೂನಿನಲ್ಲಿ ಪೊಲೀಸರು ಬಂದಿಸಿದ್ದರು. 2004ರಲ್ಲಿ ಆತ ತಿಹಾರ್ ಸೆರೆಮನೆಯಿಂದ ಪರಾರಿಯಾಗಿದ್ದ.

2006: ನೇಪಾಳದ ನೂತನ ಪ್ರಧಾನಿ ಸ್ಥಾನಕ್ಕೆ ನೇಪಾಳಿ ಕಾಂಗ್ರೆಸ್ ಅಧ್ಯಕ್ಷ , ಮಾಜಿ ಪ್ರಧಾನಿ ಗಿರಿಜಾ ಪ್ರಸಾದ್ ಕೊಯಿರಾಲ (84) ಅವರನ್ನು ಪ್ರಸ್ತಾಪಿಸಿ ಸಪ್ತಪಕ್ಷ ಮೈತ್ರಿಕೂಟ ನಿರ್ಣಯ ಅಂಗೀಕರಿಸಿತು. 19 ದಿನಗಳ ಪ್ರಜಾಪ್ರಭುತ್ವ ಪರ ಚಳವಳಿಯನ್ನೂ ಹಿಂತೆಗೆದುಕೊಂಡ ಮೈತ್ರಿಕೂಟ, ಸಂಸತ್ತಿಗೆ ಮರುಜೀವ ನೀಡುವುದಾಗಿ ದೊರೆ ಜ್ಞಾನೇಂದ್ರ ಅವರು ನೀಡಿದ ಆಹ್ವಾನಕ್ಕೆ ಒಪ್ಪಿ ಸರ್ಕಾರ ರಚನೆಗೆ ಮುಂದಾಯಿತು.

2006: ಗರ್ಭಿಣಿಯ ಪೋಷಾಕಿನಲ್ಲಿ ಶ್ರೀಲಂಕಾ ಸೇನೆಯ ಕೊಲಂಬೊ ಕೇಂದ್ರ ಕಚೇರಿ ಆವರಣದೊಳಕ್ಕೆ ಪ್ರವೇಶಿಸಿದ ಎಲ್ ಟಿಟಿಇ ಸಂಘಟನೆಯ ಮಹಿಳಾ ಮಾನವ ಬಾಂಬ್ ನಡೆಸಿದ ಆತ್ಮಾಹುತಿ ದಾಳಿಯಲ್ಲಿ ಹತ್ತು ಮಂದಿ ಸೈನಿಕರು ಮೃತರಾಗಿ ಸೇನಾ ಮುಖ್ಯಸ್ಥ ಲೆಫ್ಟಿನೆಂಟ್ ಜನರಲ್ ಶರತ್ ಫಾನ್ಸೆಕಾ ತೀವ್ರವಾಗಿ ಗಾಯಗೊಂಡರು.

2006: ಲಾಭದ ಹುದ್ದೆ ಹೊಂದಿರುವ ಲೋಕಸಭಾ ಅಧ್ಯಕ್ಷ ಸೋಮನಾಥ ಚಟರ್ಜಿ, ಪಂಜಾಬ್, ಮಧ್ಯಪ್ರದೇಶ, ಒರಿಸ್ಸಾ, ನಾಗಾಲ್ಯಾಂಡ್, ಅರುಣಾಚಲ ಪ್ರದೇಶ ಮತ್ತು ಛತ್ತೀಸ್ ಗಢ ಈ 6 ರಾಜ್ಯಗಳ ಮುಖ್ಯಮಂತ್ರಿಗಳು, ಕೇಂದ್ರ ಸಚಿವ ಪ್ರಣಬ್ ಮುಖರ್ಜಿ, ಶರದ್ ಪವಾರ್ ಮತ್ತು ಮೀರಾಕುಮಾರ್ ಸೇರಿದಂತೆ ಒಟ್ಟು 43 ಲೋಕಸಭೆ ಸದಸ್ಯರು ಮತ್ತು 200ಕ್ಕೂ ಹೆಚ್ಚು ಶಾಸಕರ ಹೆಸರನ್ನು ಚುನಾವಣಾ ಆಯೋಗವು ತನ್ನ ವೆಬ್ ಸೈಟಿನಲ್ಲಿ ಪ್ರಕಟಿಸಿತು.

2006: ಬಸವ ವೇದಿಕೆಯು ಪ್ರತಿವರ್ಷ ನೀಡುವ ಪ್ರತಿಷ್ಠಿತ ಬಸವಶ್ರೀ ಪ್ರಶಸ್ತಿಗೆ ಈ ವರ್ಷ ಕೇರಳ ಹೈಕೋರ್ಟಿನ ನಿವೃತ್ತ ಮುಖ್ಯ ನ್ಯಾಯಮೂರ್ತಿ ಡಾ.ವಿ.ಎಸ್. ಮಳಿಮಠ ಆಯ್ಕೆಯಾದರು. ವಚನ ಸಾಹಿತ್ಯ ಶ್ರೀ ಪ್ರಶಸ್ತಿಗೆ ಮಾಜಿ ಸಚಿವೆ ಲೀಲಾದೇವಿ ಆರ್ ಪ್ರಸಾದ್, ಬೆಂಗಳೂರು ನಗರ ಪೊಲೀಸ್ ಆಯುಕ್ತ ಡಾ. ಅಜಯಕುಮಾರ್ ಸಿಂಗ್ ಆಯ್ಕೆಯಾದರು.

2006: ಶ್ರೀಶ್ರೀ ರವಿಶಂಕರ ಗುರೂಜಿ ಅವರಿಗೆ ತೈವಾನ್ ಸಾಂಸ್ಕತಿಕ ಮತ್ತು ಮಾನವ ಜೀವನ ಶಿಕ್ಷಣ ಸಂಸ್ಥೆಯು ಫರ್ವೆಂಟ್ ಗ್ಲೋಬಲ್ ಲವ್ ಆಫ್ ಲೈಫ್-2006 ಪ್ರಶಸ್ತಿಯನ್ನು ನೀಡಿತು.

2005: ಜಪಾನಿನ ಆಮ್ ಅಗಾಸಾಕಿ ನಿಲ್ದಾಣದ ಬಳಿ ಪ್ರಯಾಣಿಕ ರೈಲು ದುರಂತದಲ್ಲಿ 107 ಜನರ ಸಾವು.

1982: ಸತ್ಯಜಿತ್ ರೇ ಅವರ `ಶತ್ ರಂಜ್ ಕಿ ಖಿಲಾಡಿ' ಸಿನಿಮಾ ಪ್ರಸಾರದೊಂದಿಗೆ ಭಾರತದಲ್ಲಿ ಮೊತ್ತ ಮೊದಲ ಬಾರಿಗೆ ವರ್ಣರಂಜಿತ ರಾಷ್ಟ್ರೀಯ ಪ್ರಸಾರ ಆರಂಭವಾಯಿತು.

1973: ಕಲಾವಿದ ರಮೇಶ ಕುಲಕರ್ಣಿ ಜನನ.

1968: ಭಾರತದ ಶಾಸ್ತ್ರೀಯ ಸಂಗೀತಗಾರ ಬಡೇ ಗುಲಾಂ ಅಲಿ ಅವರು ತಮ್ಮ 66ನೇ ವಯಸ್ಸಿನಲ್ಲಿ ಮೃತರಾದರು. ಪಾಟಿಯಾಲ ಘರಾಣಾ ಮತ್ತು ಖಯಾಲ್ ಹಾಡುಗಾರಿಕೆಯನ್ನು ಜನಪ್ರಿಯಗೊಳಿಸುವಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದರು.

1945: ವಿಶ್ವಸಂಸ್ಥೆಯ ಸಂಘಟನೆಗಾಗಿ ಸುಮಾರು 50 ರಾಷ್ಟ್ರಗಳ ಪ್ರತಿನಿಧಿಗಳು ಸ್ಯಾನ್ ಫ್ರಾನ್ಸಿಸ್ಕೊದಲ್ಲಿ ಸಭೆ ಸೇರಿದರು.

1926: ಕಲಾವಿದ ಅಂಬಳೆ ಸುಬ್ಬರಾವ್ ಜನನ.

1924: ಕಲಾವಿದ ಎಸ್. ರಾಘವೇಂದ್ರರಾವ್ ಕದಿರೆ ಜನನ.

1922: ಕಲಾವಿದ ಎಂ.ಆರ್. ದೊರೆಸ್ವಾಮಿ ಜನನ.

1916: ಗಮಕ ಗಂಧರ್ವರೆನಿಸಿದ್ದ ಬಿ.ಎಸ್.ಎಸ್. ಕೌಶಿಕ್ ಅವರು ಸುಬ್ಬಯ್ಯ- ಸುಬ್ಬಮ್ಮ ದಂಪತಿಯ ಮಗನಾಗಿ ಕೃಷ್ಣರಾಜಪೇಟೆ ತಾಲ್ಲೂಕು ಹೇಮಗಿರಿ ಕುಪ್ಪಹಳ್ಳಿಯಲ್ಲಿ ಜನಿಸಿದರು.

1859: ಸುಯೆಜ್ ಕಾಲುವೆಗಾಗಿ ಅದರ ಯೋಜಕ ಫರ್ಡಿನಾಂಡ್ ಡಿ ಲೆಸ್ಸೆಪ್ಸ್ ಮಾರ್ಗದರ್ಶನದಲ್ಲಿ ನೆಲ ಅಗೆಯಲು ಆರಂಭಿಸಲಾಯಿತು. ಸರಿಯಾಗಿ 100 ವರ್ಷಗಳ ಬಳಿಕ 1959ರಲ್ಲಿ ಅಟ್ಲಾಂಟಿಕ್ ಸಾಗರಕ್ಕೆ ಗ್ರೇಟ್ ಲೇಕ್ಸ್ ನ್ನು ಸಂಪರ್ಕಿಸುವ ಸೇಂಟ್ ಲಾರೆನ್ಸ್ ಸಮುದ್ರಮಾರ್ಗವನ್ನು (ಸೀವೇ) ರಾಣಿ ಎರಡನೇ ಎಲಿಜಬೆತ್ ಹಾಗೂ ಅಧ್ಯಕ್ಷ ಐಸೆನ್ ಹೊವರ್ ಜಂಟಿಯಾಗಿ ಉದ್ಘಾಟಿಸಿದರು

(ಸಂಗ್ರಹ: ನೆತ್ರಕೆರೆ ಉದಯಶಂಕರ)

Thursday, April 24, 2008

ಇಂದಿನ ಇತಿಹಾಸ History Today ಏಪ್ರಿಲ್ 24

ಇಂದಿನ ಇತಿಹಾಸ

ಏಪ್ರಿಲ್ 24

ಕನ್ನಡದ ವರನಟ ಡಾ. ರಾಜಕುಮಾರ್ (1929-2006) ಜನ್ಮದಿನ. ಮೂಲತಃ ಮುತ್ತುರಾಜ್ ಎಂಬ ಹೆಸರು ಇದ್ದ ಅವರು ಮುಂದೆ ಕನ್ನಡ ಚಲನಚಿತ್ರ ರಂಗದ ಮೇರು ನಟನಾಗಿ `ರಾಜಕುಮಾರ್' ಎಂಬ ಹೆಸರಿನಿಂದಲೇ ಮನೆ ಮಾತಾದರು. 2006ರ ಏಪ್ರಿಲ್ 12ರಂದು ತಮ್ಮ ಜನ್ಮದಿನಾಚರಣೆಗೆ 11 ದಿನ ಮೊದಲು ಹೃದಯಾಘಾತದಿಂದ ಇಹಲೋಕ ತ್ಯಜಿಸಿದರು.

2007: ಮಹಿಳೆಯರು ಮತ್ತು ಮಕ್ಕಳ ಅಭಿವೃದ್ಧಿಗಾಗಿ ಅವಿರತವಾಗಿ ಶ್ರಮಿಸುತ್ತಿದ್ದ ಸೇವ್ ದಿ ಚಿಲ್ಡ್ರನ್ ಇಂಡಿಯಾ ಸಂಸ್ಥೆಯ ರಾಷ್ಟ್ರೀಯ ನಿರ್ದೇಶಕಿ ವಿಪುಲ ಕದ್ರಿ (71) ಮುಂಬೈಯಲ್ಲಿ ನಿಧನರಾದರು. ಇವರ ಪುತ್ರಿ ಮನಾಶೆಟ್ಟಿ ಬಾಲಿವುಡ್ ನಟ ಸುನಿಲ್ ಶೆಟ್ಟಿ ಅವರ ಪತ್ನಿ.

2007: ರಾಯಚೂರು ಜಿಲ್ಲೆ ಮಾನ್ವಿ ತಾಲ್ಲೂಕು ನೀರಮಾನ್ವಿ ಗ್ರಾಮದಲ್ಲಿ ಮಧ್ಯಾಹ್ನ ಆಟವಾಡಲು ಹೊಲಕ್ಕೆ ಹೋದ ಸಂದೀಪ ಎಂಬ 8 ವರ್ಷದ ಬಾಲಕ ಕೊಳವೆ ಬಾವಿಯೊಳಕ್ಕೆ ಬಿದ್ದ.

2007: ಬೆಂಗಳೂರು ಅರಮನೆ ಮೈದಾನದಲ್ಲಿ ಏರ್ಪಡಿಸಲಾಗಿದ್ದ ಸಹಸ್ರ ಚಂಡಿಕಾ ಯಾಗದ ಪೂರ್ಣಾಹುತಿಯು ಉಡುಪಿ ಪೇಜಾವರ ಮಠಾಧೀಶ ಶ್ರೀ ವಿಶ್ವೇಶ ತೀರ್ಥ ಸ್ವಾಮೀಜಿ ಅವರ ಸಾನಿಧ್ಯದಲ್ಲಿ ನಡೆಯಿತು.

2007: ವಿದೇಶೀ ಮತ್ತು ದೇಶೀಯ ಗೋ ತಳಿಗಳ ಜೀನುಗಳು ತೀರಾ ವಿಭಿನ್ನ ಗುಣಗಳನ್ನು ಹೊಂದಿದ್ದು, ಈ ವಿಭಿನ್ನ ತಳಿಗಳ ನಡುವೆ ಸಂಕರ ಸಲ್ಲದು, ಇದರಿಂದ ಮೂಲ ದೇಶೀಯ ಶುದ್ಧ ತಳಿಗಳಿಗೆ ಆಪತ್ತು ಬರುತ್ತದೆ ಎಂದು ಥಾಯ್ಲೆಂಡಿನ ಡಾ. ಡೇವಿಡ್ ಸ್ಟೀವ್ ಹೊಸನಗರದಲ್ಲಿ ನಡೆದ ವಿಶ್ವ ಗೋ ಸಮ್ಮೇಳನದ ಗೋ ವಿಚಾರ ಮಂಥನ ಗೋಷ್ಠಿಯಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದರು. ಸಾವಯವ ಕೃಷಿ ತಜ್ಞ ಸುಭಾಶ ಪಾಳೇಕರ್ ಅಧ್ಯಕ್ಷತೆ ವಹಿಸಿದ್ದರು.

2006: ಪ್ರಜಾಪ್ರಭುತ್ವ ಸ್ಥಾಪನೆಗಾಗಿ ಎಡಬಿಡದೆ ನಡೆದ ಚಳವಳಿಗೆ ನೇಪಾಳದ ರಾಜಸತ್ತೆ ಕೊನೆಗೂ ಮಣಿಯಿತು. ಈ ದಿನ ರಾತ್ರಿ ಟೆಲಿವಿಷನ್ನಿನಲ್ಲಿ ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಿದ ದೊರೆ ಜ್ಞಾನೇಂದ್ರ 2002ರಲ್ಲಿ ತಾವು ವಿಸರ್ಜಿಸಿದ್ದ ಸಂಸತ್ತಿಗೆ ಮರುಜೀವ ನೀಡಿ ಮತ್ತೆ ಸಮಾವೇಶಗೊಳಿಸುವುದಾಗಿಯೂ, ಮುಷ್ಕರ ನಿರತ ಸಪ್ತಪಕ್ಷಗಳ ಮೈತ್ರಿಕೂಟ ಮಾತುಕತೆಗೆ ಬರಬೇಕು ಎಂದೂ ಆಹ್ವಾನ ನೀಡಿದರು. ಚಳವಳಿ ನಿರತ ಪಕ್ಷಗಳು ಈ ಪ್ರಕಟಣೆಯನ್ನು ಸ್ವಾಗತಿಸಿದವು.

2006: ಲಾಭದ ಹುದ್ದೆ ಹೊಂದಿದ ಕಾರಣಕ್ಕಾಗಿ ರಾಜ್ಯಸಭಾ ಸದಸ್ಯತ್ವದಿಂದ ಅನರ್ಹಗೊಂಡಿರುವ ಸಮಾಜವಾದಿ ಪಕ್ಷದ ನಾಯಕಿ, ಹಿರಿಯ ಚಿತ್ರನಟಿ ಜಯಾ ಬಚ್ಚನ್ ಅವರು ತಮ್ಮ ವಿರುದ್ಧದ ಕ್ರಮವನ್ನು ಪ್ರಶ್ನಿಸಿ ಸುಪ್ರೀಂಕೋರ್ಟಿನಲ್ಲಿ ರಿಟ್ ಅರ್ಜಿ ಸಲ್ಲಿಸಿದರು.

2006: ಜಗತ್ತಿನ ಮೊತ್ತ ಮೊದಲ ತದ್ರೂಪಿ ನಾಯಿ ಸ್ನಪ್ಪಿ ಕೊರಿಯಾದ ಸೋಲ್ ನಲ್ಲಿ ತನ್ನ ಮೊದಲ ಹುಟ್ಟುಹಬ್ಬ ಆಚರಿಸಿತು. ಆದರೆ ಈ ನಾಯಿಯನ್ನು ಸೃಷ್ಟಿಸಿದ ವಿಜ್ಞಾನಿಗಳ ತಂಡ ಹಾಗೂ ಅದರ ನಾಯಕ ದಕ್ಷಿಣ ಕೊರಿಯಾದ ಹ್ವಾಂಗ್ ವೂ-ಸಕ್ ಅವರು ವಂಚನೆ ಮತ್ತು ನೈತಿಕತೆಯ ಉಲ್ಲಂಘನೆಗಾಗಿ ವಿಚಾರಣೆಗೆ ಗುರಿಯಾದರು. 2005ರಲ್ಲಿ ದಕ್ಷಿಣ ಕೊರಿಯಾದ ಈ ವಿಜ್ಞಾನಿಗಳ ತಂಡ ತದ್ರೂಪಿ ನಾಯಿ ಸೃಷ್ಟಿಯನ್ನು ಪ್ರಕಟಿಸಿದಾಗ ಟೈಮ್ ನಿಯತಕಾಲಿಕ ಈ ವರ್ಷದ ಅದ್ಭುತ ಸಂಶೋಧನೆಗಳಲ್ಲಿ ಇದು ಒಂದು ಬಣ್ಣಿಸಿತ್ತು. ಹ್ವಾನ್ ಅವರನ್ನು ಆಗ ಕೊರಿಯಾದ ಹೆಮ್ಮೆ ಎಂದು ಬಣ್ಣಿಸಲಾಗಿತ್ತು. ಆದರೆ ವರ್ಷಾಂತ್ಯದವೇಳೆಗೆ ಮಾನವ ಭ್ರೂಣ ಸಂಗ್ರಹಕ್ಕೆ ಸಂಬಂಧಿಸಿದಂತೆ ನೈತಿಕತೆಯನ್ನು ಉಲ್ಲಂಘಿಸಿದ ಆರೋಪಕ್ಕೆ ಹ್ವಾನ್ ಮತ್ತು ಅವರ ತಂಡ ಗುರಿಯಾಯಿತು.

2006: ಖ್ಯಾತ ಹಿನ್ನಲೆ ಗಾಯಕ, ಐದು ಫಿಲ್ಮ್ ಫೇರ್ ಪ್ರಶಸ್ತಿಗಳ ವಿಜೇತ ಉದಿತ್ ನಾರಾಯಣ್ ಅವರಿಗೆ ಬಿಹಾರ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಮಂಜುಪ್ರಕಾಶ್ ಅವರು ನೋಟಿಸ್ ಕಳುಹಿಸಿ 15 ದಿನಗಳ ಒಳಗಾಗಿ ತಮ್ಮ ಮುಂದೆ ಹಾಜರಾಗಿ ರಂಜನಾ ನಾರಾಯಣ್ ಅವರನ್ನು ತನ್ನ ಪತ್ನಿ ಅಲ್ಲವೆಂದು ಹೇಳಿರುವುದು ಏಕೆ ಎಂದು ವಿವರಣೆ ನೀಡುವಂತೆ ಆಜ್ಞಾಪಿಸಿದರು. ವಾರದ ಹಿಂದೆ ಪಟ್ನಾದ ಐಶಾರಾಮಿ ಹೊಟೇಲ್ ಒಂದರಲ್ಲಿ ಉದಿತ್ ನಾರಾಯಣ್ ತನ್ನ ಪತ್ನಿ ದೀಪಾ ಮತ್ತು ಪುತ್ರ ಆದಿತ್ಯ ಜತೆ ಇದ್ದಾಗ ಅಲ್ಲಿಗೆ ರಂಜನಾ ನುಗ್ಗಿದ್ದರಿಂದ ಉದಿತ್ ನಾರಾಯಣ್ ಇಬ್ಬರನ್ನು ಮದುವೆಯಾದ ವಿಷಯ ಬೆಳಕಿಗೆ ಬಂದಿತ್ತು.

1973: ಕೇಶವಾನಂದ ಭಾರತೀ ಪ್ರಕರಣದಲ್ಲಿ ಭಾರತದ ಸುಪ್ರೀಂಕೋರ್ಟಿನ ಸಂವಿಧಾನ ಪೀಠವು ನೀಡಿದ್ದ ತನ್ನ ಹಿಂದಿನ ತೀರ್ಪನ್ನು ಬದಲಾಯಿಸಿ ಚಾರಿತ್ರಿಕ ತೀರ್ಪು ನೀಡಿತು. ಮೂಲಭೂತ ಹಕ್ಕುಗಳಿಗೆ ಸಂಸತ್ತು ತಿದ್ದುಪಡಿ ತರಲಾಗದು ಮತ್ತು ಅಂತಹ ಯಾವುದೇ ಬದಲಾವಣೆಗಳಿಗೆ ಹೊಸ ಸಂವಿಧಾನಬದ್ಧ ಶಾಸನಸಭೆಯ ರಚನೆಯಾಗಬೇಕು ಎಂಬುದಾಗಿ (ಗೋಲಕನಾಥ್ ಪ್ರಕರಣದಲ್ಲಿ) ಹಿಂದೆ ನೀಡಿದ್ದ ತೀರ್ಪನ್ನು ಸುಪ್ರೀಂಕೋರ್ಟ್ ಬದಲಾಯಿಸಿತು. ಸಂವಿಧಾನದ ಕೆಲವು ಮೂಲಭೂತ ಲಕ್ಷಣಗಳನ್ನು ಮಾತ್ರ ಬದಲಾಯಿಸುವಂತಿಲ್ಲ ಎಂದು ಅದು ಹೇಳಿತು.

1973: ಸಚಿನ್ ತೆಂಡೂಲ್ಕರ್ ಹುಟ್ಟಿದ ದಿನ.

1971: ಕಲಾವಿದ ಶ್ರೀಧರ ಎಸ್. ಚವ್ಹಾಣ್ ಜನನ.

1962: ಕಲಾವಿದೆ ನಿರ್ಮಲ ಕುಮಾರಿ ಜನನ.

1960: ಕಲಾವಿದ ಕೆ.ವಿ. ಅಕ್ಷರ ಜನನ.

1958: ಕಲಾವಿದ ರಾಮಾನುಜನ್ ಜಿ.ಎಸ್. ಜನನ.

1947: ಕಲಾವಿದ ಅಚ್ಯುತರಾವ್ ಪದಕಿ ಜನನ.

1929: ಕನ್ನಡದ ವರನಟ ಡಾ. ರಾಜಕುಮಾರ್ (1929-2006) ಜನ್ಮದಿನ. ಮೂಲತಃ ಮುತ್ತುರಾಜ್ ಎಂಬ ಹೆಸರು ಇದ್ದ ಅವರು ಮುಂದೆ ಕನ್ನಡ ಚಲನಚಿತ್ರ ರಂಗದ ಮೇರು ನಟನಾಗಿ `ರಾಜಕುಮಾರ್' ಎಂಬ ಹೆಸರಿನಿಂದಲೇ ಮನೆ ಮಾತಾದರು. 2006ರ ಏಪ್ರಿಲ್ 12ರಂದು ತಮ್ಮ ಜನ್ಮದಿನಾಚರಣೆಗೆ 11 ದಿನ ಮೊದಲು ಹೃದಯಾಘಾತದಿಂದ ಇಹಲೋಕ ತ್ಯಜಿಸಿದರು.

1927: ಖ್ಯಾತ ಗಾಯಕಿ ಜಯವಂತಿದೇವಿ ಹಿರೇಬೆಟ್ಟು ಅವರು ಪಡುಕೋಣೆ ರಮಾನಂದರಾಯರು- ಸೀತಾದೇವಿ ದಂಪತಿಯ ಮಗಳಾಗಿ ಮಂಗಳೂರಿನಲ್ಲಿ ಜನಿಸಿದರು. ಕರ್ನಾಟಕದ ಪ್ರತಿಷ್ಠಿತ ಪ್ರಶಸ್ತಿಯಾದ ಸಂತ ಶಿಶುನಾಳ ಶರೀಫ ಪ್ರಶಸ್ತಿಯ ಪ್ರಥಮ ಪುರಸ್ಕೃತೆಯಾದ ಈಕೆ ಮಹಾತ್ಮ ಗಾಂಧೀಜಿವರ ಪ್ರಾರ್ಥನಾ ಸಭೆಯಲ್ಲಿ ವಂದೇ ಮಾತರಂ ಹಾಡಿದ್ದರು. ತ್ಯಾಗಯ್ಯ, ಕಲ್ಪನಾ ಚಿತ್ರಗಳಲ್ಲೂ ಹಿನ್ನೆಲೆ ಗಾಯಕರಾಗಿ ಹಾಡಿದ್ದರು. ಆಲ್ ಇಂಡಿಯಾ ರೇಡಿಯೋದಲ್ಲಿ ಅವರು ನಡೆಸಿಕೊಟ್ಟ ಸಂಗೀತ ಕಾರ್ಯಕ್ರಮಗಳು ತುಂಬ ಹೆಸರುವಾಸಿ.

1889: ಸರ್ ಸ್ಟಾಫರ್ಡ್ ಕ್ರಿಪ್ಸ್ (1889-1952) ಜನ್ಮದಿನ. ಭಾರತಕ್ಕೆ ಸ್ವಾತಂತ್ರ್ಯ ನೀಡುವ ನಿಟ್ಟಿನಲ್ಲಿ ಇಂಗ್ಲೆಂಡ್ ಮತ್ತು ಭಾರತದ ಮಧ್ಯೆ ಮಾತುಕತೆ ನಡೆಸುವ ಸಲುವಾಗಿ ಈತನ ನೇತೃತ್ವದಲ್ಲಿ ಭಾರತಕ್ಕೆ ನಿಯೋಗವೊಂದು ಬಂದಿತ್ತು. ಅದಕ್ಕೆ `ಕ್ರಿಪ್ಸ್ ಮಿಷನ್' ಎಂದೇ ಹೆಸರು ಬಂದಿತು.

1800: ಜಗತ್ತಿನಲ್ಲೇ ಅತ್ಯಂತ ದೊಡ್ಡದೆಂದು ಹೆಸರು ಪಡೆದಿರುವ ಯುನೈಟೆಡ್ ಸ್ಟೇಟ್ಸ್ ಲೈಬ್ರರಿ ಆಫ್ ಕಾಂಗ್ರೆಸ್ ವಾಷಿಂಗ್ಟನ್ ಡಿ.ಸಿ.ಯಲ್ಲಿ ಸ್ಥಾಪನೆಯಾಯಿತು.

(ಸಂಗ್ರಹ: ನೆತ್ರಕೆರೆ ಉದಯಶಂಕರ)

Wednesday, April 23, 2008

ಇಂದಿನ ಇತಿಹಾಸ History Today ಏಪ್ರಿಲ್ 23

ಇಂದಿನ ಇತಿಹಾಸ

ಏಪ್ರಿಲ್ 23


ಹೊಸನಗರ ರಾಮಚಂದ್ರಾಪುರ ಮಠದ ಶ್ರೀ ಸಾರ್ವಭೌಮ ವೇದಿಕೆಯಲ್ಲಿ ದೇವ ದೇವೋತ್ತಮ ಸೀತಾಮಾತಾ ಸಹಿತ ಶ್ರೀರಾಮಚಂದ್ರನಿಗೆ ಮಂತ್ರ , ವೇದಘೋಷಗಳ ಮಧ್ಯೆ ಪಟ್ಟಾಭಿಷೇಕ ಮಹೋತ್ಸವ ನಡೆಯಿತು. ರಾಮಾಯಣ ಕಾಲದ ವೈಭವವನ್ನು ಆಧುನಿಕ ಯುಗದಲ್ಲಿ ಪ್ರತ್ಯಕ್ಷೀಕರಿಸುವ ಪ್ರಯತ್ನವಾಗಿ ನಡೆದ ರಾಮಾಯಣ ಮಹಾಸತ್ರದ ಪ್ರಧಾನ ಅಂಗವಾದ ಈ ಕಾರ್ಯಕ್ರಮ ಈ ದಿನ ಬೆಳಗ್ಗೆ ಕರ್ಕಾಟಕ ಲಗ್ನದಲ್ಲಿ ನೆರವೇರಿತು. ದೇಶದ 500 ನದಿಗಳಿಂದ ಸಂಗ್ರಹಿಸಲಾಗಿದ್ದ ಜಲದಿಂದ ಶ್ರೀರಾಮಚಂದ್ರ ಸೀತಾಮಾತೆಯ ವಿಗ್ರಹಗಳಿಗೆ ಅಭಿಷೇಕ ನಡೆಸಲಾಯಿತು.

ಇಂದು ವಿಶ್ವ ಪುಸ್ತಕ ದಿನ.

2007: ಸೋವಿಯತ್ ಒಕ್ಕೂಟದ ವಿಭಜನೆಯ ನಂತರದ ರಷ್ಯಾದ ಪ್ರಥಮ ಚುನಾಯಿತ ಅಧ್ಯಕ್ಷ ಬೋರಿಸ್ ಯೆಲ್ಸಿನ್ (76) ನಿಧನರಾದರು. ರಷ್ಯಾ ಕಂಡ ಅಪರೂಪದ ನಾಯಕ, ಯೆಲ್ಸಿನ್ ಜನಪ್ರಿಯತೆಯ ಉತ್ತುಂಗ, ವಿರೋಧದ ಅಲೆ ಎರಡನ್ನೂ ಎದುರಿಸಿದ ಮುಖಂಡ. ಅತ್ಯಂತ ಪರಿಣಾಮಕಾರಿ ಸುಧಾರಕನಾಗಿ 1991ರಲ್ಲಿ ಗೊರ್ಬಚೇವ್ ವಿರುದ್ಧ ಸ್ಪರ್ಧಿಸಿ ಗೆದ್ದು, ಅಧಿಕಾರಕ್ಕೆ ಬಂದ ಯೆಲ್ಸಿನ್ ನಂತರದ ದಿನಗಳಲ್ಲಿ ವ್ಯಾಪಕ ಭ್ರಷ್ಟಾಚಾರ, ಆರ್ಥಿಕತೆಯ ಕುಸಿತ ಹಾಗೂ ಅಪಾರ ರಾಜಕೀಯ ಮತ್ತು ಸಾಮಾಜಿಕ ಸಮಸ್ಯೆಗಳಿಗೆ ಕಾರಣರಾದರು.

2007: ಶ್ರೀಹರಿಕೋಟಾದ ಸತೀಶ ಧವನ್ ಬಾಹ್ಯಾಕಾಶ ಕೇಂದ್ರದಿಂದ ಆಗಸಕ್ಕೆ ಚಿಮ್ಮಿದ ಪಿಎಸ್ಎಲ್ವಿ -ಸಿ8 ಗಗನನೌಕೆಯು ಇಟಲಿಯ ಉಪಗ್ರಹ `ಅಗೈಲ್'ನ್ನು ಕಕ್ಷೆಯ್ಲಲಿ ಯಶಸ್ವಿಯಾಗಿ ಕೂರಿಸಿ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ (ಇಸ್ರೊ) ಇತಿಹಾಸದಲ್ಲಿ ಪ್ರಮುಖ ಸಾಧನೆ ಮಾಡಿತು. ಇದೇ ಮೊದಲ ಬಾರಿಗೆ ಇಸ್ರೊ ವಾಣಿಜ್ಯಿಕ ಉದ್ದೇಶಕ್ಕಾಗಿ ವಿದೇಶೀ ಉಪಗ್ರಹವನ್ನು ಉಡಾವಣೆ ಮಾಡಿದ್ದು, ಈ ಯಶಸ್ಸು ಜಾಗತಿಕ ಉಪಗ್ರಹ ಉಡಾವಣೆ ಕ್ಷೇತ್ರದಲ್ಲಿ ಭಾರತಕ್ಕೆ ಮಹತ್ವದ ಸ್ಥಾನವನ್ನು ದೊರಕಿಸಿಕೊಟ್ಟಿತು. ಮಧ್ಯಾಹ್ನ 3.30ಕ್ಕೆ ಗಗನಕ್ಕೆ ಚಿಮ್ಮಿದ ಪಿ.ಎಸ್.ಎಲ್.ವಿ-ಸಿ 8' 22 ನಿಮಿಷಗಳ ನಂತರ 352 ಕೆ.ಜಿ. ತೂಕದ ಇಟಲಿಯ `ಅಗೈಲ್'ನ್ನು ಭೂಮಿಯಿಂದ 550 ಕಿ.ಮೀ. ಎತ್ತರದಲ್ಲಿ ಕಕ್ಷೆಯಲ್ಲಿ ಕೂರಿಸಿತು.

2007: ಇತರೆ ಹಿಂದುಳಿದ ವರ್ಗಗಳಿಗೆ (ಒಬಿಸಿ) ನೀಡಲಾದ ಶೇಕಡಾ 27ರ ಮೀಸಲಾತಿ ಮೇಲಿನ ತಡೆಯಾಜ್ಞೆಯನ್ನು ತೆರವುಗೊಳಿಸಬೇಕು ಎಂಬ ಕೇಂದ್ರ ಸರ್ಕಾರದ ಮನವಿಯನ್ನು ಸುಪ್ರೀಂಕೋರ್ಟ್ ತಿರಸ್ಕರಿಸಿತು. ಐಐಎಂ, ಐಐಟಿಗಳಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ಶೇಕಡಾ 27 ಒಬಿಸಿ ಮೀಸಲಾತಿ ಅನುಷ್ಠಾನಗೊಳಿಸುವುದು ಅಸಾಧ್ಯ ಎಂದು ನ್ಯಾಯಾಲಯ ತಿಳಿಸಿತು.

2007: ಗೋ ಸಂರಕ್ಷಣೆಗಾಗಿ ಸಂತ ಸಂಘಟನೆಯನ್ನು ಅಸ್ತಿತ್ವಕ್ಕೆ ತರಲು ಶಿವಮೊಗ್ಗ ಜಿಲ್ಲೆ ಹೊಸನಗರದ ಶ್ರಿ ರಾಮಚಂದ್ರಾಪುರ ಮಠದ ಆವರಣದಲ್ಲಿ ನಡೆದ ವಿಶ್ವ ಗೋ ಸಮ್ಮೇಳನದ ಸಂತ ಸಮಾವೇಶವು ನಿರ್ಧರಿಸಿತು. ಈ ನಿಟ್ಟಿನ್ಲಲಿ ನಿರ್ಣಯವೊಂದನ್ನು ಮಂಡಿಸಿ ಅಂಗೀಕರಿಸಲಾಯಿತು.

2007: ನಕಲಿ ಛಾಪಾ ಕಾಗದ ಹಗರಣಕ್ಕೆ ಸಂಬಂಧಿಸಿದಂತೆ ಯಶವಂತಪುರ ಪೊಲೀಸ್ ಠಾಣೆಯ್ಲಲಿ ದಾಖಲಾದ ಪ್ರಕರಣದ ವಿಚಾರಣೆ ಪೂರೈಸಿದ ಬೆಂಗಳೂರು ಪರಪ್ಪನ ಅಗ್ರಹಾರದ ವಿಶೇಷ ನ್ಯಾಯಾಲಯವು ಪ್ರಮುಖ ಅಪರಾಧಿ ಅಬ್ದುಲ್ ಕರೀಂ ತೆಲಗಿ ಸೇರಿದಂತೆ ಐವರಿಗೆ ತಲಾ 10 ವರ್ಷಗಳ ಸೆರೆವಾಸ ಮತ್ತು 70,000 ರೂಪಾಯಿಗಳ ದಂಡ ವಿಧಿಸಿತು. ನ್ಯಾಯಾಧೀಶ ವಿಶ್ವನಾಥ ವಿರೂಪಾಕ್ಷ ಅಂಗಡಿ ಅವರು ಸಂಜೆ ನಾಲ್ಕು ಗಂಟೆಗೆ ತೀರ್ಪನ್ನು ಪ್ರಕಟಿಸಿದರು.

2007: ಭಾರತೀಯ ಮೂಲದ ಪತ್ರಕರ್ತ ಐಜಾಜ್ ಝೂಕ ಸೈಯದ್ ಅವರಿಗೆ 2006ರ ಸಾಲಿನ ಪ್ರತಿಷ್ಠಿತ ಲಾರೆಂಜೊ ನಟಾಲಿ ಪ್ರಶಸ್ತಿ ಲಭಿಸಿತು. ಅವರು ಬರೆದ ಸೂಡಾನ್ ದೇಶದ ದಾರ್ ಪುರದಲ್ಲಿನ ಶೋಚನೀಯ ಸ್ಥಿತಿಗತಿಗಳ ಕುರಿತ ಬರಹಕ್ಕೆ ಈ ಬರಹ ಬಂದಿತು. ಪ್ರಶಸ್ತಿಯನ್ನು ಯುರೋಪಿಯನ್ ಯೂನಿಯನ್ 1992ರಲ್ಲಿ ಸ್ಥಾಪಿಸಿದ್ದು, ಮಾನವ ಹಕ್ಕುಗಳು, ಪ್ರಜಾಪ್ರಭುತ್ವ ಮತ್ತು ಅಭಿವೃದ್ಧಿಗೆ ಸಂಬಂಧಪಟ್ಟಂತೆ ಶ್ರೇಷ್ಠ ಪತ್ರಿಕೋದ್ಯಮಕ್ಕೆ ನೀಡಲಾಗುತ್ತದೆ.

2007: ಬೆಂಗಳೂರು ಕೃಷಿ ವಿಶ್ವವಿದ್ಯಾಲಯದ ಕುಲಪತಿಯಾಗಿ ಕೃಷಿ, ಆರ್ಥಿಕ ತಜ್ಞ ಡಾ. ಪಿ.ಜಿ. ಚೆಂಗಪ್ಪ ಅವರನ್ನು ರಾಜ್ಯಪಾಲ ಚತುರ್ವೇದಿ ನೇಮಕ ಮಾಡಿದರು.

2006: ಹೊಸನಗರ ರಾಮಚಂದ್ರಾಪುರ ಮಠದ ಶ್ರೀ ಸಾರ್ವಭೌಮ ವೇದಿಕೆಯಲ್ಲಿ ದೇವ ದೇವೋತ್ತಮ ಸೀತಾಮಾತಾ ಸಹಿತ ಶ್ರೀರಾಮಚಂದ್ರನಿಗೆ ಮಂತ್ರ , ವೇದಘೋಷಗಳ ಮಧ್ಯೆ ಪಟ್ಟಾಭಿಷೇಕ ಮಹೋತ್ಸವ ನಡೆಯಿತು. ರಾಮಾಯಣ ಕಾಲದ ವೈಭವವನ್ನು ಆಧುನಿಕ ಯುಗದಲ್ಲಿ ಪ್ರತ್ಯಕ್ಷೀಕರಿಸುವ ಪ್ರಯತ್ನವಾಗಿ ನಡೆದ ರಾಮಾಯಣ ಮಹಾಸತ್ರದ ಪ್ರಧಾನ ಅಂಗವಾದ ಈ ಕಾರ್ಯಕ್ರಮ ಈ ದಿನ ಬೆಳಗ್ಗೆ ಕರ್ಕಾಟಕ ಲಗ್ನದಲ್ಲಿ ನೆರವೇರಿತು. ದೇಶದ 500 ನದಿಗಳಿಂದ ಸಂಗ್ರಹಿಸಲಾಗಿದ್ದ ಜಲದಿಂದ ಶ್ರೀರಾಮಚಂದ್ರ ಸೀತಾಮಾತೆಯ ವಿಗ್ರಹಗಳಿಗೆ ಅಭಿಷೇಕ ನಡೆಸಲಾಯಿತು. ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿ ನೇತೃತ್ವದಲ್ಲಿ ನಡೆದ ಈ 10 ದಿನಗಳ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ಮುಖ್ಯ ಅತಿಥಿಯಾಗಿದ್ದರು. ದೇಶಾದ್ಯಂತದ ಮೂರು ಲಕ್ಷಕ್ಕೂ ಅಧಿಕ ಮಂದಿ 10 ದಿನಗಳ ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ತಮ್ಮ ಜೀವನದ ಸರ್ವಸ್ವವನ್ನೂ ಇನ್ನು ಮುಂದೆ ಗೋ ಸಂರಕ್ಷಣೆಗೆ ಸಮರ್ಪಿಸುವುದಾಗಿ ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿ ಘೋಷಿಸಿದರು.

2006: ಮಾಜಿ ಪ್ರಧಾನಿ ವಿಶ್ವನಾಥ ಪ್ರತಾಪ ಸಿಂಗ್ (ವಿ.ಪಿ. ಸಿಂಗ್) ಅವರು ಜನ ಮೋರ್ಚಾ ಹೆಸರಿನ ಹೊಸ ಪಕ್ಷ ಸ್ಥಾಪನೆಯನ್ನು ಪ್ರಕಟಿಸಿದರು ಮತ್ತು ಖ್ಯಾತ ಹಿಂದಿ ಚಿತ್ರನಟ ಹಾಗೂ ಸಮಾಜವಾದಿ ಪಕ್ಷದಿಂದ ಉಚ್ಚಾಟನೆಗೊಂಡ ರಾಜ್ ಬಬ್ಬರ್ ಅವರನ್ನು ಈ ಪಕ್ಷದ ಅಧ್ಯಕ್ಷರನ್ನಾಗಿ ನೇಮಕ ಮಾಡಿದರು.

1992: ಭಾರತದ ಶ್ರೇಷ್ಠ ಚಲನಚಿತ್ರ ನಿರ್ದೇಶಕ ಸತ್ಯಜಿತ್ ರೇ ಅವರು ಆಸ್ಕರ್ ಪ್ರಶಸ್ತಿ ಪುರಸ್ಕೃತರಾದ ಮೂರು ವಾರಗಳ ಬಳಿಕ ಕೋಲ್ಕತ್ತಾದಲ್ಲಿ ಮೃತರಾದರು.

1990: ಚಿತ್ರನಟಿ ಹಾಗೂ ನಟ ಚಾರ್ಲಿ ಚಾಪ್ಲಿನ್ ಅವರ ಮಾಜಿ ಪತ್ನಿ ಪೌಲೆಟ್ ಗೊಡ್ಡಾರ್ಡ್ ಮೃತರಾದರು. ಅಕೆ ಚಾರ್ಲಿ ಚಾಪ್ಲಿನ್ ಜೊತೆಗೆ `ಮಾಡರ್ನ್ ಟೈಮ್ಸ್' ಹಾಗೂ `ದಿ ಗ್ರೇಟ್ ಡಿಕ್ಟೇಟರ್' ಚಿತ್ರಗಳಲ್ಲಿ ನಟಿಸಿದ್ದರು.

1985: ಶಾ ಬಾನೊ ಪ್ರಕರಣದಲ್ಲಿ ಮಧ್ಯಪ್ರದೇಶ ಹೈಕೋರ್ಟ್ ನೀಡಿದ್ದ ತೀರ್ಪನ್ನು ಭಾರತದ ಸುಪ್ರೀಂ ಕೋರ್ಟ್ ಎತ್ತಿಹಿಡಿಯಿತು. ಬಡ, ಅನಕ್ಷರಸ್ಥ ಮುಸ್ಲಿಂ ಮಹಿಳೆ ಶಾ ಬಾನೊ ತನ್ನ ವಿಚ್ಛೇದಿತ ಪತಿ ಮಹಮ್ಮದ್ ಅಹ್ಮದನಿಂದ ಜೀವನಾಂಶ ಕೋರಿ ಅರ್ಜಿ ಸಲ್ಲಿಸಿದ್ದಳು. ಆಕೆಯ ಪರವಾಗಿ ತೀರ್ಪು ನೀಡಿದ ಮಧ್ಯಪ್ರದೇಶ ಹೈಕೋರ್ಟ್, ವಿಚ್ಛೇದಿತ ಮಹಿಳೆಗೆ ಬದುಕಿಗೆ ಯಾವುದೇ ಆದಾಯ ಇಲ್ಲದಿದ್ದರೆ ಆಕೆಯ ಮರುಮದುವೆ ಅಥವಾ ಮರಣದವರೆಗೆ ಯಾವುದೇ ಧರ್ಮದ ಭೇದವಿಲ್ಲದೆ ಜೀವನಾಂಶ ನೀಡಬೇಕು ಎಂದು ಹೇಳಿತ್ತು.

1985: ಕೊಕಾ ಕೋಲ ಕಂಪೆನಿಯು ತಾನು ಕೋಕ್ ನ ರಹಸ್ಯ ಫಾರ್ಮುಲಾವನ್ನು ಬದಲಾಯಿಸುತ್ತಿರುವುದಾಗಿ ಪ್ರಕಟಿಸಿತು. ಆದರೆ ಸಾರ್ವಜನಿಕರಿಂದ ವ್ಯಕ್ತವಾದ ಪ್ರತಿಭಟನೆಯನ್ನು ಅನುಸರಿಸಿ ನಂತರ ತನ್ನ ಮೊದಲಿನ ಫಾರ್ಮುಲಾವನ್ನೇ ಉಳಿಸಿಕೊಂಡಿತು.

1978: ಕಲಾವಿದೆ ಪೂರ್ಣಿಮಾ ಡಿ. ಸಾಗರ ಜನನ.

1967: ರಷ್ಯದ ಸೋಯುಜ್ 1 ಬಾಹ್ಯಾಕಾಶ ನೌಕೆಯ ಉಡ್ಡಯನ ನಡೆಯಿತು. ಅದು 17 ಸುತ್ತುಗಳನ್ನು ಮುಗಿಸಿ ಭೂಕಕ್ಷೆಗೆ ಮರಳುವಾಗ ಸ್ಫೋಟಗೊಂಡು ಗಗನಯಾನಿ ವ್ಲಾಡಿಮೀರ್ ಕೊಮಾರೋವ್ ಅಸುನೀಗಿದರು.

1964: ಕಲಾವಿದೆ ಮಾಲಿನಿ ಜನನ.

1958: ಕಲಾವಿದ ಎಂ. ರಾಘವೇಂದ್ರ ಜನನ.

1956: ಬೀದಿ ನಾಟಕಗಳ ಮೂಲಕ ಧಾರವಾಡ ಜಿಲ್ಲೆಯಲ್ಲಿ ಸಾಕ್ಷರತಾ ಆಂದೋಲನ ಕೈಗೊಂಡ ಕಲಾವಿದ ವೀರೇಶ ಗುತ್ತಲ ಅವರು ಕೃಷ್ಣಪ್ಪ ಗುತ್ತಲ- ಶಾರದಾಬಾಯಿ ದಂಪತಿಯ ಮಗನಾಗಿ ಹಾವೇರಿ ತಾಲ್ಲೂಕಿನ ಕಿತ್ತೂರ ಗ್ರಾಮದಲ್ಲಿ ಜನಿಸಿದರು.

1949: ಕಲಾವಿದೆ ಟಿ.ಎನ್. ಪದ್ಮಾ ಜನನ.

1913: ಹಾಸ್ಯಬ್ರಹ್ಮ ಎಂದೇ ಖ್ಯಾತರಾಗಿದ್ದ ರಾಯಸದ ಭೀಮಸೇನರಾವ್ 'ಬೀಚಿ'(23-4-1913 ರಿಂದ 7-12-1980) ಹುಟ್ಟಿದ ದಿನ. ಶ್ರೀನಿವಾಸರಾವ್- ಭಾರತಮ್ಮ ದಂಪತಿಯ ಪುತ್ರರಾಗಿ ಬಳ್ಳಾರಿ ಜಿಲ್ಲೆಯ ಹರಪನಹಳಿಯಲ್ಲಿ ಜನಿಸಿದ ಅವರು ಅ.ನ.ಕೃ. ಅವರ ಸಂಧ್ಯಾರಾಗ ಓದಿ ಕನ್ನಡ ದೀಕ್ಷೆ ಸ್ವೀಕರಿಸಿ ಕನ್ನಡದಲ್ಲಿ ಬರೆಯಲು ಆರಂಭಿಸಿದರು. ಕನ್ನಡ ಹಾಸ್ಯ ಸಾಹಿತ್ಯದಲ್ಲಿ ಅಮರರಾದ ಅವರ ತಿಂಮ ಪಾತ್ರ ಖ್ಯಾತ ಹಾಸ್ಯ ಬರಹಗಾರ ಪಿ.ಜಿ. ಓಡ್ಹೌಸ್ ಅವರ ಜೀವ್ಸ್ ಪಾತ್ರವನ್ನೇ ಹೋಲುವ ಕನ್ನಡದ ಸೃಷ್ಟಿ.

(ಸಂಗ್ರಹ: ನೆತ್ರಕೆರೆ ಉದಯಶಂಕರ)

Tuesday, April 22, 2008

ಇಂದಿನ ಇತಿಹಾಸ History Today ಏಪ್ರಿಲ್ 22

ಇಂದಿನ ಇತಿಹಾಸ

ಏಪ್ರಿಲ್ 22

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪ್ರಮೋದ ಮಹಾಜನ್ (56) ಅವರ ಮೇಲೆ ಒಡಹುಟ್ಟಿದ ಸಹೋದರ ಪ್ರವೀಣ್ ಮಹಾಜನ್ ಮಾತಿನ ಚಕಮಕಿ ಮಧ್ಯೆ ಸಿಟ್ಟಿಗ್ದೆದು ಗುಂಡು ಹಾರಿಸಿದರು. ತೀವ್ರವಾಗಿ ಗಾಯಗೊಂಡ ಪ್ರಮೋದ್ ಮಹಾಜನ್ ಅವರನ್ನು ಅತ್ಯಂತ ಗಂಭೀರ ಸ್ಥಿತಿಯಲ್ಲಿ ಮುಂಬೈಯ ಹಿಂದೂಜಾ ಆಸ್ಪತ್ರೆಗೆ ದಾಖಲಿಸಲಾಯಿತು. ಮುಂಬೈಯ ವರ್ಲಿಯ ಪ್ರಮೋದ್ ಮಹಾಜನ್ ಮನೆಯಲ್ಲೇ ಈ ಗುಂಡು ಹಾರಾಟದ ಘಟನೆ ನಡೆಯಿತು.


2007: ಗೋವನ್ನು ರಾಷ್ಟ್ರೀಯ ಪ್ರಾಣಿ ಎಂಬುದಾಗಿ ಘೋಷಿಸಿ ಗೋ ಹತ್ಯೆಯನ್ನು ದೇಶದಾದ್ಯಂತ ಸಂಪೂರ್ಣವಾಗಿ ನಿಷೇಧಿಸಲು ಕೇಂದ್ರ ಸರ್ಕಾರವೇ ಗೋಹತ್ಯಾ ನಿಷೇದ ಮಸೂದೆ ಜಾರಿಗೊಳಿಸಬೇಕು ಎಂದು ಮಾಜಿ ರಾಜ್ಯಪಾಲ ನ್ಯಾಯಮೂರ್ತಿ ಎಂ. ರಾಮಾ ಜೋಯಿಸ್ ಅವರ ಹೊಸನಗರ ಶ್ರೀ ರಾಮಚಂದ್ರಾಪುರ ಮಠದ ಆವರಣದಲ್ಲಿ ನಡೆದ ವಿಶ್ವ ಗೋ ಸಮ್ಮೇಳನದ ಎರಡನೇ ದಿನದ ಕಾರ್ಯಕ್ರಮದಲ್ಲಿ ಮನವಿ ಮಾಡಿದರು.

2007: ಭಾರತ -ರಷ್ಯಾ ಜಂಟಿ ಸಹಭಾಗಿತ್ವದಲ್ಲಿ ನೌಕಾಪಡೆಗಾಗಿ ಅಭಿವೃದ್ಧಿ ಪಡಿಸಲಾದ ಬ್ರಹ್ಮೋಸ್ ಸೂಪರ್ ಸಾನಿಕ್ ಕ್ಷಿಪಣಿಯನ್ನು ಒರಿಸ್ಸಾದ ಬಾಲಸೋರ್ ಸಮೀಪದ ಚಂಡೀಪುರದ ಕ್ಷಿಪಣಿ ಪರೀಕ್ಷಾ ಕೇಂದ್ರದಲ್ಲಿ ಯಶಸ್ವಿಯಾಗಿ ಪರೀಕ್ಷಿಸಲಾಯಿತು. ಇದು ಬ್ರಹ್ಮೋಸ್ನ 10ನೇ ಪ್ರಾಯೋಗಿಕ ಪರೀಕ್ಷೆ.

2007: ಕ್ರಿಕೆಟ್ ಜಗತ್ತಿನ ಧ್ರುವತಾರೆ, ದಾಖಲೆಗಳ ವೀರ ವೆಸ್ಟ್ ಇಂಡೀಸ್ ನ ಬ್ರಯನ್ ಲಾರಾ ಬಾರ್ಬಡಾಸ್ ನಲ್ಲಿ ನಡೆದ ಎರಡನೇ ಹಂತದ ಕೊನೆಯ ಪಂದ್ಯದಲ್ಲಿ ತಮ್ಮ ವಿಶ್ವಕಪ್ ನ ಕೊನೆಯ ಪಂದ್ಯ ಹಾಗೂ ಅಂತರರಾಷ್ಟ್ರೀಯ ಕ್ರಿಕೆಟ್ ಜೀವನಕ್ಕೆ ಇತಿಶ್ರೀ ಹಾಡಿದರು.

2007: ಬುದ್ಧಿ ಮಾಂದ್ಯ ಮಕ್ಕಳ ಮಧುರಂ ನಾರಾಯಣನ್ ಕೇಂದ್ರದ ಸಂಸ್ಥಾಪಕ ಹಾಗೂ ಮಾಜಿ ಏರ್ ವೈಸ್ ಮಾರ್ಷಲ್ ವಿ. ಕೃಷ್ಣಸ್ವಾಮಿ (81) ತಮಿಳುನಾಡಿನ ಚೆನ್ನೈಯಲ್ಲಿ ನಿಧನರಾದರು. ಅವರು ತಮಿಳುನಾಡಿನ ವಾಯುಪಡೆ ಮತ್ತು ಹಿರಿಯರ ಸೇವಾ ಅಧಿಕಾರಿಗಳ ಸಂಘದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಬುದ್ಧಿಮಾಂದ್ಯ ಮಕ್ಕಳಿಗಾಗಿ ಸ್ಥಾಪಿಸಿದ ಮಧುರಂ ನಾರಾಯಣನ್ ಕೇಂದ್ರಕ್ಕಾಗಿ 2004ರಲ್ಲಿ ಅವರನ್ನು ರಾಷ್ಟ್ರಪತಿಗಳು ಗೌರವಿಸಿದ್ದರು.

2007: ಬೆಂಗಳೂರು ಉದ್ಯಾನನಗರಿಯಲ್ಲಿ ಏಪ್ರಿಲ್ 21ರ ನಡುರಾತ್ರಿ ಸುರಿದ ಭಾರಿ ಮಳೆಗೆ ರಾಜಧಾಮಿಯ ನಿವಾಸಿಗಳು ತತ್ತರಿಸಿದರು. ಭಾರತಿ ನಗರದ ದೊಡ್ಡ ಚರಂಡಿಯಲ್ಲಿ ಮಹಿಳೆಯೊಬ್ಬರು ಕೊಚ್ಚಿಕೊಂಡು ಹೋಗಿ ಸಾವನ್ನಪ್ಪಿದ್ದು ಸೇರಿ ಇಬ್ಬರು ಮೃತರಾದರು. ಮಧ್ಯರಾತ್ರಿ 12.30 ರಿಂದ ಸತತ ಮೂರು ಗಂಟೆಗಳ ಕಾಲ ಮಳೆ ಬಂದಿದ್ದು, ಒಟ್ಟಾರೆ 75 ಮಿ.ಮೀ (7.5 ಸೆಂ.ಮೀ) ಮಳೆಯಾಯಿತು. ಬೆಂಗಳೂರು ವಿಮಾನ ನಿಲ್ದಾಣದಲ್ಲಿ 48 ಮಿ.ಮೀ (4.8 ಸೆಂ.ಮೀ) ಮಳೆ ಸುರಿದು, ನಗರದಲ್ಲಿ ಭಾರಿ ಪ್ರಮಾಣದ ಆಸ್ತಿ ಪಾಸ್ತಿ ನಷ್ಟವಾಯಿತು.

2007: ದೊರೆಯ ಆಸ್ತಿಪಾಸ್ತಿ ರಾಷ್ಟ್ರೀಕರಣ ಮಾಡುವ ತನ್ನ ಬದ್ಧತೆಯನ್ನು ಈಡೇರಿಸುವಲ್ಲಿ ಸರ್ಕಾರವು ವಿಫಲವಾಗಿದೆ ಎಂದು ಆಪಾದಿಸಿ ನೇಪಾಳದ ಮಾವೋವಾದಿಗಳು ಕಠ್ಮಂಡುವಿನಲ್ಲಿ ದೊರೆಯ ಆಸ್ತಿಪಾಸ್ತಿ ವಶಪಡಿಸಿಕೊಳ್ಳುವ ಕಾರ್ಯಾಚರಣೆಯನ್ನು ಆರಂಭಿಸಿದರು. ದೊರೆಯ ಆಸ್ತಿಪಾಸ್ತಿ ವಶಕ್ಕೆ ಕಾನೂನು ರೂಪಿಸುವಲ್ಲಿ ಸಂಸತ್ತು ವಿಫಲವಾಗಿದೆ. ಹಾಗಾಗಿ ಈಗ ಯಂಗ್ ಕಮ್ಯೂನಿಸ್ಟ್ ಲೀಗ್ ಆ ಕಾರ್ಯ ಮಾಡಿ ಅದನ್ನು ಸಾರ್ವಜನಿಕರ ಉಪಯೋಗಕ್ಕೆ ಬಳಸುವುದು ಎಂದು ಸಿಪಿಎನ್ ಮಾವೋವಾದಿ ಹಿಟ್ ಮನ್ ಶಾಕ್ಯದ ಕೇಂದ್ರೀಯ ಸಮಿತಿ ತಿಳಿಸಿತು.

2007: ಬಾಂಗ್ಲಾದೇಶದ ಸೇನೆ ಬೆಂಬಲಿತ ಮಧ್ಯಂತರ ಸರ್ಕಾರವು ಮಾಜಿ ಪ್ರಧಾನಿ ಹಸೀನಾ ಅವರ ಪುನರಾಗಮನಕ್ಕೆ ನಿಷೇಧ ವಿಧಿಸಿದ ಹಿನ್ನೆಲೆಯಲ್ಲಿ ಬ್ರಿಟಿಷ್ ಸರ್ಕಾರವು ಹಸೀನಾ ಅವರನ್ನು ಬ್ರಿಟನ್ ಬಿಟ್ಟು ಹೊರಡದಂತೆ ನಿರ್ಬಂಧಿಸಿತು. ಆಕೆಯನ್ನು ಢಾಕಾಗೆ ಒಯ್ಯಬೇಕಿದ್ದ ಬ್ರಿಟಿಷ್ ಏರ್ವೇಸ್ ಸಂಸ್ಥೆಯು ಟಿಕೆಟ್ ಹೊಂದ್ದಿದರೂ ಹಸೀನಾ ಅವರಿಗೆ ವಿಮಾನ ಏರಲು ಅವಕಾಶ ನಿರಾಕರಿಸಿತು. ಢಾಕಾಗೆ ಹೊರಡುವ ವಿಮಾನದ ನಿರ್ಗಮನ ವೇಳೆಯಿಂದ 90 ನಿಮಿಷಗಳಷ್ಟು ಮೊದಲೇ ಹಸೀನಾ ಹೀಥ್ರೂ ವಿಮಾನ ನಿಲ್ದಾಣ ತಲುಪ್ದಿದರು.

2006: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪ್ರಮೋದ ಮಹಾಜನ್ (56) ಅವರ ಮೇಲೆ ಒಡಹುಟ್ಟಿದ ಸಹೋದರ ಪ್ರವೀಣ್ ಮಹಾಜನ್ ಮಾತಿನ ಚಕಮಕಿ ಮಧ್ಯೆ ಸಿಟ್ಟಿಗ್ದೆದು ಗುಂಡು ಹಾರಿಸಿದರು. ತೀವ್ರವಾಗಿ ಗಾಯಗೊಂಡ ಪ್ರಮೋದ್ ಮಹಾಜನ್ ಅವರನ್ನು ಅತ್ಯಂತ ಗಂಭೀರ ಸ್ಥಿತಿಯಲ್ಲಿ ಮುಂಬೈಯ ಹಿಂದೂಜಾ ಆಸ್ಪತ್ರೆಗೆ ದಾಖಲಿಸಲಾಯಿತು. ಮುಂಬೈಯ ವರ್ಲಿಯ ಪ್ರಮೋದ್ ಮಹಾಜನ್ ಮನೆಯಲ್ಲೇ ಈ ಗುಂಡು ಹಾರಾಟದ ಘಟನೆ ನಡೆಯಿತು.

2006: ವರನಟ ಡಾ. ರಾಜ್ ಕುಮಾರ್ ಅವರ ಉತ್ತರಕ್ರಿಯೆಯನ್ನು ಬೆಂಗಳೂರಿನ ಕಂಠೀರವ ಸ್ಟುಡಿಯೊ ಸಮಾಧಿ ಬಳಿ ಕುಟುಂಬ ಸದಸ್ಯರು ವಿಧಿವತ್ತಾಗಿ ನೆರವೇರಿಸಿದರು.

2006: ಗಣ್ಯ ವ್ಯಕ್ತಿಗಳಿಂದ ಹತ್ಯೆಗೀಡಾದ ರೂಪದರ್ಶಿ ಜೆಸ್ಸಿಕಾಲಾಲ್ ಅವರ ತಂದೆ ಅಜಿತ್ ಕುಮಾರ್ ಲಾಲ್ ಅವರು ನವದೆಹಲಿಯಲ್ಲಿ ಮೆದುಳಿನ ರಕ್ತಸ್ರಾವಕ್ಕೆ ತುತ್ತಾದ ಒಂದು ತಿಂಗಳ ಬಳಿಕ ನಿಧನರಾದರು. 1999ರ ಏಪ್ರಿಲ್ 29ರಂದು ಹೋಟೆಲಿನಲ್ಲಿ ಹರ್ಯಾಣ ಸಚಿವ ವಿನೋದ ಶರ್ಮಾ ಅವರ ಪುತ್ರ ಮನು ಶರ್ಮಾ ಮತ್ತು ಇತರರು ಮದ್ಯ ಸರಬರಾಜು ಮಾಡಲು ನಿರಾಕರಿಸಿದ್ದಕ್ಕಾಗಿ ಜೆಸ್ಸಿಕಾಲಾಲ್ ಅವರನ್ನು ಗುಂಡಿಟ್ಟು ಕೊಂದಿದ್ದರು. 2000ನೇ ಇಸವಿಯಲ್ಲಿ ಆಕೆಯ ತಾಯಿ ಮೃತಳಾಗಿದ್ದಳು. ತಂದೆ ಅಂದಿನಿಂದಲೇ ಅಸ್ವಸ್ಥರಾಗಿದ್ದರು.. 2006ರ ಫೆಬ್ರುವರಿ 21ರಂದು ದೆಹಲಿಯ ನ್ಯಾಯಾಲಯವೊಂದು ಜೆಸ್ಸಿಕಾಲಾಲ್ ಹತ್ಯೆ ಪ್ರಕರಣದ ಆರೋಪಿಗಳನ್ನು ಬಿಡುಗಡೆ ಮಾಡಿದ ಬಳಿಕ ಆಕೆಯ ತಂದೆ ಮೆದುಳಿನ ರಕ್ತಸ್ರಾವಕ್ಕೆ ತುತ್ತಾಗಿದ್ದರು.

1994: ಅಮೆರಿಕದ 37ನೇ ಅಧ್ಯಕ್ಷ ರಿಚರ್ಡ್ ಎಂ. ನಿಕ್ಸನ್ ತಮ್ಮ 81ನೇ ವಯಸಿನಲ್ಲಿ ನ್ಯೂಯಾರ್ಕಿನ ಆಸ್ಪತ್ರೆಯೊಂದರಲ್ಲಿ ಮೃತರಾದರು.

1970: ಅಮೆರಿಕವು ಮೊತ್ತ ಮೊದಲ `ಅರ್ಥ್ ಡೇ' (ಭೂ ದಿನ) ಆಚರಿಸಿತು. ಕೈಗಾರಿಕೀಕರಣದ ದುಷ್ಪರಿಣಾಮ ಮತ್ತು ಪರಿಸರ ಬಗ್ಗೆ ಜಾಗೃತಿ ಮೂಡಿಸುವ ಪ್ರಥಮ ಪ್ರಯತ್ನ ಇದಾಗಿತ್ತು.

1967: ಕಲಾವಿದ ರವೀಂದ್ರ ಎಲ್. ಜನನ.

1965: ಕಲಾವಿದೆ ಶಾಂತಲಕ್ಷ್ಮಿ ಜನನ.

1950: ಕಲಾವಿದ ಗಂಗಾಧರ ಸ್ವಾಮಿ ಜನನ.

1949: ಕಲಾವಿದ ವಸಂತ ಲಕ್ಷ್ಮಿ ಬೇಲೂರು ಜನನ.

1945: ಹಾಸ್ಯನಟರಾಗಿ ಪ್ರಖ್ಯಾತರಾಗಿರುವ ಎಂ.ಎಸ್. ಉಮೇಶ್ ಅವರು ಎ.ಎಲ್. ಶ್ರೀಕಂಠಯ್ಯ ಮತ್ತು ತಾಯಿ ನಂಜಮ್ಮ ದಂಪತಿಯ ಮಗನಾಗಿ ಮೈಸೂರಿನಲ್ಲಿ ಜನಿಸಿದರು. ಮಗುವಾಗಿದ್ದಾಗಲೇ ರಂಗಪ್ರವೇಶ ಮಾಡಿ ರಂಗಭೂಮಿಯತ್ತ ಒಲವು ಬೆಳೆಸಿಕೊಂಡ ಉಮೇಶ್, ಕೆ. ಹಿರಣ್ಣಯ್ಯ ಮಿತ್ರ ಮಂಡಳಿಯಲ್ಲಿ ಅನಕೃ ಅವರು ಬರೆದ ಜಗಜ್ಯೋತಿ ಬಸವೇಶ್ವರ ನಾಟಕದಲ್ಲಿ ಬಿಜ್ಜಳನ ಪಾತ್ರಧಾರಿಯಾಗಿ ರಂಗಪ್ರವೇಶಿಸಿದರು. ಮುಂದೆ ಕಥಾ ಸಂಗಮ ಚಲನ ಚಿತ್ರದ ತಿಮ್ಮರಾಯಿ ಪಾತ್ರದೊಂದಿಗೆ ಚಿತ್ರರಂಗ ಪ್ರವೇಶಿಸಿದ ಅವರು 300ಕ್ಕೂ ಹೆಚ್ಚು ಚಲನಚಿತ್ರಗಳಲ್ಲಿ ಪ್ರವೇಶಿಸಿ ಉತ್ತಮ ನಟನಾಗಿ ಮಿಂಚಿದರು.

1921: ಕಲಾವಿದ ದೇವಪ್ಪಯ್ಯ ಅಪ್ಪಯ್ಯ ಜನನ.

1904: ಜ್ಯೂಲಿಯಸ್ ರಾಬರ್ಟ್ ಒಪ್ಪೆನ್ಹೀಮರ್ (1904-67) ಜನ್ಮದಿನ. ಈತ ಅಣುಬಾಂಬ್ ಅಭಿವೃದ್ಧಿ ಕಾಲದಲ್ಲಿ (1943-45) ಲಾಸ್ ಅಲಮೋಸ್ ಲ್ಯಾಬೋರೇಟರಿ ಹಾಗೂ ಪ್ರಿನ್ಸ್ ಟನ್ನ ಇನ್ ಸ್ಟಿಟ್ಯೂಟ್ ಫಾರ್ ಅಡ್ವಾನ್ಸಡ್ ಸ್ಟಡಿಯ ನಿರ್ದೇಶಕನಾಗಿದ್ದ.

1500: ಪೆಡ್ರೊ ಅಲ್ವರೆಝ್ ಕಾಬ್ರೆಲ್ ಬ್ರೆಜಿಲನ್ನು ಶೋಧಿಸಿದ. ಆತ ಇದಕ್ಕೆ `ಐಲ್ಯಾಂಡ್ ಆಫ್ ಟ್ರು ಕ್ರಾಸ್' ಎಂದು ಹೆಸರು ಇಟ್ಟ. ನಂತರ ದೊರೆ ಮ್ಯಾನ್ಯುಯೆಲ್ `ಹೋಲಿ ಕ್ರಾಸ್' ಎಂಬುದಾಗಿ ಮರುನಾಮಕರಣ ಮಾಡಿದ. ಅಂತಿಮವಾಗಿ ಅದಕ್ಕೆ ಈಗಿನ ಬ್ರೆಜಿಲ್ ಎಂಬ ಹೆಸರು ಬಂತು. ಇದಕ್ಕೆ ಅಲ್ಲಿ ಸಿಗುವ `ಪೌ-ಬ್ರೆಸಿಲ್' ಎಂಬ ಬಣ್ಣದ ಮರ (ಡೈವುಡ್) ಕಾರಣ.

(ಸಂಗ್ರಹ: ನೆತ್ರಕೆರೆ ಉದಯಶಂಕರ)

Monday, April 21, 2008

ಇಂದಿನ ಇತಿಹಾಸ History Today ಏಪ್ರಿಲ್ 21

ಇಂದಿನ ಇತಿಹಾಸ

ಏಪ್ರಿಲ್ 21

ಧರೆಯ ಮೇಲಿನ ಸಕಲ ಜೀವಿಗಳಿಗೂ ಲೇಸನ್ನೇ ಬಯಸುವ ಗೋವಿನ ತಳಿಗಳ ಸಂರಕ್ಷಣೆಗಾಗಿ ಶಿವಮೊಗ್ಗ ಜಿಲ್ಲೆ ಹೊಸನಗರದ ಶ್ರೀ ರಾಮಚಂದ್ರಾಪುರ ಮಠದ ಆವರಣದಲ್ಲಿ ಆರಂಭವಾದ ವೈಶಿಷ್ಟ್ಯಪೂರ್ಣವಾದ 10 ದಿನಗಳ ಸಡಗರದ ವಿಶ್ವ ಗೋ ಸಮ್ಮೇಳನವನ್ನು ಕರ್ನಾಟಕದ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಉದ್ಘಾಟಿಸಿದರು.


2007: ಧರೆಯ ಮೇಲಿನ ಸಕಲ ಜೀವಿಗಳಿಗೂ ಲೇಸನ್ನೇ ಬಯಸುವ ಗೋವಿನ ತಳಿಗಳ ಸಂರಕ್ಷಣೆಗಾಗಿ ಶಿವಮೊಗ್ಗ ಜಿಲ್ಲೆ ಹೊಸನಗರದ ಶ್ರೀ ರಾಮಚಂದ್ರಾಪುರ ಮಠದ ಆವರಣದಲ್ಲಿ ಆರಂಭವಾದ ವೈಶಿಷ್ಟ್ಯಪೂರ್ಣವಾದ 10 ದಿನಗಳ ಸಡಗರದ ವಿಶ್ವ ಗೋ ಸಮ್ಮೇಳನವನ್ನು ಕರ್ನಾಟಕದ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಉದ್ಘಾಟಿಸಿದರು. ದೇಸೀ ಜಾನುವಾರುಗಳ ರಕ್ಷಣೆಗೆ ಸರ್ಕಾರ ಬದ್ಧವಾಗಿದ್ದು ಈ ನಿಟ್ಟಿನಲ್ಲಿ ಗೋ ಬ್ಯಾಂಕುಗಳನ್ನು ಸ್ಥಾಪಿಸುವ ಬಗ್ಗೆ ಆಲೋಚಿಸಲಾಗುವುದು ಎಂದು ಅವರು ನುಡಿದರು.

2007: ಬಿಜೆಪಿ ಸಂಸತ್ ಸದಸ್ಯ ಬಾಬುಭಾಯಿ ಕಟಾರ ಷಾಮೀಲಾಗಿರುವ ಮಾನವ ಕಳ್ಳ ಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಟಾರ ಅವರ ಆಪ್ತ ಸಹಾಯಕ ಮತ್ತು ಒಬ್ಬ ಮಹಿಳೆ ಸೇರಿದಂತೆ ಇನ್ನೂ ಮೂವರನ್ನು ಬಂಧಿಸಲಾಯಿತು.

2007: ಹ್ಯೂಸ್ಟನ್ನಿನ `ನಾಸಾ' ಜಾನ್ಸನ್ ಬಾಹ್ಯಾಕಾಶ ಕೇಂದ್ರದಲ್ಲಿ ವಿಲಿಯಂ ಫಿಲಿಪ್ಸ್ ಎಂಬ ಎಂಜಿನಿಯರನೊಬ್ಬ ಸಿನಿಮೀಯ ರೀತಿಯಲ್ಲಿ ತನ್ನ ಸಹೋದ್ಯೋಗಿ ಡೇವಿಡ್ ಬೆವರ್ಲಿ ಅವರನ್ನು ಗುಂಡು ಹಾರಿಸಿ ಕೊಂದು ತಾನು ಸ್ವತಃ ಗುಂಡಿಟ್ಟುಕೊಂಡು ಆತ್ಮಹತ್ಯೆ ಮಾಡಿಕೊಂಡ. `ನಾಸಾ'ಕ್ಕೆ ಗುತ್ತಿಗೆ ಆಧಾರದಲ್ಲಿ ಕೆಲಸ ನಿರ್ವಹಿಸುವ ಜಾಕೋಬ್ ಎಂಜಿನಿಯರಿಂಗಿನ ಉದ್ಯೋಗಿಯಾದ ವಿಲಿಯಂ ಫಿಲಿಪ್ಸ್ ಕಳೆದ 12-13 ವರ್ಷದಿಂದ ನಾಸಾಕ್ಕಾಗಿ ಕೆಲಸ ಮಾಡುತ್ತಿದ್ದ.

2007: ವಿಶ್ವಸುಂದರಿ, ಅಭಿನೇತ್ರಿ ಐಶ್ವರ್ಯ ರೈ ಬಚ್ಚನ್ ಅವರು ಬಚ್ಚನ್ ಪರಿವಾರ ಸೇರಿಕೊಳ್ಳುವ ಮುನ್ನ ವಿವಾಹದ ಬಳಿಕ ನಡೆಯುವ ಸಾಂಪ್ರದಾಯಿಕ ಬೀಳ್ಕೊಡುಗೆ `ಬಿದಾಯಿ' ಕಾರ್ಯಕ್ರಮದ ಸಂದರ್ಭದಲ್ಲಿ ಭಾವೋದ್ವೇಗಕ್ಕೆ ಒಳಗಾಗಿ ಬಿಕ್ಕಳಿಸಿ ಅಳುತ್ತಾ ತವರಿಗೆ ವಿದಾಯ ಹೇಳಿದರು. ನಂತರ ಸಾಂಪ್ರದಾಯಿಕ ದೊಲಿ (ಪಲುಂಕ್ವಿನ್) ಉಡುಪಿನಲ್ಲಿ ಹೊರಗೆ ಬಂದ ಐಶ್ ಅಲಂಕೃತ ಕಾರಿನಲ್ಲಿ ಅಭಿಷೇಕ್ ಜೊತೆ ಕುಳಿತು ಮಾಧ್ಯಮದವರಿಗೆ ಸಿಗದೆ ಗಂಡನ ಮನೆಗೆ ತೆರಳಿದರು.

2007: ನಕಲಿ ಛಾಪಾ ಕಾಗದ ಹಗರಣಕ್ಕೆ ಸಂಬಂಧಿಸಿದಂತೆ ಯಶವಂತಪುರ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣದ ವಿಚಾರಣೆ ಪೂರೈಸಿದ ಬೆಂಗಳೂರಿನ ಪರಪ್ಪನ ಅಗ್ರಹಾರದ ವಿಶೇಷ ನ್ಯಾಯಾಲಯವು ಪ್ರಮುಖ ಆರೋಪಿ ಅಬ್ದುಲ್ ಕರೀಂ ತೆಲಗಿ ಸೇರಿದಂತೆ ಐವರನ್ನು ತಪ್ಪಿತಸ್ಥರು ಎಂದು ಘೋಷಿಸಿತು. ನೂರಕ್ಕೂ ಹೆಚ್ಚು ಪುಟಗಳ ತೀರ್ಪನ್ನು ನ್ಯಾಯಾಧೀಶ ವಿಶ್ವನಾಥ ವಿರೂಪಾಕ್ಷ ಅಂಗಡಿ ಅವರು 6 ಗಂಟೆಗಳ ಕಾಲ ಓದಿದರು. ಅನೀಸ್ ಖಾನ್, ಬದ್ರುದ್ದೀನ್, ಇಲಿಯಾಸ್ ಅಹಮದ್, ವಜೀರ್ ಅಹಮದ್ ಸಾಲಿಕ್ ಯಾನೆ ಎಂ.ಎಚ್. ಸಾಲಿಕ್ ಅಪರಾಧಿಗಳೆಂದು ಘೋಷಿತರಾದ ಇತರ ಆರೋಪಿಗಳು.

2007: ಐಎಎಸ್ ಅಧಿಕಾರಿಗಳಾದ ಕರ್ನಾಟಕ ಸರ್ಕಾರದ ಕಾರ್ಯದರ್ಶಿ ರಾಜೀವ ಚಾವ್ಲಾ ಮತ್ತು ಕೇಂದ್ರ ಉಕ್ಕು ಸಚಿವಾಲಯದ ಕಾರ್ಯದರ್ಶಿ ಆರ್. ಎಸ್. ಪಾಂಡೆ ಅವರಿಗೆ ಪ್ರಧಾನಿ ಮನಮೋಹನ್ ಸಿಂಗ್ ಅವರು ನವದೆಹಲಿಯಲ್ಲಿ ಅತ್ಯುತ್ತಮ ಸಾರ್ವಜನಿಕ ಆಡಳಿತ ಸೇವಾ ಪುರಸ್ಕಾರ ಪ್ರದಾನ ಮಾಡಿದರು.

2007: ಬಾಹ್ಯಾಕಾಶ ಪ್ರವಾಸಿ ಚಾರ್ಸ್ ಸಿಮೊನೀ ಅವರು ಎರಡು ವಾರಗಳ ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದ ವಾಸ್ತವ್ಯದ ಬಳಿಕ ಭೂಮಿಗೆ ವಾಪಸ್ ಹೊರಟರು.

2006: ಅರಾಜಕತೆ ಹಾಗೂ ದೇಶವ್ಯಾಪಿ ಪ್ರತಿಭಟನೆಯಿಂದ ತತ್ತರಿಸಿದ್ದ ನೇಪಾಳದಲ್ಲಿ ದಿಢೀರ್ ಬೆಳವಣಿಗೆ ಸಂಭವಿಸಿ ರಾಜಕೀಯ ಅಧಿಕಾರವನ್ನು ಜನರಿಗೆ ಹಸ್ತಾಂತರಿಸಲು ದೊರೆ ಜ್ಞಾನೇಂದ್ರ ಸಮ್ಮತಿಸಿದರು. ಪ್ರಧಾನಿ ಸ್ಥಾನಕ್ಕೆ ಯಾರನ್ನಾದರೂ ಹೆಸರಿಸುವಂತೆ ಅವರು ಏಳು ಪಕ್ಷಗಳ ರಾಜಕೀಯ ಒಕ್ಕೂಟಕ್ಕೆ ಮನವಿ ಮಾಡಿದರು.

2006: ಸಾಂಸ್ಕತಿಕ ವಲಯದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಗಣ್ಯರಿಗೆ ನೀಡಲಾಗುವ ವಾರ್ಷಿಕ ಪ್ರಶಸ್ತಿಗಳನ್ನು ಸರ್ಕಾರ ಪ್ರಕಟಿಸಿತು. 2005ರ ಸಾಲಿನ ಪ್ರತಿಷ್ಠಿತ ಟಿ.ಚೌಡಯ್ಯ ಪ್ರಶಸ್ತಿಗೆ ಹಿಂದೂಸ್ಥಾನಿ ತಬಲಾ ವಾದಕ ದತ್ತಾತ್ರೇಯ ಸದಾಶಿವ ಗರುಡ, ಕನಕ ಪುರಂದರ ಪ್ರಶಸ್ತಿಗೆ ಗಮಕ ಕ್ಷೇತ್ರದ ಬಿ. ಎಸ್. ಎಸ್. ಕೌಶಿಕ್, ದಾನಚಿಂತಾಮಣಿ ಪ್ರಶಸ್ತಿಗೆ ಲೇಖಕಿ ಡಾ. ವೀಣಾ ಶಾಂತೇಶ್ವರ, ಡಾ. ಗುಬ್ಬಿ ವೀರಣ್ಣ ಪ್ರಶಸ್ತಿಗೆ ವೃತ್ತಿ ರಂಗಭೂಮಿಯ ರೇಣುಕಮ್ಮ ಮುಳಗೋಡು, ಸಂತ ಶಿಶುನಾಳ ಷರೀಫ ಪ್ರಶಸ್ತಿಗೆ ಗಾಯಕ ಈಶ್ವರ ಮಿಣಚಿ, ಜಕಣಾಚಾರಿ ಪ್ರಶಸ್ತಿಗೆ ಸಿದ್ದಲಿಂಗಯ್ಯ, ಶಾಂತಲಾ ನಾಟ್ಯ ಪ್ರಶಸ್ತಿಗೆ ಲೀಲಾ ರಾಮನಾಥನ್ ಆಯ್ಕೆಯಾದರು.

2006: ಅಂಗವಿಕಲ ವ್ಯಕ್ತಿಗಳು ಸ್ವತಂತ್ರವಾಗಿ ಚಲಾಯಿಸಬಹುದಾದ ಕಾರಿನ ಮಾದರಿಯೊಂದನ್ನು ಅಭಿವೃದ್ಧಿ ಪಡಿಸಿರುವುದಾಗಿ ಬೆಳಗಾವಿಯ ಪಾಲಿಟೆಕ್ನಿಕ್ ವಿದ್ಯಾರ್ಥಿಗಳಾದ ಡೇನಿಯಲ್ ಸುನಾಥ ಮತ್ತು ಪ್ರದೀಪ ಸರಪುರ ಬಹಿರಂಗ ಪಡಿಸಿದರು.

2006: ಮುಸ್ಲಿಂ ಸಮುದಾಯದಲ್ಲಿ ಪತಿ ಮೂರುಬಾರಿ ತಲಾಖ್ ಹೇಳಿದ ಮಾತ್ರಕ್ಕೆ ಗಂಡ- ಹೆಂಡತಿ ಬೇರೆ ಬೇರೆಯಾಗಿ ಬದುಕಬೇಕು ಎಂದು ಒತ್ತಾಯಿಸುವ ಹಕ್ಕು ಯಾರಿಗೂ ಇಲ್ಲ ಎಂದು ಸುಪ್ರೀಂಕೋರ್ಟ್ ಮಹತ್ವದ ತೀರ್ಪು ನೀಡಿತು. ಒರಿಸ್ಸಾದ ಮುಸ್ಲಿಂ ಸಮುದಾಯವು ಷರಿಯತ್ ಹೆಸರಿನಲ್ಲಿ ತಮ್ಮ ಪತಿಯ ಜೊತೆ ಬದುಕಲು ತಮಗೆ ಅನುಮತಿ ನಿರಾಕರಿಸಿದ ಸಂಬಂಧ ನಜ್ಮಾ ಬೀವಿ ಅವರು ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ವಿಚಾರಣಾ ಪೀಠ ಈ ತೀರ್ಪು ನೀಡಿತು.

1946: ಭಾರತದ ಮಾಜಿ ಕ್ರಿಕೆಟ್ ಕ್ಯಾಪ್ಟನ್ ಎಸ್. ವೆಂಕಟರಾಘವನ್ ಜನ್ಮದಿನ. ಇವರು ಜಗತ್ತಿನ ಅತ್ಯುತ್ತಮ ಕ್ರಿಕೆಟ್ ಅಂಪೈರ್ ಗಳಲ್ಲಿ ಒಬ್ಬರು ಎಂಬ ಖ್ಯಾತಿ ಪಡೆದವರು.

1926: ಇಂಗ್ಲೆಂಡಿನ ರಾಣಿ 2ನೇ ಎಲಿಜಬೆತ್ ಜನ್ಮದಿನ.

1920: ಪತ್ರಿಕಾರಂಗ, ಸಾಹಿತ್ಯ, ಸ್ವಾತಂತ್ರ್ಯ ಚಳವಳಿ ಹೀಗೆ ವಿವಿಧ ಕ್ಷೇತ್ರಗಳಲ್ಲಿ ಖ್ಯಾತಿ ಪಡೆದಿದ್ದ ತ.ರಾ. ಸುಬ್ಬರಾಯ (ತ.ರಾ.ಸು) (21-4-1920 ರಿಂದ 10-4-1984) ಹುಟ್ಟಿದ ದಿನ. ಹರಿಹರ ತ್ಲಾಲೂಕಿನ ಮಲೆಬೆನ್ನೂರಿನ್ಲಲಿ ರಾಮಸ್ವಾಮಯ್ಯ- ಸೀತಮ್ಮ ದಂಪತಿಯ ಪುತ್ರರಾಗಿ ತ.ರಾ.ಸು. ಜನಿಸಿದರು.

1920: ಸುಗಮ ಸಂಗೀತ ಕ್ಷೇತ್ರದ ಹರಿಕಾರ ಎ.ವಿ. ಕೃಷ್ಣಮಾಚಾರ್ಯ (ಪದ್ಮಚರಣ್) (21-4-1920ರಿಂದ 22-7-2002) ಅವರು ಅಸೂರಿ ವೀರ ರಾಘವಾಚಾರ್ಯ- ಜಾನಕಮ್ಮ ದಂಪತಿಯ ಮಗನಾಗಿ ಚಿತ್ತೂರು ಜಿಲ್ಲೆಯ ಮದನಪಲ್ಲಿ ತಾಲ್ಲೂಕಿನ ಬಡಿಕಾಯಲಪಲ್ಲೆ ಗ್ರಾಮದ `ಗುತ್ತಿ' ಎಂಬಲ್ಲಿ ಜನಿಸಿದರು.

1910: ಮಾರ್ಕ್ ಟ್ವೇನ್ ಎಂದೇ ಖ್ಯಾತನಾಗಿದ್ದ ಬರಹಗಾರ ಸ್ಯಾಮುಯೆಲ್ ಲಾಂಗ್ಹೋರ್ಮ್ ಕ್ಲೆಮೆನ್ಸ್ 74ನೇ ವಯಸ್ಸಿನಲ್ಲಿ ಮೃತನಾದ. 1835ರಲ್ಲಿ ಹುಟ್ಟ್ದದ ಆತನ ಬದುಕಿನಲ್ಲಿ 76 ವರ್ಷಗಳಿಗೊಮ್ಮೆ ಕಾಣಿಸಿಕೊಳ್ಳುವ ಹ್ಯಾಲಿ ಧೂಮಕೇತು ಭಾರೀ ಪರಿಣಾಮ ಬೀರಿತ್ತು. `ಹ್ಯಾಲಿಯನ್ನು ಕಾಣದೆ ಸತ್ತರೆ ನನಗೆ ಭ್ರಮನಿರಸನವಾಗುತ್ತದೆ' ಎಂದು ಆತ ಬರೆದಿದ್ದ. ಆತನಿಗೆ ಭ್ರಮನಿರಸನವಾಗಲಿಲ್ಲ.. ಹ್ಯಾಲಿ ಕಾಣಿಸಿದ ನಂತರ ಆತ ಮೃತನಾದ.

1619: ಡಚ್ ಸರ್ಜನ್ ಜಾನ್ ವ್ಯಾನ್ ರೀಬೀಕ್ ಜನ್ಮದಿನ. ಈತ 1652ರಲ್ಲಿ ಕೇಪ್ ಟೌನನ್ನು ಸ್ಥಾಪಿಸಿದ.

1526: ಮೊದಲನೆಯ ಪಾಣಿಪತ್ ಯುದ್ಧದಲ್ಲಿ ಮೊಘಲ್ ದೊರೆ ಬಾಬರ್, ಲೋದಿಯ ಆಡಳಿತಗಾರ ಇಬ್ರಾಹಿಂ ಲೋದಿಯನ್ನು ಸೋಲಿಸಿ ಕೊಲೆಗೈದ.

(ಸಂಗ್ರಹ: ನೆತ್ರಕೆರೆ ಉದಯಶಂಕರ)

Sunday, April 20, 2008

ಇಂದಿನ ಇತಿಹಾಸ History Today ಏಪ್ರಿಲ್ 20

ಇಂದಿನ ಇತಿಹಾಸ

ಏಪ್ರಿಲ್ 20

ಅಸಾಧಾರಣ ಸಾಹಿತ್ಯ ವ್ಯಕ್ತಿತ್ವ ಎಂದು ಗೌರವಿಸಿ ಕನ್ನಡದ ಖ್ಯಾತ ಕಾದಂಬರಿಕಾರ ಎಸ್. ಎಲ್. ಭೈರಪ್ಪ ಅವರಿಗೆ `ಎನ್. ಟಿ. ರಾಮರಾವ್ (ಎನ್ ಟಿ ಆರ್) ರಾಷ್ಟ್ರೀಯ ಸಾಹಿತ್ಯ ಪ್ರಶಸ್ತಿ ನೀಡಲು ಹೈದರಾಬಾದಿನ ಎನ್ ಟಿ ಆರ್ ವಿಜ್ಞಾನ ಟ್ರಸ್ಟ್ ತೀರ್ಮಾನಿಸಿತು. ಆಂಧ್ರ ಪ್ರದೇಶದ ಮಾಜಿ ಮುಖ್ಯಮಂತ್ರಿ ಎನ್. ಟಿ. ರಾಮರಾವ್ ಅವರ ಪತ್ನಿ ಲಕ್ಷ್ಮಿ ಪಾರ್ವತಿ ಅಧ್ಯಕ್ಷತೆಯ ಈ ಟ್ರಸ್ಟಿನ ಈ ಚೊಚ್ಚಲ ಪ್ರಶಸ್ತಿಯು ಒಂದು ಲಕ್ಷ ರೂಪಾಯಿ ನಗದನ್ನು ಒಳಗೊಂಡಿದೆ.


2007: ಬಾಲಿವುಡ್ ನ ಜನಪ್ರಿಯ ತಾರೆಗಳಾದ ಅಭಿಷೇಕ್ ಬಚ್ಚನ್ ಮತ್ತು ಐಶ್ವರ್ಯ ರೈ ಅವರು ಈದಿನ ಸಂಜೆ ಮುಂಬೈಯಲ್ಲಿ ನಡೆದ ವರ್ಣರಂಜಿತ ಖಾಸಗಿ ಸಮಾರಂಭದಲ್ಲಿ ದಾಂಪತ್ಯ ಜೀವನಕ್ಕೆ ಅಡಿ ಇಟ್ಟರು. ಇದರೊಂದಿಗೆ ಬಹು ನಿರೀಕ್ಷಿತ, ಭಾರಿ ಪ್ರಚಾರ ಗಿಟ್ಟಿಸಿಕೊಂಡ್ದಿದ ಬಾಲಿವುಡ್ ವಲಯದ `ಬಹುದೊಡ್ಡ ಮದುವೆ' ಸಡಗರದೊಂದಿಗೆ ಈಡೇರಿತು. ವರ್ಷದ ಮದುವೆ ಎಂದೇ ಬಿಂಬಿತವಾದ ಈ ಸಮಾರಂಭದಲ್ಲಿ ಅಭಿಷೇಕ್ (31) ಮತ್ತು ಐಶ್ವರ್ಯ (33) ಉತ್ತರ ಭಾರತದ ಸಂಪ್ರದಾಯದಂತೆ ಪರಸ್ಪರ ಹಾರ ಬದಲಾಯಿಸುವ ಮೂಲಕ ಸತಿ ಪತಿಯಾದರು. ಅಮಿತಾಭ್ ಮತ್ತು ಜಯಾ ಬಚ್ಚನ್ ಕುಟುಂಬದ ಮನೆ `ಪ್ರತೀಕ್ಷಾ'ದಲ್ಲಿ ಈ ಸಮಾರಂಭ ನೆರವೇರಿತು. ವಾರಣಾಸಿಯಿಂದ ಬಂದ ಅರ್ಚಕರು ವಿವಾಹ ವಿಧಿಗಳನ್ನು ನೆರವೇರಿಸಿದರು. ಏಪ್ರಿಲ್ 18ರ ರಾತ್ರಿ `ಸಂಗೀತ ಸಮಾರಂಭ'ದೊಂದಿಗೆ ಆರಂಭವಾಗಿ 19ರಂದು ಸಾಂಪ್ರದಾಯಿಕ `ಮೆಹಂದಿ' ಕಾರ್ಯಕ್ರಮದೊಂದಿಗೆ ಮುಂದುವರೆದ ಮದುವೆ ಸಡಗರಕ್ಕೆ `ಅಕ್ಷಯ ತೃತೀಯಾ'ದ ಪವಿತ್ರ ದಿನವಾದ ಈದಿನ ವಿವಾಹ ಸಮಾರಂಭದ ಕ್ಲೈಮಾಕ್ಸಿನೊಂದಿಗೆ, ತೆರೆ ಬಿದ್ದಿತು. (ನೆನಪಿಡಬೇಕಾದ ಸಂಗತಿ: ವರ್ಷದ ಹಿಂದೆ ಏಪ್ರಿಲ್ 19ರಂದು ಕರ್ನಾಟಕದ ಬಾಗಲಕೋಟೆ ಜಿಲ್ಲೆಯ ಬಾದಾಮಿಯ ಭೂತನಾಥ ದೇಗುಲದಲ್ಲಿ `ಗುರು' ಚಿತ್ರಕ್ಕಾಗಿ ಇವರಿಬ್ಬರ ಅದ್ಧೂರಿ ಮದುವೆ ನಡೆದಿತ್ತು!)

2007: ಅಸಾಧಾರಣ ಸಾಹಿತ್ಯ ವ್ಯಕ್ತಿತ್ವ ಎಂದು ಗೌರವಿಸಿ ಕನ್ನಡದ ಖ್ಯಾತ ಕಾದಂಬರಿಕಾರ ಎಸ್. ಎಲ್. ಭೈರಪ್ಪ ಅವರಿಗೆ `ಎನ್. ಟಿ. ರಾಮರಾವ್ (ಎನ್ ಟಿ ಆರ್) ರಾಷ್ಟ್ರೀಯ ಸಾಹಿತ್ಯ ಪ್ರಶಸ್ತಿ ನೀಡಲು ಹೈದರಾಬಾದಿನ ಎನ್ ಟಿ ಆರ್ ವಿಜ್ಞಾನ ಟ್ರಸ್ಟ್ ತೀರ್ಮಾನಿಸಿತು. ಆಂಧ್ರ ಪ್ರದೇಶದ ಮಾಜಿ ಮುಖ್ಯಮಂತ್ರಿ ಎನ್. ಟಿ. ರಾಮರಾವ್ ಅವರ ಪತ್ನಿ ಲಕ್ಷ್ಮಿ ಪಾರ್ವತಿ ಅಧ್ಯಕ್ಷತೆಯ ಈ ಟ್ರಸ್ಟಿನ ಈ ಚೊಚ್ಚಲ ಪ್ರಶಸ್ತಿಯು ಒಂದು ಲಕ್ಷ ರೂಪಾಯಿ ನಗದನ್ನು ಒಳಗೊಂಡಿದೆ.

2007: ಶಿವಮೊಗ್ಗ ಜಿಲ್ಲೆ ಹೊಸನಗರದ ರಾಮಚಂದ್ರಾಪುರ ಮಠದ ವಿಶ್ವ ಗೋ ಸಮ್ಮೇಳನದ ಆವರಣದಲ್ಲಿ ಎತ್ತಿನಗಾಡಿ ಸವಾರಿ ಮಾಡುವ ಮೂಲಕ ಖ್ಯಾತ ಹಿಂದಿ ಚಿತ್ರನಟ ವಿವೇಕ್ ಒಬೆರಾಯ್ ಎತ್ತಿನಗಾಡಿ ಪರಿಕ್ರಮ ಪಥಕ್ಕೆ ಚಾಲನೆ ನೀಡಿದರು.

2006: ಭಾರತದ ಜಾರ್ಖಂಡಿನ ರಾಂಚಿಯ ಹುಡುಗ ಸ್ಫೋಟಕ ಹೊಡೆತಗಳ ಆಟಗಾರ ಮಹೇಂದ್ರ ಸಿಂಗ್ ದೋನಿ ರಾಷ್ಟ್ರೀಯ ಕ್ರಿಕೆಟ್ ಗೆ ಪದಾರ್ಪಣೆ ಮಾಡಿದ ಕೇವಲ 16 ತಿಂಗಳಿನಲ್ಲಿಯೇ ವಿಶ್ವದ ನಂಬರ್ ಒನ್ ಬ್ಯಾಟ್ಸ್ ಮನ್ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಅಂತರರಾಷ್ಟ್ರೀಯ ಕ್ರೆಕೆಟ್ ಮಂಡಳಿ (ಐಸಿಸಿ) ಬಿಡುಗಡೆ ಮಾಡಿದ ಹೊಸದಾದ ಏಕದಿನ ರ್ಯಾನ್ಕಿಂಗ್ ಪಟ್ಟಿಯಲ್ಲಿ ವಿಕೆಟ್ ಕೀಪರ್- ಬ್ಯಾಟ್ಸ್ ಮನ್ ದೋನಿ ವಿಶ್ವಚಾಂಪಿಯನ್ ಆಸ್ಟ್ರೇಲಿಯಾ ತಂಡದ ನಾಯಕ ರಿಕಿ ಪಾಟಿಂಗ್ ಅವರನ್ನು ಹಿಂದಕ್ಕೆ ತಳ್ಳಿದರು.

2006: ದೆಹಲಿಯ ಮಾಜಿ ಮುಖ್ಯಮಂತ್ರಿ ಮದನ್ ಲಾಲ್ ಖುರಾನಾ ಬಿಜೆಪಿಗೆ ರಾಜೀನಾಮೆ ಕೊಡುವ ಮೂಲಕ ಆ ಪಕ್ಷದ ಜೊತೆಗಿನ ತಮ್ಮ ಬಾಂಧವ್ಯವನ್ನು ಕಡಿದುಕೊಂಡರು.

2006: ರಾಜ್ಯ ತುಳು ಸಾಹಿತ್ಯ ಅಕಾಡೆಮಿಯ 2005ನೇ ಸಾಲಿನ ಗೌರವ ಪ್ರಶಸ್ತಿಗಳು ಪ್ರಕಟಗೊಂಡವು. ಡಾ. ಪಾಲ್ತಾಡಿ ರಾಮಕೃಷ್ಣ ಆಚಾರ್ ಅವರು ತುಳು ಸಾಹಿತ್ಯ ಮತ್ತು ಸಂಶೋಧನೆ, ವಿ.ಜಿ. ಪಾಲ್ ಅವರು ತುಳು ನಾಟಕ, ಚಲನಚಿತ್ರ, ಐತಪ್ಪ ಮೂರುಪಂಬದ ಅವರು ತುಳು ಜಾನಪದ ಪ್ರಶಸ್ತಿಗೆ ಆಯ್ಕೆಯಾದರು.

2006: ಸುಮಾರು ಒಂದು ದಶಕದಿಂದ ಕಾನೂನು ತೊಡಕುಗಳಲ್ಲಿ ಸಿಲುಕಿ ಕುಂಟುತ್ತಾ ಸಾಗಿದ್ದ ಬೆಂಗಳೂರು- ಮೈಸೂರು ಎಕ್ಸ್ ಪ್ರೆಸ್ ಕಾರಿಡಾರ್ ಯೋಜನೆಯ ಹಾದಿಯನ್ನು ಸುಪ್ರೀಂಕೋರ್ಟ್ ಸುಗಮಗೊಳಿಸಿತು. ಈ ಸಂಬಂಧ ಕರ್ನಾಟಕ ಹೈಕೋರ್ಟ್ ನೀಡಿದ್ದ ಆದೇಶವನ್ನೇ ಎತ್ತಿ ಹಿಡಿದ ಸುಪ್ರೀಂಕೋರ್ಟ್ ನೈಸ್ ಕಂಪೆನಿಯ ವ್ಯಾಜ್ಯವೆಚ್ಚ ಐದು ಲಕ್ಷ ರೂಪಾಯಿಗಳನ್ನು ಭರಿಸಿಕೊಡುವಂತೆಯೂ ಕರ್ನಾಟಕ ಸರ್ಕಾರಕ್ಕೆ ಆದೇಶ ನೀಡಿತು.

1961: ಕಲಾವಿದ ಮುರಳಿ ವಿ. ಜನನ.

1960: ಏರ್ ಇಂಡಿಯಾ ಸಂಸ್ಥೆಯು ಜೆಟ್ ಯುಗವನ್ನು ಪ್ರವೇಶಿಸಿತು. ಸಂಸ್ಥೆಯ `ಗೌರಿಶಂಕರ' ಬೋಯಿಂಗ್ 707ರ ಸೇವೆಯನ್ನು ಲಂಡನ್ನಿನಲ್ಲಿ ಮೊತ್ತ ಮೊದಲ ಬಾರಿಗೆ ಆರಂಭಿಸಲಾಯಿತು.

1950: ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಜನ್ಮದಿನ.

1947: ಕಲಾವಿದೆ ವಸಂತ ಮಾಧವಿ ಜನನ.

1942: ರಂಗಭೂಮಿ, ಕಿರುತೆರೆ, ದಕ್ಷಿಣ ಭಾರತದ ಹಿರಿತೆರೆಗಳಲ್ಲಿ ತಮ್ಮ ನಟನೆಯಿಂದ ಪ್ರಖ್ಯಾತರಾಗಿರುವ ಎಚ್. ಜಿ. ದತ್ತಾತ್ರೇಯ `ದತ್ತಣ್ಣ' ಅವರು ಹರಿಹರ ಗುಂಡೂರಾಯರು- ವೆಂಕಮ್ಮ ದಂಪತಿಯ ಮಗನಾಗಿ ಚಿತ್ರದುರ್ಗದಲ್ಲಿ ಜನಿಸಿದರು.

1942: ಕಲಾವಿದ ಪುಂಚಿತ್ತಾಯ ಪಿ.ಎಸ್. ಜನನ.

1940: ಕಲಾವಿದ ವಿ. ಕೃಷ್ಣಮೂರ್ತಿ ಜನನ.

1924: ಕಲಾವಿದ ರಾಮಸ್ವಾಮಿ ಎಚ್. ಟಿ. ಜನನ.

1889: ಅಡಾಲ್ಫ್ ಹಿಟ್ಲರ್ ಜನ್ಮದಿನ. ಜರ್ಮನಿಯ ನಾತ್ಸಿ ಸರ್ವಾಧಿಕಾರಿಯಾದ ಈತ ಆಸ್ಟ್ರಿಯಾ- ಹಂಗೆರಿಯ ಬ್ರೌನವು- ಆಮ್- ಇನ್ ಎಂಬ ಸ್ಥಳದಲ್ಲಿ ಹುಟ್ಟಿದ. ಲಕ್ಷಾಂತರ ಯಹೂದಿಗಳ ಕಗ್ಗೊಲೆಗೆ ಕಾರಣನಾದ. ತನ್ನ ರಾಷ್ಟ್ರವನ್ನು ಎರಡನೇ ಜಾಗತಿಕ ಸಮರದತ್ತ ಮುನ್ನಡೆಸಿದ.

1862: ಲೂಯಿ ಪ್ಯಾಶ್ಚರ್ ಮತ್ತು ಕ್ಲಾರ್ಡ್ ಬರ್ನಾರ್ಡ್ ಪ್ಯಾಶ್ಚರೀಕರಣದ ಮೊದಲ ಪರೀಕ್ಷೆಯನ್ನು ಪೂರ್ಣಗೊಳಿಸಿದರು. 48 ದಿನಗಳ ಕಾಲ ಮುಚ್ಚಿಡಲಾಗಿದ್ದ ಬಾಟಲಿಗಳನ್ನು ಫ್ರೆಂಚ್ ವಿಜ್ಞಾನ ಅಕಾಡೆಮಿಯ ಸಭೆಯೊಂದರ್ಲಲಿ ತೆರೆಯಲಾಯಿತು. ಆ ಬಾಟಲಿಗಳಲ್ಲಿ ನಾಯಿಯ ರಕ್ತ ಹಾಗೂ ಮೂತ್ರವನ್ನು ತುಂಬಿಸಿ 30 ಡಿಗ್ರಿ ಸೆಂಟಿಗ್ರೇಡ್ ಉಷ್ಣತೆಯಲ್ಲಿ ಇಡಲಾಗಿತ್ತು. ಈ ಅವಧಿಯಲ್ಲಿ ಅವು ಕೆಟ್ಟಿರಲಿಲ್ಲ. ಇದರಿಂದ ಸೂಕ್ಷ್ಮಜೀವಿಗಳು ಸಾಯುವಷ್ಟು ಉಷ್ಣತೆಯಲ್ಲಿ ಆಹಾರವನ್ನು ಇರಿಸಿ ಕೆಡದಂತೆ ರಕ್ಷಿಸಿ ಇಡುವ ಸಾಧ್ಯತೆ ಪತ್ತೆಯಾಯಿತು.

(ಸಂಗ್ರಹ: ನೆತ್ರಕೆರೆ ಉದಯಶಂಕರ)

ಇಂದಿನ ಇತಿಹಾಸ History Today ಏಪ್ರಿಲ್ 19

ಇಂದಿನ ಇತಿಹಾಸ

ಏಪ್ರಿಲ್ 19

ಕರ್ನಾಟಕದ ಬಾಗಲಕೋಟೆ ಜಿಲ್ಲೆಯ ಬಾದಾಮಿಯ ಭೂತನಾಥ ದೇವಾಲಯ ಸಂಕೀರ್ಣದಲ್ಲಿ ಖ್ಯಾತ ನಟಿ, ಮಾಜಿ ವಿಶ್ವಸುಂದರಿ ಐಶ್ವರ್ಯ ರೈ ಮತ್ತು ನಟ ಅಭಿಷೇಕ ಬಚ್ಚನ್ ಅವರ ವಿವಾಹ ಅದ್ಧೂರಿಯಾಗಿ ನಡೆಯಿತು. ಆದರೆ ಇದು ನಿಜ ಮದುವೆಯಲ್ಲ. ಮಣಿರತ್ನಂ ಅವರ ಮಹತ್ವಾಕಾಂಕ್ಷೆಯ ಗುರು ಚಿತ್ರಕ್ಕಾಗಿ ನಡೆದ ಚಿತ್ರೀಕರಣದ ಮದುವೆ ಇದು. ಬಾದಾಮಿಯ ಪುರೋಹಿತರು, ನಾಗರಿಕರು ಸೇರಿದಂತೆ 200ಕ್ಕೂ ಹೆಚ್ಚು ಜನ ಈ `ಮದುವೆ'ಯಲ್ಲಿ ಪಾಲ್ಗೊಂಡ್ದಿದರು.


2007: ನಿವೃತ್ತ ಎಂಜಿನಿಯರ್, ತುಂಗಾ ಮೇಲ್ದಂಡೆ ಹೋರಾಟ ಸಮಿತಿಯ ಸಂಚಾಲಕ ಎಫ್.ಕೆ. ಬಿದರಿ (69) ನಿಧನರಾದರು. ಕರ್ನಾಟಕ ಭೂ ಸೇನಾ ನಿಗಮದಲ್ಲಿ 25 ವರ್ಷ ಸೇವೆ ಸಲ್ಲಿಸಿ ಸ್ವಯಂ ನಿವೃತ್ತಿ ಪಡೆದ ಅವರು ರಾಣೆಬೆನ್ನೂರು ಭಾಗದಲ್ಲಿ ರೈತ ಪರ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದರು.

2007: ಕಾವೇರಿ ನ್ಯಾಯಮಂಡಳಿ ಅಂತಿಮ ತೀರ್ಪನ್ನು ರದ್ದುಗೊಳಿಸುವಂತೆ ಕೋರಿ ಸುಪ್ರೀಂಕೋರ್ಟಿನಲ್ಲಿವಿಶೇಷ ಮೇಲ್ಮನವಿ ಮತ್ತು ಮೂಲ ದಾವೆ ಹೂಡಲು ಕರ್ನಾಟಕ ರಾಜ್ಯ ಸರ್ಕಾರ ನಿರ್ಧರಿಸಿತು. ಈ ಮೇಲ್ಮನವಿಗಳ ಕರಡು ಪ್ರತಿಗಳಿಗೆ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯು ಒಪ್ಪಿಗೆ ನೀಡಿತು.

2007: ಹಣಕಾಸಿನ ವ್ಯವಹಾರಕ್ಕೆ ಸಂಬಂಧಿಸಿದಂತೆ ಪ್ರಾಣ ಬೆದರಿಕೆ ಒಡ್ಡಿದ ಆರೋಪ ಹೊತ್ತ ಉಡುಪಿಯ ಪೇಜಾವರ ಮಠದ ವಿಶ್ವೇಶತೀರ್ಥ ಸ್ವಾಮೀಜಿ ಹಾಗೂ ಉಪಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಕರ್ನಾಟಕ ಹೈಕೋರ್ಟ್ ಆರೋಪ ಮುಕ್ತಗೊಳಿಸಿತು. ಇವರಿಬ್ಬರ ವಿರುದ್ಧ ಸುಳ್ಳು ಆರೋಪ ಹೊರಿಸಿರುವ ಬಗ್ಗೆ ಹೈಕೋರ್ಟಿನ ರಿಜಿಸ್ಟ್ರಾರ್ (ತನಿಖಾದಳ) ನೀಡಿದ ವರದಿಯ ಹಿನ್ನೆಲೆಯಲ್ಲಿ ನ್ಯಾಯಮೂರ್ತಿ ಆರ್. ಗುರುರಾಜನ್ ನೇತೃತ್ವದ ವಿಭಾಗೀಯ ಪೀಠವು ವಿವಾದ ಕುರಿತ ಪ್ರಕರಣವನ್ನು ಇತ್ಯರ್ಥ ಮಾಡಿತು.

2006: ಆಸ್ಟ್ರೇಲಿಯಾದ ಜೆಸನ್ ಗ್ಲಿಲೆಸ್ಪಿ ಅವರು ಬಾಂಗ್ಲಾದೇಶದ ವಿರುದ್ಧ ಚಿತ್ತಗಾಂಗಿನಲ್ಲಿ ನಡೆದ ಎರಡನೇ ಕ್ರಿಕೆಟ್ ಟೆಸ್ಟ್ ಪಂದ್ಯದಲ್ಲಿ ನೈಟ್ ವಾಚ್ ಮನ್ ಆಗಿ ಅತಿ ಹೆಚ್ಚು ರನ್ ಅಂದರೆ ಅಜೇಯ 201 ರನ್ ಗಳಿಸಿ ತಮ್ಮದೇ ದೇಶದ ಟೋನಿಮನ್ ದಾಖಲೆಯನ್ನು ಮುರಿದು ಹಾಕಿದರು. ಟೋನಿಮನ್ ಅವರು 1977ರಲ್ಲಿ ಭಾರತದ ವಿರುದ್ಧ 105 ರನ್ ಗಳಿಸಿ ವಿಶ್ವದಾಖಲೆ ನಿರ್ಮಿಸಿದ್ದರು.

2006: ಕರ್ನಾಟಕದ ಬಾಗಲಕೋಟೆ ಜಿಲ್ಲೆಯ ಬಾದಾಮಿಯ ಭೂತನಾಥ ದೇವಾಲಯ ಸಂಕೀರ್ಣದಲ್ಲಿ ಖ್ಯಾತ ನಟಿ, ಮಾಜಿ ವಿಶ್ವಸುಂದರಿ ಐಶ್ವರ್ಯ ರೈ ಮತ್ತು ನಟ ಅಭಿಷೇಕ ಬಚ್ಚನ್ ಅವರ ವಿವಾಹ ಅದ್ಧೂರಿಯಾಗಿ ನಡೆಯಿತು. ಆದರೆ ಇದು ನಿಜ ಮದುವೆಯಲ್ಲ. ಮಣಿರತ್ನಂ ಅವರ ಮಹತ್ವಾಕಾಂಕ್ಷೆಯ ಗುರು ಚಿತ್ರಕ್ಕಾಗಿ ನಡೆದ ಚಿತ್ರೀಕರಣದ ಮದುವೆ ಇದು. ಬಾದಾಮಿಯ ಪುರೋಹಿತರು, ನಾಗರಿಕರು ಸೇರಿದಂತೆ 200ಕ್ಕೂ ಹೆಚ್ಚು ಜನ ಈ `ಮದುವೆ'ಯಲ್ಲಿ ಪಾಲ್ಗೊಂಡ್ದಿದರು.

2006: ಒಂದು ಕಾಲದಲ್ಲಿ ಪ್ರಜಾಪ್ರಭುತ್ವ ಪರ ಹೋರಾಟದಲ್ಲಿ ಸೆರೆಮನೆವಾಸ ಅನುಭವಿಸಿದ್ದ ಮಾಜಿ ಸಾಮಾಜಿಕ ಕಾರ್ಯಕರ್ತೆ ಹ್ಯಾನ್ ಮೈಯಾಂಗ್- ಸೂಕ್ ಅವರನ್ನು ದೇಶದ ಪ್ರಥಮ ಮಹಿಳಾ ಪ್ರಧಾನಿಯಾಗಿ ದಕ್ಷಿಣ ಕೊರಿಯಾ ಸಂಸತ್ ಒಪ್ಪಿಕೊಂಡಿತು.

2006: ಭಾರತದ ಕೃಷಿ ವಲಯವನ್ನು ಆಹಾರ ಸ್ವಾವಲಂಬನೆಯಿಂದ ಹೆಚ್ಚು ಮಾರುಕಟ್ಟೆ ಆಧಾರಿತ ವ್ಯವಸ್ಥೆಗೆ ಪರಿವರ್ತಿಸಲು ಅನುವಾಗುವಂತೆ ವಿಶ್ವಬ್ಯಾಂಕ್ ಭಾರತದ ರಾಷ್ಟ್ರೀಯ ಕೃಷಿ ಪುನಶ್ಚೇತನ ಯೋಜನೆಗೆ ಒಟ್ಟು 200 ಕೋಟಿ ಅಮೆರಿಕನ್ ಡಾಲರ್ ಸಾಲ ನೀಡಲು ಒಪ್ಪಿಕೊಂಡಿತು.

2006: ಸಾಮಾಜಿಕ, ಶೈಕ್ಷಣಿಕ ಯೋಜನೆಗಳಿಗಾಗಿ ಹಾಗೂ ದತ್ತಿ ಕಾರ್ಯಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಕ್ಕಾಗಿ ವೆಸ್ಟ್ ಮಿನ್ ಸ್ಟರ್ ವಿಶ್ವವಿದ್ಯಾಲಯದ ಕುಲಪತಿ ಹಾಗೂ ಸಾಗರೋತ್ತರ ಬ್ರಿಟಿಷ್ ವ್ಯವಹಾರಗಳ ರಾಯಭಾರಿ ಭಾರತೀಯ ಮೂಲದ ಲಾರ್ಡ್ ಸ್ವರಾಜ್ ಪಾಲ್ ಅವರಿಗೆ 2006ನೇ ಸಾಲಿನ ಬ್ರಿಟನ್ನಿನ ಈಸ್ಟರ್ನ್ ಐ ಕಮ್ಯೂನಿಟಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಈಸ್ಟರ್ನ್ ಐ ಎಂಬುದು ಬ್ರಿಟನ್ನಿನಲ್ಲಿ ಅತ್ಯಧಿಕ ಮಾರಾಟವಾಗುವ ಏಷ್ಯಾದ ವೃತ್ತಪತ್ರಿಕೆಯಾಗಿದ್ದು, ಪತ್ರಿಕಾ ಸಂಸ್ಥೆಯು ಈ ಪ್ರಶಸ್ತಿ ನೀಡುತ್ತದೆ.

2005: ವ್ಯಾಟಿಕನ್ ಸಿಟಿಯ ರೋಮನ್ ಕ್ಯಾಥೊಲಿಕ್ ಚರ್ಚಿನ 265ನೇ ಪೋಪ್ ಆಗಿ ಜರ್ಮನಿಯ ರಜಿಂಗರ್ ಆಯ್ಕೆಯಾಗಿದ್ದು, ಕುತೂಹಲ ಕೆರಳಿಸಿದ್ದ ಹೊಸ ಪೋಪ್ ಆಯ್ಕೆ ಪ್ರಕ್ರಿಯೆಗೆ ಅಂತಿಮ ತೆರೆ ಬಿತ್ತು. 78 ವರ್ಷದ ರಜಿಂಗರ್ ಅವರು ಈದಿನದಿಂದ `ಪೋಪ್ 16ನೇ ಬೆನೆಡಿಕ್ಟ್' ಆದರು. ಈ ಶತಮಾನದ್ಲಲಿ ಪೋಪ್ ಸ್ಥಾನಕ್ಕೆ ಆಯ್ಕೆಯಾದವರಲ್ಲಿ ರಜಿಂಗರ್ ಅತ್ಯಂತ ಹಿರಿಯ ವ್ಯಕ್ತಿ ಮತ್ತು ಎರಡನೇ ಪೋಪ್ ಜಾನ್ ಪಾಲ್ ಅವರ ನಿಕಟವರ್ತಿ.

1995: ರಸಗೊಬ್ಬರ ಮತ್ತು ತೈಲ ತುಂಬಿದ್ದ ಟ್ರಕ್ಬಾಂಬ್ ಒಕ್ಲಹಾಮಾ ನಗರದ ಅಲ್ ಫ್ರೆಡ್ ಪಿ. ಮುರ್ರಾ ಫೆಡರಲ್ ಕಟ್ಟಡದ ಸಮೀಪ ಸ್ಫೋಟಗೊಂಡಿತು. ಈ ಘಟನೆಯಲ್ಲಿ 168 ಜನ ಮೃತರಾಗಿ 500 ಮಂದಿ ಗಾಯಗೊಂಡರು. ಅಮೆರಿಕದಲ್ಲಿ 2001ರ ಸೆಪ್ಟೆಂಬರ್ 11 ರ ಘಟನೆಗೆ ಮುಂಚಿನ ಅತಿ ಭೀಕರ ಭಯೋತ್ಪಾದಕ ದಾಳಿ ಇದು. ಪರ್ಷಿಯನ್ ಕೊಲ್ಲಿ ಯುದ್ಧದ ನಾಯಕ ಟಿಮೋಥಿ ಮೆಕ್ ವೀಗ್ ಮತ್ತು ಟೆರ್ರಿ ನಿಕೋಲಸ್ ಈ ದಾಳಿಯನ್ನು ರೂಪಿಸಿದ್ದರು.

1951: ಲಂಡನ್ನಿನ ಸ್ಟ್ರ್ಯಾಂಡ್ ನ ಲೈಸಿಯಂ ಬಾಲ್ ರೂಮಿನಲ್ಲಿ ಮೊತ್ತ ಮೊದಲ `ಮಿಸ್ ವರ್ಲ್ಡ್ಡ್' ಸ್ಪರ್ಧೆ ನಡೆಯಿತು. ಮಿಸ್ ಸ್ವೀಡನ್ ಕಿಕಿ ಹಾಕೋನ್ಸನ್ ಸ್ಪರ್ಧೆಯಲ್ಲಿ ವಿಜೇತರಾದರು.

1950: ಶ್ಯಾಮ ಪ್ರಸಾದ್ ಮುಖರ್ಜಿ ಅವರು ಭಾರತದ ಕೇಂದ್ರ ಸಚಿವ ಸಂಪುಟಕ್ಕೆ ರಾಜೀನಾಮೆ ನೀಡಿದರು.
1939: ಕಲಾವಿದ ಐರೋಡಿ ವೈಕುಂಠ ಹೆಬ್ಬಾರ್ ಜನನ.

1913: ಮಹಿಳೆಯರ ಅಭ್ಯುದಯಕ್ಕಾಗಿ ದುಡಿದ ಕರ್ನಾಟಕ ಶಾಸ್ತ್ರೀಯ ಸಂಗೀತ ಗಾಯಕಿ ಜಿ. ಚನ್ನಮ್ಮ (19-4-1913ರಿಂದ 20-1-1986) ಅವರು ಸ್ವಾತಂತ್ರ್ಯ ಹೋರಾಟಗಾರ ಗೌಡಗೆರೆ ಮಡಿವಾಳಯ್ಯ ಗುರು ಬಸವಯ್ಯ- ವೀಣಾ ವಾದಕಿ ರಾಜಮ್ಮ ದಂಪತಿಯ ಮಗಳಾಗಿ ತುಮಕೂರಿನಲ್ಲಿ ಜನಿಸಿದರು.

1845: ಭಾರತದಲ್ಲಿ ರೈಲ್ವೇ ಆರಂಭಿಸುವ ಬಗ್ಗೆ ಚರ್ಚಿಸುತ್ತಿದ್ದ ಮುಂಬೈಯ ಪ್ರಮುಖ ಗಣ್ಯರು ಇಂಡಿಯನ್ ರೈಲ್ವೇ ಅಸೋಸಿಯೇಷನ್ ಹುಟ್ಟು ಹಾಕಿದರು. ಭಾರತದಲ್ಲಿ ರೈಲ್ವೇ ಸಾಧ್ಯತೆಗಳ ಬಗ್ಗೆ ಅಧ್ಯಯನ ಮಾಡಲು ಆಗಮಿಸಿದ ಇಂಗ್ಲೆಂಡಿನ ಎಂಜಿನಿಯರ್ ಜಿ.ಟಿ. ಕ್ಲಾರ್ಕ್ ನೀಡಿದ ಮುಂಬೈ- ಠಾಣೆ ರೈಲುಮಾರ್ಗ ಪ್ರಸ್ತಾವಕ್ಕೆ ಈ ಗಣ್ಯರು ಅನುಮೋದನೆ ನೀಡಿದರು.

(ಸಂಗ್ರಹ: ನೆತ್ರಕೆರೆ ಉದಯಶಂಕರ)

Friday, April 18, 2008

ಒಡನಾಟ.. Odanaata

On April 20, 2008, two books, one of S.R. Vijya Shankar's 'Odanata' with 26 pen pictures and 'Parigraha' collection essays in literary criticism by Prof.T.G.Raghav will be released in Suchitra Kala Kendra, Banashankari, Bangalore.

ಒಡನಾಟ..

ನೆತ್ರಕೆರೆ ಉದಯಶಂಕರ

ಏಪ್ರಿಲ್ 20ರ ಭಾನುವಾರ ಎಸ್.ಆರ್. ವಿಜಯಶಂಕರ ಅವರ 'ಒಡನಾಟ' ಮತ್ತು ಪ್ರೊಫೆಸರ್. ಟಿ.ಜಿ. ರಾಘವ ಅವರ 'ಪರಿಗ್ರಹ' ಪುಸ್ತಕಗಳು ಬೆಂಗಳೂರಿನ ಬನಶಂಕರಿಯ ಸುಚಿತ್ರ ಕಲಾ ಕೇಂದ್ರದಲ್ಲಿ ಬಿಡುಗಡೆಗೊಳ್ಳಲಿವೆ. ಇಲ್ಲಿದೆ.. 'ಎಸ್ಸಾರ್' ಒಡನಾಟದ ಮೆಲುಕು...!

'ನನ್ನ ಮಟ್ಟಿಗೆ ಈತ ಇಂದಿಗೂ 'ಎಸ್ಸಾರ್'. 'ನೋ ಸಾರ್' ಎನ್ನುವ ಪ್ರಶ್ನೆಯೇ ಇಲ್ಲ, ಏಕೆಂದರೆ ಈತ ನನ್ನ ಚಡ್ಡಿ ದೋಸ್ತ್ ಅಂದರೂ ತಪ್ಪೇನಿಲ್ಲ. ಎಂಟನೆಯ ವರ್ಗದಿಂದ ಎರಡನೇ ವರ್ಷದ ಪಿಯುಸಿಯವರೆಗೆ ಒಟ್ಟಿಗೆ ಓದಿದ್ದು, ಒಡನಾಡಿದ್ದು, ಆಡಿದ್ದು, ಕವನಗಳನ್ನು ಕಟ್ಟಿ ಹಾಡಿದ್ದು ಎಂದಿಗೂ ಮರೆತುಹೋಗಲು ಸಾಧ್ಯವೇ ಇಲ್ಲ. ಈತ ವಿದ್ಯಾರ್ಥಿ ನಾಯಕನಾದದ್ದು ಅಷ್ಟೇ ಅಲ್ಲ, ರಂಗದ ಮೇಲೆ ಬಣ್ಣದ ವೇಷ ಹಾಕಿ ಅರ್ಭಟಿಸಿದ್ದೂ ನನ್ನ ನೆನಪಿನಾಳದಿಂದ ಅಳಿದಿಲ್ಲ.

ಹೌದು ಈ 'ಎಸ್ಸಾರ್' ಬೇರಾರೂ ಅಲ್ಲ, ಪ್ರಸ್ತುತ ಇಂಟೆಲ್ ಟೆಕ್ನಾಲಜಿ ಇಂಡಿಯಾ ಪ್ರೈವೇಟ್ ಲಿಮಿಟೆಡ್ನಲ್ಲಿ ಮ್ಯಾನೇಜರ್ (ಸರ್ಕಾರಿ ವ್ಯವಹಾರಗಳು ಮತ್ತು ನೌಕರರ ಸಂಪರ್ಕಗಳು) ಆಗಿರುವ ಎಸ್.ಆರ್. ವಿಜಯಶಂಕರ.

ದಕ್ಷಿಣ ಕನ್ನಡ ಜಿಲ್ಲೆಯ ಪುಟ್ಟ ವಿಟ್ಲ ಗ್ರಾಮದಿಂದ ಮೈಸೂರಿಗೆ ಹಾರಿದ ಈ 'ಎಸ್ಸಾರ್' ಅಲ್ಲಿ ಶಿಕ್ಷಣ ಪೂರೈಸಿದ ಮೇಲೆ ಮಾಸ್ತರನಾಗಿ ಕೆಲಸ ಮಾಡಿ, ಎಚ್.ಎಂ.ಟಿ ಸೇರಿ ಅಲ್ಲಿಂದ ಸಿಸ್ಕೋಗೆ ನುಗ್ಗಿ ಈಗ ಇಂಟೆಲ್ನಲ್ಲಿ ನಿಂತಿರುವ ವ್ಯಕ್ತಿ.

ಜೀವನೋಪಾಯಕ್ಕಾಗಿ ಇಷ್ಟೆಲ್ಲ ಸುತ್ತಾಟ ನಡೆಸುವುದರ ಜೊತೆಗೇ ಆಸಕ್ತಿಯ ವಿಷಯವಾದ ಸಾಹಿತ್ಯದ ಸೆಳೆತದಿಂದಾಗಿ ವಿಜಯಶಂಕರ್ಗೆ ಸಿಕ್ಕಿದ್ದು ಒಂದಿಬ್ಬರ ಒಡನಾಟ ಅಲ್ಲ, ಹತ್ತಾರು ಬಗೆಯ ಹತ್ತಾರು ಅಭಿರುಚಿಗಳ ಭಿನ್ನ ಭಿನ್ನ ವ್ಯಕ್ತಿತ್ವಗಳ ಒಡನಾಟ.
ಅವರ ಈ ಒಡನಾಟ ಈಗ ಪುಸ್ತಕ ರೂಪಕ್ಕೆ ಇಳಿದಿದೆ. ಹೌದು ವಿಜಯಶಂಕರ್ ಮಸ್ತಕದಿಂದ ಪುಸ್ತಕಕ್ಕೆ ಇಳಿದ ಬರಹಗಳ ಸಂಗ್ರಹ ಇದು. ಇದರ ಹೆಸರೇ 'ಒಡನಾಟ'.

ಈ ಪುಸ್ತಕದ ಒಳಹೊಕ್ಕರೆ ಒಂದಿಬ್ಬರಲ್ಲ, 26 ಮಂದಿಯ 'ವ್ಯಕ್ತಿಚಿತ್ರ'ಗಳು ಸಿಗುತ್ತವೆ. ಅವರೆಲ್ಲ ಭಿನ್ನ ಭಿನ್ನ ವ್ಯಕ್ತಿತ್ವದ ಮಂದಿ ಎಂಬುದೇ ವಿಶೇಷ. ಸಾಹಿತ್ಯ ಕ್ಷೇತ್ರದ ಮಹಾನ್ ವ್ಯಕ್ತಿತ್ವಗಳು ಎನಿಸಿದ ಬೇಂದ್ರೆ, ಮೂರ್ತಿರಾವ್, ಗೌರೀಶ ಕಾಯ್ಕಿಣಿ, ಯುಆರ್ಎ (ಯು.ಆರ್. ಅನಂತಮೂರ್ತಿ) ಮತ್ತಿತರರು, ವಿದ್ವಾಂಸರಾದ ಸೇಡಿಯಾಪು ಕೃಷ್ಣಭಟ್, ಇಂಗ್ಲಿಷ್ ಪ್ರೊಫೆಸರುಗಳಾದ ಸಿ.ಡಿ. ನರಸಿಂಹಯ್ಯ, ವ್ಯಂಗ್ಯಚಿತ್ರಕಾರ ಶಿಂಗಣ್ಣ (ಕನ್ನೆಪ್ಪಾಡಿ ರಾಮಕೃಷ್ಣ), ಸಂಪಾದಕ ವೈ.ಎನ್.ಕೆ. ಅವರಂತಹ ಪತ್ರಕತ್ರರು - ಇವರೆಲ್ಲ ಈ 'ಒಡನಾಟ'ದ ಒಳಕ್ಕೆ ನುಗ್ಗಿದ್ದಾರೆ.

ಡಾ. ಶಿವರಾಮ ಕಾರಂತರಂತಹ ಹಿರಿಯ ಪ್ರಖರ ಸಾಹಿತಿ, ಕೈಗಾರಿಕಾ ಕ್ಷೇತ್ರದ ಧುರೀಣರಾದ ಎಚ್.ಆರ್. ಆಳ್ವ, ಚಿಕ್ಕವನಾಗಿದ್ದಾಗಿನಿಂದಲೇ ದೊಡ್ಡ ಮಟ್ಟದ ಪರಿಣಾಮ ಬೀರಿದ ಕೂಡೂರು ಕೃಷ್ಣಭಟ್ ಅವರಂತಹ ವ್ಯಕ್ತಿಗಳ ಜೊತೆಗಿನ ವೈಯಕ್ತಿಕ ಒಡನಾಟದ ನೆನಪುಗಳೂ ಇಲ್ಲಿ ಗರಿಬಿಚ್ಚಿವೆ.

ವ್ಯಕ್ತಿ ಚಿತ್ರಗಳ ರೂಪದ ಈ 'ಒಡನಾಟ' ಸಣ್ಣ ಕಥೆಗಳು, ಈ ಮಹಾನ್ ವ್ಯಕ್ತಿಗಳು ಮಾಡಿದ ಕೆಲಸಗಳ ಬಗೆಗಿನ ಅರಿವು, ಅವರ ವ್ಯಕ್ತಿತ್ವ, ಅವರ ಬರಹಗಳು, ವಿಮರ್ಶಾ ಲೇಖನಗಳನ್ನು ಒಳಗೊಂಡಿದೆ.

ಕಥೆಯಂತೆ ಓದಿಸಿಕೊಂಡು ಹೋಗುವ ಈ 'ಒಡನಾಟ' ಬಹುಶಃ ವ್ಯಕ್ತಿಚಿತ್ರ ಬರಹ ಶೈಲಿಯಲ್ಲಿ ಹೊಸದೊಂದು ಪ್ರವೃತ್ತಿಯನ್ನು ಹುಟ್ಟು ಹಾಕಬಹುದೇನೋ?

ಎಸ್.ಆರ್. ವಿಜಯಶಂಕರ ಅವರ ಈ 'ಒಡನಾಟ'ಕ್ಕೆ ಈಗ ಬಿಡುಗಡೆ ಯೋಗ ಬಂದಿದೆ. ಖ್ಯಾತ ಸಾಹಿತಿ, ವಿಧಾನ ಪರಿಷತ್ ಸದಸ್ಯ ಚಂದ್ರಶೇಖರ ಕಂಬಾರ ಅವರ ಅಧ್ಯಕ್ಷತೆಯಲ್ಲಿ ಏಪ್ರಿಲ್ 20ರ (2008) ಭಾನುವಾರ ಬೆಂಗಳೂರು ಬನಶಂಕರಿ ಎರಡನೇ ಹಂತದ 9ನೇ ಮುಖ್ಯರಸ್ತೆ (ಬಿ.ವಿ. ಕಾರಂತ ರಸ್ತೆ) ಸುಚಿತ್ರ ಕಲಾಕೇಂದ್ರದಲ್ಲಿ ನಡೆಯುವ ಸಮಾರಂಭದಲ್ಲಿ ಇದು ಬಿಡುಗಡೆ ಆಗಲಿದೆ.

ಜೊತೆಗೇ ಪ್ರೊ. ಟಿ.ಜಿ. ರಾಘವ ಅವರ 'ಪರಿಗ್ರಹ' ಸಾಹಿತ್ಯ ವಿಮರ್ಶಾ ಲೇಖನಗಳ ಸಂಗ್ರಹ ಕೂಡಾ ಬಿಡುಗಡೆ ಗೊಳ್ಳಲಿದೆ.
ಡಾ. ಎಚ್.ಎಸ್. ವೆಂಕಟೇಶ ಮೂರ್ತಿ, ಕೆ. ಸತ್ಯನಾರಾಯಣ, ಡಾ. ಡಿ.ವಿ. ಗುರುಪ್ರಸಾದ್ ಅವರೂ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ.

ಚಿತ್ರದುರ್ಗ ಜಿಲ್ಲೆ ಮಲ್ಲಾಡಿಹಳ್ಳಿಯ ಆನಂದ ಕಂದ ಗ್ರಂಥ ಮಾಲೆ ಈ ಪುಸ್ತಕಗಳನ್ನು ಪ್ರಕಟಿಸಿದೆ.

ಆಸಕ್ತರೆಲ್ಲ ಖಂಡಿತ ಬೆಳಗ್ಗೆ 10.30ಕ್ಕೆ ಸುಚಿತ್ರ ಕಲಾಕೇಂದ್ರದ ಸಭಾಂಗಣದತ್ತ ಹೆಜ್ಜೆ ಹಾಕಬಹುದು.

ಇಂದಿನ ಇತಿಹಾಸ History Today ಏಪ್ರಿಲ್ 18

ಇಂದಿನ ಇತಿಹಾಸ

ಏಪ್ರಿಲ್ 18

ಗಂಟೆಗೆ 200 ಕಿ.ಮೀ. ವೇಗದಲ್ಲಿ ಚಲಿಸುವ ಚೀನಾದ ಬುಲೆಟ್ ರೈಲು ತನ್ನ ಮೊದಲ ಸಂಚಾರವನ್ನು ಬೀಜಿಂಗ್ ರೈಲು ನಿಲ್ದಾಣದಿಂದ ಆರಂಭಿಸಿತು.




2007: ಗಂಟೆಗೆ 200 ಕಿ.ಮೀ. ವೇಗದಲ್ಲಿ ಚಲಿಸುವ ಚೀನಾದ ಬುಲೆಟ್ ರೈಲು ತನ್ನ ಮೊದಲ ಸಂಚಾರವನ್ನು ಬೀಜಿಂಗ್ ರೈಲು ನಿಲ್ದಾಣದಿಂದ ಆರಂಭಿಸಿತು.

2007: ಭಾರತದ ಮಹತ್ವಾಕಾಂಕ್ಷೆಯ ಹಗುರ ಸಾರಿಗೆ ವಿಮಾನ `ಸರಸ್' ತನ್ನ ಎರಡನೇ ಪರೀಕ್ಷಾರ್ಥ ಹಾರಾಟವನ್ನು ಯಶಸ್ವಿಯಾಗಿ ಪೂರೈಸಿತು. ಸ್ವದೇಶೀ ನಿರ್ಮಿತ ಮೊದಲ ನಾಗರಿಕ ವಿಮಾನ `ಸರಸ್' ನ್ನು ರಾಷ್ಟ್ರೀಯ ವಿಮಾನಾಂತರಿಕ್ಷ ಪ್ರಯೋಗಾಲಯ (ಎನ್ಎಎಲ್) ಅಭಿವೃದ್ಧಿ ಪಡಿಸಿದೆ.

2007: ಪತ್ನಿಯ ಹೆಸರಿನಲ್ಲಿ ಬೇರೊಬ್ಬ ಮಹಿಳೆಯನ್ನು ವಿದೇಶಕ್ಕೆ ಕರೆದೊಯ್ಯುತ್ತಿದ್ದ ಬಿಜೆಪಿ ಸಂಸದ ಗುಜರಾತಿನ ದಾಹೋದ ಕ್ಷೇತ್ರದ ಲೋಕಸಭೆ ಸದಸ್ಯ ವಿಶ್ವ ಹಿಂದೂ ಪರಿಷತ್ತಿನ ಪ್ರಭಾವಿ ಮುಖಂಡ ಬಾಬುಬಾಯಿ ಕಟಾರಾ, ಅವರ ಜೊತೆಗಿದ್ದ ಮಹಿಳೆ ಪರಮ್ ಜೀತ್ ಕೌರ್ ಮತ್ತು ಆಕೆಯ ಪುತ್ರನನ್ನು ವಲಸೆ ಅಧಿಕಾರಿಗಳು ನವದೆಹಲಿಯ ಇಂದಿರಾಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಶಕ್ಕೆ ತೆಗೆದುಕೊಂಡು ಪೊಲೀಸರಿಗೆ ಹಸ್ತಾಂತರಿಸಿದರು.

2007: ವಿಜಯಾ ಬ್ಯಾಂಕ್ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕ ಪ್ರಕಾಶ ಪಿ. ಮಲ್ಯ ಅವರಿಗೆ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಮಾಡಿದ ಸಾಧನೆಗಾಗಿ ನೀಡಲಾಗುವ 2006-07ರ ಸಾಲಿನ ಪ್ರತಿಷ್ಠಿತ ಆರ್ಯಭಟ ಪ್ರಶಸ್ತಿ ಲಭಿಸಿತು.

2007: ಕೈಮಗ್ಗ ಉತ್ಪನ್ನಗಳ ಪ್ರಚಾರದಲ್ಲಿ ಪ್ರಮುಖ ಪಾತ್ರ ವಹಿಸಿರುವ ರಾಜಸ್ಥಾನದ ಮುಖ್ಯಮಂತ್ರಿ ವಸುಂಧರಾ ರಾಜೆ ಅವರು ವಿಶ್ವಸಂಸ್ಥೆಯ ಪ್ರತಿಷ್ಠಿತ `ವಿಮೆನ್ ಟುಗೆದರ್ ಅವಾರ್ಡ್ -2007'ಗೆ ಆಯ್ಕೆಯಾದರು.

2007: ಅಮೆರಿಕದ ವರ್ಜೀನಿಯಾ ತಾಂತ್ರಿಕ ವಿಶ್ವ ವಿದ್ಯಾನಿಯಲದಲ್ಲಿ ನಡೆದ ಹತ್ಯಾಕಾಂಡದಲ್ಲಿ ಸತ್ತವರ ಸಂಖ್ಯೆ 33ಕ್ಕೆ ಏರಿತು. ಮುಂಬೈಯ ನಿವಾಸಿ ಕೃಷಿ ವಿಜ್ಞಾನ ಪ್ರಥಮ ವರ್ಷದ ವಿದ್ಯಾರ್ಥಿನಿ ಮಿನಾಲ್ ಪಂಚಲ್ ಅವರ ಶವವೂ ಪತ್ತೆಯಾಯಿತು.

2007: ಮುಂಬೈಯಲ್ಲಿ ವರ್ಣರಂಜಿತ ಸಂಗೀತ ಸಮಾರಂಭದೊಂದಿಗೆ ಬಾಲಿವುಡ್ನ ಖ್ಯಾತ ತಾರೆಯರಾದ ಅಭಿಷೇಕ್ ಬಚ್ಚನ್ ಮತ್ತು ಐಶ್ವರ್ಯ ರೈ ಅವರ ಮದುವೆಯ ಕ್ಷಣಗಣನೆ ಆರಂಭಗೊಂಡಿತು. ಹಿರಿಯ ಚಿತ್ರನಟ ಅಮಿತಾಭ್ ಬಚ್ಚನ್ ಅವರು ಸ್ವತಃ ಐಶ್ವರ್ಯ ರೈ ಅವರ ತಂದೆ ತಾಯಿಯರಾದ ಕೃಷ್ಣರಾಜ್ ಮತ್ತು ವೃಂದಾ ರೈ ಸೇರಿದಂತೆ ಅತಿಥಿಗಳನ್ನು `ಸಂಗೀತ' ಸಮಾರಂಭಕ್ಕೆ ಆಹ್ವಾನಿಸಿದರು.

2007: ಬಾಗ್ದಾದಿನಲ್ಲಿ ನಡೆದ ಭೀಕರ ಕಾರುಬಾಂಬ್ ಸರಣಿ ದಾಳಿಗಳಲ್ಲಿ ಒಟ್ಟು 172 ಜನ ಮೃತರಾದರು.

2007: ಬಿಜೆಪಿ ಧುರೀಣ ಪ್ರಮೋದ್ ಮಹಾಜನ್ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಸಹೋದರ ಪ್ರವೀಣ್ ಕೊಲೆ ಕೃತ್ಯ ನಡೆಯುವುದಕ್ಕೆ ಕೆಲವು ದಿನಗಳ ಮುನ್ನ ಕಳುಹಿಸಿದ್ದು ಎನ್ನಲಾದ ಬೆದರಿಕೆ ಸಂದೇಶದ ವಿವರಗಳನ್ನು ಒಳಗೊಂಡ ದೂರವಾಣಿ ಸಂದೇಶದ ಮಾಹಿತಿ ಸಹಿತವಾದ ಪೂರಕ ದೋಷಾರೋಪ ಪಟ್ಟಿಯನ್ನು ವಿಚಾರಣಾ ನ್ಯಾಯಾಲಯಕ್ಕೆ ಸಲ್ಲಿಸಲ್ಲಿಸಲಾಯಿತು. ವಿಶೇಷ ಪಬ್ಲಿಕ್ ಪ್ರಾಸೆಕ್ಯೂಟರ್ ಉಜ್ವಲ್ ನಿಕ್ಕಮ್ ಅವರು 6 ಪುಟಗಳ ಪೂರಕ ದೋಷಾರೋಪ ಪಟ್ಟಿಯನ್ನು ರಿಲಯನ್ಸ್ ಇನ್ ಫೋಕಾಮ್ ಅಧಿಕಾರಿ ಜ್ಞಾನೇಂದ್ರ ಉಪಾಧ್ಯಾಯ ಅವರ ದೂರವಾಣಿ ಸಂದೇಶ ಸಂಬಂಧಿತ ಹೇಳಿಕೆ ಮತ್ತು ಪ್ರಮಾಣಪತ್ರ ಸಹಿತವಾಗಿ ಸಲ್ಲಿಸಿದರು.. ಸಂದೇಶವನ್ನು ಮೊಬೈಲ್ ನಂಬರ್ 9323960307ರಿಂದ (ಪ್ರವೀಣ್ ಮಾಲೀಕತ್ವ) ಮೊಬೈಲ್ ನಂಬರ್ 9811445454ಗೆ (ಪ್ರಮೋದ್ ಮಾಲೀಕತ್ವ) 2006ರ ಏಪ್ರಿಲ್ 15ರಂದು ಸಂಜೆ 4.39 ಗಂಟೆಗೆ ಕಳುಹಿಸಲಾಗಿದೆ ಎಂದು ಕಂಪ್ಯೂಟರ್ನಿಂದ ಪಡೆಯಲಾಗಿರುವ ದೂರವಾಣಿ ಸಂದೇಶ ಸಂಬಂಧಿತ ಹೇಳಿಕೆಯು ತಿಳಿಸಿತ್ತು. ಅಡಿಷನಲ್ ಸೆಷನ್ಸ್ ನ್ಯಾಯಾಧೀಶ ಶ್ರೀಹರಿ ದಾವರೆ ಅವರ ಸಮ್ಮುಖದಲ್ಲಿ ಹಿಂದಿನ ದಿನ ಬಿಜೆಪಿ ನಾಯಕ ಗೋಪೀನಾಥ ಮುಂಡೆ ಅವರು ಗುರುತಿಸಿದ ದೂರವಾಣಿಯ ಇನ್ ಬಾಕ್ಸ್ನಿಂದ ಈ ಸಂದೇಶವನ್ನು ತೆಗೆಯಲಾಗಿದೆ. ಪದ್ಯರೂಪದ ಬೆದರಿಕೆಯೊಂದಿಗೆ ಪ್ರವೀಣ್ ಹೆಸರನ್ನು ಸಂದೇಶವು ಒಳಗೊಂಡಿದೆ.

2006: ಕರಾಚಿಯಲ್ಲಿ ಇಪ್ಪತ್ತು ವರ್ಷಗಳ ಹಿಂದೆ ಅಮೆರಿಕದ ಪಾನ್ ಆಮ್ ವಿಮಾನದಲ್ಲಿ ಅಪಹರಣಕಾರರ ವಿರುದ್ಧ ಸೆಣಸಿ ಮಡಿದ ಗಗನ ಸಖಿ ಚಂಡೀಗಢದ ನೀರಜಾ ಭಾನೋಟ್ ಅವರಿಗೆ ಅಮೆರಿಕದ ಅತ್ಯುಚ್ಚ ಶೌರ್ಯ ಪ್ರಶಸ್ತಿ ಪ್ರಕಟಿಸಲಾಯಿತು.
2006: ಪತ್ರಿಕೋದ್ಯಮ ಶ್ರೇಷ್ಠತೆಗಾಗಿ ನೀಡಲಾಗುವ ನಾಲ್ಕು ಪುಲಿಟ್ಜರ್ ಪ್ರಶಸ್ತಿಗಳನ್ನು ನ್ಯೂಯಾರ್ಕಿನ ವಾಷಿಂಗ್ಟನ್ ಪೋಸ್ಟ್ ತನ್ನ ಮಡಿಲಿಗೆ ಹಾಕಿಕೊಂಡಿತು.

2006: ಹಿರಿಯ ಮರಾಠಿ ಚಲನಚಿತ್ರ ಮತ್ತು ರಂಗಭೂಮಿ ನಟ ಶರದ್ ಅಲಿಯಾಸ್ ದಲ್ ಜೇಮ್ ನೀಸ್ (72) ಅವರು ದೀರ್ಘಕಾಲದ ಅನಾರೋಗ್ಯದ ನಂತರ ಕೊಲ್ಹಾಪುರದಲ್ಲಿ ನಿಧನರಾದರು. ಶರದ್ ಅವರು 1950ರಿಂದ 1976ರವರೆಗೆ ಅನೇಕ ಚಲನಚಿತ್ರ ಮತ್ತು ನನಾಟಕಗಳಲ್ಲಿ ಅಭಿನಯಿಸಿದ್ದು, ಅವುಗಳಲ್ಲಿ `ಧಾನಾಜಿ ಶಾಂತಾಜಿ' ಚಿತ್ರ ಅತ್ಯಂತ ಪ್ರಸಿದ್ಧ. ನಾಟಕಗಳಲ್ಲಿ `ಸಂಗೀತ್ ಸೌಭದ್ರ' `ಜೈದೇವ್', `ಸ್ವಯಂವರ', `ಮೃಚ್ಛಕಟಿಕ', `ಮಹಾಶ್ವೇತಾ' ಪ್ರಮುಖವಾದುವು.

1930: ಚಿತ್ತಗಾಂಗ್ ಶಸ್ತ್ರಾಗಾರದ ಮೇಲೆ ಭಾರತೀಯ ಕ್ರಾಂತಿಕಾರಿಗಳಿಂದ ದಾಳಿ ನಡೆಯಿತು. ಕ್ರಾಂತಿಕಾರಿ ಸೂರ್ಯ ಸೇನ್ ನೇತೃತದಲ್ಲಿ ಇಂಡಿಯನ್ ರಿಪಬ್ಲಿಕನ್ ಆರ್ಮಿಯ 62 ಮಂದಿ ಕ್ರಾಂತಿಕಾರಿಗಳು ಚಿತ್ತಗಾಂಗಿನಲ್ಲಿದ್ದ ಪೊಲೀಸ್ ಮತ್ತು ಬ್ರಿಟಿಷ್ ಪಡೆಗಳ ಶಸ್ತ್ರಾಗಾರದ ಮೇಲೆ ದಾಳಿ ನಡೆಸಿದರು. `ಚಿತ್ತಗಾಂಗ್ ಶಸ್ತ್ರಾಗಾರ ಮೇಲೆ ದಾಳಿ' ಎಂದೇ ಖ್ಯಾತಿ ಪಡೆದ ಈ ಘಟನೆ ಬ್ರಿಟಿಷರನ್ನು ಬೆಚ್ಚಿ ಬೀಳಿಸಿತು.

1926: ವೃತ್ತಿ ರಂಗಭೂಮಿಯ ಸಂಸ್ಥೆಗಳಿಗೆ ನಾಟಕ ರಚನೆ, ವಾದ್ಯ ಸಂಗೀತದ ನೆರವಿನ ಮೂಲಕ ರಂಗಭೂಮಿಗೆ 5 ದಶಕಗಳಿಂದ ಕಲಾಸೇವೆ ಮಾಡುತ್ತ ಬಂದ ಕೆ.ಎಲ್. ನಾಗರಾಜ ಶಾಸ್ತ್ರಿ ಅವರು ಲಕ್ಷ್ಮಿ ನರಸಿಂಹ ಶಾಸ್ತ್ರಿ- ಗೌರಮ್ಮ ದಂಪತಿಯ ಮಗನಾಗಿ ಬೆಂಗಳೂರು ಜಿಲ್ಲೆಯ ಮಾಗಡಿ ತಾಲ್ಲೂಕಿನ ಕುದೂರಿನಲ್ಲಿ ಜನಿಸಿದರು.

1898: ಭಾರತೀಯ ಕ್ರಾಂತಿಕಾರಿ ದಾಮೋದರ ಹರಿ ಚಾಪೇಕರ್ ಅವರನ್ನು ಗಲ್ಲಿಗೇರಿಸಲಾಯಿತು. 1897ರಲ್ಲಿ ಇಬ್ಬರು ಬ್ರಿಟಿಷ್ ಅಧಿಕಾರಿಗಳ ಕೊಲೆಗೈದುದಕ್ಕಾಗಿ ಅವರಿಗೆ ಈ ಶಿಕ್ಷೆ ವಿಧಿಸಲಾಯಿತು.

1859: ಭಾರತೀಯ ಕ್ರಾಂತಿಕಾರಿ ತಾಂತ್ಯಾ ಟೋಪೆ ಅವರನ್ನು ಬ್ರಿಟಿಷ್ ಸರ್ಕಾರ ಶಿವಪುರಿಯಲ್ಲಿ ಗಲ್ಲಿಗೇರಿಸಿತು. ಅವರು 1857ರ ಮೊದಲ ಸ್ವಾತಂತ್ರ್ಯ ಹೋರಾಟದ ಪ್ರಮುಖ ನಾಯಕರಲ್ಲ್ಲ್ಲಿಒಬ್ಬರಾಗಿದ್ದರು.

1858: ಮಹರ್ಷಿ ಧೊಂಡೋ ಕೇಶವ ಕರ್ವೆ (1858-1962) ಜನ್ಮದಿನ. ಇವರು ಭಾರತೀಯ ಸಮಾಜ ಸುಧಾರಕರಾಗಿದ್ದು ಮಹಿಳಾ ಶಿಕ್ಷಣ ಹಾಗೂ ಹಿಂದು ವಿಧವೆಯರ ಮರುವಿವಾಹಕ್ಕೆ ಬೆಂಬಲ ನೀಡಿದರು. 100ನೇ ಜನ್ಮದಿನದ ಸಂದರ್ಭದಲ್ಲಿ ಅವರನ್ನು `ಭಾರತರತ್ನ' ಪ್ರಶಸ್ತಿ ನೀಡಿ ಗೌರವಿಸಲಾಯಿತು.

(ಸಂಗ್ರಹ: ನೆತ್ರಕೆರೆ ಉದಯಶಂಕರ)

ಇಂದಿನ ಇತಿಹಾಸ History Today ಏಪ್ರಿಲ್ 17

ಇಂದಿನ ಇತಿಹಾಸ

ಏಪ್ರಿಲ್ 17

ಇಪ್ಪತ್ತೈದು ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ನವದೆಹಲಿಯ ಚಿನ್ನದ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಅತ್ಯಂತ ಗರಿಷ್ಠ ಮಟ್ಟಕ್ಕೆ ಅಂದರೆ ಪ್ರತಿ 10 ಗ್ರಾಮಿಗೆ 9000 ರೂಪಾಯಿಗಳಿಗೆ, ಬೆಳ್ಳಿಯ ಬೆಲೆ ಪ್ರತಿ ಕಿ.ಗ್ರಾಂ.ಗೆ 20,000 ರೂಪಾಯಿಗಳಗೆ ಮುಟ್ಟಿತು.

ವಿಶ್ವ ಕುಸುಮ ದಿನ. ವಿಶ್ವ ಕುಸುಮ (ಹಿಮೋಫಿಲಿಯಾ) ರೋಗ ದಿನಾಚರಣೆಯನ್ನು ಪ್ರತಿ ವರ್ಷ ಏಪ್ರಿಲ್ 17ರಂದು ಹಮ್ಮಿಕೊಳ್ಳಲಾಗುತ್ತದೆ. ವಿಶ್ವ ಹಿಮೋಫಿಲಿಯಾ ಸಂಘಟನೆಯ ಸಂಸ್ಥಾಪಕ ಫ್ರ್ಯಾಂಕ್ ಶ್ಯಾನ್ ಬೆಲ್ನ ಸ್ಮರಣೆಯಲ್ಲಿ ಈ ದಿನವನ್ನು ಆಚರಿಸಲಾಗುತ್ತದೆ. 1989ರಿಂದ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗುತ್ತ್ದಿದು, ಜನರಲ್ಲಿ ಕುಸುಮ ರೋಗದ ಕುರಿತು ಜಾಗೃತಿ ಮೂಡಿಸುವುದು ಇದರ ಮುಖ್ಯ ಉದ್ದೇಶವಾಗಿದೆ. ಈ ರೋಗಕ್ಕೆ ಸಂಬಂಧಿಸಿದಂತೆ ಜನರಲ್ಲಿ ಇರುವ ತಪ್ಪು ಕಲ್ಪನೆ ಕೊನೆಗಾಣಿಸುವುದು ಸಂಘಟನೆಯ ಇನ್ನೊಂದು ಪ್ರಮುಖ ಉದ್ದೇಶ.

2007: ಖ್ಯಾತ ಕಾದಂಬರಿಕಾರ ತರಾಸು. ಅವರ ಪತ್ನಿ ಅಂಬುಜಾ ತರಾಸು (80) ಅವರು ಮೈಸೂರಿನ ಯಾದವಗಿರಿಯಲ್ಲಿನ ಗಿರಿಕನ್ನಿಕಾದಲ್ಲಿ ನಿಧನರಾದರು.

2007: ಭಾರತ ಸಂಜಾತೆ ಉಷಾ ಲೀ ಮೆಕ್ ಫಾರ್ಲಿಂಗ್ ಅವರನ್ನು ಒಳಗೊಂಡಿರುವ `ಲಾಸ್ ಏಂಜೆಲೀಸ್ ಟೈಮ್' ತಂಡಕ್ಕೆ ಪುಲಿಟ್ಜರ್ ಪ್ರಶಸ್ತಿ ಲಭಿಸಿತು.

2007: ಭಾರತೀಯ ಮೂಲದ ಅಮೆರಿಕನ್ ಗಗನಯಾನಿ ಸುನೀತಾ ವಿಲಿಯಮ್ಸ್ ಅವರು ಪೃಥ್ವಿಯಿಂದ 210 ಮೈಲಿ ದೂರದ ಬಾಹ್ಯಾಕಾಶದ ಅಟ್ಟಣಿಗೆಯಲ್ಲಿ ಟ್ರೆಡ್ ಮಿಲ್ (ನಡಿಗೆ ಯಂತ್ರ) ಮೇಲೆ ಓಡಿ ಬೋಸ್ಟನ್ ಮ್ಯಾರಥಾನ್ ಸ್ಪರ್ಧೆಯಲ್ಲಿ ಭಾಗವಹಿಸಿ ಯಶಸ್ವಿಯಾಗುವುದರೊಂದಿಗೆ ಮತ್ತೊಂದು ವಿಶಿಷ್ಟ ಸಾಧನೆ ಮಾಡಿದರು. ಬಾಹ್ಯಾಕಾಶ ಅಟ್ಟಣಿಗೆಯು ಗಂಟೆಗೆ ಎಂಟು ಮೈಲಿ ವೇಗದಲ್ಲಿ ದಿನಕ್ಕೆ ಎರಡು ಬಾರಿ ಭೂಪ್ರದಕ್ಷಿಣೆ ಮಾಡುವಾಗ ಸುನೀತಾ ಅವರು ಟ್ರಡ್ ಮಿಲ್ ನಲ್ಲಿ 4 ಗಂಟೆ 24 ನಿಮಿಷಗಳಲ್ಲಿ ಮ್ಯಾರಥಾನ್ ಗುರಿ ತಲುಪಿದರು. ಬೋಸ್ಟನ್ನಿನಲ್ಲಿ 24,000 ಸ್ಪರ್ಧಿಗಳು ಕೊರೆಯುವ ಚಳಿ ಹಾಗೂ ಇಬ್ಬನಿಯ ಪ್ರತಿಕೂಲ ವಾತಾವರಣದಲ್ಲಿ ಓಡುವ ಮೂಲಕ ಮ್ಯಾರಥಾನ್ ಓಟದಲ್ಲಿ ಪಾಲ್ಗೊಂಡರು.

2007: ಅಮೆರಿಕದ ಷೇರು ಕಂಪೆನಿಗಳನ್ನು ಬಯಲಿಗೆಳೆದ್ದಿದಕ್ಕಾಗಿ 2006ರಲ್ಲಿ ಸಾರ್ವಜನಿಕ ಸೇವಾ ಪ್ರಶಸ್ತಿಯೂ ಸೇರಿದಂತೆ ವಾಲ್ ಸ್ಟ್ರೀಟ್ ನಿಯತಕಾಲಿಕೆಯು ಎರಡು ಪುಲಿಟ್ಜರ್ ಪ್ರಶಸ್ತಿಗಳನ್ನು ಪಡೆಯಿತು.

2007: ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಈದಿನದಿಂದ ಜಾರಿಯಾಗುವಂತೆ ಬಿಹಾರ ಸರ್ಕಾರದ ಎಲ್ಲ ಸಿಬ್ಬಂದಿಗೆ 15 ದಿನಗಳ `ಪಿತೃತ್ವ ರಜೆ'ಗೆ ಅವಕಾಶ ಕಲ್ಪಿಸಿದರು. ಆದರೆ ಈ ಸವಲತ್ತು ಪಡೆಯಲು ಒಂದು ಕಠಿಣ ಷರತ್ತು ವಿಧಿಸಲಾಯಿತು. ಯಾರು ಕಡ್ಡಾಯವಾಗಿ ಇಬ್ಬರು ಮಕ್ಕಳನ್ನು ಹೊಂದಿರುತ್ತಾರೋ ಅವರಿಗಷ್ಟೇ ಈ ಸವಲತ್ತು ಲಭಿಸುತ್ತದೆ ಎಂಬುದೇ ಈ ಷರತ್ತು. ಅರ್ಹತಾ ಸಮಿತಿಯು ಕಳುಹಿಸಿದ ಪ್ರಸ್ತಾವದ ಬಗ್ಗೆ ಸುದೀರ್ಘ ಚರ್ಚೆಯ ಬಳಿಕ ಈ ನಿಟ್ಟಿನಲ್ಲಿ ಸರ್ಕಾರಿ ಆದೇಶವನ್ನು ಹೊರಡಿಸಲಾಯಿತು. ಮಹಿಳಾ ನೌಕರರ `ಮಾತೃತ್ವ ರಜೆ'ಯನ್ನು 90 ದಿನಗಳಿಂದ 135 ದಿನಗಳಿಗೆ ಏರಿಸಬೇಕು ಎಂಬುದಾಗಿ ಅರ್ಹತಾ ಸಮಿತಿಯು ಮಾಡಿದ ಸಲಹೆಗೂ ಸರ್ಕಾರ ಒಪ್ಪಿಗೆ ನೀಡಿತು. ಇದಕ್ಕೆ ಮುನ್ನ ಜನವರಿ 1ರಂದು ನಿತೀಶ್ ಕುಮಾರ್ ಸರ್ಕಾರವು ದೈನಂದಿನ ಕೆಲಸದ ಸಮಯವನ್ನು ಹೆಚ್ಚು ಮಾಡಿ ಐದು ದಿನಗಳ ಕೆಲಸದ ವಾರ ವ್ಯವಸ್ಥೆಯನ್ನು ಜಾರಿಗೆ ತಂದಿತ್ತು.
2007: ಏಪ್ರಿಲ್ 1ರಿಂದ ಜಾರಿಗೆ ಬರುವಂತೆ ಆನ್ ಲೈನ್ ಲಾಟರಿ, ಪೇಪರ್ ಲಾಟರಿ ಸೇರಿದಂತೆ ಎಲ್ಲ ಬಗೆಯ ಲಾಟರಿ ನಿಷೇಧಿಸಿ ಕರ್ನಾಟಕ ಸರ್ಕಾರವು ಮಾರ್ಚ್ 27ರಂದು ಹೊರಡಿಸಿದ್ದ ಅಧಿಸೂಚನೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿತು.

2006: ಇಪ್ಪತ್ತೈದು ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ನವದೆಹಲಿಯ ಚಿನ್ನದ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಅತ್ಯಂತ ಗರಿಷ್ಠ ಮಟ್ಟಕ್ಕೆ ಅಂದರೆ ಪ್ರತಿ 10 ಗ್ರಾಮಿಗೆ 9000 ರೂಪಾಯಿಗಳಿಗೆ, ಬೆಳ್ಳಿಯ ಬೆಲೆ ಪ್ರತಿ ಕಿ.ಗ್ರಾಂ.ಗೆ 20,000 ರೂಪಾಯಿಗಳಗೆ ಮುಟ್ಟಿತು.

2006: ದೇಶದ ಕ್ಷೀರ ಕ್ರಾಂತಿಯ ಹರಿಕಾರ ವರ್ಗೀಸ್ ಕುರಿಯನ್ ಅವರನ್ನು ಅಲಹಾಬಾದ್ ವಿಶ್ವವಿದ್ಯಾಲಯದ ಕುಲಪತಿಯನ್ನಾಗಿ ನೇಮಕ ಮಾಡಲಾಯಿತು.

2006: ನರ್ಮದಾ ಸರೋವರ ಅಣೆಕಟ್ಟೆಯ ನಿರ್ಮಾಣ ಕಾಮಗಾರಿ ಮತ್ತು ಅಣೆಕಟ್ಟೆ ನಿರ್ಮಾಣದಿಂದ ಮನೆಮಠ ಕಳೆದುಕೊಳ್ಳುವವರಿಗೆ ಪರಿಣಾಮಕಾರಿ ಪುನರ್ ವಸತಿ ಈ ಎರಡೂ ಕಾರ್ಯ ಜೊತೆ ಜೊತೆಯಾಗಿಯೇ ಸಾಗಬೇಕು ಎಂದು ಸುಪ್ರೀಂಕೋರ್ಟ್ ನಿರ್ದೇಶಿಸಿತು. ತೀರ್ಪಿನ ಬೆನ್ನಲ್ಲೇ ಸರ್ದಾರ್ ಸರೋವರ ಯೋಜನೆಯಲ್ಲಿ ಸಂತ್ರಸ್ತರಾಗುವ ಮಂದಿಗೆ ಸೂಕ್ತ ಪರಿಹಾರ ನೀಡುವುದರ ಜೊತೆಗೆ ಮರುವಸತಿ ಕಲ್ಪಿಸಬೇಕು ಎಂದು ಕೇಂದ್ರ ಸರ್ಕಾರವು ರಾಜ್ಯ ಸರ್ಕಾರಗಳಿಗೆ ಆದೇಶ ನೀಡಿತು.
2006: ನರ್ಮದಾ ಅಣೆಕಟ್ಟೆಯಿಂದ ನಿರಾಶ್ರಿತರಾದವರಿಗೆ ಪರಿಣಾಮಕಾರಿ ಪುನರ್ ವಸತಿ ಕಲ್ಪಿಸದೇ ಇದ್ದರೆ ಮೇ 1ರಿಂದ ಅಣೆಕಟ್ಟೆ ಕಾಮಗಾರಿ ನಿಲ್ಲಿಸುವುದಾಗಿ ಸುಪ್ರೀಂಕೋರ್ಟ್ ಎಚ್ಚರಿಕೆ ನೀಡಿದ್ದನ್ನು ಅನುಸರಿಸಿ ನರ್ಮದಾ ಬಚಾವೊ ಆಂದೋಲನದ ನಾಯಕಿ ಮೇಧಾ ಪಾಟ್ಕರ್ ತಮ್ಮ 20 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯಗೊಳಿಸಿದರು.

2006: ರಾಯ್ ಬರೇಲಿ ಲೋಕಸಭಾ ಕ್ಷೇತ್ರ ಉಪಚುನಾವಣೆಗೆ ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ ಕಾಂಗ್ರೆಸ್ ಅಭ್ಯರ್ಥಿಯಾಗಿ ರಾಯ್ ಬರೇಲಿಯಲ್ಲಿ ನಾಮಪತ್ರ ಸಲ್ಲಿಸಿದರು.

2006: ದೇಶದ ಮೊದಲ ಬೃಹತ್ ಜೈವಿಕ ತಂತ್ರಜ್ಞಾನ ಕೇಂದ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಬಯೋಕಾನ್ ಫಾರ್ಮಾಸ್ಯೂಟಿಕಲ್ಸ್ ಕೇಂದ್ರಕ್ಕೆ ಬೆಂಗಳೂರು ಹೊರವಲಯದ ಬೊಮ್ಮಸಂದ್ರ ಕೈಗಾರಿಕಾ ಪ್ರದೇಶದಲ್ಲಿ ಕೇಂದ್ರ ಹಣಕಾಸು ಸಚಿವ ಪಿ. ಚಿದಂಬರಂ ಚಾಲನೆ ನೀಡಿದರು.

2006: ಅಲಿಪ್ತ ಸದಸ್ಯ ರಾಷ್ಟ್ರಗಳ ಸುದ್ದಿ ಸಂಸ್ಥೆಗಳನ್ನು ಒಂದುಗೂಡಿಸಿ `ಅಲಿಪ್ತ ಸುದ್ದಿ ಸಂಸ್ಥೆ'ಯನ್ನು (ಎನ್ಎನ್ಎನ್) ಕ್ವಾಲಾಂಲಂಪುರದಲ್ಲಿ ಅಧಿಕೃತವಾಗಿ ಆರಂಭಿಸಲಾಯಿತು. ಜಗತ್ತಿಗೆ ಪರಿಣಾಮಕಾರಿಯಾಗಿ ತಮ್ಮ `ಕಥೆ' ಹೇಳಲು 114 ರಾಷ್ಟ್ರಗಳಿಗೆ ಅನುಕೂಲವಾಗುವಂತೆ ಈ ಮಾಧ್ಯಮವನ್ನು ಆರಂಭಿಸಲಾಯಿತು. ಮಲೇಷ್ಯಾದ `ಮೆದುಳಿನ ಕೂಸು' ಆಗಿರುವ ಈ ಸುದ್ದಿ ಸಂಸ್ಥೆಗೆ ಬೆರ್ನಾಮಾ ಎನ್ಎನ್ಎನ್ ಮುಖ್ಯಸ್ಥ ಮಲೇಷ್ಯನ್ ನ್ಯೂಸ್ ಏಜೆನ್ಸಿಯ ಬೆರ್ನಾಮ ಜಮೀಲ್ ಸೈಯದ್ ಜಾಫರ್ ಅವರೇ ಹಣಕಾಸು ಒದಗಿಸುವರು. ಇಂಟರ್ನೆಟ್ ಆಧಾರಿತ ಸಂಸ್ಥೆಯಾಗಿ ಇದು ಜೂನ್ ನಿಂದ ಕಾರ್ಯ ನಿರ್ವಹಿಸುವುದು ಎಂದು ಪ್ರಕಟಿಸಲಾಯಿತು.

2006: ದುಜೈಲ್ ಪಟ್ಟಣದಲ್ಲಿ 1982ರಲ್ಲಿ ಸದ್ದಾಂ ಹುಸೇನ್ ಅವರ ಹತ್ಯೆ ಯತ್ನ ನಡೆದ ಬಳಿಕ ನಡೆದ 148 ಶಿಯಾ ಮುಸ್ಲಿಮರ ಹತ್ಯೆ ಹಾಗೂ ಸೆರೆಮನೆಯಲ್ಲಿ ಅನೇಕರಿಗೆ ನೀಡಲಾದ ಚಿತ್ರಹಿಂಸೆಗೆ ಸಂಬಂಧಿಸಿದ ದಾಖಲೆಗಳಲ್ಲಿನ ಸಹಿ ಪದಚ್ಯುತ ಇರಾಕಿ ನಾಯಕ ಸದ್ದಾಂ ಹುಸೇನ್ ಅವರದ್ದೇ ಎಂದು ತಜ್ಞರು ದೃಢಪಡಿಸಿದರು. ಕೈಬರಹ ತಜ್ಞರ ವರದಿಯ ಪ್ರಕಾರ ಶಿಯಾ ಮುಸ್ಲಿಮರ ವಿರುದ್ಧದ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದ ಜಾಗೃತಾ ಏಜೆಂಟರಿಗೆ ಬಹುಮಾನಗಳನ್ನು ಮಂಜೂರು ಮಾಡಿದ ದಾಖಲೆಗಳಲ್ಲಿ ಇರುವ ಸಹಿ ಸದ್ದಾಂ ಹುಸೇನ್ ಅವರದೇ ಎಂದು ಖಚಿತಗೊಂಡಿದೆ ಎಂದು ಬಾಗ್ದಾದಿನಲ್ಲಿ ಪುನರಾರಂಭವಾದ ಸದ್ದಾಂ ಹುಸೇನ್ ಹಾಗೂ 7 ಸಹಚರರ ವಿಚಾರಣೆ ಕಾಲದಲ್ಲಿ ಪ್ರಾಸಿಕ್ಯೂಟರ್ಗಳು ತಿಳಿಸಿದರು.

1961: ಭಾರತದ ಬಿಲಿಯರ್ಡ್ಸ್ ಆಟಗಾರ ಗೀತ್ ಸೇಥಿ ಹುಟ್ಟಿದ ದಿನ. ಬಿಲಿಯರ್ಡ್ಸ್ ನಲ್ಲಿ ಇವರು ಒಟ್ಟು 7 ವಿಶ್ವ ಪ್ರಶಸ್ತಿಗಳನ್ನು ಪಡೆದುದಲ್ಲದೆ 1985ರಲ್ಲಿ ವಿಶ್ವ ಅಮೆಚೂರ್ ಬಿಲಿಯರ್ಡ್ಸ್ ಚಾಂಪಿಯನ್ ಶಿಪ್ ಗೆದ್ದ ಅತ್ಯಂತ ಕಿರಿಯ ಆಟಗಾರ ಎಂಬ ಹೆಸರು ಪಡೆದರು.

1916: ಸಿರಿಮಾವೋ ಬಂಡಾರನಾಯಕೆ ಜನ್ಮದಿನ. ಈಕೆ ಇಂದಿನ ಶ್ರೀಲಂಕೆಯ (ಆಗಿನ ಸಿಲೋನ್) 1960ರ ಮಹಾಚುನಾವಣೆಯಲ್ಲಿ ತನ್ನ ಪಕ್ಷದ ಭಾರೀ ವಿಜಯಕ್ಕೆ ಕಾರಣರಾಗಿ ಪ್ರಧಾನಿ ಸ್ಥಾನಕ್ಕೆ ಏರಿದರು. ಈಕೆಗೆ ಜಗತ್ತಿನಲ್ಲೇ ಮೊತ್ತ ಮೊದಲ ಮಹಿಳಾ ಪ್ರಧಾನಿ ಎಂಬ ಹೆಗ್ಗಳಿಕೆ ಬಂತು.

1894: ನಿಕಿಟ ಖ್ರುಶ್ಚೇವ್ (1894-1971) ಜನ್ಮದಿನ. ಸೋವಿಯತ್ ಒಕ್ಕೂಟದ ಪ್ರಧಾನಿಯಾಗಿದ್ದ ಇವರು ರಾಷ್ಟ್ರದ ಮೇಲಿದ್ದ ಸ್ಟಾಲಿನ್ ಪ್ರಭಾವವನ್ನು ನಿವಾರಿಸುವ ನೀತಿಗಳನ್ನು ಅನುಷ್ಠಾನಕ್ಕೆ ತಂದರು.

1799: ಬ್ರಿಟಿಷರು ಮತ್ತು ಟಿಪ್ಪು ಸುಲ್ತಾನ್ ಮಧ್ಯೆ ನಡೆದ 4ನೇ ಮೈಸೂರು ಯುದ್ಧದ ಸಂದರ್ಭದಲ್ಲಿ ಶ್ರೀರಂಗಪಟ್ಟಣಕ್ಕೆ ಮುತ್ತಿಗೆ ಹಾಕಲಾಯಿತು. ಮೇ 4ರಂದು ಟಿಪ್ಪು ಸುಲ್ತಾನ್ ಸಾವಿನೊಂದಿಗೆ ಈ ಮುತ್ತಿಗೆ ಕೊನೆಗೊಂಡಿತು.

(ಸಂಗ್ರಹ: ನೆತ್ರಕೆರೆ ಉದಯಶಂಕರ)

Wednesday, April 16, 2008

ಇಂದಿನ ಇತಿಹಾಸ History Today ಏಪ್ರಿಲ್ 16

ಇಂದಿನ ಇತಿಹಾಸ

ಏಪ್ರಿಲ್ 16

ಚೀನಾದ ಹಾಂಗ್ ಹುವಾ ಅಂತರರಾಷ್ಟ್ರೀಯ ಗಾಲ್ಫ್ ಕ್ಲಬ್ಬಿನಲ್ಲಿ ನಡೆದ ಅಂತಿಮ ಹಂತದ ವೋಲ್ವೊ ಚೀನಾ ಓಪನ್ ಗಾಲ್ಫ್ ಟೂರ್ನಿಯಲ್ಲಿ ಭಾರತದ ಜೀವ್ ಮಿಲ್ಕಾಸಿಂಗ್ ಚಾಂಪಿಯನ್ ಆಗಿ ಹೊರಹೊಮ್ಮಿದರು. ಕೊನೆಯ ಹಂತದ ಸ್ಪರ್ಧೆಯಲ್ಲಿ 71 ಸ್ಕೋರ್ ಗಳಿಸಿದ ಮಿಲ್ಕಾಸಿಂಗ್ ಒಟ್ಟು 278 ಸ್ಕೋರ್ ಗಳಿಕೆಯೊಂದಿಗೆ ಏಳುವರ್ಷಗಳ ಬಳಿಕ ಪ್ರಶಸ್ತಿ ಗೆದ್ದುಕೊಂಡರು. ಐರೋಪ್ಯ ಪ್ರವಾಸದಲ್ಲಿ ಜೀವ್ ಗೆದ್ದ ಚೊಚ್ಚಲ ಪ್ರಶಸ್ತಿ ಇದು. ಚಂಡೀಗಢದ ಈ ಗಾಲ್ಫರ್ 1999ರಲ್ಲಿ ಮೊದಲ ಬಾರಿಗೆ ಪ್ರಶಸ್ತಿ ಗೆದ್ದಿದ್ದರು.


2007: ಖ್ಯಾತ ಹಿನ್ನೆಲೆ ಗಾಯಕರಾದ ಡಾ. ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರಿಗೆ 2007ನೇ ಸಾಲಿನ ಬಸವಶ್ರೀ ಪ್ರಶಸ್ತಿ ನೀಡಲು ಬಸವ ವೇದಿಕೆ ನಿರ್ಧರಿಸಿತು.

2007: ನಾಲ್ಕು ದಶಕಗಳ ಹಿಂದೆ ವಿಯೆಟ್ನಾಮ್ ಸಮರ ಕಾಲದಲ್ಲಿ ಅಮೆರಿಕ ಪಡೆಗಳ ಗುಂಡೇಟಿಗೆ ತುತ್ತಾಗಿದ್ದ ವಿಯೆಟ್ನಾಮೀ ಯೋಧ ಡಿನ್ಹ್ ಹಂಗ್ ಅವರ ಎದೆಯಲ್ಲಿ ಉಳಿದಿದ್ದ ಗುಂಡನ್ನು ಸುಮಾರು 40 ವರ್ಷಗಳ ಬಳಿಕ ವಿಯೆಟ್ನಾಮಿನ ಹನೋಯಿಯಲ್ಲಿನ ಹೃದ್ರೋಗ ಆಸ್ಪತ್ರೆಯಲ್ಲಿ ವೈದ್ಯರು ಶಸ್ತ್ರಚಿಕಿತ್ಸೆ ನಡೆಸಿ ಹೊರತೆಗೆದರು.

2007: ಅಮೆರಿಕದ ವರ್ಜೀನಿಯಾ ತಾಂತ್ರಿಕ (ಟೆಕ್) ವಿಶ್ವವಿದ್ಯಾಲಯ ಕ್ಯಾಂಪಸ್ಸಿನಲ್ಲಿ ಕೊರಿಯಾದ ವಿದ್ಯಾರ್ಥಿ ಚೊ ಸೆಯುಂಗ್ ಹೊ ಎಂಬಾತ ಎರಡು ಗಂಟೆಗಳ ಅಂತರದಲ್ಲಿ ಎರಡು ಬಾರಿ ದಾಳಿ ನಡೆಸಿ ಯದ್ವಾತದ್ವ ಗುಂಡು ಹಾರಿಸಿದ ಪರಿಣಾಮವಾಗಿ ಭಾರತೀಯ ಮೂಲದ ಪ್ರಾಧ್ಯಾಪಕ ಪ್ರೊ. ಜಿ.ವಿ. ಲೋಕನಾಥನ್ (51) ಸಹಿತ ಇಬ್ಬರು ಭಾರತೀಯರು ಸೇರಿದಂತೆ 33 ಅಮಾಯಕರು ಮೃತರಾಗಿ ಇತರ 22 ಮಂದಿ ಗಾಯಗೊಂಡರು. ಅಮೆರಿಕದ ಇತಿಹಾಸದಲ್ಲೇ ವಿವಿ ಕ್ಯಾಂಪಸ್ಸಿನಲ್ಲಿ ನಡೆದ ಭೀಕರ ಹತ್ಯಾಕಾಂಡ ಇದು. 1872ರಲ್ಲಿ ಆರಂಭವಾದ ಈ ವಿಶ್ವವಿದ್ಯಾಲಯದಲ್ಲಿ 100 ದೇಶಗಳ 26,000 ವಿದ್ಯಾರ್ಥಿಗಳು ಅಧ್ಯಯನ ಮಾಡುತ್ತಾರೆ. ಅವರಲ್ಲಿ ಭಾರತೀಯ ವಿದ್ಯಾರ್ಥಿಗಳ ಸಂಖ್ಯೆಯೇ 500ರಷ್ಟು.

2007: ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಇತರ ಹಿಂದುಳಿದ ವರ್ಗಗಳಿಗೆ (ಒಬಿಸಿ) ಶೇಕಡಾ 27ರಷ್ಟು ಮೀಸಲಾತಿ ಅನುಷ್ಠಾನದ ಮೇಲಿನ ತಡೆಯಾಜ್ಞೆಯನ್ನು ತೆರವುಗೊಳಿಸುವಂತೆ ಕೋರಿ ಸುಪ್ರೀಂಕೋರ್ಟಿಗೆ ಅರ್ಜಿ ಸಲ್ಲಿಸಿದ ಕೇಂದ್ರ ಸರ್ಕಾರವು ಈ ವಿಷಯದ ವಿಚಾರಣೆಗಾಗಿ ಪಂಚ ಸದಸ್ಯ ಸಂವಿಧಾನ ಪೀಠ ರಚಿಸುವಂತೆ ಮನವಿ ಮಾಡಿತು. ಕೇಂದ್ರ ಸರ್ಕಾರ ರಚಿಸಿದ ಕಾಯ್ದೆಯಲ್ಲಿ ಇತರ ಹಿಂದುಳಿದ ವರ್ಗಗಳಿಗೆ ಮೀಸಲಾತಿ ಕಲ್ಪಿಸುವ ವಿಧಿಗೆ ಸುಪ್ರೀಂಕೋರ್ಟ್ ತಡೆಯಾಜ್ಞೆ ನೀಡಿದ 15 ದಿನಗಳ ಬಳಿಕ `ಸ್ಪಷ್ಟೀಕರಣ ಅರ್ಜಿ' ಸಲ್ಲಿಸಿದ ಸರ್ಕಾರವು ಮೀಸಲಾತಿಯ ಲಾಭದಿಂದ `ಕೆನೆ ಪದರ' (ಹಿಂದುಳಿದವರಲ್ಲಿ ಆರ್ಥಿಕವಾಗಿ ಮುಂದುವರೆದವರು) ವರ್ಗವನ್ನು ಹೊರತುಪಡಿಸಬೇಕು ಎಂಬ ನ್ಯಾಯಾಲಯದ ಸೂಚನೆಯನ್ನೂ ವಿರೋಧಿಸಿತು. ಮಂಡಲ ಪ್ರಕರಣ ಎಂದೇ ಖ್ಯಾತಿ ಪಡೆದ ಇಂದ್ರಾ- ಸಾಹ್ನಿ ಪ್ರಕರಣದಲ್ಲಿ ಒಂಬತ್ತು ಸದಸ್ಯರ ಸಂವಿಧಾನ ಪೀಠವು ನೀಡಿರುವ ತೀರ್ಪಿನಲ್ಲಿ ಇತರ ಹಿಂದುಳಿದ ವರ್ಗಗಳಿಗೆ ಮೀಸಲಾತಿಯನ್ನು ಎತ್ತಿ ಹಿಡಿಯಲಾಗಿದ್ದು ಈ ತೀರ್ಮಾನ ಅರ್ಜಿದಾರರು, ಸರ್ಕಾರ, ಈ ನ್ಯಾಯಾಲಯದ ದ್ವಿ ಸದಸ್ಯ ಪೀಠ ಸೇರಿದಂತೆೆ ಎಲ್ಲರಿಗೂ ಅನ್ವಯಿಸುತ್ತದೆ ಎಂದೂ ಸರ್ಕಾರವು ತನ್ನ ಅರ್ಜಿಯಲ್ಲಿ ಪ್ರತಿಪಾದಿಸಿತು.

2006: ಚೀನಾದ ಹಾಂಗ್ ಹುವಾ ಅಂತರರಾಷ್ಟ್ರೀಯ ಗಾಲ್ಫ್ ಕ್ಲಬ್ಬಿನಲ್ಲಿ ನಡೆದ ಅಂತಿಮ ಹಂತದ ವೋಲ್ವೊ ಚೀನಾ ಓಪನ್ ಗಾಲ್ಫ್ ಟೂರ್ನಿಯಲ್ಲಿ ಭಾರತದ ಜೀವ್ ಮಿಲ್ಕಾಸಿಂಗ್ ಚಾಂಪಿಯನ್ ಆಗಿ ಹೊರಹೊಮ್ಮಿದರು. ಕೊನೆಯ ಹಂತದ ಸ್ಪರ್ಧೆಯಲ್ಲಿ 71 ಸ್ಕೋರ್ ಗಳಿಸಿದ ಮಿಲ್ಕಾಸಿಂಗ್ ಒಟ್ಟು 278 ಸ್ಕೋರ್ ಗಳಿಕೆಯೊಂದಿಗೆ ಏಳುವರ್ಷಗಳ ಬಳಿಕ ಪ್ರಶಸ್ತಿ ಗೆದ್ದುಕೊಂಡರು. ಐರೋಪ್ಯ ಪ್ರವಾಸದಲ್ಲಿ ಜೀವ್ ಗೆದ್ದ ಚೊಚ್ಚಲ ಪ್ರಶಸ್ತಿ ಇದು. ಚಂಡೀಗಢದ ಈ ಗಾಲ್ಫರ್ 1999ರಲ್ಲಿ ಮೊದಲ ಬಾರಿಗೆ ಪ್ರಶಸ್ತಿ ಗೆದ್ದಿದ್ದರು.

2006: ಲಾಹೋರ್ ಬಳಿಯ ನಾಂಖನಾ ಸಾಹಿಬ್ ನ ಹರಚರಣ್ ಸಿಂಗ್ ಪಾಕಿಸ್ತಾನ ಸೇನೆಯಲ್ಲಿ ಕಮೀಷನ್ಡ್ ದರ್ಜೆಗೆ ಮೊತ್ತ ಮೊದಲ ಬಾರಿಗೆ ನೇಮಕಗೊಂಡ ಸಿಖ್ ಅಧಿಕಾರಿ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಕಳೆದ ವರ್ಷ ಸುಪ್ರೀಂಕೋರ್ಟ್ ಮುಖ್ಯನ್ಯಾಯಮೂರ್ತಿ ಇಫ್ತಿಕಾರ್ ಮೊಹಮ್ಮದ್ ಚೌಧರಿ ವಿದೇಶ ಪ್ರವಾಸಕ್ಕೆ ಹೋಗಿದ್ದ ಸಂದರ್ಭದಲ್ಲಿ ನ್ಯಾಯಮೂರ್ತಿ ಭಗವಾನದಾಸ್ ಅವರನ್ನು ಮುಖ್ಯ ನ್ಯಾಯಮೂರ್ತಿಯಾಗಿ ನೇಮಿಸುವುದರೊಂದಿಗೆ ಹಿಂದು ಒಬ್ಬರು ಪಾಕಿಸ್ತಾನದಲ್ಲಿ ಇತಿಹಾಸ ನಿರ್ಮಿಸಿದಂತಾಗಿತ್ತು.

2006: ದುಜೈಲ್ ಪಟ್ಟಣದಲ್ಲಿ 1982ರಲ್ಲಿ ಸದ್ದಾಂ ಹುಸೇನ್ ಅವರ ಹತ್ಯೆ ಯತ್ನ ನಡೆದ ಬಳಿಕ ನಡೆದ 148 ಶಿಯಾ ಮುಸ್ಲಿಮರ ಹತ್ಯೆ ಹಾಗೂ ಸೆರೆಮನೆಯಲ್ಲಿ ಅನೇಕರಿಗೆ ನೀಡಲಾದ ಚಿತ್ರಹಿಂಸೆಗೆ ಸಂಬಂಧಿಸಿದ ದಾಖಲೆಗಳಲ್ಲಿನ ಸಹಿ ಪದಚ್ಯುತ ಇರಾಕಿ ನಾಯಕ ಸದ್ದಾಂ ಹುಸೇನ್ ಅವರದ್ದೇ ಎಂದು ತಜ್ಞರು ದೃಢಪಡಿಸಿದರು. ಕೈಬರಹ ತಜ್ಞರ ವರದಿಯ ಪ್ರಕಾರ ಶಿಯಾ ಮುಸ್ಲಿಮರ ವಿರುದ್ಧದ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದ ಜಾಗೃತಾ ಏಜೆಂಟರಿಗೆ ಬಹುಮಾನಗಳನ್ನು ಮಂಜೂರು ಮಾಡಿದ ದಾಖಲಗಳಲ್ಲಿ ಇರುವ ಸಹಿ ಸದ್ದಾಂ ಹುಸೇನ್ ಅವರದೇ ಎಂದು ಖಚಿತಗೊಂಡಿದೆ ಎಂದು ಬಾಗ್ದಾದಿನಲ್ಲಿ ಪುನರಾರಂಭವಾದ ಸದ್ದಾಂ ಹುಸೇನ್ ಹಾಗೂ 7 ಸಹಚರರ ವಿಚಾರಣೆ ಕಾಲದಲ್ಲಿ ಪ್ರಾಸಿಕ್ಯೂಟರ್ ಗಳು ಈ ವಿಚಾರವನ್ನು ತಿಳಿಸಿದರು.

1975: ಭಾರತದ ವಿದ್ವಾಂಸ ಹಾಗೂ ಮುತ್ಸದ್ದಿ ಸರ್ವಪಲ್ಲಿ ರಾಧಾಕೃಷ್ಣನ್ ಅವರು ತಮ್ಮ 86ನೇ ವಯಸ್ಸಿನಲ್ಲಿ ಮದ್ರಾಸಿನಲ್ಲಿ ನಿಧನರಾದರು. 1962-1967ರ ಅವಧಿಯಲ್ಲಿ ಅವರು ಭಾರತದ ರಾಷ್ಟ್ರಪತಿಯಾಗಿದ್ದರು.

1912: ಅಮೆರಿಕಾದ ವಿಮಾನಯಾನಿ ಹ್ಯಾರಿಯೆಟ್ ಕ್ವಿಂಬೆ ಅವರು 50 ಹಾರ್ಸ್ ಪವರ್ ಮಾನೋಪ್ಲೇನ್ ಮೂಲಕ ಇಂಗ್ಲಿಷ್ ಕಡಲ್ಗಾಲುವೆ ದಾಟಿದ ಮೊತ್ತ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾದರು. 59 ನಿಮಿಷಗಳ ಹಾರಾಟದ ಬಳಿಕ ಕ್ವಿಂಬೆ ಅವರು ಫ್ರಾನ್ಸಿನ ಹಾರ್ಡೆಲೊಟ್ ಸಮೀಪ ಇಳಿದರು.

1889: ಚಾರ್ಲ್ಸ್ ಸ್ಪೆನ್ಸರ್ ಚಾಪ್ಲಿನ್ (1889-1977) ಹುಟ್ಟಿದ ದಿನ. ಬ್ರಿಟಿಷ್ ಸಂಜಾತ ಅಮೆರಿಕನ್ ಚಿತ್ರನಟ, ನಿರ್ದೇಶಕರಾದ ಇವರು ಮೂಕಿ ಚಿತ್ರಗಳ ಮೂಲಕ ಅಂತರರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಪಡೆದಿದ್ದರು.

1881: ಇರ್ವಿನ್ (1881-1959) ಹುಟ್ಟಿದ ದಿನ. ಇವರು 1925-1931ರ ಅವದಿಯಲ್ಲಿ ಭಾರತದ ವೈಸ್ ರಾಯ್ ಆಗಿದ್ದರು.

1867: ವಿಲ್ಬರ್ ರೈಟ್ (1867-1912) ಹುಟ್ಟಿದ ದಿನ. ಅಮೆರಿಕಾದ ಸಂಶೋಧಕ ಹಾಗೂ ಮುಂಚೂಣಿಯ ವಿಮಾನಯಾನಿಯಾದ ಈತ ತನ್ನ ಸಹೋದರ ಓರ್ವಿಲ್ ಜೊತೆಗೆ ಮೊತ್ತ ಮೊದಲ ವಿಮಾನ ಹಾರಾಟ ನಡೆಸಿದ.

1853: ಬಾಂಬೆಯ (ಈಗಿನ ಮುಂಬೈ) ಬೋರೀ ಬಂದರಿನಿಂದ ಟಣ್ಣ (ಈಗಿನ ಥಾಣೆ)ವರೆಗೆ 400 ಜನರನ್ನು ಹೊತ್ತ 14 ಬೋಗಿಗಳು ಸಂಚರಿಸುವುದರೊಂದಿಗೆ ಭಾರತಕ್ಕೆ ರೈಲ್ವೆಯ ಆಗಮನವಾಯಿತು. ಬಾಂಬೆ-ಟಣ್ಣ ಮಧ್ಯೆ ದಿ ಗ್ರೇಟ್ ಇಂಡಿಯನ್ ಪೆನಿನ್ ಸ್ಯುಲರ್ (ಜಿಐಪಿ) ರೈಲ್ವೆಯು 34 ಕಿ.ಮೀ. ಉದ್ದದ ಹಳಿಯನ್ನು ನಿರ್ಮಿಸಿತ್ತು. ಈ ದಿನವನ್ನು ರಜಾದಿನವಾಗಿ ಆಚರಿಸಲಾಯಿತು. ರೈಲುಸಂಚಾರದ ಹೊಸ `ಘಟನೆ'ಯನ್ನು ನೋಡಲು ಸಹಸ್ರಾರು ಮಂದಿ ರೈಲ್ವೆ ಹಳಿಗಳ ಉದ್ದಕ್ಕ್ಕೂ ಸಾಲುಗಟ್ಟಿ ನಿಂತಿದ್ದರು. 21 ಸುತ್ತಿನ ಗನ್ ಸೆಲ್ಯೂಟ್ ಹಾಗೂ ಗವರ್ನರ್ ಬ್ಯಾಂಡ್ ಸೆಟ್ ಸಂಗೀತದ ಮಧ್ಯೆ ಮಧ್ಯಾಹ್ನ 3.35 ಗಂಟೆಗೆ ರೈಲು ಚಲಿಸಿತು. 34 ಕಿ.ಮೀ. ದೂರದ ಪಯಣಕ್ಕೆ 57 ನಿಮಿಷ ಬೇಕಾಯಿತು. ಮರುದಿನ ಜಿಐಪಿ ನಿರ್ದೇಶಕ ಸರ್ ಜೆಮ್ ಸೆಟ್ ಜಿ ಜೀಜೆಭಾಯ್ ಇಡೀ ರೈಲುಗಾಡಿಯನ್ನು ರಿಸರ್ವ್ ಮಾಡಿಸಿ ತಮ್ಮ ಕುಟುಂಬದೊಂದಿಗೆ ಮುಂಬೈಯಿಂದ ಥಾಣೆಗೆ ಪಯಣಿಸಿ ಅದರಲ್ಲೇ ವಾಪಸಾದರು.

1838: ಅರ್ನೆಸ್ಟ್ ಸಾಲ್ವೆ (1838-1922) ಹುಟ್ಟಿದ ದಿನ. ಬೆಲ್ಜಿಯಂನ ಕೈಗಾರಿಕಾ ರಾಸಾಯನಿಕ ತಜ್ಞನಾದ ಈತ ವಾಣಿಜ್ಯ ಪ್ರಮಾಣದಲ್ಲಿ ಸೋಡಾ ಪುಡಿ ಉತ್ಪಾದಿಸಲು ಬಳಸಲಾಗುವ ಅಮೋನಿಯಾ ಸೋಡಾ ಪ್ರಕ್ರಿಯೆಯನ್ನು ಅಭಿವೃದ್ಧಿ ಪಡಿಸಿದ.

(ಸಂಗ್ರಹ: ನೆತ್ರಕೆರೆ ಉದಯಶಂಕರ)

Tuesday, April 15, 2008

ಇಂದಿನ ಇತಿಹಾಸ History Today ಏಪ್ರಿಲ್ 15

ಇಂದಿನ ಇತಿಹಾಸ

ಏಪ್ರಿಲ್ 15

ಹಾಲಿವುಡ್ ನಟ ರಿಚರ್ಡ್ ಗೇರ್ ಅವರು ನವದಹಲಿಯಲ್ಲಿ ನಡೆದ ಎಚ್ಐವಿ - ಏಡ್ಸ್ ಜಾಗೃತಿ ಕಾರ್ಯಕ್ರಮದಲ್ಲಿ ವೇದಿಕೆಯ ಮೇಲೆ ಬಹಿರಂಗವಾಗಿ ಕಾರ್ಯಕ್ರಮ ನಿರ್ವಹಿಸುತ್ತಿದ್ದ ಬಾಲಿವುಡ್ ನಟಿ ಶಿಲ್ಪಾಶೆಟ್ಟಿ ಅವರನ್ನು ಬರಸೆಳೆದು ಬಿಗಿದಪ್ಪಿ ಗಲ್ಲಕ್ಕೆ ಚುಂಬಿಸಿದರು. ಈ ಘಟನೆ ದೊಡ್ಡ ರಾದ್ಧಾಂತಕ್ಕೆ ಕಾರಣವಾಗಿ ಗೇರ್ ವಿರುದ್ಧ ನ್ಯಾಯಾಲಯದಲ್ಲಿ ಪ್ರಕರಣ ಕೂಡಾ ದಾಖಲಾಯಿತು.

2007: ಬಾಲನಟ ವಿನಾಯಕ ಜೋಶಿ ಅವರ ತಂದೆ ನಿರ್ಮಾಪಕ ವಾಸುದೇವ ಜೋಶಿ (52) ಅವರು ಮೂತ್ರಪಿಂಡ ವೈಫಲ್ಯದ ಕಾರಣ ಬೆಂಗಳೂರಿನಲ್ಲಿ ನಿಧನರಾದರು. ಉದ್ಯಮಿಯಾಗಿದ್ದ ಅವರು ತಮ್ಮ ಏಕೈಕ ಪುತ್ರ ವಿನಾಯಕ ಜೋಶಿಯನ್ನು ನಾಯಕ ನಟನನ್ನಾಗಿ ಮಾಡಲು `ನನ್ನ ಕನಸಿನ ಹೂವೆ' ಚಿತ್ರ ನಿರ್ಮಿಸಿದ್ದರು. ಇಂಡಿಯಾ ಫೌಂಡೇಷನ್ನಿನ ಟ್ರಕ್ಕರ್ಸ್ ಕಾರ್ಪೊರೇಷನ್ ಮತ್ತು ಎಚ್ ಐ ವಿ - ಏಡ್ಸ್ ಸಲಹಾ ಸಂಸ್ಥೆಗಳು ಜಂಟಿಯಾಗಿ ಈ ಕಾರ್ಯಕ್ರಮ ಸಂಘಟಿಸಿದ್ದವು.

2007: ಬಹು ನಿರೀಕ್ಷಿತ ಬೆಂಗಳೂರು ಮೆಟ್ರೊ ರೈಲು ಯೋಜನೆ ಸಿವಿಲ್ ಕಾಮಗಾರಿಗೆ ಮಹಾತ್ಮ ಗಾಂಧಿ ರಸ್ತೆಯಲ್ಲಿ ಚಾಲನೆ ನೀಡಲಾಯಿತು.

2007: ಅಖಿಲ ಭಾರತೀಯ ವೈದ್ಯಕೀಯ ವಿಜ್ಞಾನ ಸಂಸ್ಥೆಯ ವೈದ್ಯರು ಒಂದೇ ಕಾರ್ನಿಯಾ ಬಳಸಿ ಮೂವರಿಗೆ ದೃಷ್ಟಿ ನೀಡುವ ಮೂಲಕ ವಿಶ್ವದ ನೇತ್ರ ಚಿಕಿತ್ಸಾ ಕ್ಷೇತ್ರದಲ್ಲಿ ಮಹತ್ವದ ಸಾಧನೆ ಮಾಡಿದರು. ಏಮ್ಸ್ ನ ಜೆ.ಎಸ್. ತಿತಿಯಾಲ್ ಮತ್ತು ನಾಸಿಕದ ಡಾ. ರಸಿಕ್ ವಾಜಪೇಯಿ ನೇತೃತ್ವದ ವೈದ್ಯರ ತಂಡ ಈ ಸಾಧನೆ ಮಾಡಿತು. ಹೃದಯಾಘಾತದಿಂದ ಮೃತನಾದ 44 ವರ್ಷದ ವ್ಯಕ್ತಿಯ ಕಣ್ಣಿನ ಕಾರ್ನಿಯಾವನ್ನು (ಕಣ್ಣು ಗುಡ್ಡೆಯ ಪಾರದರ್ಶಕ ಭಾಗ) ಮೂರು ಭಾಗಗಳಾಗಿ ಕತ್ತರಿಸಿ ಮೂವರು ರೋಗಿಗಳಿಗೆ ಅಳವಡಿಸಲಾಯಿತು. ಮೂರು ತಿಂಗಳ ಸತತ ಚಿಕಿತ್ಸೆಯ ಬಳಿಕ ಮೂವರಿಗೂ ದೃಷ್ಟಿ ಬಂತು.

2007: ಹಾಲಿವುಡ್ ನಟ ರಿಚರ್ಡ್ ಗೇರ್ ಅವರು ನವದಹಲಿಯಲ್ಲಿ ನಡೆದ ಎಚ್ಐವಿ - ಏಡ್ಸ್ ಜಾಗೃತಿ ಕಾರ್ಯಕ್ರಮದಲ್ಲಿ ವೇದಿಕೆಯ ಮೇಲೆ ಬಹಿರಂಗವಾಗಿ ಕಾರ್ಯಕ್ರಮ ನಿರ್ವಹಿಸುತ್ತಿದ್ದ ಬಾಲಿವುಡ್ ನಟಿ ಶಿಲ್ಪಾಶೆಟ್ಟಿ ಅವರನ್ನು ಬರಸೆಳೆದು ಬಿಗಿದಪ್ಪಿ ಗಲ್ಲಕ್ಕೆ ಚುಂಬಿಸಿದರು. ಈ ಘಟನೆ ದೊಡ್ಡ ರಾದ್ಧಾಂತಕ್ಕೆ ಕಾರಣವಾಗಿ ಗೇರ್ ವಿರುದ್ಧ ನ್ಯಾಯಾಲಯದಲ್ಲಿ ಪ್ರಕರಣ ಕೂಡಾ ದಾಖಲಾಯಿತು.

2007: ಖ್ಯಾತ ಸಂಗೀತಗಾರ ಹಾಗೂ ಗಾಯಕಿ ಲತಾ ಮಂಗೇಶ್ಕರ್ ಅವರ ಸಹೋದರ ಹೃದಯನಾಥ್ ಮಂಗೇಶ್ಕರ್ ಅವರಿಗೆ ಪ್ರತಿಷ್ಠಿತ ಲತಾ ಮಂಗೇಶ್ಕರ್ ಪ್ರಶಸ್ತಿ ಪ್ರದಾನ ಮಾಡಲಾಯಿತು. ಮಧ್ಯಪ್ರದೇಶದ ಲೋಕೋಪಯೋಗಿ ಸಚಿವ ಕೈಲಾಶ್, ಸಂಸ್ಕೃತಿ ಸಚಿವ ಲಕ್ಷ್ಮಿಕಾಂತ್ ಶರ್ಮಾ ಹಾಗೂ ಸಂಸದೆ ಸುಮಿತ್ರಾ ಮಹಾಜನ್ ಅವರು ಇಂದೋರಿನಲ್ಲಿ ಹೃದಯನಾಥ್ ಮಂಗೇಶ್ಕರ್ ಅವರನ್ನು ಒಂದು ಲಕ್ಷ ರೂ. ನಗದು, ಪ್ರಶಸ್ತಿ ನೀಡಿ ಗೌರವಿಸಿದರು. 1937 ಅಕ್ಟೋಬರ್ 26ರಂದು ಜನಿಸಿದ ಹೃದಯನಾಥ್ ಪ್ರಸಿದ್ಧ ಸಂಗೀತಗಾರ ಹಾಗೂ ನಾಟಕಕಾರರಾದ ದೀನನಾಥ್ ಮಂಗೇಶ್ಕರ್ ಅವರ ಪುತ್ರ. ಪ್ರಸಿದ್ಧ ಹಿನ್ನೆಲೆ ಗಾಯಕಿಯರಾದ ಲತಾ ಮಂಗೇಶ್ಕರ್ ಹಾಗೂ ಆಶಾ ಭೋಂಸ್ಲೆ ಹೃದಯನಾಥ್ ಅವರ ಸಹೋದರಿಯರು. ಲತಾ ಸಹೋದರಿ ಆಶಾ ಭೋಂಸ್ಲೆ ಸೇರಿದಂತೆ ನೌಷದ್, ಕಿಶೋರ್ ಕುಮಾರ್, ಅನಿಲ್ ವಿಶ್ವಾಸ್, ಮನ್ನಾ ಡೇ, ಆರ್.ಡಿ. ಬರ್ಮನ್, ಲಕ್ಷ್ಮಿಕಾಂತ್ ಪ್ಯಾರೇಲಾಲ್, ಕಲ್ಯಾಣ್ ಜೀ ಆನಂದಜೀ, ಜಗಜಿತ್ ಸಿಂಗ್, ಭೂಪೇನ್ ಹಜಾರಿಕಾ ಅವರು ಇದುವರೆಗೂ ಈ ಪ್ರಶಸ್ತಿಗೆ ಬಾಜನರಾಗಿದ್ದಾರೆ.

2007: ಕಾವೇರಿ ಜಲ ವಿವಾದ ನ್ಯಾಯ ಮಂಡಳಿಗೆ ಪುನರ್ ಪರಿಶೀಲನಾ ಅರ್ಜಿ ಸಲ್ಲಿಸಲು ಮತ್ತು ಜಟಿಲ ಕಾವೇರಿ ಜಲ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟಿಗೆ ಹೋಗುವ ಆಯ್ಕೆಯನ್ನು ಮುಕ್ತವಾಗಿ ಇರಿಸಲು ತಮಿಳುನಾಡು ಸಕರ್ಾರ ಚೆನ್ನೈಯಲ್ಲಿ ಕರೆದಿದ್ದ ಸರ್ವ ಪಕ್ಷಗಳ ಸಭೆ ನಿರ್ಧರಿಸಿತು. ತಮಿಳುನಾಡು ಮುಖ್ಯಮಂತ್ರಿ ಎಂ. ಕರುಣಾನಿಧಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆ ಮೊದಲ ಹೆಜ್ಜೆಯಾಗಿ ಕಾವೇರಿ ಜಲ ವಿವಾದ ನ್ಯಾಯಮಂಡಳಿಯ ಎದುರು ಪುನರ್ ಪರಿಶೀಲನಾ ಅರ್ಜಿ ಸಲ್ಲಿಸಲು ತೀರ್ಮಾನಿಸಿತು.

2006: ಇಂದೋರಿನಲ್ಲಿ ನಡೆದ ಏಳನೇ ಏಕದಿನ ಕ್ರಿಕೆಟ್ ಪಂದ್ಯದಲ್ಲಿ ಭಾರತವು ಇಂಗ್ಲೆಂಡ್ ವಿರುದ್ಧ 7 ವಿಕೆಟ್ಗಳ ಅಂತರದ ಭರ್ಜರಿ ಜಯ ಸಾಧಿಸಿತು.

2006: ತೀವ್ರ ವಿವಾದಕ್ಕೆ ಕಾರಣವಾಗಿರುವ ಸರ್ದಾರ ಸರೋವರ ಅಣೆಕಟ್ಟೆ ಎತ್ತರ ಹೆಚ್ಚಿಸುವ ನಿರ್ಧಾರದ ಹೊಣೆಯನ್ನು ಕೇಂದ್ರ ಸರ್ಕಾರವು ಸುಪ್ರೀಂಕೋರ್ಟಿಗೆ ವರ್ಗಾಯಿಸಿತು. ಅಣೆಕಟ್ಟೆ ಎತ್ತರ ಹೆಚ್ಚಳ ಪ್ರಸ್ತಾವ ಕೈಬಿಟ್ಟ ಕೇಂದ್ರದ ನಿರ್ಧಾರ ವಿರೋಧಿಸಿ 51 ಗಂಟೆಗಳ ನಿರಶನ ಆರಂಭಿಸಲು ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ನಿರ್ಧರಿಸಿದರು.

2006: ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ನೇತೃತ್ವದ ಶಾಸಕರ ಬಣಕ್ಕೆ ವಿದಿಸಿದ್ದ ಬಹಿಷ್ಕಾರ ಶಿಕ್ಷೆಯನ್ನು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು ಹಿಂತೆಗೆದುಕೊಂಡು, ಪಕ್ಷದ ಕಚೇರಿಯಲ್ಲಿ ಎಲ್ಲ ಶಾಸಕರ ಸಭೆ ನಡೆಸಿದರು.

1986: ಅಂಟಿಗುವಾದಲ್ಲಿ ಇಂಗ್ಲೆಂಡ್ ವಿರುದ್ಧ ನಡೆದ ಪಂದ್ಯದಲ್ಲಿ ವಿವಿಯನ್ ರಿಚರ್ಡ್ಸ್ಸ್ ಅತಿ ವೇಗದ ಟೆಸ್ಟ್ ಶತಕ ಬಾರಿಸಿದರು. 56 ಬಾಲ್ ಗಳಿಗೆ ಅವರು ಈ ಶತಕ ಸಿಡಿಸಿದರು.

1980: ತತ್ವಜ್ಞಾನಿ ಜೀನ್-ಪೌಲ್-ಸಾರ್ತ್ರೆ ತನ್ನ 74ನೇ ವಯಸಿನಲ್ಲಿ ಪ್ಯಾರಿಸ್ಸಿನಲ್ಲಿ ಮೃತನಾದ.

1975: ಕಲಾವಿದ ಬಿ.ಜಿ. ವಿನುತ ಜನನ.

1963: ಮಾಜಿ ಕ್ರಿಕೆಟ್ ಆಟಗಾರ ಮನೋಜ್ ಪ್ರಭಾಕರ್ ಹುಟ್ಟಿದ ದಿನ.

1962: ಕಲಾವಿದ ಸದಾಶಿವ ಪಾಟೀಲ ಜನನ.

1955: ಷಿಕಾಗೊವಿನ ಡೆ ಪ್ಲೈನ್ ಸನ್ನಲ್ಲಿ ರೇ ಕ್ರಾಕ್ `ಮೆಕ್ ಡೊನಾಲ್ಡ್' ಮಾಂಸದ ಭಕ್ಷ್ಯದ ಮಳಿಗೆ ತೆರೆದ. ವರ್ತುಲಾಕಾರದಲ್ಲಿ ಚಪ್ಪಟೆಯಾಗಿ ಕತ್ತರಿಸಿ ನಂತರ ಕರಿದು ಬ್ರೆಡ್ ಜೊತೆಗೆ ನೀಡಲಾಗುವ ಗೋಮಾಂಸದ ಭಕ್ಷ್ಯದ ಈ ಉದ್ಯಮ ಮುಂದೆ ಜಗತ್ತಿನಲ್ಲೇ ಅತ್ಯಂತ ದೊಡ್ಡ ಪ್ರಮಾಣದ ಉದ್ಯಮವಾಗಿ ಬೆಳೆಯಿತು.

1955: ಕಲಾವಿದ ಮ. ನರಸಿಂಹ ಮೂರ್ತಿ ಜನನ.

1946: ಕಲಾವಿದ ಜೆ. ಹುಸೇನ್ಸಾಬ್ ಜನನ.

1922: ಕವನದ ಪ್ರತಿಯೊಂದು ಸಾಲನ್ನೂ ಆಸ್ವಾದಿಸಿ, ಅಂತರ್ ಮುಖಿಯಾಗಿ ಹೃದಯಾಂತರಾಳದಿಂದ ಹಾಡುವ ಗಾಯಕ ಪ್ರಭಾಕರ ಅವರು ಸಂಗೀತ, ಸಾಹಿತ್ಯ, ಅಭಿನಯ, ಚಿತ್ರಕಲೆಯಲ್ಲಿ ಪರಿಣತರಾದ ಎಂ. ರಂಗರಾವ್- ಶಿಕ್ಷಕಿ ಕಾವೇರಿಬಾಯಿ ದಂಪತಿಯ ಮಗನಾಗಿ ಭಟ್ಕಳದಲ್ಲಿ ಜನಿಸಿದರು. ಇವರ ತಾಯಿಯದ್ದೂ ಕೀರ್ತನಕಾರ, ಸಂಗೀತಕಾರರ ಮನೆತನ.

1912: ಬ್ರಿಟಿಷ್ ಲಕ್ಸುರಿ ನೌಖೆ ಟೈಟಾನಿಕ್ ನ್ಯೂಫೌಂಡ್ ಲ್ಯಾಂಡ್ ಸಮೀಪ ಉತ್ತರ ಅಟ್ಲಾಂಟಿಕ್ ಸಾಗರದಲ್ಲಿ ಮುಳುಗಿತು. ನೌಕೆಯಲ್ಲಿದ್ದ ಸುಮಾರು 1500 ಮಂದಿ ಅಸುನೀಗಿದರು. ಆದರೆ ಈ ದುರಂತದಲ್ಲಿ ಸತ್ತವರ ಸಂಖ್ಯೆ ಬಗ್ಗೆ ಎಂದೂ ಒಮ್ಮತ ಮೂಡಲೇ ಇಲ್ಲ.

1865: ಗುಂಡೇಟಿನ ಗಾಯಗಳ ಪರಿಣಾಮವಾಗಿ ಬೆಳಿಗ್ಗೆ 7.30ಕ್ಕೆ ಅಬ್ರಹಾಂ ಲಿಂಕನ್ ಮೃತರಾದರು. ವಾಷಿಂಗ್ಟನ್ ನ ಫೋರ್ಡ್ಸ್ಸ್ ಥಿಯೇಟರಿನಲ್ಲಿ ಹಿಂದಿನ ದಿನ ಜಾನ್ ಡಬ್ಲ್ಯೂ ಬೂತ್ ಎಂಬ ನಟ ಲಿಂಕನ್ ಗೆ ಗುಂಡು ಹೊಡೆದಿದ್ದ. ಈ ವೇಳೆಯಲ್ಲಿ ಲಿಂಕನ್ ಥಿಯೇಟರಿನಲ್ಲಿ `ಅವರ್ ಅಮೆರಿಕನ್ ಕಸಿನ್' ಎಂಬ ಹಾಸ್ಯಚಿತ್ರ ನೋಡುವುದರಲ್ಲಿ ತಲ್ಲೀನರಾಗಿದ್ದರು.

1469: ಸಿಕ್ಖರ ಪ್ರಥಮ ಗುರುವಾಗಿದ್ದ ಗುರುನಾನಕ್ ಅವರ ಜನ್ಮದಿನ.

1452: ಲಿಯೋನಾರ್ಡೊ ಡ ವಿಂಚಿ (1452-1519) ಹುಟ್ಟಿದ ದಿನ. ಈತ ಇಟಲಿಯ ಖ್ಯಾತ ಕಲಾವಿದ, ಶಿಲ್ಪಿ, ಗಣಿತತಜ್ಞ, ಸಂಶೋಧಕ .

(ಸಂಗ್ರಹ: ನೆತ್ರಕೆರೆ ಉದಯಶಂಕರ)

Advertisement