Sunday, November 30, 2008

ಸಂತಯಾತ್ರೆ- 2008 Santa Yatre- 2008

Santa Yatre- 2008

Vishwa Hindu Pari shad has organised 'Santa Yatre-2008 and Dharma Jagruti Sabhas all over India to awaken the Hindus against the Jehadi Terrorism, Conversion by Christian Missionaries, Slaughtering of Cows which are backbones of our farming community and to protect and keep Ganga River clean apart from removing the untouchability from the society.

Parishad is organising meetings, processions which will culminate with the speeches of Sants from various places.

One such programme has been organised at Corporation Ground, Lingarajpuram Main Road, near Petrol Bunk, Bangalore at 4.30 pm on 30th Sunday Novermber 2008. 

Two Shobha Yatra processions will start at 2.30 pm from separate places. One Yatra will start from Nagalinga Ganapathi Temple Nagawara and proceed through Nagawara Main road, Kadugondana Halli, Venkateshapura, Bagalur to Corporation Ground Lingaraja Pura.

Another Yatra will start from Muthyalamma Temple and proceed through Shefing Road, Shivajinagara More Road, Pulikeshi Nagara Main Road, Pillanna Garden, Bagalur V.V. Yani Road, Lingarajapura Main Road to Corporation Ground Lingaraja Pura.

Sri Vishwesha Thirtha Swamiji, Sri Mahantalinga Shivacharya Swamiji, Sadhu Rangarajan, Banandur Kempaiah and Chakravarti Soolibele will participate in the Dharma Jagruti Sabha, a release from Vishwa Hindu Parishad Karnataka said.

Click the brochure below to view the details of the programme and messages of the Sants of the nation. 




ಇಂದಿನ ಇತಿಹಾಸ History Today ನವೆಂಬರ್ 30

ಇಂದಿನ ಇತಿಹಾಸ

ನವೆಂಬರ್ 30

2007: `ಮಿಸೈಲ್ ಮ್ಯಾನ್' ಎಂದೇ ಗುರುತಿಸಿಕೊಂಡ ಮಾಜಿ ರಾಷ್ಟ್ರಪತಿ ಎ.ಪಿ.ಜೆ. ಅಬ್ದುಲ್ ಕಲಾಂ ಅವರು `ಇ-ಪತ್ರಿಕೆ' ಆರಂಭಿಸುವ ಮೂಲಕ ಇದೀಗ `ಮೀಡಿಯಾ ಮ್ಯಾನ್' ಆದರು. ದೇಶದ ಯಶೋಗಾಥೆಯನ್ನು ಬಿಂಬಿಸುವ ಹಾಗೂ ಜ್ಞಾನ ಪ್ರಸಾರದ ಉದ್ದೇಶವುಳ್ಳ `ಬಿಲಿಯನ್ ಬೀಟ್ಸ್' ಪಾಕ್ಷಿಕ ಇ-ಪತ್ರಿಕೆಗೆ ಕಲಾಂ ಚಾಲನೆ ನೀಡಿದರು. ಕಲಾಂ ಅವರ www.abdulkalam.com  ನಲ್ಲಿ ಇ-ಪತ್ರಿಕೆಯ ಆವೃತ್ತಿ ಓದಲು ಸಿಗುತ್ತದೆ.

2007: ಅಖಿಲ ಭಾರತ ವೈದ್ಯ ವಿಜ್ಞಾನ ಸಂಸ್ಥೆ  ನಿರ್ದೇಶಕರ ನಿವೃತ್ತಿ ವಯೋಮಿತಿಯನ್ನು 65 ವರ್ಷಕ್ಕೆ ನಿಗದಿಗೊಳಿಸುವ ವಿವಾದಾತ್ಮಕ ಮಸೂದೆಗೆ ರಾಷ್ಟ್ರಪತಿ ಪ್ರತಿಭಾ ಪಾಟೀಲ್ ತಮ್ಮ ಅಂಕಿತ ಹಾಕಿದರು. ಬಿಜೆಪಿ ಹಾಗೂ ಎಐಎಡಿಎಂಕೆ ವಿರೋಧದ ನಡುವೆಯೂ ಎರಡು 
ದಿನಗಳ ಹಿಂದೆ ಏಮ್ಸ್ ತಿದ್ದುಪಡಿ ಮಸೂದೆಗೆ ಸಂಸತ್ ಅಂಗೀಕಾರ ನೀಡಿತ್ತು.

2007: ಸಿನಿಮಾ ಮುಹೂರ್ತದ ಸಂದರ್ಭದಲ್ಲಿ ದೇವರ ಮುಂದೆ ಪಾದರಕ್ಷೆ ಧರಿಸಿ ಕುಳಿತಿದ್ದುದಕ್ಕಾಗಿ ಬಾಲಿವುಡ್ ನಟಿ ಖುಷ್ಬೂ ವಿರುದ್ಧ ರಾಮೇಶ್ವರಂನಲ್ಲಿ ಮತ್ತೊಂದು ಮೊಕದ್ದಮೆ ದಾಖಲಾಯಿತು. ಹಿಂದೂ ಮುನ್ನಣಿ ಸಂಘಟನೆಯ ಸ್ಥಳೀಯ ಕಾರ್ಯದರ್ಶಿ ರಾಮಮೂರ್ತಿ ಅವರು ರಾಮೇಶ್ವರದ ಸ್ಥಳೀಯ ನ್ಯಾಯಾಲಯದಲ್ಲಿ ಮೊಕದ್ದಮೆ ದಾಖಲಿಸಿದರು. ಹಿಂದೂ ಮಕ್ಕಳ್ ಕಚ್ಚಿ ಸಂಘಟನೆಯ ಕಾರ್ಯಕರ್ತ ಬಿ.ಆರ್. ಕುಮಾರ್ ಕೂಡ ಈ ಸಂಬಂಧ ದೂರು ಸಲ್ಲಿಸಿದ್ದರು.

2007: ನವದೆಹಲಿಯ ಐತಿಹಾಸಿಕ ಕೆಂಪುಕೋಟೆಗೆ ವಿಶ್ವ ಪರಂಪರೆ ಸ್ಥಾನಮಾನ ನೀಡಿದ ಪ್ರಮಾಣಪತ್ರವನ್ನು ನವದೆಹಲಿಯಲ್ಲಿ ಯುನೆಸ್ಕೋ ಮಹಾನಿರ್ದೇಶಕ ಕೊಯಿಚಿರೋ ಮತ್ಸೂರ ಅವರು ಅಧಿಕೃತವಾಗಿ ಅಭಿಜಿತ್ ಸೇನ್ ಗುಪ್ತಾ ಅವರಿಗೆ ಹಸ್ತಾಂತರಿಸಿದರು. ವಿಶ್ವಪರಂಪರೆಯ ಸ್ಥಾನ ಪಡೆದ ಪಟ್ಟಿಗೆ ಸೇರಿದ 27ನೇ ಸ್ಥಳ ಎಂಬ ಖ್ಯಾತಿ ಕೆಂಪುಕೋಟೆಗೆ ಲಭಿಸಿದೆ.

2007: ಯಶವಂತಪುರ- ಮಂಗಳೂರು-ಯಶವಂತಪುರ ಎಕ್ಸ್ಪ್ರೆಸ್ ರೈಲು ಸಂಚಾರವು 2007 ಡಿಸೆಂಬರ್ 8 ರಿಂದ ಆರಂಭವಾಗುವುದು ಎಂದು ನೈಋತ್ಯ ರೈಲ್ವೇ ವಲಯ ಪ್ರಕಟಿಸಿತು. ಮಂಗಳೂರಿನಿಂದ ರೈಲು ಪ್ರಯಾಣ ಡಿಸೆಂಬರ್ 9ರಿಂದ ಆರಂಭವಾಗುವುದು. ರೈಲ್ವೇ ಪ್ರಯಾಣ ದರವನ್ನೂ ಅದು ನಿಗದಿ ಪಡಿಸಿತು.

2007: ವಿವಾದಗಳಿಗೆ ಕಾರಣವಾಗಿರುವ ತಮ್ಮ ಆತ್ಮಕತೆ 'ದ್ವಿಖಂಡಿತ'ದಲ್ಲಿನ ವಿವಾದಾತ್ಮಕ ಭಾಗ ವನ್ನು ಹಿಂದಕ್ಕೆ ತೆಗೆದುಕೊಳ್ಳುವುದಾಗಿ ಬಾಂಗ್ಲಾದೇಶದ  ಲೇಖಕಿ ತಸ್ಲೀಮಾ ನಸ್ರೀನ್ ಕೋಲ್ಕತ್ತಾದಲ್ಲಿ ಪ್ರಕಟಿಸಿದರು. ಈ ಮೂಲಕ ತಮ್ಮ ಮೇಲೆ ಹೆಚ್ಚಿದ ಒತ್ತಡಗಳಿಗೆ ತಸ್ಲೀಮಾ ಮಣಿದರು.

2007: ಅಮೆರಿಕದ ವಾಣಿಜ್ಯ ಸಮುಚ್ಚಯವಾಗಿದ್ದ ಅವಳಿ ಗೋಪುರದ ಮೇಲೆ ನಡೆದ ದಾಳಿಯ ಹಿಂದೆ ತಾನೊಬ್ಬನೇ ಇರುವುದಾಗಿ ಖಾಸಗಿ ಟಿವಿ ಚಾನೆಲ್ ಅಲ್-ಜಜೀರಾಗೆ ಕಳುಹಿಸಿರುವ ಟೇಪಿನಲ್ಲಿ ಕುಖ್ಯಾತ ಭಯೋತ್ಪಾದಕ ಅಲ್ ಖೈದಾ ಧುರೀಣ ಬಿನ್ ಲಾಡೆನ್ ಹೇಳಿಕೊಂಡ. ಅಮೆರಿಕ ಜೊತೆಗಿನ ಸಂಬಂಧ ಕಡಿದುಕೊಳ್ಳುವಂತೆ ಹಾಗೂ ಆಪ್ಘಾನಿಸ್ಥಾನ ತೊರೆಯುವಂತೆ ಯುರೋಪಿಯನ್ನರಿಗೆ ಕರೆ ನೀಡಿದ ಲಾಡೆನ್ ನ್ಯೂಯಾರ್ಕ್ ಹಾಗೂ ವಾಷಿಂಗ್ಟನ್ ಮೇಲೆ ನಡೆದ ಈ ದಾಳಿಗೆ ತಾನೊಬ್ಬನೇ ಹೊಣೆಗಾರ' ಎಂದು ಘೋಷಿಸಿದ.

2007: ಅತ್ಯಂತ ಕಿರಿಯ ಸೌರ ಮಂಡಲವನ್ನು ಖಗೋಳ ಶಾಸ್ತ್ರಜ್ಞರು ಪತ್ತೆಹಚ್ಚಿದರು. ಅಮೆರಿಕದ ಮಿಚಿಗನ್ ವಿಶ್ವವಿದ್ಯಾನಿಲಯದ ಸಂಶೋಧಕರು ಸುಮಾರು ಹತ್ತು ಲಕ್ಷ ವರ್ಷಗಳಷ್ಟು ಹಳೆಯದು ಎನ್ನಲಾದ ಕಿರಿಯ ನಕ್ಷತ್ರಗಳಾದ `ಯುಎಕ್ಸ್ ತೌ ಎ' ಮತ್ತು `ಎಲ್ ಕೆಕಾ 15'ಗಳ ಸುತ್ತಮುತ್ತ ಈ ಹೊಸ ಸೌರ ಮಂಡಲವನ್ನು ಕಾಣಬಹುದೆಂದು ಪ್ರಕಟಿಸಿದರು. ಈ ಸೌರ ಮಂಡಲವು ತಾರಸ್ ನಕ್ಷತ್ರದ ರಚನಾ ಪ್ರದೇಶದಲ್ಲಿದ್ದು ಕೇವಲ 450 ಜ್ಯೋತಿರ್ ವರ್ಷಗಳಷ್ಟು ದೂರದಲ್ಲಿ ಇದೆ ಎಂದು ಸಂಶೋಧಕರನ್ನು ಉಲ್ಲೇಖಿಸಿ ವಾಷಿಂಗ್ಟನ್ನಿನ ವಿಜ್ಞಾನ ಪತ್ರಿಕೆಯೊಂದು ವರದಿ ಮಾಡಿತು.

2007: ಮಧ್ಯ ಟರ್ಕಿಯ ಕೆಸಿಬೊರ್ಲು ನಗರದ ಬಳಿ ಅಟ್ಲಾಸ್ ಜೆಟ್ ವಿಮಾನವೊಂದು ಅಪಘಾತಕ್ಕೀಡಾಗಿ ಪ್ರಯಾಣಿಕರು ಮತ್ತು ಸಿಬ್ಬಂದಿ ಸೇರಿ ಒಟ್ಟು 56 ಮಂದಿ ಮೃತರಾದರು. 7 ಸಿಬ್ಬಂದಿ ಹಾಗೂ 49 ಪ್ರಯಾಣಿಕರನ್ನು ಹೊತ್ತು ಇಸ್ತಾಂಬುಲ್ ನಿಂದ ಇಸ್ಪಾರ್ತ ನಗರಕ್ಕೆ ಹೊರಟಿದ್ದಾಗ ಈ ಎಂಡಿ 83 ಜೆಟ್ ಲೈನರ್ ಅಪಘಾತಕ್ಕೀಡಾಯಿತು.

2006: ಉತ್ತರ ಪ್ರದೇಶದ ಕಾನ್ಪುರದಲ್ಲಿ ಅಂಬೇಡ್ಕರ್ ವಿಗ್ರಹ ವಿರೂಪ ಘಟನೆಗೆ ಪ್ರತಿಕ್ರಿಯೆಯಾಗಿ ಮಹಾರಾಷ್ಟ್ರದಲ್ಲಿ ಭುಗಿಲೆದ್ದ ಹಿಂಸಾಚಾರ, ಗೋಲಿಬಾರಿಗೆ ನಾಲ್ವರು ಬಲಿಯಾದರು.

2006: ಮುಸ್ಲಿಂ ಸಮುದಾಯವು ಸೌಲಭ್ಯ ವಂಚಿತವಾಗಿದೆ ಎಂದು ಅಭಿಪ್ರಾಯ ವ್ಯಕ್ತ ಪಡಿಸಿದ ರಾಜಿಂದರ್ ಸಾಚಾರ್ ಸಮಿತಿಯು  ಮುಸ್ಲಿಂ ಸಮುದಾಯದ ಹಿಂದುಳಿದ ವರ್ಗಕ್ಕೆ ಮೀಸಲು ನೀಡಲು ಮತ್ತು ಸಮಾನಾವಕಾಶ ನೀಡಲು ಆಯೋಗ ರಚನೆ ಮಾಡಬೇಕು ಎಂದು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿತು. ಮುಸ್ಲಿಮರು ಸರ್ಕಾರಿ ಉದ್ಯೋಗದಲ್ಲಿ ಶೇಕಡಾ 4.9, ರಕ್ಷಣಾ ಪಡೆಗಳಲ್ಲಿ ಶೇಕಡಾ 3.2ರಷ್ಟಿದ್ದರೆ, 543 ಸಂಸದರಲ್ಲಿ ಮುಸ್ಲಿಂ ಸಂಸದರ ಸಂಖ್ಯೆ 33 ಮಾತ್ರ ಎಂದು ಸಮಿತಿ ಹೇಳಿತು.

2005: ಪಕ್ಷದ ವರಿಷ್ಠ ಮಂಡಳಿ ವಿರುದ್ಧ ಬಂಡೆದ್ದ ಉಮಾಭಾರತಿ ಅವರನ್ನು ಬಿಜೆಪಿ ಪ್ರಾಥಮಿಕ ಸದಸ್ಯತ್ವದಿಂದ ಅಮಾನತುಗೊಳಿಸಲಾಯಿತು.

2005: ಭಾರತ ಮತ್ತು ರಷ್ಯಾ ಜಂಟಿಯಾಗಿ ಅಭಿವೃದ್ಧಿ ಪಡಿಸಿದ ಸೂಪರ್ ಸಾನಿಕ್ ಬ್ರಹ್ಮೋಸ್ ಕ್ಷಿಪಣಿಯ ಪರೀಕ್ಷಾ ಉಡಾವಣೆಯನ್ನು ಒರಿಸ್ಸಾದ ಬಾಲಸೋರಿನಿಂದ 15 ಕಿ.ಮೀ ದೂರದಲ್ಲಿ ಸಮುದ್ರ ಮಧ್ಯೆ ನಿರ್ಮಿಸಲಾದ ಪರೀಕ್ಷಾ ಕೇಂದ್ರದಲ್ಲಿ ಯಶಸ್ವಿಯಾಗಿ ನಡೆಸಲಾಯಿತು. ಸೇನೆಯ ಮೂರೂ ವಿಭಾಗಗಳಲ್ಲಿ ಬಳಸಬಹುದಾದ 8 ಮೀಟರ್ ಎತ್ತರದ ಈ ಕ್ಷಿಪಣಿಯು 2-3 ಟನ್ ಸಾಂಪ್ರದಾಯಿಕ ಸಿಡಿತಲೆಯನ್ನು ಹೊತ್ತು 290 ಕಿ.ಮೀ. ದೂರ ಚಲಿಸಬಲ್ಲುದು. ಇದು ಶಬ್ಧದ ವೇಗಕ್ಕಿಂತ 2.8ರಿಂದ 3 ಪಟ್ಟು ವೇಗವಾಗಿ ಹಾರಾಟ ನಡೆಸಬಲ್ಲುದು. 

2000: ಬಾಹ್ಯಾಕಾಶ ಷಟಲ್ ನೌಕೆ ಎಂಡೇವರ್ `ಸೌರ ರೆಕ್ಕೆ'ಗಳೊಂದಿಗೆ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ತೆರಳಿತು. ಈ ಸೌರರೆಕ್ಕೆಗಳು ಇಡೀ ನಿಲ್ದಾಣಕ್ಕೆ ಬೇಕಾದ ವಿದ್ಯುತ್ ಒದಗಿಸಬಲ್ಲವು.

1999: ಭಾರತದ ಸಮಾಜ ವಿಜ್ಞಾನಿ ಎಂ.ಎನ್. ಶ್ರೀನಿವಾಸ್ ಅವರು ಬೆಂಗಳೂರಿನಲ್ಲಿ ತಮ್ಮ 83ನೇ ವಯಸ್ಸಿನಲ್ಲಿ ನಿಧನರಾದರು.

1956: ಫ್ಲಾಯ್ಡ್ ಪ್ಯಾಟ್ಟರ್ಸನ್ ಅವರು ವಿಶ್ವ ಹೆವಿವೇಯ್ಟ್ ಚಾಂಪಿಯನ್ ಶಿಪ್ ಗೆದ್ದ ಅತ್ಯಂತ ಕಿರಿಯ ಬಾಕ್ಸರ್ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಷಿಕಾಗೋದಲ್ಲಿ ಆರ್ಚೀ ಮೂರ್ ಅವರನ್ನು ಪರಾಭವಗೊಳಿಸುವ ಮೂಲಕ ಅವರು ಈ ಪ್ರಶಸ್ತಿಗೆ ಪಾತ್ರರಾದರು.

1940: ಸಾಹಿತಿ ಎಚ್. ಆರ್. ಇಂದಿರಾ ಜನನ.

1940: ಸಾಹಿತಿ ಸರೋಜ ತುಮಕೂರು ಜನನ.

1939: ಸಾಹಿತಿ ಎಸ್. ಸಿದ್ಧಲಿಂಗಪ್ಪ ಜನನ.

1925: ಪ್ರಗತಿಶೀಲ ಬರಹಗಾರ ಅನಂತನಾರಾಯಣ (30-11-1925ರಿಂದ 25-8-1992) ಅವರು ಆರ್. ಸದಾಶಿವಯ್ಯ- ರಂಗಮ್ಮ ದಂಪತಿಯ ಮಗನಾಗಿ ಮೈಸೂರಿನಲ್ಲಿ ಜನಿಸಿದರು.

1900: ಐರಿಷ್ ಸಾಹಿತಿ, ನಾಟಕಕಾರ ಆಸ್ಕರ್ ವೈಲ್ಡ್ ತಮ್ಮ 46ನೇ ವಯಸ್ಸಿನಲ್ಲಿ ಪ್ಯಾರಿಸ್ಸಿನಲ್ಲಿ ಮೃತರಾದರು. ಈ ವೇಳೆಯಲ್ಲಿ ಅವರು ಕಡು ಬಡತನದಿಂದ ನಲುಗಿದ್ದರು.

1874: ಇಂಗ್ಲೆಂಡಿನ ಮಾಜಿ ಪ್ರಧಾನಿ ಸರ್ ವಿನ್ ಸ್ಟನ್ ಚರ್ಚಿಲ್ (1874-1965) ಹುಟ್ಟಿದ ದಿನ.

1858: ಭಾರತೀಯ ಸಸ್ಯತಜ್ಞ ಹಾಗೂ ಭೌತವಿಜ್ಞಾನಿ ಸರ್ ಜಗದೀಶ ಚಂದ್ರ ಬೋಸ್ (1858-1937) ಜನ್ಮದಿನ. ಸಸ್ಯ ಹಾಗೂ ಪ್ರಾಣಿಗಳ ಜೀವಕೋಶಗಳು ಏಕಪ್ರಕಾರವಾಗಿ ಸ್ಪಂದಿಸುತ್ತವೆ ಎಂಬುದನ್ನು ಪತ್ತೆ ಹಚ್ಚಲು ಅತ್ಯಂತ ಸೂಕ್ಷ್ಮಗ್ರಾಹಿ ಉಪಕರಣವನ್ನು ಸಂಶೋಧಿಸಿದವರು ಇವರು. ಮೈಕ್ರೋ ಅಲೆಗಳು ಹಾಗೂ ರೇಡಿಯೋ ಅಲೆಗಳನ್ನು ಉತ್ಪಾದಿಸುವ ಮೈಕ್ರೋವೇವ್ ಉಪಕರಣವನ್ನು ಮೊತ್ತ ಮೊದಲ ಬಾರಿಗೆ ನಿರ್ಮಿಸಿ ಸಾರ್ವಜನಿಕವಾಗಿಪ್ರದರ್ಶಿಸಿದವರೂ ಇವರೇ. ವೈರ್ ಲೆಸ್ ಟೆಲಿಗ್ರಾಫಿಯ ಜನಕ ಮಾರ್ಕೋನಿ ಅಲ್ಲ, ಈ  ಗೌರವ ಮೈಕ್ರೋವೇವ್ ಉಪಕರಣ ಸಂಶೋಧಿಸಿದ ಬೋಸ್ ಅವರಿಗೆ ಸಲ್ಲಬೇಕು ಎಂಬ ವಾಸ್ತವಕ್ಕೆ ಈಗ ಬೆಲೆ ಸಿಗತೊಡಗಿದೆ. ಆದರೆ ವೈರ್ ಲೆಸ್ ಟೆಲಿಗ್ರಾಫಿಗೆ ಪೇಟೆಂಟ್ ಪಡೆದದ್ದು ಮಾರ್ಕೋನಿ.

1835: ಮಾರ್ಕ್ ಟ್ವೇನ್ ಎಂದೇ ಜನಪ್ರಿಯರಾಗಿದ್ದ ಖ್ಯಾತ ಕಾದಂಬರಿಕಾರ ಸ್ಯಾಮ್ಯುಯೆಲ್ ಲಾಂಗ್ಹೋರ್ನ್ ಕ್ಲೆಮೆನ್ಸ್ (1835-1910) ಹುಟ್ಟಿದ ದಿನ.

1667: `ಗಲಿವರ್ಸ್ ಟ್ರಾವಲ್ಸ್' ಪ್ರವಾಸ ಕಥನದಿಂದ ವಿಶ್ವವ್ಯಾಪಿ ಖ್ಯಾತಿ ಗಳಿಸಿದ ಆಂಗ್ಲೊ ಐರಿಷ್ ಸಾಹಿತಿ ಜೊನಾಥನ್ ಸ್ವಿಫ್ಟ್ (1667-1745) ಹುಟ್ಟಿದ ದಿನ.

(ಸಂಗ್ರಹ: ನೆತ್ರಕೆರೆ ಉದಯಶಂಕರ)

Saturday, November 29, 2008

Salutes to NSG... You saved our Nation..!

Salutes to NSG... 

You saved our Nation..!



Taj operation over, three terrorists killed

 The operation to flush out terrorists from Taj Hotel, Mumbai is over, signalling an end to the 62-hour siege by terrorists (started on 26-11-2008 night and ended on 29-11-2008 morning) three of whom were killed this morning in an assault by the elite commandos of National Security Guards (NSG).

However, the NSG is still sanitising the hotel to check if any remaining terrorist or explosive is still in the 400-room hotel, NSG Director General J K Dutt told reporters.

"The commandos killed three terrorists after intense gun-battle inside the hotel," Dutt said.

An AK-47 rifle was also recovered from them.

"There was lot of shooting. Grenades were lobbed and explosives were used by the terrorists," he said, PTI reports said.

Walk Again to Reclaim Bengaluru Today

Walk Again to Reclaim

Bengaluru Today 


 
To awaken Public, BBMP officials and Government, the Hasiru Usiru has organised 'Walk to Reclaim Bangaloru' at Town Hall at 5 pm. Here is the letter of appeal to all by the organisation to join the walk to make it a grand success. Your can also watch the video film produced by nine year old boy Pathiv Shah here (click) in PARYAYA, which depicts the Walk of 9 November 2008 to reclaim Bangalore. Here is the flyer created by Hasiru Usiru explaining how Bangalore Transport could be improved.



Parthiv Shah, a nine year old boy, came to the Hasire Usiru organised "Walk to Reclaim Bengaluru" on 9th November with a video camera.  He did not know how to use it, and less so to edit the film. So enthused was he by what he had participated in, that he decided to make a short film on the Walk. Watch this impressive video where he is raising some really big and critical issues for our common attention: http://www.youtube.com/watch?v=1xm4BWq9cXQ

Hundreds walked with Parthiv on that Sunday certain that Bangalore's problem of traffic congestion could not be resolved by road widening.  What's more, they knew it was illegal.

For hundreds who would lose their properties (homes and businesses), there is no compensation - only a promissory note called a TDR, without market value. For tenants, sorry no compensation.  

No space left to plant trees. No space left for street vendors.  No space for street children. No space to walk or cycle.

For all the trouble, and destruction of our city, that widening over 100 roads would put us through, Bangalore's streets would be filled up with vehicles in less than five years.  

This is mathematical certainly: because 1,500 vehicles are being added every day and nothing is being done to make people drive less.  Will our authorities want to widen roads again in five years?  

How many more homes and businesses will they destroy then? Of course, then, they would not have any trees left to cut.

As intelligent, concerned and logical people, we must take charge of our city.  There are solutions that do not require making Bangalore a free for all motorways - killing and maiming hundreds.  

That is what road widening has already done - when in the rush to provide connectivity to the new airport, engineers and planners (Commissioners and Administrators) simply forgot that people cross roads. And that safe pedestrian crossings are an essential feature of road design.

Study any or all of the designs for widening the 91 roads presently proposed, and it will be clear that there is simply no consideration for the Rights and Needs of pedestrians, cyclists, elderly, children, differently abled, etc. who also use our roads.  

Something is maddeningly wrong about this road widening project.

Besides this mega project of road widening (costing Rs. 4,000 crores at least - that only for civil engineering) Bangalore is also being forced to accept a Metro that runs on elevated tracks, reducing road space, destroying our parks (Lal Bagh, Lakshman Rao Park, K. R. Road Park - already destroyed).  

The Metro can go underground, even if it would make it twice as expensive.  

All that the Government needs to do is stop investing in wasteful projects such as super high speed rail links for air travellers and elevated roads for the elite (they aren't paying these costs anyway).  And put that money in the Metro and take it underground.  

That way, Bangalore will be able to retain its present charm and be ready for the future.

But for all this to happen, you need to step out and Join the CAMPAIGN TO RECLAIM BENGALURU. 

Again! Yes. Again!

Come with friends, family and colleagues to Town Hall, on 29th November 2008, Saturday, 5-7 pm. Be there to make your city your own.

Please circulate this message widely, along with the  flyer.  

Please call 2244197 or email divyarrs@esgindia.org to confirm your participation.

Environment Support Group Team, Hasiru Usiru - a progressive network of individuals and organisations to protect public and social spaces.

ಇಂದಿನ ಇತಿಹಾಸ History Today ನವೆಂಬರ್ 29

ಇಂದಿನ ಇತಿಹಾಸ

ನವೆಂಬರ್ 29

ಭಾರತೀಯ ಕೈಗಾರಿಕೋದ್ಯಮಿ ಹಾಗೂ ಭಾರತದಲ್ಲಿ ವಿಮಾನಯಾನದ ಮೊದಲಿಗರಾದ ಜೆ. ಆರ್. ಡಿ. ಟಾಟಾ ಅವರು ಜಿನೇವಾದಲ್ಲಿ ತಮ್ಮ 89ನೇ ವಯಸ್ಸಿನಲ್ಲಿ ನಿಧನರಾದರು. ಪ್ಯಾರಿಸ್ಸಿನ ಅತ್ಯಂತ ದೊಡ್ಡದಾದ ಹಾಗೂ ಹೆಸರುವಾಸಿಯಾದ ಪೇರೆ ಲಾಚೈಸ್ನ ರುದ್ರಭೂಮಿಯಲ್ಲಿ ಅವರ ಅಂತ್ಯಕ್ರಿಯೆ ನೆರವೇರಿಸಲಾಯಿತು. 

2007: ಪಾಕಿಸ್ಥಾನದ ಅಧ್ಯಕ್ಷರಾಗಿ ಜನರಲ್ ಪರ್ವೇಜ್ ಮುಷರಫ್ ಅವರು ಸತತ ಎರಡನೇ ಅವಧಿಗಾಗಿ ಇಸ್ಲಾಮಾಬಾದಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಐವಾನ್- ಎ -  ಅಧ್ಯಕ್ಷರ ಅರಮನೆಯಲ್ಲಿ ಮುಖ್ಯ ನ್ಯಾಯಮೂರ್ತಿ ಅಬ್ದುಲ್ ಹಮೀದ್ ದೋಗರ್ ಅವರು ಮುಷರಫ್ ಅವರಿಗೆ ಅಧಿಕಾರ ಗೌಪ್ಯತೆಯ ಪ್ರಮಾಣ ವಚನವನ್ನು ಬೋಧಿಸಿದರು. ಅಂತಾರಾಷ್ಟ್ರೀಯ ಹಾಗೂ ದೇಶದಲ್ಲಿ ಒತ್ತಡಗಳು ಹೆಚ್ಚಾದ ಹಿನ್ನೆಲೆಯಲ್ಲಿ ಮುಷರಫ್ ಅವರು ಇದಕ್ಕೆ ಒಂದು ದಿನ ಮೊದಲು ಸೇನಾ ಮುಖ್ಯಸ್ಥನ ಹುದ್ದೆಯನ್ನು ತೊರೆದಿದ್ದರು.

2007: ಕಂಪೆನಿಯ ಮುಖ್ಯಸ್ಥರ ವಿರುದ್ಧ ಜನಾಂಗೀಯ ನಿಂದನೆ ಆರೋಪ ದಾಖಲಿಸಿದ್ದ ಭಾರತೀಯ ಮೂಲದ ಕಾಲ್ ಸೆಂಟರ್ ಉದ್ಯೋಗಿ ನಾರ್ಥ್ಯಾಂಪ್ಟನ್  ನಿವಾಸಿ ಚೇತನ್ ಕುಮಾರ್ ಮೆಶ್ರಾಮ್ ಅವರಿಗೆ ಪರಿಹಾರವಾಗಿ 5 ಸಾವಿರ ಪೌಂಡುಗಳನ್ನು ನೀಡಲು ಸಂಬಂಧಿಸಿದ ಕಂಪೆನಿಗೆ ನಾರ್ಥ್ಯಾಂಪ್ಟನ್ ಜನಾಂಗೀಯ ಸಮಾನತೆ ಮಂಡಳಿ ಲಂಡನ್ನಿನಲ್ಲಿ ಆದೇಶಿಸಿತು. ಬ್ರಿಟಿಷರಂತೆ ಇಂಗ್ಲಿಷಿನಲ್ಲಿ ಮಾತನಾಡದ ಕಾರಣವೊಡ್ಡಿ ಕಂಪೆನಿಯ ಮುಖ್ಯಸ್ಥರು ತನ್ನನ್ನು ಕೆಲಸದಿಂದ ಕಿತ್ತುಹಾಕಿರುವುದಾಗಿ ಚೇತನ್ ಕುಮಾರ್ ಮೆಶ್ರಾಮ್ ಅವರು ಮಂಡಳಿಗೆ ದೂರು ಸಲ್ಲಿಸಿದ್ದರು.

2007: ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರ ಹತ್ಯೆಗೆ ಪ್ರತೀಕಾರವಾಗಿ 1984ರಲ್ಲಿ ನಡೆದ ಸಿಖ್ ವಿರೋಧಿ ದಂಗೆಯಲ್ಲಿ ಕಾಂಗ್ರೆಸ್ ನಾಯಕ ಜಗದೀಶ್ ಟೈಟ್ಲರ್ ಪಾತ್ರದ ಕುರಿತು ಸಾಕ್ಷ್ಯ ಹೇಳುವುದಾಗಿ ಕ್ಯಾಲಿಫೋರ್ನಿಯಾದಲ್ಲಿ ನೆಲೆಸಿದ ಜಸ್ಬೀರ್ ಸಿಂಗ್ ಪ್ರಕಟಿಸಿದರು. ಇದರಿಂದ ಇಡೀ ಪ್ರಕರಣಕ್ಕೆ ಹೊಸ ತಿರುವು ಲಭಿಸಿತು. ಸಿಖ್ಖರ ವಿರುದ್ಧ ದೌರ್ಜನ್ಯ, ಹಲ್ಲೆಗೆ ಪ್ರಚೋದನೆ ನೀಡಿದ್ದರು ಎಂಬ ಆರೋಪ ಟೈಟ್ಲರ್ ಮೇಲಿದ್ದು, ಅಕ್ಟೋಬರ್  ತಿಂಗಳಲ್ಲಷ್ಟೇ ಸಿಬಿಐ ಅವರ ವಿರುದ್ಧ ತನಗೆ ಯಾವುದೇ ಸಾಕ್ಷ್ಯ ಲಭಿಸಿಲ್ಲ ಎಂದು ಹೇಳಿತ್ತು. 

2007: ಅಖಿಲ ಭಾರತ ವೈದ್ಯ ವಿಜ್ಞಾನ ಸಂಸ್ಥೆ (ಏಮ್ಸ್) ನಿರ್ದೇಶಕ ಪಿ.ವೇಣುಗೋಪಾಲ್ ನಿವೃತ್ತಿ ವಯೋಮಿತಿಯನ್ನು 65 ವರ್ಷಕ್ಕ್ಕೆ ನಿಗದಿಗೊಳಿಸುವ ವಿವಾದಾತ್ಮಕ ಮಸೂದೆ ವಿರೋಧಿಸಿ ಆರಂಭಿಸಿದ್ದ ತಮ್ಮ ಮುಷ್ಕರವನ್ನು ಏಮ್ಸ್ ವೈದ್ಯರು ಹೈಕೋರ್ಟ್ ಆದೇಶದ ಮೇರೆಗೆ ಹಿಂತೆಗೆದುಕೊಂಡರು.

2007:  ಮಿತ `ವೈನ್' ಸೇವನೆ ಹೃದಯಕ್ಕೆ ಒಳ್ಳೆಯದು ಎಂಬ ಮಾತಿದೆ. ಆದರೆ ಈ ತೆರನಾದ `ವೈನ್' ಸೇವನೆಯು ಮಹಿಳೆಯರ ರಕ್ತನಾಳದ ಉರಿಯನ್ನು ತಂಪಾಗಿ ಇಡುತ್ತದಂತೆ..! ಸ್ಪೇನ್ ದೇಶದ ಸಂಶೋಧಕರು ಒಂದು ತಿಂಗಳ ಕಾಲ ನಡೆಸಿದ ಪ್ರಯೋಗವೊಂದರಲ್ಲಿ ಕಂಡುಬಂದ ಸತ್ಯಾಂಶವಿದು. ಕೆಲವು ಮಹಿಳೆಯರಿಗೆ ನಿತ್ಯವೂ ಎರಡು ಲೋಟಗಳಷ್ಟು `ಕೆಂಪು ವೈನ್' ಅನ್ನು ನಾಲ್ಕು ವಾರಗಳ ಕಾಲ ನೀಡಲಾಯಿತು. ಆ ಒಂದು ತಿಂಗಳ ನಂತರ ಅವರನ್ನು ಪರೀಕ್ಷೆಗೆ ಒಳಪಡಿಸಿದಾಗ ಅವರ ರಕ್ತದಲ್ಲಿ ಉರಿ ಉಂಟು ಮಾಡುವ ಅಂಶದಲ್ಲಿ ಗಣನೀಯ ಇಳಿತ  ಕಂಡುಬಂದಿತು.

2007: ಕನ್ನಡ ಪುಸ್ತಕ ಪ್ರಾಧಿಕಾರದ 2006ನೇ ಸಾಲಿನ `ಪುಸ್ತಕ ಸೊಗಸು' ಬಹುಮಾನಕ್ಕೆ ಆಯ್ಕೆಯಾದ 4 ಕೃತಿಗಳ ಪೈಕಿ ಮೊದಲ ಬಹುಮಾನವು ಬೆಂಗಳೂರಿನ ಅಸೀಮ ಪ್ರತಿಷ್ಠಾನ ಪ್ರಕಾಶಿಸಿದ ಹರೀಶ್ ಆರ್. ಭಟ್ ಮತ್ತು ಪ್ರಮೋದ್ ಸುಬ್ಬರಾವ್ ಅವರ `ಪಕ್ಷಿ ಪ್ರಪಂಚ' ಪುಸ್ತಕದ ಪಾಲಾಯಿತು. ಬೆಂಗಳೂರಿನ ಚಾರ್ವಾಕ ಪ್ರಕಾಶನ ಹೊರತಂದ ಈರಪ್ಪ ಎಂ. ಕಂಬಳಿ ಅವರ `ಚಾಚಾ ನೆಹರು ಮತ್ತು ಈಚಲು ಮರ' ಕೃತಿಗೆ 2ನೇ ಬಹುಮಾನ, ಅಂಕಿತ ಪುಸ್ತಕ ಹೊರತಂದ ಜಯಂತ ಕಾಯ್ಕಿಣಿ ಅವರ `ಶಬ್ದತೀರ' ಕೃತಿಗೆ 3ನೇ ಬಹುಮಾನ ಹಾಗೂ ಅಭಿನವ ಪ್ರಕಾಶನ ಹೊರತಂದ ಭಾಗೀರಥಿ ಹೆಗಡೆ ಅವರ `ಗುಬ್ಬಿಯ ಸ್ವರ್ಗ' ಕೃತಿಗೆ ಮಕ್ಕಳ ಪುಸ್ತಕ ಬಹುಮಾನ ಲಭಿಸಿತು.

2007: ಸರ್ಕಾರಕ್ಕೆ ಪಾವತಿ ಮಾಡಬೇಕಾದ ಸುಮಾರು 20.3 ಕೋಟಿ ರೂಪಾಯಿಯ ವಾಣಿಜ್ಯ ತೆರಿಗೆ ಬಾಕಿ ಉಳಿಸಿಕೊಂಡಿರುವ ಹಿನ್ನೆಲೆಯಲ್ಲಿ ಚಿತ್ರನಟ ಹಾಗೂ ನಿರ್ದೇಶಕ ಸಂಜಯ್ ಖಾನ್ ಅವರು ನಿರ್ದೇಶಕರಾಗಿರುವ ನಗರದಲ್ಲಿನ `ವರ್ಲ್ಡ್ ರೆಸಾರ್ಟ್' ಕಂಪೆನಿಗೆ ಕರ್ನಾಟಕ ಹೈಕೋರ್ಟ್ ಒಂದು ಲಕ್ಷ ರೂಪಾಯಿ ದಂಡ ವಿಧಿಸಿತು.

2007: ವಿದೇಶ ಯಾತ್ರೆ ಹಾಗೂ ವಿದೇಶ ವಾಸಕ್ಕೆ ಶಾಸ್ತ್ರ ಹಾಗೂ ಸಂಪ್ರದಾಯಗಳಲ್ಲಿ ವಿರೋಧವಿರುವುದರಿಂದ ಯಾವುದೇ ಕಾರಣಕ್ಕೂ ಪುತ್ತಿಗೆ ಮಠಾಧೀಶ ಸುಗುಣೇಂದ್ರ ತೀರ್ಥರು ಪರ್ಯಾಯ ವೇಳೆ ಕೃಷ್ಣನ ಪೂಜೆ ಮಾಡುವಂತಿಲ್ಲ ಎಂದು ಉಡುಪಿ ಅಷ್ಟಮಠಗಳ ಯತಿಗಳು ತಾಕೀತು ಮಾಡಿದರು. ಕೃಷ್ಣಮಠದಲ್ಲಿ ತುರ್ತುಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ಪ್ರಕಟಿಸಿದ ಪೇಜಾವರ ಮಠಾಧೀಶ ವಿಶ್ವೇಶತೀರ್ಥರು, ವಿದೇಶ ಯಾತ್ರೆ ಮಾಡಿದವರಿಗೆ ಕೃಷ್ಣನ ಪೂಜೆಗೆ ಈ ತನಕ ಅವಕಾಶ ನೀಡಲಾಗಿಲ್ಲ. ಆ ನಿಯಮವನ್ನು ಪುತ್ತಿಗೆ ಶ್ರೀಗಳೂ ಪಾಲಿಸಬೇಕಾಗಿದೆ ಎಂದು ಹೇಳಿದರು.

2007: ದೇಶದ ಎರಡನೇ ಅತಿದೊಡ್ಡ ಬ್ಯಾಂಕ್ ಐಸಿಐಸಿಐ ಬ್ಯಾಂಕಿನ ವ್ಯವಸ್ಥಾಪಕ ನಿರ್ದೇಶಕ ಕೆ. ವಿ. ಕಾಮತ್ ಅವರನ್ನು  ಫೋಬ್ಸ್  ಏಷ್ಯಾ `ವರ್ಷದ ಉದ್ಯಮಿ' ಎಂಬುದಾಗಿ ಗುರುತಿಸಿತು.

2006: ಇಂಡೋನೇಷ್ಯದ ಮೊಲುಕಾಸ್ ದ್ವೀಪದ ಸಾಗರ ತಳದಲ್ಲಿ ಬೆಳಗ್ಗೆ 7 ಗಂಟೆ ವೇಳೆಗೆ ಶಕ್ತಿಶಾಲಿ ಭೂಕಂಪ ಸಂಭವಿಸಿತು. ಭೂಕಂಪದ ತೀವ್ರತೆ ರಿಕ್ಟರ್ ಮಾಪಕದಲ್ಲಿ 6.1ರಷ್ಟಿತ್ತು.

2006: ತಮಿಳುನಾಡಿನ ಮದುರೈಯಲ್ಲಿ ಜನಿಸಿದ ಚಿತ್ರಾ ಭರೂಚ ಅವರು ಬಿಬಿಸಿಯ ಪ್ರಪ್ರಥಮ ಮಹಿಳಾ ಮುಖ್ಯಸ್ಥೆಯಾಗಿ ನೇಮಕಗೊಂಡರು. ಬಿಬಿಸಿ ಅಧ್ಯಕ್ಷ ಮೈಕೆಲ್ ಗ್ರೇಡ್ ರಾಜೀನಾಮೆ ಕಾರಣ ಭರೂಚ ಅವರು ಹಂಗಾಮಿ ಮುಖ್ಯಸ್ಥೆಯಾಗಿ ಅಧಿಕಾರ ವಹಿಸಿಕೊಂಡರು.

2006: ಭಾರತೀಯ ಕ್ರಿಕೆಟ್ ತಂಡದ ಮಾಜಿ ಟೆಸ್ಟ್ ಆಟಗಾರ ಹನುಮಂತ ಸಿಂಗ್ (67) ಮುಂಬೈಯಲ್ಲಿ ನಿಧನರಾದರು. 

2006: ವೈಜ್ಞಾನಿಕ ಸಂಶೋಧನೆಗಳಿಗಾಗಿ ಪ್ರತಿವರ್ಷ ನೀಡಲಾಗುವ ಜಿ.ಡಿ. ಬಿರ್ಲಾ ಪ್ರಶಸ್ತಿಗೆ ಬೆಂಗಳೂರಿನ ಭಾರತೀಯ ವಿಜ್ಞಾನ ಮಂದಿರದ ಭೌತಶಾಸ್ತ್ರ ವಿಜ್ಞಾನಿ ಪ್ರೋ. ಶ್ರೀರಾಮ್ ರಾಮಸ್ವಾಮಿ ಆಯ್ಕೆಯಾದರು.

2006: ಮಣಿಪಾಲ ಕೆ.ಎಂ.ಸಿ.ಯ ಪ್ರಾಕ್ತನ ವಿದ್ಯಾರ್ಥಿ, ಮೂಲತಃ ಉತ್ತರ ಕನ್ನಡ ಜಿಲ್ಲೆಯ ಕುಮಟಾದ ಡಾ. ರಾಧಾಕೃಷ್ಣ ಸುಧಾಕರ ಶಾನಭಾಗ ಅವರು ಇಂಗ್ಲೆಂಡಿನ ಮ್ಯಾಜಿಸ್ಟ್ರೇಟ್ ಹುದ್ದೆಗೆ ನೇಮಕಗೊಂಡರು. ಇಂಗ್ಲೆಂಡಿನ ಲಾರ್ಡ್ ಚಾನ್ಸಲರ್ ಅವರು ಈ ನೇಮಕ ಮಾಡಿದ್ದು, ಇಂಗ್ಲೆಂಡಿನಲ್ಲಿ ಈ ಹ್ದುದೆಗೆ ನೇಮಕ ಗೊಂಡ ಪ್ರಥಮ ಕನ್ನಡಿಗ ಎಂಬ ಹೆಗ್ಗಳಿಕೆಗೆ ಶಾನಭೋಗ ಪಾತ್ರರಾದರು.

2006: ಕೇರಳದ ನಿಲಕ್ಕಲ್ ಎಕ್ಯುಮಾನಿಕಲ್ ಟ್ರಸ್ಟ್ ಸ್ಥಾಪಿಸಿದ ಧಾರ್ಮಿಕ ಸದ್ಭಾವನಾ ಪ್ರಶಸ್ತಿಗೆ ಖ್ಯಾತ ಸಾಹಿತಿ ಡಾ. ಯು.ಆರ್. ಅನಂತಮೂರ್ತಿ ಮತ್ತು ಆರ್ಚ್ ಬಿಷಪ್ ಮಾರ್ ಜೋಸೆಫ್ ಪೊವಾಥಿಲ್ ಆಯ್ಕೆಯಾದರು.

2005: ಕುದುರೆಮುಖ ಕಬ್ಬಿಣದ ಅದಿರು ಗಣಿಯನ್ನು 2005ರ ಡಿಸೆಂಬರ್ 31ರ ಒಳಗೆ ಕಾಯಂ ಆಗಿ ಮುಚ್ಚುವಂತೆ ಕರ್ನಾಟಕ ಸರ್ಕಾರಕ್ಕೆ ನೀಡಿದ ಆದೇಶವನ್ನು ಪುನರ್ವಿಮರ್ಶಿಸಬೇಕು ಎಂದು ಕೋರಿ ಕುದುರೆಮುಖ ಶ್ರಮಶಕ್ತಿ ಸಂಘಟನೆ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ತಳ್ಳಿಹಾಕಿತು.

2005: ಬೆಂಗಳೂರು ಕಾನೂನು ವಿಶ್ವ ವಿದ್ಯಾಲಯದ ಸಂದರ್ಶಕ ಪ್ರಾಧ್ಯಾಪಕ ಡಾ. ಶ್ರೀಪಾದ್ ಗಣಪ ಭಟ್ ಅವರು ಕೇರಳದ ಎರ್ನಾಕುಳಂನಲ್ಲಿ ಸ್ಥಾಪನೆಗೊಂಡಿರುವ ನ್ಯಾಷನಲ್ ಯುನಿವರ್ಸಿಟಿ ಆಫ್ ಅಡ್ವಾನ್ಸಡ್ ಲೀಗಲ್ ಸ್ಟಡೀಸ್ನ ಪ್ರಥಮ ಕುಲಪತಿಯಾಗಿ ನೇಮಕಗೊಂಡರು.

2005: ದೂರದರ್ಶಿತ್ವ, ವೈಯಕ್ತಿಕ ಪ್ರತಿಭೆ ಹಾಗೂ 21ನೇ ಶತಮಾನದಲ್ಲಿ ವಿಶ್ವಶಾಂತಿಯೆಡೆಗೆ ತೋರಿದ ಆಸಕ್ತಿಗಾಗಿ ಪಾಕಿಸ್ಥಾನದ ಮಾಜಿ ಪ್ರಧಾನಿ, ಪಾಕಿಸ್ತಾನ ಪೀಪಲ್ಸ್ ಪಾರ್ಟಿಯ ಅಧ್ಯಕ್ಷೆ ಬೆನಜೀರ್ ಭುಟ್ಟೋ ಅವರಿಗೆ 2005ರ ಸಾಲಿನ `ವಿಶ್ವ ಸಹಿಷ್ಣುತೆ ಪ್ರಶಸ್ತಿ'ಯನ್ನು ಜರ್ಮನಿಯ ಬರ್ಲಿನ್ನಿನಲ್ಲಿ ಪ್ರದಾನ ಮಾಡಲಾಯಿತು. ರಷ್ಯಾದ ಮಾಜಿ ಅಧ್ಯಕ್ಷ ಮಿಖಾಯಿಲ್ ಗೊರ್ಬಚೆವ್ ಪ್ರಶಸ್ತಿ ಪ್ರದಾನ ಮಾಡಿದರು. 

2005: ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಅಧ್ಯಕ್ಷರಾಗಿ ಕೇಂದ್ರ ಸಚಿವ ಶರದ್ ಪವಾರ್ ಆಯ್ಕೆಯಾದರು. ಹಾಲಿ ಅಧ್ಯಕ್ಷ ಜಗನ್ ಮೋಹನ್ ದಾಲ್ಮಿಯಾ ಬಣದ ರಣಬೀರ್ ಸಿಂಗ್ ಮಹೇಂದ್ರ ಅವರು ಪವಾರ್ ಕೈಯಲ್ಲಿ ಸೋಲು ಅನುಭವಿಸಿದರು. 

2005: ಹಿರಿಯ ಯಕ್ಷಗಾನ ಹಾಸ್ಯ ಕಲಾವಿದ ವೇಣೂರು ಸುಂದರ ಆಚಾರ್ಯ (65) ಅಲ್ಪ ಕಾಲದ ಅನಾರೋಗ್ಯದಿಂದ ನಿಧನರಾದರು.

2001: ಖ್ಯಾತ ಗಾಯಕ ಜಾರ್ಜ್ ಹ್ಯಾರಿಸನ್ ತಮ್ಮ 58ನೇ ವಯಸ್ಸಿನಲ್ಲಿ ಲಾಸ್ ಏಂಜೆಲಿಸ್ನಲ್ಲಿ ಗಂಟಲ ಕ್ಯಾನ್ಸರ್ ಪರಿಣಾಮವಾಗಿ ನಿಧನರಾದರು.

1993: ಭಾರತೀಯ ಕೈಗಾರಿಕೋದ್ಯಮಿ ಹಾಗೂ ಭಾರತದಲ್ಲಿ ವಿಮಾನಯಾನದ ಮೊದಲಿಗರಾದ ಜೆ. ಆರ್. ಡಿ. ಟಾಟಾ ಅವರು ಜಿನೇವಾದಲ್ಲಿ ತಮ್ಮ 89ನೇ ವಯಸ್ಸಿನಲ್ಲಿ ನಿಧನರಾದರು. ಪ್ಯಾರಿಸ್ಸಿನ ಅತ್ಯಂತ ದೊಡ್ಡದಾದ ಹಾಗೂ ಹೆಸರುವಾಸಿಯಾದ ಪೇರೆ ಲಾಚೈಸ್ನ ರುದ್ರಭೂಮಿಯಲ್ಲಿ ಅವರ ಅಂತ್ಯಕ್ರಿಯೆ ನೆರವೇರಿಸಲಾಯಿತು. ಬಲ್ಜಾಕ್, ಪಿಸ್ಸಾರೊ, ಚೋಪಿನ್ ಮತ್ತು ಸರಾಹ ಬೆರ್ನಾರ್ಡ್ ಅವರ ಸಾಲಿನಲ್ಲೇ ಟಾಟಾ ಸಮಾಧಿಯನ್ನೂ ನಿರ್ಮಿಸಲಾಯಿತು.

1988: ಪ್ರಧಾನಿ ಸ್ಥಾನಕ್ಕೆ ರಾಜೀವಗಾಂಧಿ ರಾಜೀನಾಮೆ ನೀಡಿದರು.

1977: ಭಾರತದ ಮೈಕೆಲ್ ಫರೀರಾ ಅವರು ತಮ್ಮ ಮೂರು ವಿಶ್ವ ಬಿಲಿಯರ್ಡ್ಸ್ ಅಮೆಚೂರ್ ಚಾಂಪಿಯನ್ ಶಿಪ್ ಗಳ ಪೈಕಿ ಮೊದಲನೆಯದನ್ನು ಮೆಲ್ಬೋರ್ನಿನಲ್ಲಿ ಗೆದ್ದುಕೊಂಡರು. 1981ರಲ್ಲಿ ನವದೆಹಲಿಯಲ್ಲಿ ಹಾಗೂ 1983ರಲ್ಲಿ ಮಾಲ್ಟಾದಲ್ಲೂ ಅವರು ವಿಶ್ವ ಬಿಲಿಯರ್ಡ್ಸ್ ಹವ್ಯಾಸಿ ಚಾಂಪಿಯನ್ ಶಿಪ್ ಗಳನ್ನು ತಮ್ಮ ಹೆಗಲಿಗೆ ಏರಿಸಿಕೊಂಡರು.

1977: ವಿಶ್ವಸಂಸ್ಥೆಯ ಸಾಮಾನ್ಯ ಸಭೆಯು ಈ ದಿನವನ್ನು ಅಂತಾರಾಷ್ಟ್ರೀಯ ಸಾಮರಸ್ಯ ದಿನವಾಗಿ ಆಚರಿಸಲು ಪ್ರಾರಂಭಿಸಿತು. ಈ ದಿನ ಪ್ಯಾಲೆಸ್ಟೈನ್ ವಿಭಜನೆ ಕರಡನ್ನು ಸಭೆ ಅಂಗೀಕರಿಸಿತು. ಸ್ವತಂತ್ರ ಯಹೂದ್ಯ ಮತ್ತು ಅರಬ್ ರಾಜ್ಯವಾಗಿ ಪ್ಯಾಲೆಸ್ಟೈನನ್ನು  ವಿಭಜಿಸಲಾಯಿತು. ಪ್ಯಾಲೆಸ್ಟೈನ್ ಜನರಿಗೆ ಸ್ವಾತಂತ್ರ್ಯ ಹಾಗೂ ಪ್ರಜಾಪ್ರಭುತ್ವ ಲಭಿಸಿತು. 

1960: ಸಾಹಿತಿ ಚಂದ್ರಿಕಾ ಪುರಾಣಿಕ ಜನನ.

1951: ಭಾಷಾಶಾಸ್ತ್ರ, ಕನ್ನಡ ಶೈಲಿ ಶಾಸ್ತ್ರದಲ್ಲಿ ವಿದ್ವಾಂಸರಾದ ಡಾ. ಬಿ. ಮಲ್ಲಿಕಾರ್ಜುನ ಅವರು ಆರ್. ಭದ್ರಣ್ಣ- ತಾಯಮ್ಮ ದಂಪತಿಯ ಮಗನಾಗಿ ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನಲ್ಲಿ ಜನಿಸಿದರು.

1947: ಪ್ಯಾಲೆಸ್ಟೈನನ್ನು ಅರಬರು ಮತ್ತು ಯಹೂದ್ಯರ ಮಧ್ಯೆ ವಿಭಜನೆ ಮಾಡಲು ಕರೆ ನೀಡುವ ಗೊತ್ತುವಳಿಯನ್ನು ವಿಶ್ವಸಂಸ್ಥೆ ಜನರಲ್ ಅಸೆಂಬ್ಲಿಯು ಅಂಗೀಕರಿಸಿತು.

(ಸಂಗ್ರಹ: ನೆತ್ರಕೆರೆ ಉದಯಶಂಕರ)

Friday, November 28, 2008

ಫಿಶ್ ಮಾರ್ಕೆಟಿನಲ್ಲಿ ಲಂಕೇಶ್...! Lankesh in Fish Market..!

ಫಿಶ್ ಮಾರ್ಕೆಟಿನಲ್ಲಿ ಲಂಕೇಶ್...!

ಫಿಶ್ ಮಾರ್ಕೆಟಿನಲ್ಲಿ 29 ನವೆಂಬರ್ 2008ರ ಶನಿವಾರ 'ಲಂಕೇಶ್' ನೆನಪಿನ ಬುತ್ತಿ ಬಿಚ್ಚಲಿದ್ದಾರೆ ಕಿ.ರಂ. ನಾಗರಾಜ್. ವಿವರ ಇಲ್ಲಿದೆ 

ಇಂದಿನ ಇತಿಹಾಸ History Today ನವೆಂಬರ್ 28

ಇಂದಿನ ಇತಿಹಾಸ

ನವೆಂಬರ್ 28

ಚೆಲುವು, ಅನುಭವ, ಚಿಂತನೆ ಇವೆಲ್ಲದರ ಖಣಿಯಾದ ಸೂಸಾನ್ ಪೋಲ್ಗಾರ್ ಅವರು ಈದಿನ ಬೆಂಗಳೂರಿನಲ್ಲಿ ನಡೆದ `ನ್ಯಾಷನಲ್ ಜಿಯೊಗ್ರಾಫಿಕ್ ಚಾನೆಲ್'ನ `ಮೈ ಬ್ರಿಲಿಯಂಟ್ ಬ್ರೈನ್' ಕಾರ್ಯಕ್ರಮದಲ್ಲಿ ಏಕಕಾಲಕ್ಕೆ ಇಪ್ಪತ್ತೊಂದು ಮಂದಿ ಆಟಗಾರರೊಂದಿಗೆ ಸ್ನೇಹ ಪರ ಚೆಸ್ ಆಡಿ, ಅತ್ಯುತ್ತಮ ಚಿಂತನಾ ಶಕ್ತಿಯ ಜೊತೆಯಲ್ಲಿ ಎದುರಾಳಿಯ ಮನಸ್ಸನ್ನು ಅರಿತು `ಕಾಯಿ'ಗಳನ್ನು ನಡೆಸುವ ಸಾಮರ್ಥ್ಯ ಇದ್ದರೆ ಎಷ್ಟೇ ಸಂಖ್ಯೆಯ ಸ್ಪರ್ಧಿಗಳಿದ್ದರೂ ಅವರನ್ನು ಸೋಲಿಸಬಹುದು ಎಂದು ತೋರಿಸಿದರು. 

 2007: ಕರ್ನಾಟಕ ರಾಜ್ಯ ವಿಧಾನಸಭೆಯನ್ನು ವಿಸರ್ಜಿಸಿ ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಅವರು ಆದೇಶ ಹೊರಡಿಸಿದರು. ಇದರೊಂದಿಗೆ ಎರಡು ತಿಂಗಳಿನಿಂದ ರಾಜ್ಯದಲ್ಲಿ ತಲೆದೋರಿದ್ದ ರಾಜಕೀಯ ಗೊಂದಲಗಳಿಗೆ ತೆರೆ ಬಿತ್ತು.

2007: ಚೆಲುವು, ಅನುಭವ, ಚಿಂತನೆ ಇವೆಲ್ಲದರ ಖಣಿಯಾದ ಸೂಸಾನ್ ಪೋಲ್ಗಾರ್ ಅವರು ಈದಿನ ಬೆಂಗಳೂರಿನಲ್ಲಿ ನಡೆದ `ನ್ಯಾಷನಲ್ ಜಿಯೊಗ್ರಾಫಿಕ್ ಚಾನೆಲ್'ನ `ಮೈ ಬ್ರಿಲಿಯಂಟ್ ಬ್ರೈನ್' ಕಾರ್ಯಕ್ರಮದಲ್ಲಿ ಏಕಕಾಲಕ್ಕೆ ಇಪ್ಪತ್ತೊಂದು ಮಂದಿ ಆಟಗಾರರೊಂದಿಗೆ ಸ್ನೇಹ ಪರ ಚೆಸ್ ಆಡಿ, ಅತ್ಯುತ್ತಮ ಚಿಂತನಾ ಶಕ್ತಿಯ ಜೊತೆಯಲ್ಲಿ ಎದುರಾಳಿಯ ಮನಸ್ಸನ್ನು ಅರಿತು `ಕಾಯಿ'ಗಳನ್ನು ನಡೆಸುವ ಸಾಮರ್ಥ್ಯ ಇದ್ದರೆ ಎಷ್ಟೇ ಸಂಖ್ಯೆಯ ಸ್ಪರ್ಧಿಗಳಿದ್ದರೂ ಅವರನ್ನು ಸೋಲಿಸಬಹುದು ಎಂದು ತೋರಿಸಿದರು. 

2007: ದಿನ ಪತ್ರಿಕೆಗಳಲ್ಲಿ ತಮ್ಮ ಬಗ್ಗೆ ಬಂದ ಲೇಖನಗಳು ಹಾಗೂ ಛಾಯಾಚಿತ್ರಗಳನ್ನು ಸಂಗ್ರಹಿಸುವ ಮೂಲಕ ಕೇರಳದ ಕೊಚ್ಚಿಯ ವಯೋವೃದ್ಧ, ಮಾಜಿ ಕಾಂಗ್ರೆಸ್ ಧುರೀಣ 78 ರ ಹರೆಯದ ಅಬ್ರಹಾಂ ಪುತುಸ್ಸೆರಿ ಲಿಮ್ಕಾ ದಾಖಲೆ ಸ್ಥಾಪಿಸಿದರು. 60 ವರ್ಷಗಳ  ಸಾರ್ವಜನಿಕ ಬದುಕಿನಲ್ಲಿ ತಮ್ಮ ಕುರಿತು  ವಿವಿಧ ದಿನಪತ್ರಿಕೆಗಳಲ್ಲಿ ಬಂದ 2000 ಕ್ಕೂ ಹೆಚ್ಚು ವರದಿಗಳು ಹಾಗೂ ಛಾಯಾಚಿತ್ರಗಳನ್ನು ಇವರು ಸಂಗ್ರಹಿಸಿದ್ದಾರೆ. 1948ರಿಂದ ಸಂಗ್ರಹಿಸಿದ ವರದಿಗಳು ಹಾಗೂ ಛಾಯಾಚಿತ್ರಗಳ 480 ಪುಟುಗಳ ಆಲ್ಬಂ ತಯಾರಿಸಿದ್ದಾರೆ. ಇದರ ತೂಕ 4.5 ಕೆಜಿ.

2007: ಗುಜರಾತಿನಲ್ಲಿ ವಿಧಾನಸಭೆ ಚುನಾವಣಾ ಸಿದ್ಧತೆಗಳು ಆರಂಭವಾದವು. ಮುಖ್ಯಮಂತ್ರಿ ನರೇಂದ್ರ ಮೋದಿ ಅವರು ಮಣಿನಗರ ವಿಧಾನಸಭಾ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದರು. 2002ರಲ್ಲಿ ಗುಜರಾತಿನಲ್ಲಿ ಕೋಮುಗಲಭೆ ನಡೆದ ನಂತರ ಚುನಾವಣೆ ನಡೆದಿತ್ತು. ಆಗ ಕೆಲವು ಪ್ರದೇಶಗಳಲ್ಲಿ ಹಿಂದುತ್ವದ ಅಲೆ ಜೋರಾಗಿತ್ತು. ಹಿಂದೂಗಳೇ ಬಹುಸಂಖ್ಯಾತರಾದ ಮಣಿನಗರ ಕ್ಷೇತ್ರದಿಂದ ಮೋದಿ ಜಯಭೇರಿ ಬಾರಿಸಿದ್ದರು.

2007:  1993ರ ಮುಂಬೈ ಸರಣಿ ಸ್ಫೋಟ ಪ್ರಕರಣದಲ್ಲಿ ಸುಪ್ರೀಂಕೋರ್ಟಿನಿಂದ ಜಾಮೀನು ಪಡೆದ ನಟ ಸಂಜಯ್ ದತ್ ಹಾಗೂ ಇತರ 16 ಅಪರಾಧಿಗಳ ಬಿಡುಗಡೆಗೆ ವಿಶೇಷ ಟಾಡಾ ನ್ಯಾಯಾಲಯ ಆದೇಶ ನೀಡಿತು. ಸರಣಿ ಸ್ಫೋಟ ಪ್ರಕರಣದಲ್ಲಿ ಅಕ್ರಮ ಶಸ್ತ್ರಾಸ್ತ್ರ ಹೊಂದಿದ್ದ ಆರೋಪದ ಮೇಲೆ ಸಂಜಯ್ ದತ್ ಅವರಿಗೆ ಟಾಡಾ ಕೋರ್ಟ್ 6 ವರ್ಷ ಜೈಲು ಶಿಕ್ಷೆ ವಿಧಿಸಿತ್ತು. ಅಕ್ಟೋಬರ್ 22ರಿಂದ ಅವರು ಯೆರವಾಡ ಜೈಲಿನಲ್ಲಿ ಇರಿಸಲಾಗಿತ್ತು. ಪ್ರಕರಣದ ಇತರ ಆರೋಪಿಗಳನ್ನು ಮಹಾರಾಷ್ಟ್ರದ ವಿವಿಧ ಜೈಲುಗಳಲ್ಲಿ ಇರಿಸಲಾಗಿತ್ತು.ಸಂಜಯ್ ಹಾಗೂ ಇತರ 16 ಮಂದಿಗೆ ನವೆಂಬರ್ 27ರಂದು ಸುಪ್ರೀಂಕೋರ್ಟ್ ಜಾಮೀನು ನೀಡಿತು. 1995 ರಲ್ಲಿ ಮೊದಲ ಬಾರಿ ಸುಪ್ರೀಂಕೋರ್ಟ್ ಜಾಮೀನು ನೀಡಿದಾಗ ಸಂಜಯ್ ದತ್ 5 ಲಕ್ಷ ರೂ ಭದ್ರತಾ ಮುಚ್ಚಳಿಕೆ ನೀಡಿದ್ದರು. ಈಗಲೂ ಅಷ್ಟೇ ಮೊತ್ತದ ಹಣ ನೀಡಬೇಕು ಎಂದು ನ್ಯಾಯಾಧೀಶ ಕೋಡೆ ಸೂಚಿಸಿದರು.

2007: ಸ್ವತಂತ್ರ ಪ್ಯಾಲೆಸ್ಟೈನ್ ರಾಜ್ಯ ಸ್ಥಾಪನೆ ಕುರಿತಂತೆ ಸ್ಥಗಿತವಾಗಿದ್ದ ದೀರ್ಘಕಾಲೀನ ಮಾತುಕತೆಯನ್ನು ಪುನರಾರಂಭಿಸಲು ಇಸ್ರೇಲ್ ಮತ್ತು ಪ್ಯಾಲೆಸ್ಟೀನ್ ನಾಯಕರು ಒಪ್ಪಿಕೊಂಡರು. ಮುಂದಿನ ವರ್ಷದ ಅಂತ್ಯದೊಳಗಾಗಿ ಸ್ವತಂತ್ರ ಪ್ಯಾಲೆಸ್ಟೈನಿ ರಾಜ್ಯ ಸ್ಥಾಪಿಸಲು ಇಸ್ರೇಲ್ ಪ್ರಧಾನಿ ಎಹುದ್ ಓಲ್ಮರ್ಟ್ ಮತ್ತು ಪ್ಯಾಲೆಸ್ಟೈನ್ ಅಧ್ಯಕ್ಷ ಮಹಮೂದ್ ಅಬ್ಬಾಸ್ ಅವರು ಪರಸ್ಪರ ಒಪ್ಪಿಗೆ ನೀಡಿದ್ದಾರೆ' ಎಂದು ಅಮೆರಿಕದ ಅಧ್ಯಕ್ಷ ಜಾರ್ಜ್ ಡಬ್ಲ್ಯು ಬುಷ್ ಮೇರಿ ಲ್ಯಾಂಡಿನ ಅನ್ನಾಪೊಲಿಸ್ನಲ್ಲಿ ಹೇಳಿದರು.

 2007: ಪಾಕಿಸ್ಥಾನದ ಸೇನಾ ಮುಖ್ಯಸ್ಥನ ಹುದ್ದೆಯನ್ನು ಅಧ್ಯಕ್ಷ ಜನರಲ್ ಪರ್ವೇಜ್ ಮುಷರಫ್ ಕೊನೆಗೂ ತ್ಯಜಿಸಿದರು. ಪುನಃ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳುವ ಒಂದು ದಿನ ಮುಂಚಿತವಾಗಿ  ಮುಷರಫ್ ಅವರು ಸೇನಾ ಮುಖ್ಯಸ್ಥನ ಸ್ಥಾನವನ್ನು ಇಸ್ಲಾಮಾಬಾದಿನಲ್ಲಿ ಜನರಲ್ ಅಷ್ಫಾಕ್ ಪರ್ವೇಜ್ ಕಿಯಾನಿ ಅವರಿಗೆ ವಹಿಸಿಕೊಟ್ಟರು. 

2007: ಕಿರ್ಗಿಜ್ ಸ್ಥಾನದ ಪ್ರಧಾನಿ ಅಲ್ಮಜ್ ಬೆಕ್ ಅತಾಂಬೆಯೆವ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದರು. ಈ ರಾಜೀನಾಮೆಯನ್ನು ಅಧ್ಯಕ್ಷ ಕುರ್ಮನ್ ಬೆಕ್ ಬಕಿಯೆವ್ ಅಂಗೀಕರಿಸಿದರು.

2007: 2001ರಲ್ಲಿ ಬಹು ಚರ್ಚೆಗೆ ಗ್ರಾಸವಾಗಿದ್ದ `ಬಿಲ್ಡರ್' ಶ್ರೀನಿವಾಸ ಅವರ ಕೊಲೆ ಪ್ರಕರಣದಲ್ಲಿ ಪ್ರಮುಖ ಪಾತ್ರ ವಹಿಸಿದ ಆರೋಪಕ್ಕೆ ಒಳಗಾಗಿದ್ದ ಮುತ್ತಪ್ಪ ರೈ ಅವರನ್ನು ಆರೋಪ ಮುಕ್ತಗೊಳಿಸಿ ಸೆಷನ್ಸ್ ನ್ಯಾಯಾಲಯ ಹೊರಡಿಸಿದ ಆದೇಶವನ್ನು ಹೈಕೋರ್ಟ್ ಊರ್ಜಿತಗೊಳಿಸಿತು.

2007: ತರಗತಿ ಬೋಧನೆಯಲ್ಲಿ ತಂತ್ರಜ್ಞಾನವನ್ನು ಗರಿಷ್ಠ ಪ್ರಮಾಣದಲ್ಲಿ ಬಳಸಲು ನೆರವಾಗುವ, ಬೋಧನೆ ಮತ್ತು ಕಲಿಕೆಯನ್ನು ಹೆಚ್ಚು ಸುಲಲಿತಗೊಳಿಸುವ ಸಾಫ್ಟ್ಟವೇರನ್ನು ಬೆಂಗಳೂರಿನಲ್ಲಿ ಪ್ರೊಮೆಥಿಯಾನ್ ದೇಶಿ ಮಾರುಕಟ್ಟೆಗೆ ಬಿಡುಗಡೆ ಮಾಡಿತು. ವಿಭಿನ್ನ ಬಗೆಯ ತಂತ್ರಜ್ಞಾನ ಆಧಾರಿತ ಬೋಧನಾ ವಿಧಾನದ ಮೂಲಕ ಮಕ್ಕಳ ಗಮನ ಕೇಂದ್ರಿಕರಿಸುತ್ತಲೇ ಪರಿಣಾಮಕಾರಿ ಕಲಿಕೆಗೆ ಈ ಶ್ವೇತ ಹಲಗೆ (ವ್ಹೈಟ್ ಬೋರ್ಡ್) ಶ್ರೇಣಿಯ ಉತ್ಪನ್ನಗಳು ಶಿಕ್ಷಣ ರಂಗದಲ್ಲಿ ಹೊಸ ಅಲೆ ಮೂಡಿಸಲಿವೆ ಎಂಬುದು ಕಂಪೆನಿಯ ಅಂತಾರಾಷ್ಟ್ರೀಯ ಮಾರಾಟ ವ್ಯವಸ್ಥಾಪಕ ಪೀಟರ್ ಆರ್ಮೆರೋಡ್ ವಿಶ್ವಾಸ. ಈ ಶ್ವೇತ ಹಲಗೆಯನ್ನು ದೀರ್ಘಕಾಲ ಬಾಳಿಕೆ ಬರುವಂತೆ ನಿರ್ಮಿಸಲಾಗಿದೆ. ಕಂಪ್ಯೂಟರ್, ಪ್ರೊಜೆಕ್ಟರ್ ಮತ್ತು ಬಿಳಿ ಹಲಗೆ ಜೊತೆಗೆ ನೀಡಲಾಗುವ ಈ ಸಾಫ್ಟ್ಟವೇರ್ ವರ್ಣರಂಜಿತ ಕಲಿಕೆಯ ಅನುಭವ ನೀಡುತ್ತದೆ. ಬೋಧನೆಗೆ ಅಗತ್ಯವಾದ ಪಠ್ಯಕ್ರಮ, ಚಿತ್ರ, ನಕ್ಷೆ ಮತ್ತಿತರ ಪೂರಕ ಮಾಹಿತಿಯೂ ಈ ಸಾಫ್ಟವೇರಿನಲ್ಲಿ ಅಡಕವಾಗಿರುತ್ತದೆ.  ಸದ್ಯಕ್ಕೆ ಈ ತಂತ್ರಜ್ಞಾನವು 25 ಭಾಷೆಗಳಲ್ಲಿ ಲಭ್ಯ. ಮುಂದೆ ಶೀಘ್ರದಲ್ಲೇ 40 ಭಾಷೆಗಳಲ್ಲಿ ಅಭಿವೃದ್ಧಿಪಡಿಸಲಾಗುವುದು. ಬೆಂಗಳೂರಿನ ಬೆಥನಿ ಹೈಸ್ಕೂಲ್ ಈ ತಂತ್ರಜ್ಞಾನ ಅಳವಡಿಸಿಕೊಂಡಿದೆ. 

2006: ತಮ್ಮ ಆಪ್ತ ಸಹಾಯಕ ಶಶಿನಾಥ ಝಾ ಕೊಲೆ ಪ್ರಕರಣದಲ್ಲಿ ಕೇಂದ್ರ ಕಲ್ಲಿದ್ದಲು ಖಾತೆ ಸಚಿವ ಶಿಬು ಸೊರೇನ್ ತಪ್ಪಿತಸ್ಥ ಎಂಬುದಾಗಿ ದೆಹಲಿಯ ಅಡಿಷನಲ್ ಸೆಷನ್ಸ್ ನ್ಯಾಯಾಧೀಶ ಬಿ.ಆರ್. ಕೆದಿಯಾ ಅವರ ನ್ಯಾಯಾಲಯ ತೀರ್ಪು ನೀಡಿತು. ಈ ಹಿನ್ನೆಲೆಯಲ್ಲಿ ಶಿಬು ಸೊರೇನ್  ಕೇಂದ್ರ ಸಂಪುಟಕ್ಕೆ ರಾಜೀನಾಮೆ ಸಲ್ಲಿಸಿದರು. ಕಾಕತಾಳೀಯವಾಗಿ 12 ವರ್ಷಗಳ ಬಳಿಕ ಕೊಲೆ ನಡೆದ ದಿನಾಂಕದಂದೇ ತಪ್ಪಿತಸ್ಥರೆಂದು ಘೋಷಿತರಾಗಿರುವ ಸೊರೇನ್ ಸ್ವಾತಂತ್ರ್ಯಾನಂತರ ಕೊಲೆ ಅಪರಾಧಕ್ಕಾಗಿ ಶಿಕ್ಷೆಗೆ ಗುರಿಯಾದ ಮೊದಲ ಕೇಂದ್ರ ಸಂಪುಟ ಸಚಿವ ಎಂಬ ಕುಖ್ಯಾತಿಗೂ ಪಾತ್ರರಾದರು. 1994ರ ನವೆಂಬರ್ 28ರಂದು ಝಾ ಅವರನ್ನು ಕೊಂದ ಪ್ರಕರಣದಲ್ಲಿ ಇತರ ನಾಲ್ಕು ಮಂದಿಯನ್ನು ಕೂಡಾ ತಪ್ಪಿತಸ್ಥರು ಎಂದು ನ್ಯಾಯಾಧೀಶರು ತೀರ್ಪು ನೀಡಿದರು. ತೀರ್ಪು ಹೊರಬೀಳುತ್ತಿದ್ದಂತೆಯೇ ನ್ಯಾಯಾಲಯದಲ್ಲಿ ಹಾಜರಿದ್ದ 62 ವರ್ಷದ ಸೊರೇನ್ ಅವರನ್ನು ಬಂಧಿಸಲಾಯಿತು. ಸೊರೇನ್ ಅವರು ಕ್ರಿಮಿನಲ್ ಸಂಚು, ಕೊಲೆ ಮತ್ತು ಅಪಹರಣದ ಅಪರಾಧಗಳಲ್ಲಿ ತಪ್ಪಿತಸ್ಥರಾಗಿದ್ದಾರೆ ಎಂದು ನ್ಯಾಯಾಲಯ ಹೇಳಿತು. ಸೊರೇನ್ ಅವರು ಸಂಪುಟ ತ್ಯಜಿಸಬೇಕಾಗಿ ಬಂದದ್ದು ಇದು ಎರಡನೇ ಸಲ. ಈ ಮೊದಲು 1980ರ ಆದಿಯ ಪ್ರತಿಭಟನಾ ಪ್ರದರ್ಶನ ಕಾಲದ ಕೊಲೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಜಾರ್ಖಂಡ್ ನ್ಯಾಯಾಲಯವೊಂದು ಜಾಮೀನುರಹಿತ ಬಂಧನ ವಾರಂಟ್ ಹೊರಡಿಸಿದಾಗ ಸೊರೇನ್ ಅವರು ರಾಜೀನಾಮೆ ನೀಡಬೇಕಾಗಿ ಬಂದಿತ್ತು. ನಂತರ ಜಾಮೀನು ಪಡೆದಿದ್ದ ಸೊರೇನ್ ಅವರನ್ನು ಈ ವರ್ಷ ಜನವರಿಯಲ್ಲಿ ಸಂಪುಟಕ್ಕೆ ಮರು ಸೇರ್ಪಡೆ ಮಾಡಿಕೊಳ್ಳಲಾಗಿತ್ತು. ಪ್ರಸ್ತುತ ಝಾ ಕೊಲೆ ಪ್ರಕರಣದ ತನಿಖೆ ನಡೆಸಿದ್ದ ಸಿಬಿಐ, ಝಾ ಅವರನ್ನು 1994ರ ಮೇ 22ರಂದು ದೆಹಲಿಯಿಂದ ಅಪಹರಿಸಿ ರಾಂಚಿ ಸಮೀಪದ ಪಿಸ್ಕಾ ನಗರಿ ಗ್ರಾಮಕ್ಕೆ ಒಯ್ದು ಅಲ್ಲಿ ಕೊಲ್ಲಲಾಯಿತು ಎಂದು 1998ರ ನವೆಂಬರ್ 10ರಂದು ಸಲ್ಲಿಸಿದ ಪ್ರಕರಣದ ದೋಷಾರೋಪ ಪಟ್ಟಿಯಲ್ಲಿ ತಿಳಿಸಿತ್ತು. ಝಾ ಅವರಿಗೆ 1993ರ ಜುಲೈ ತಿಂಗಳಲ್ಲಿ ಪಿ.ವಿ. ನರಸಿಂಹರಾವ್ ಸರ್ಕಾರ ಅವಿಶ್ವಾಸ ನಿರ್ಣಯ ಎದುರಿಸಿದ ಸಂದರ್ಭದಲ್ಲಿ ರಾವ್ ಸರ್ಕಾರ ಉಳಿಕೆಗಾಗಿ ನಡೆದ ಜೆಎಂಎಂ - ಕಾಂಗ್ರೆಸ್ ಒಪ್ಪಂದದ ವಿವರ ಗೊತ್ತಿತ್ತು. ಅವರು ಈ ಹಣದಲ್ಲಿ ತಮ್ಮ ಪಾಲು ನೀಡುವಂತೆ ಒತ್ತಾಯಿಸುತ್ತಿದ್ದ ಹಿನ್ನೆಲೆಯಲ್ಲಿ ಅವರನ್ನು ಕೊಲ್ಲಲಾಯಿತು. ಝಾ ಅವರು ಹೆಚ್ಚು ಹಣ ನೀಡುವಂತೆ ಸೊರೇನ್ ಅವರನ್ನು ಒತ್ತಾಯಿಸುತ್ತಿದ್ದರು. ಹೀಗೆ ಒತ್ತಾಯಿಸಲು ಸೊರೇನ್ ಅವರ ಅಕ್ರಮ ಹಣಕಾಸು ವ್ಯವಹಾರಗಳ ಬಗ್ಗೆ ಹಾಗೂ ಅವರ ಹಲವಾರು ರಹಸ್ಯಗಳು ಗೊತ್ತಿದ್ದುದು ಕಾರಣವಾಗಿತ್ತು ಎಂದು ದೋಷಾರೋಪ ಪಟ್ಟಿಯಲ್ಲಿ ಸಿಬಿಐ ತಿಳಿಸಿತ್ತು. 1998ರ ಆಗಸ್ಟ್ 13ರಂದು ಸಿಬಿಐ ಝಾ ಅವರ ಅಸ್ಥಿಪಂಜರವನ್ನು ರಾಂಚಿ ಸಮೀಪದ ಪಿಸ್ಕಾನಗರಿ ಗ್ರಾಮದ ಸಮೀಪ ಪತ್ತೆ ಹಚ್ಚಲಾಯಿತು ಎಂದು ಹೇಳಿತ್ತು. ಹೈದರಾಬಾದಿನ ವಿಧಿವಿಜ್ಞಾನ ಪ್ರಯೋಗಾಲಯದ ತಜ್ಞರು ಈ ಅಸ್ಥಿಪಂಜರದ ಪರಿಶೀಲನೆಯ ಬಳಿಕ ತಲೆ ಬುರುಡೆ ಝಾ ಅವರದ್ದು ಎಂದು ತಮ್ಮ ವರದಿಯಲ್ಲಿ ದೃಢಪಡಿಸಿದ್ದರು. ಸೊರೇನ್ ಅವರು ಮೊದಲಿಗೆ ಝಾ ಅವರಿಗೆ ದಕ್ಷಿಣ ದೆಹಲಿಯಲ್ಲಿ ಜವಳಿ ಗಿರಣಿ ಒಂದರ ಸ್ಥಾಪನೆಗಾಗಿ 15 ಲಕ್ಷ ರೂಪಾಯಿ ನೀಡಿದ್ದರು. ಈ ವಹಿವಾಟಿನಲ್ಲಿ ನಷ್ಟವಾದಾಗ ಝಾ ಮತ್ತೆ ಹಣ ನೀಡುವಂತೆ ಸೊರೇನ್ ಅವರನ್ನು ಕಾಡತೊಡಗಿದರು. ಇದು ಅಂತಿಮವಾಗಿ ಅವರ ಕೊಲೆಯಲ್ಲಿ ಪರ್ಯವಸಾನಗೊಂಡಿತು ಎಂದೂ ಸಿಬಿಐ ತಿಳಿಸಿತ್ತು.

2006: ಮುಂಬೈಯಲ್ಲಿ 1993ರಲ್ಲಿ ಸರಣಿ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ಡಿನ ಜನಪ್ರಿಯ ನಟ ಸಂಜಯದತ್ (47) ಅವರು ಶಸ್ತ್ರಾಸ್ತ್ರ ಹೊಂದಿದ್ದ ಆರೋಪ ಸಾಬೀತಾಗಿದ್ದು ಆತ ಡಿಸೆಂಬರ್ 19ರಂದು ನ್ಯಾಯಾಲಯಕ್ಕೆ ಶರಣಾಗಬೇಕು ಎಂದು ವಿಶೇಷ ಟಾಡಾ ನ್ಯಾಯಾಲಯ ಆದೇಶ ನೀಡಿತು. ಆದರೆ ಸಾಕ್ಷ್ಯಾಧಾರಗಳ ಪ್ರಕಾರ ಸಂಜಯದತ್ ಭಯೋತ್ಪಾದಕ ಅಲ್ಲ, ಅವರ ಮೇಲಿನ ಸರಣಿ ಬಾಂಬ್ ಸ್ಫೋಟದ ಸಂಚಿನಲ್ಲಿ ಭಾಗಿಯಾದ ಆರೋಪ ಕೈಬಿಡಲಾಗಿದೆ ಎಂದು ನ್ಯಾಯಮೂರ್ತಿ ಪಿ.ಡಿ. ಖೋಡೆ ತೀರ್ಪು ನೀಡಿದರು.

2005: ಮಧ್ಯಪ್ರದೇಶ ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಶಿವರಾಜ್ ಸಿಂಗ್ ಚೌಹಾಣ್ ಆಯ್ಕೆಯಾದರು. ಮಾಜಿ ಮುಖ್ಯಮಂತ್ರಿ ಉಮಾ ಭಾರತಿ ಮತ್ತು ಅವರ ಬೆಂಬಲಿಗರು ಈ ಸಂದರ್ಭದಲ್ಲಿ ತೀವ್ರ ಪ್ರತಿಭಟನೆ ನಡೆಸಿ ಧಿಕ್ಕಾರ ಕೂಗಿದರು.

1990: ಬ್ರಿಟನ್ನಿನ ಮೊತ್ತ ಮೊದಲ ಮಹಿಳಾ ಪ್ರಧಾನಿ ಮಾರ್ಗರೆಟ್ ಥ್ಯಾಚರ್ ಅವರು ರಾಣಿ ಎರಡನೇ ಎಲಿಜಬೆತ್ ಅವರಿಗೆ ತಮ್ಮ ರಾಜೀನಾಮೆಯನ್ನು ಕಳುಹಿಸಿದರು. `ಉಕ್ಕಿನ ಮಹಿಳೆ' ಎಂದೇ ಖ್ಯಾತಿ ಪಡೆದಿದ್ದ ಇವರು  ಮೂರು ಚುನಾವಣೆಗಳನ್ನು ಸತತವಾಗಿ ಜಯಿಸಿ ಬ್ರಿಟನನ್ನು 11 ವರ್ಷಗಳಷ್ಟು ದೀರ್ಘಕಾಲ ಆಳಿದ (1979-1990) ಪ್ರಧಾನಿ. 

1964: ಮೆರೈನರ್ -4 ಬಾಹ್ಯಾಕಾಶ ಸಂಶೋಧನಾ ನೌಕೆಯನ್ನು  ಅಮೆರಿಕವು ಮಂಗಳ ಗ್ರಹದತ್ತ ಹಾರಿಸಿತು.

1957: ಸಾಹಿತಿ ಹಾ.ವಿ. ಮಂಜುಳಾ ಶಿವಾನಂದ ಜನನ.

1954: ಸಾಹಿತಿ ನಂದಿನಿ ಕಾಪಡಿ ಜನನ.

1946: ಸಾಹಿತಿ ಎಸ್. ದಿವಾಕರ್ ಜನನ.

1944: ಸಾಹಿತಿ ಕ.ರಾ. ಮೋಹನ್ ಜನನ.

1943: ದ್ವಿತೀಯ ವಿಶ್ವ ಸಮರ ಕಾಲದಲ್ಲಿ ಅಮೆರಿಕದ ಅಧ್ಯಕ್ಷ ರೂಸ್ ವೆಲ್ಟ್, ಬ್ರಿಟಿಷ್ ಪ್ರಧಾನಿ ವಿನ್ ಸ್ಟನ್ ಚರ್ಚಿಲ್ ಹಾಗೂ ಸೋವಿಯತ್ ನಾಯಕ ಜೋಸೆಫ್ ಸ್ಟಾಲಿನ್ ಮೂವರೂ ಟೆಹರಾನಿನಲ್ಲಿ ಸಭೆ ಸೇರಿದರು. `ಎರಡನೇ ರಂಗ' ಸ್ಥಾಪನೆ ಈ ಮಾತುಕತೆಯ ಗುರಿಯಾಗಿತ್ತು. ಜರ್ಮನ್ ಆಕ್ರಮಿತ ಫ್ರಾನ್ಸಿನಲ್ಲಿ ದಾಳಿ ನಡೆಯುವ ಕಾಲಕ್ಕೇ ಪೂರ್ವದಿಂದ ದಾಳಿ ನಡೆಸಲು ಸ್ಟಾಲಿನ್ ಒಪ್ಪಿಗೆ ನೀಡಿದರು.

1942: ಸಾಹಿತಿಗಳಾದ ಎಂ.ಎಂ. ಕಲಬುರ್ಗಿ, ಚಿ. ಶ್ರೀನಿವಾಸ ರಾಜು ಜನನ.

1940: ಸಾಹಿತಿ ಎಸ್. ರಾಜಗೋಪಾಲಾಚಾರಿ ಜನನ.

1934: ಸಾಹಿತಿ ಗೌರು ಭಟ್ ಜನನ.

1925: ನವ್ಯ ಸಾಹಿತ್ಯದ ಪ್ರವರ್ತಕರಲ್ಲಿ ಒಬ್ಬರಾದ ಡಾ. ಬಿ.ಸಿ. ರಾಮಚಂದ್ರ ಶರ್ಮ (28-11-1925ರಿಂದ 18-4-2005) ಅವರು ಚಂದ್ರಶೇಖರ ಶರ್ಮ- ಲಕ್ಷ್ಮೀ ದೇವಮ್ಮ ದಂಪತಿಯ ಮಗನಾಗಿ ಮುಂಬೈಯಲ್ಲಿ ಜನಿಸಿದರು. ಇವರ ಪೂರ್ವೀಕರು ನಾಗಮಂಗಲ ತಾಲ್ಲೂಕಿನವರು.

1864: ಬಾಂಬೆ-ಬರೋಡಾ ಅಂಡ್ ಸೆಂಟ್ರಲ್ ಇಂಡಿಯಾ ರೈಲ್ವೇಸ್ (ಬಿಬಿ ಅಂಡ್ ಸಿಐ) ಮಾರ್ಗವನ್ನು ಸೂರತ್ ಸಮೀಪದ ಉಟ್ರಾನಿನಲ್ಲಿ  ಉದ್ಘಾಟಿಸಲಾಯಿತು. ಈ ರೈಲು ಮಾರ್ಗವು ಸೂರತ್ತಿನ ಉಟ್ರಾನಿನಿಂದ ಬಾಂಬೆಯ (ಈಗಿನ ಮುಂಬೈ) ಗ್ರಾಂಟ್ ರೋಡ್ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸಿತು. 1866ರಲ್ಲಿ ಗ್ರಾಂಟ್ ರೋಡ್ ಲೈನನ್ನು ಬ್ಯಾಕ್ ಬೇವರೆಗೆ ವಿಸ್ತರಿಸಲಾಯಿತು. 1973ರಲ್ಲಿ ಕೊಲಾಬಾದಲ್ಲಿ ನೂತನ ಟರ್ಮಿನಲ್ ಸ್ಥಾಪನೆ ಸಲುವಾಗಿ ಇನ್ನಷ್ಟು ವಿಸ್ತರಿಸಲಾಯಿತು.

1520: ಪೋರ್ಚುಗೀಸ್ ನಾವಿಕ ಫರ್ಡಿನಾಂಡ್ ಮೆಗೆಲ್ಲನ್ ದಕ್ಷಿಣ ಅಮೆರಿಕನ್ ಜಲಸಂಧಿಯ ಮೂಲಕವಾಗಿ ಫೆಸಿಫಿಕ್ ಸಾಗರವನ್ನು ತಲುಪಿದ. ಈ ಜಲಸಂಧಿಗೆ ಈಗ ಆತನ ಹೆಸರನ್ನೇ ಇಡಲಾಗಿದೆ.

(ಸಂಗ್ರಹ: ನೆತ್ರಕೆರೆ ಉದಯಶಂಕರ)

ಸಮುದ್ರ ಮಥನ 12: ರಾಮನ ಗುಣಗಳ ಗಣಿ

ಸಮುದ್ರ ಮಥನ 12: ರಾಮನ ಗುಣಗಳ ಗಣಿ

ಅಂತರಂಗದ ದರ್ಶನವನ್ನು ಅಂತೆಯೇ ಸ್ಪರ್ಶಿಸುವ ಸಾಹಿತ್ಯವನ್ನು ಮಾತ್ರ ಕಾವ್ಯ, ಮಹಾಕಾವ್ಯ ಎಂದು ಹೇಳಬಹುದು. ಹಾಗೆ  ರಚಿತವಾದ ಸಾಹಿತ್ಯ ಪ್ರಬುದ್ಧ ಓದುಗನನ್ನು ತುದಿ ತಲುಪಿಸುವಲ್ಲಿ ಸಮರ್ಥವಾಗಿರುತ್ತದೆ. ಹಾಗೆ ನೋಡಿದಾಗ ರಾಮಾಯಣ, ಮಹಾಭಾರತ ಮಾತ್ರ ಆ ಸಾಲಿನಲ್ಲಿ ನಿಲ್ಲುತ್ತವೆ.

ವಿಷಯವನ್ನು ಮತ್ತೆ ಮತ್ತೆ ಕೇಳಿದಷ್ಟೂ ಗುಣಸಂಪನ್ನತೆ ಬರಬಹುದೇನೋ ಎಂಬ ಆಸೆ ನಮಗೆ. ಅದರಲ್ಲಿಯೂ ಆತ್ಮಗುಣಗಳ ಬಗ್ಗೆ ಕೇಳುವುದೆಂದರೆ ಮುಗಿಯಿತು. ಅಲ್ಲಿ ದ್ವಂದ್ವವಿಲ್ಲದ್ದೇ ಹಾಗಾಗಲು ಕಾರಣ ಎನಿಸುತ್ತದೆ. ಹಾಗಾಗಿ ಅಲ್ಲಿ ಜಳ್ಳಿಗೆ ಆಸ್ಪದವಿಲ್ಲ. 
ಇಷ್ಟರವರೆಗೆ ರಾಮನ ಗುಣಗಳ ಆಳ, ಅಗಲ, ಅದರ ಹರವು ಹೀಗೊಂದಿಷ್ಟು ಚಿಂತನೆ ಮಾಡಲಾಯಿತು. ಇನ್ನು ಅವನ ಗುಣಗಳ ಗಣಿಯನ್ನೊಮ್ಮೆ ನೋಡೋಣ. ಸಾಧ್ಯವಾದಷ್ಟನ್ನು ಹೆಕ್ಕಿಕೊಳ್ಳೋಣ. ಹೆಕ್ಕಿದ್ದನ್ನು ಧರಿಸಲು, ಕೊನೆಯಲ್ಲಿ ಆ ಗುಣಮೂರ್ತಿಯೇ ಆಗಲು ಪ್ರಯತ್ನಿಸೋಣ. 

ಅವನು ಅರವತ್ತೆರಡು ಆತ್ಮಗುಣಗಳನ್ನು ಹೊಂದಿ, ಶ್ರೀಮಂತನಾಗಿದ್ದಾನೆ. ಇಕ್ಷ್ವಾಕುವಂಶ ಪ್ರಭವಃ - ಹುಟ್ಟಿದ್ದು ಇಕ್ಷ್ವಾಕು ವಂಶದಲ್ಲಿ, ನಿಯತಾತ್ಮಾ - ಆತ್ಮ ಸಂಯಮ ಉಳ್ಳವನು, ಮಹಾವೀರ್ಯಃ, ವಶೀ - ಎಲ್ಲವನ್ನೂ ನಿಯಂತ್ರಿಸಿಕೊಂಡವನು, ಬುದ್ಧಿಮಾನ್ - ಪ್ರಶಸ್ತ ಬುದ್ಧಿಯುಳ್ಳವನು, ನೀತಿಮಾನ್ - ಭುವಿಯಿಂದ ದಿವಿಗೆ ತಲುಪುವ ನೀತಿಯನ್ನು ಅರಿತವನು, ಶತ್ರುನಿಬರ್ಹಣಃ - ಅಂತಃಶತ್ರುಗಳನ್ನು ಗೆದ್ದವನು (ಕಾಮ, ಕ್ರೋಧ, ಲೋಭ, ಮೋಹ ಇಂತಹವುಗಳನ್ನು ಗೆದ್ದವನು), ಪ್ರತಾಪವಾನ್ - ಪ್ರತಾಪಶಾಲಿ, ಲಕ್ಷ್ಮೀವಾನ್ - ಲಕ್ಷ್ಮಿಯನ್ನು ಹೊಂದಿರುವವನು, ಧರ್ಮಜ್ಞಃ, ಸತ್ಯಂಸಂಧಃ - ಸತ್ಯದೊಟ್ಟಿಗೆ ಸಂಧಿ ಹೊಂದಿರುವವನು (ನಿರಂತರವಾಗಿ ವಿಗ್ರಹ ಇಲ್ಲ), ಧನುರ್ವೇದಃ ಚ ನಿಷ್ಠಿತಃ - ಧನುರ್ವೇದ ಮೂರ್ತಿವೆತ್ತಂತೆ, ಪ್ರಜಾನಾಂ ಚ ಹಿತೇ ರತಃ - ಪ್ರಜೆಗಳ ಹಿತದಲ್ಲಿ ರತ, ಸಮಾಧಿವಾನ್ - ಏಕಾಗ್ರತೆಯ ಚರಮಸೀಮೆಯನ್ನು ಹೊಂದಿದವನು, ರಕ್ಷಿತಾ ಜೀವಲೋಕಸ್ಯ - ಜೀವಲೋಕದ ರಕ್ಷಕ, ಸರ್ವಸಮಃ - ಎಲ್ಲರನ್ನೂ ಸಮನಾಗಿ ಕಾಣುವವನು, ಸದೈವ ಪ್ರಿಯದರ್ಶನಃ - ಯಾವಾಗಲೂ ಪ್ರಿಯದರ್ಶನ, ಸಮುದ್ರ ಇವ ಗಾಂಭೀರ್ಯೇ - ಸಮುದ್ರದಂತೆ ಗಂಭೀರ, ಹಿಮಾಲಯಪರ್ವತದಂತೆ ಧೈರ್ಯವಂತ, ಪ್ರಳಯಕಾಲದ ಸಿಟ್ಟುಳ್ಳವನು, ಭೂಮಿಯ ಕ್ಷಮೆ, ಕುಬೇರನಂಥ ತ್ಯಾಗಮಯಿ, ಸತ್ಯದಲ್ಲಿ ಹೇಗೆ ಎನ್ನಲು ಉಪಮೆಯೇ ಸಿಗಲಿಲ್ಲ. ಹಿಮಾಲಯ, ಸಾಗರ ಎಲ್ಲ ಮುಗಿದಿತ್ತು. ಅವನು ಸತ್ಯವೇ ಮೈವೆತ್ತಿ ಬಂದ ಸತ್ಯಮೂರ್ತಿ ಎಂದಷ್ಟೇ ಹೇಳಲು ಸಾಧ್ಯವಾಯಿತು. 

ಇದನ್ನು ಓದುವಾಗ ಒಂದಂಶವನ್ನು ನೆನಪಿಟ್ಟುಕೊಳ್ಳಲೇಬೇಕು. ಕವಿ ಎಂದರೆ ಮನಸ್ಸಿಗೆ ತೋಚಿದ್ದನ್ನು ಚಿತ್ರವಿಚಿತ್ರವಾಗಿ ಗೀಚುವವನಲ್ಲ. ಕಾವ್ಯ ರಚನೆಯೊಂದು ಸುವ್ಯವಸ್ಥಿತ ಪ್ರಕ್ರಿಯೆ. ಅಂತರಂಗದ ದರ್ಶನವನ್ನು ಅಂತೆಯೇ ಸ್ಪರ್ಶಿಸುವ ಸಾಹಿತ್ಯವನ್ನು ಮಾತ್ರ ಕಾವ್ಯ, ಮಹಾಕಾವ್ಯ ಎಂದು ಹೇಳಬಹುದು. ಹಾಗೆ ರಚಿತವಾದ ಸಾಹಿತ್ಯ ಪ್ರಬುದ್ಧ ಓದುಗನನ್ನು ತುದಿ ತಲುಪಿಸುವಲ್ಲಿ ಸಮರ್ಥವಾಗಿರುತ್ತದೆ. ಹಾಗೆ ನೋಡಿದಾಗ ರಾಮಾಯಣ, ಮಹಾಭಾರತ ಮಾತ್ರ ಆ ಸಾಲಿನಲ್ಲಿ ನಿಲ್ಲುತ್ತವೆ.  

ಆ ನೆಲೆಯಲ್ಲಿ ರಾಮನ ಗುಣಗಳ ಗಾಂಭೀರ್ಯದ ಬಗೆಗೆ ಗಂಭೀರ ಚಿಂತನೆ ನಡೆಯಬೇಕು. 
 

ಇಂದಿನ ಇತಿಹಾಸ History Today ನವೆಂಬರ್ 27

ಇಂದಿನ ಇತಿಹಾಸ

ನವೆಂಬರ್ 27

ಜಗತ್ತಿನ ಅತೀ ಉದ್ದದ ಹೆದ್ದಾರಿ ಸುರಂಗ ಮಾರ್ಗವು ನಾರ್ವೆಯ ರಾಜಧಾನಿ ಓಸ್ಲೋದಿಂದ ವಾಯವ್ಯಕ್ಕೆ 300 ಕಿಮೀ ದೂರದ ಲಾಯೆರ್ಡಾಲಿನಲ್ಲಿ ಸಂಚಾರಕ್ಕೆ ಮುಕ್ತವಾಯಿತು. ಇದರ ಉದ್ದ 24.5 ಕಿ.ಮೀ.ಗಳು. 16.9 ಕಿ.ಮೀ. ಉದ್ದದ ಸ್ವಿಸ್ ಆಲ್ಪ್ಸ್ ನ ಸೇಂಟ್ ಗೊಥಾರ್ಡ್ ಸುರಂಗವನ್ನು ಇದು ಮೀರಿಸಿತು.

2007: ಸಂಸತ್ತಿನಲ್ಲಿ ಪ್ರಶ್ನೆ ಕೇಳಲು ಲಂಚ ಸ್ವೀಕರಿಸುವುದು ಗಂಭೀರ ಅಪರಾಧ ಎಂದು ಅಭಿಪ್ರಾಯಪಟ್ಟ ದೆಹಲಿ ಹೈಕೋರ್ಟ್, ಈ ಹಗರಣದಲ್ಲಿ ಆರೋಪ ಎದುರಿಸುತ್ತಿರುವ 11 ಸಂಸದರ ಪಾತ್ರ ಅರಿಯಲು ತನಿಖೆ ಆರಂಭಿಸುವಂತೆ ದೆಹಲಿ ಪೊಲೀಸರಿಗೆ ಸೂಚನೆ ನೀಡಿತು. ಪ್ರಶ್ನೆ ಕೇಳಲು ಲಂಚ ಪಡೆಯುವ ಮೂಲಕ ಈ ಹಗರಣದಲ್ಲಿ ನೇರವಾಗಿ ಭಾಗಿಯಾಗಿರುವವರು ಮತ್ತು ದಲ್ಲಾಳಿಗಳ  ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಬೇಕು ಮತ್ತು ತಪ್ಪಿತಸ್ಥರಿಗೆ ಕಾನೂನಿನ ಪ್ರಕಾರ ಶಿಕ್ಷೆ ವಿಧಿಸಬೇಕು ಎಂದು ನ್ಯಾಯಮೂರ್ತಿ ಎಸ್.ಎನ್.ಧಿಂಗ್ರಾ ಆದೇಶಿಸಿದರು. ಮಧ್ಯವರ್ತಿಗಳ ಮೂಲಕ ಮೂಲಕ ಹಣ ಪಡೆದು ಸಂಸತ್ತಿನಲ್ಲಿ ಪ್ರಶ್ನೆ ಕೇಳಿದ ವಿಚಾರ ಭ್ರಷ್ಟಾಚಾರ ನಿಗ್ರಹ ಕಾಯ್ದೆ ವ್ಯಾಪ್ತಿಗೆ ಬರುತ್ತದೆ ಎಂದು ನ್ಯಾಯಾಲಯ ಹೇಳಿತು.

2007: 1993ರ ಮುಂಬೈ ಸರಣಿ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧಿಯಾಗಿ ಯೆರವಾಡ  ಜೈಲಿನಲ್ಲಿದ್ದ ಬಾಲಿವುಡ್ ನಟ ಸಂಜಯ ದತ್ ಅವರಿಗೆ ಸುಪ್ರೀಂ ಕೋರ್ಟ್ ಜಾಮೀನು ನೀಡಿತು. ವಿಶೇಷ ಟಾಡಾ ನ್ಯಾಯಾಲಯವು ಶಸ್ತ್ರಾಸ್ತ್ರ ನಿಷೇಧ ಕಾಯ್ದೆಯಡಿ ದತ್ ಅವರಿಗೆ 6 ವರ್ಷಗಳ ಜೈಲು ಶಿಕ್ಷೆ ವಿಧಿಸಿತ್ತು. ದತ್ ಅವರಲ್ಲದೆ ಇತರ 17 ಮಂದಿಗೂ ಸುಪ್ರೀಂ ಕೋರ್ಟ್ ಜಾಮೀನು ನೀಡಿತು.

2007: ಉಗ್ರವಾದಿಗಳ ವಶದಲ್ಲಿದ್ದ ಪಾಕಿಸ್ಥಾನದ ವಾಯವ್ಯ ಭಾಗದ ಸ್ವಾತ್ ಕಣಿವೆ ಪ್ರದೇಶದಲ್ಲಿ ಅಕ್ರಮವಾಗಿ ಪ್ರಸರಣ ಮಾಡುತ್ತಿದ್ದ ಎಫ್ ಎಂ ವಾಹಿನಿ ಮುಲ್ಲಾ ರೇಡಿಯೋ ಕೇಂದ್ರವನ್ನು ಪಾಕಿಸ್ಥಾನಿ ಸೇನಾಪಡೆ ವಶಪಡಿಸಿಕೊಂಡಿತು. ತಾಲಿಬಾನ್ ಪರವಾದ ಸಾಹಿತ್ಯವನ್ನು ಪ್ರಸಾರ ಮಾಡುತ್ತಿದ್ದ ಈ ವಾಹಿನಿಯನ್ನು ಮೌಲಾನ ಫಾಜ್ಲುಲ್ಲ ನಡೆಸುತ್ತಿದ್ದ. ಈತ ಈ ವಾಹಿನಿಯಲ್ಲಿ ಜೆಹಾದ್ ಪರವಾದ ನಿಲುವನ್ನು ಪ್ರಸಾರ ಮಾಡುತ್ತಿದ್ದ. ಈದಿನ ಕೂಡಾ ಅದರಲ್ಲಿ ಇಸ್ಲಾಮಿಕ್ ಕಾನೂನು ಜಾರಿಗೊಳಿಸುವ ಬಗ್ಗೆ  ರೇಡಿಯೋ ಪ್ರಸಾರ ಮಾಡಿತ್ತು.

2007: 1992ರಲ್ಲಿ ಅಧಿಕಾರ ಪಡೆಯಲು ಸಂವಿಧಾನವನ್ನು ಮೂಲೆ ಗುಂಪು ಮಾಡಿ ಫ್ಯೂಜಿಮೊ ಅವರಿಗೆ ನೆರವಾದ ಹತ್ತು ಮಂದಿ ಸಚಿವರಿಗೆ ಪೆರುವಿನ ಉಚ್ಚನ್ಯಾಯಾಲಯ ಶಿಕ್ಷೆ ವಿಧಿಸಿತು. ಆಂತರಿಕ ವ್ಯವಹಾರಗಳ ಮಾಜಿ ಸಚಿವ ಜಾನ್ ಬ್ರಿಯೊನ್ಸ್ ಡಾವಿಲ್ಲಾ ಅವರಿಗೆ 10 ವರ್ಷಗಳ ಸೆರೆವಾಸ, ಉಳಿದ ಒಂಬತ್ತು ಮಂದಿ ಸಚಿವರಿಗೆ ತಲಾ 4 ವರ್ಷಗಳ ಸೆರೆವಾಸದ ವಾಸದ ಶಿಕ್ಷೆಯನ್ನು ಉಚ್ಚ ನ್ಯಾಯಾಲಯ ವಿಧಿಸಿತು.

2007: ಬಾಂಗ್ಲಾದೇಶದ ವಿವಾದಾತ್ಮಕ ಲೇಖಕಿ ತಸ್ಲಿಮಾ ನಸ್ರೀನ್ ಈದಿನ ರಾತ್ರಿ ದೆಹಲಿಯಿಂದ  ಬಿಗಿ ಭದ್ರತೆಯ ನಡುವೆ ಅಜ್ಞಾತ ಸ್ಥಳಕ್ಕೆ ತೆರಳಿದರು. ಕೇಂದ್ರ ಸಚಿವ ಸಂಪುಟ ಸಭೆಯ ತರುವಾಯ ಕೆಲವೇ ಕ್ಷಣಗಳಲ್ಲಿ ನಸ್ರೀನ್ ಅವರಿಗೆ ಬಿಗಿ ಭದ್ರತೆ ಒದಗಿಸುವ ತೀರ್ಮಾನ ಸರ್ಕಾರದಿಂದ ಹೊರಬಿತ್ತು. ನಸ್ರೀನ್ ಮೂರು ವರ್ಷಗಳಿಂದ ಕೋಲ್ಕತ್ತದಲ್ಲಿ ನೆಲೆಸಿದ್ದರು. ಆದರೆ ಮುಸ್ಲಿಂ ಸಮುದಾಯದ ವಿರೋಧದ ಕಾರಣ ಅಲ್ಲಿನ ಸರ್ಕಾರ ನಸ್ರೀನ್ ಅವರನ್ನು ಜೈಪುರಕ್ಕೆ ಕಳುಹಿಸಿತ್ತು. ಅಲ್ಲಿಯೂ ಅವರ ವಿರುದ್ಧ ಪ್ರತಿಭಟನೆಗಳು ಪ್ರಾರಂಭವಾದಾಗ ಅವರ ವಾಸ್ತವ್ಯ ಅಲ್ಲಿಂದ ದೆಹಲಿಗೆ ವರ್ಗಾವಣೆಗೊಂಡಿತ್ತು.

2007: ಗೃಹೋಪಯೋಗಿ ಉಪಕರಣಗಳ ತಯಾರಿಕೆಯಲ್ಲಿ ಮುಂಚೂಣಯಲ್ಲಿ ಇರುವ ವಿಡಿಯೊಕಾನ್,  `ಜಾಗತಿಕ ಸ್ಯಾಪ್ ಏಸ್-2007' ಪ್ರಶಸ್ತಿಗೆ ಭಾಜನವಾಯಿತು. ವಿಡಿಯೊಕಾನ್ ಅನೇಕ ಗ್ರಾಹಕ ಸ್ನೇಹಿ ತಂತ್ರಜ್ಞಾನ ಅಳವಡಿಸಿಕೊಂಡಿರುವ ದೇಶದ ಪ್ರಥಮ ಕಂಪನಿ ಎನ್ನುವ ಹೆಗ್ಗಳಿಕೆಗೆ ಪಾತ್ರವಾಗಿದ್ದು, ಪ್ರಶಸ್ತಿ ಆಯ್ಕೆ ಪಟ್ಟಿಯಲ್ಲಿದ್ದ ಒಟ್ಟು 120 ದೇಶಗಳ 34,600 ಸಂಸ್ಥೆಗಳ ತೀವ್ರ ಸ್ಪರ್ಧೆಯಲ್ಲಿ ಈ  ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು.

2007: ಜಾಗತಿಕ ವಾಣಿಜ್ಯ ಪತ್ರಿಕೆ  `ಫಾರ್ಚೂನ್' ಪಟ್ಟಿ ಮಾಡಿದ ವಿಶ್ವದ ಅತಿ ಪ್ರಭಾವಿ ಉದ್ಯಮಿಗಳ ಪಟ್ಟಿಯಲ್ಲಿ ಟಾಟಾ ಸಮೂಹದ ಉದ್ದಿಮೆಗಳ ಮುಖ್ಯಸ್ಥರಾದ ರತನ್ ಟಾಟಾ, ಭಾರತೀಯ ಮೂಲದ ಉಕ್ಕು ಉದ್ಯಮಿ ಲಕ್ಷ್ಮೀ ಮಿತ್ತಲ್, ಪೆಪ್ಸಿ ಕಂಪೆನಿ ಸಿಇಒ ಇಂದ್ರಾ ನೂಯಿ ಸಹ ಜಾಗ ಗಿಟ್ಟಿಸಿದರು. ಮತ್ತೊಂದು ಜಾಗತಿಕ ವಾಣಿಜ್ಯ ಪತ್ರಿಕೆ `ಫೋರ್ಬ್ಸ್' ಈ ತಿಂಗಳ ಆರಂಭದಲ್ಲಿ ಭಾರತೀಯ ಶತಕೋಟ್ಯಧಿಪತಿಗಳ ಪಟ್ಟಿ ಬಿಡುಗಡೆ ಮಾಡಿದ ಬೆನ್ನಲ್ಲೇ `ಫಾರ್ಚೂನ್' ಹೊಸ ಪಟ್ಟಿ ಬಿಡುಗಡೆ ಮಾಡಿತು.

2006: ನೆಲದಿಂದ ನೆಲಕ್ಕೆ ಚಿಮ್ಮುವ `ಪೃಥ್ವಿ-2' ಕ್ಷಿಪಣಿಯನ್ನು ಒರಿಸ್ಸಾ ಕಡಲ ತೀರದ ಎರಡು ಪ್ರತ್ಯೇಕ ಉಡಾವಣಾ ವಲಯದಿಂದ ಯಶಸ್ವಿಯಾಗಿ ಪ್ರಯೋಗಿಸುವಲ್ಲಿ ವಿಜ್ಞಾನಿಗಳು ಸಫಲರಾದರು. ಪ್ರಥಮ ಗುರಿ ನಿರ್ದೇಶಿತ ಚಂಡಿಪುರದ ಉಡಾವಣಾ ಪ್ರದೇಶದಿಂದ ಬೆಳಗ್ಗೆ 10.15ಕ್ಕೆ ಪ್ರಯೋಗಿಸಿದರೆ, ಈ ಕ್ಷಿಪಣಿಯನ್ನು ಆಕಾಶಮಾರ್ಗದಲ್ಲಿಯೇ ತಡೆದು ನಾಶಗೊಳಿಸುವ ಉದ್ಧೇಶದ ಇನ್ನೊಂದು ಕ್ಷಿಪಣಿಯನ್ನು 60 ಕ್ಷಣಗಳ ಬಳಿಕ ಬಂಗಾಳಕೊಲ್ಲಿ ಸಮುದ್ರದಲ್ಲಿನ ಉಡಾವಣಾ ಕೇಂದ್ರದಿಂದ ಹಾರಿಸಲಾಯಿತು. ಆಕಾಶ ಮಾರ್ಗದಲ್ಲಿಯೇ ದಾಳಿ ಉದ್ದೇಶದ ಕ್ಷಿಪಣಿಯನ್ನು ಈ ಕ್ಷಿಪಣಿಯು ನಿಖರವಾಗಿ ಗುರುತಿಸಿ ನಾಶಪಡಿಸಿತು. ಇದರೊಂದಿಗೆ ಮಾರ್ಗ ಮಧ್ಯದಲ್ಲಿಯೇ ಕ್ಷಿಪಣಿ ನಡೆಯ ಪ್ರಯೋಗದಲ್ಲಿ ಭಾರತ ಯಶಸ್ಸು ಸಾಧಿಸಿತು.

 2006: ಬಾಲಿವುಡ್ಡಿನ  ಜನಪ್ರಿಯ ನಟ ಅಭಿಷೇಕ್ ಬಚ್ಚನ್ ಮತ್ತು ನಟಿ ಐಶ್ವರ್ಯ ರೈ ಮದುವೆ ಆಗಿದ್ದಾರೆಂಬ ಗಾಳಿ ಸುದ್ದಿಗಳ ಮಧ್ಯೆ ಇವರಿಬ್ಬರೂ ಈದಿನ `ಬ್ರಾಹ್ಮೀ ಮುಹೂರ್ತ'ದಲ್ಲಿ ವಾರಣಾಸಿಯಲ್ಲಿ ಕಾಶಿ ವಿಶ್ವನಾಥನಿಗೆ ಜೊತೆಯಾಗಿ ಪೂಜೆ ಸಲ್ಲಿಸಿದರು. ಕುಟುಂಬ ಸದಸ್ಯರ ಜೊತೆಗೆ ಸಂಕಟಮೋಚನ ದೇವಾಲಯ ಹಾಗೂ ಹನುಮಾನ್ ದೇವಾಲಯದಲ್ಲೂ ಅವರು ಪೂಜೆ ಸಲ್ಲಿಸಿದರು. ಈ ಜೋಡಿಯ ವಿವಾಹ ಬಂಧನಕ್ಕೆ ಐಶ್ವರ್ಯ ರೈ ಜಾತಕದ `ಕುಜ ದೋಷ'ದಿಂದ ಇದೆಯೆನ್ನಲಾದ ವಿಘ್ನ ನಿವಾರಣೆಗೆ ಈ ಪೂಜೆ ಸಲ್ಲಿಸಲಾಗಿದೆ ಎಂದು ಹೇಳಲಾಯಿತು.

2006: ಬೆಂಗಳೂರು ರೈಲು ನಿಲ್ದಾಣದಲ್ಲಿ 50 ಪೈಸೆ, ಒಂದು ಹಾಗೂ ಎರಡು ರೂಪಾಯಿ ಮತ್ತು 5 ರೂಪಾಯಿ ನಾಣ್ಯಗಳನ್ನು ಹಾಕಿ ಪ್ಲಾಟ್ ಫಾರಂ ಟಿಕೆಟ್ ಪಡೆಯುವ ವಿಶೇಷ ಯಂತ್ರಗಳನ್ನು ಅಳವಡಿಸಲಾಯಿತು. ವಿಭಾಗೀಯ ಪ್ರಧಾನ ವ್ಯವಸ್ಥಾಪಕ ಮಹೇಶ ಮಂಗಲ್ ಈ ಯಂತ್ರಗಳನ್ನು ಉದ್ಘಾಟಿಸಿದರು.

2006: ಮಹದಾಯಿ ಜಲವಿವಾದ ಇತ್ಯರ್ಥಕ್ಕೆ ನ್ಯಾಯ ಮಂಡಳಿ ರಚಿಸಲು ಕೇಂದ್ರ ಜಲ ಸಂಪನ್ಮೂಲಕ ಇಲಾಖೆ ನಿರ್ಧರಿಸಿದೆ ಎಂದು  ಜಲ ಸಂಪನ್ಮೂಲ ಇಲಾಖೆಯ ಜಂಟಿ ಕಾರ್ಯದರ್ಶಿ ಕೆ. ವೋಹ್ರಾ ಸುಪ್ರೀಂಕೋರ್ಟಿಗೆ ಪ್ರಮಾಣಪತ್ರ ಸಲ್ಲಿಸಿದರು. ಇದರಿಂದ ಬಂಡೂರಿ ನಾಲಾ ಯೋಜನೆ ಅನುಷ್ಠಾನಕ್ಕೆ ಹೊರಟ ಕರ್ನಾಟಕದ ಪ್ರಯತ್ನಕ್ಕೆ ಹಿನ್ನಡೆಯಾಯಿತು.

2006: ಟೆಹರಾನಿನ ಮೆಹರಾಬಾದ್ ವಿಮಾನ ನಿಲ್ದಾಣದಲ್ಲಿ ಗಗನಕ್ಕೆ ಏರಿದ ಇರಾನ್ ಸೇನಾ ವಿಮಾನವೊಂದು ಕೆಲವೇ ಕ್ಷಣಗಳಲ್ಲಿ ನೆಲಕ್ಕೆ ಅಪ್ಪಳಿಸಿ ಅದರಲ್ಲಿದ್ದ 38 ಮಂದಿ ಮೃತರಾದರು.

2005: ಫ್ರಾನ್ಸ್ ದೇಶದ ಪ್ಯಾರಿಸ್ಸಿನ ಎಮೈನ್ಸ್ ವಿಶ್ವವಿದ್ಯಾಲಯದಲ್ಲಿ ವಿಶ್ವದ ಮೊತ್ತ ಮೊದಲ ಮುಖಕಸಿ ನಡೆಯಿತು. 1998ರಲ್ಲಿ ವಿಶ್ವದ ಮೊತ್ತ ಮೊದಲ ಕೈ ಕಸಿ ಮಾಡಿದ್ದ ಜೀನ್ ಮೈಕಲ್ ಡುಬರ್ನಾರ್ಡ್ ಹಾಗೂ ಮುಖ ಶಸ್ತ್ರಚಿಕಿತ್ಸಕ ಬರ್ನಾರ್ಡ್ ದೆವಾವುಚೆಲ್ಲೆ ಮಹಿಳೆಯೊಬ್ಬಳಿಗೆ ಮುಖಕಸಿ ಶಸ್ತ್ರಚಿಕಿತ್ಸೆ ನಡೆಸಿದರು. ನಾಯಿ ಕಚ್ಚಿದ್ದರಿಂದ ಮೂಗು, ತುಟಿ ಹರಿದು ಹೋಗಿದ್ದ ಮಹಿಳೆಗೆ ವೈದ್ಯರ ತಂಡ ಆಗಷ್ಟೇ ಮೃತನಾಗಿದ್ದ ವ್ಯಕ್ತಿಯೊಬ್ಬನ ಮುಖದ ಭಾಗವನ್ನು ತೆಗೆದು ಕಸಿ ಮಾಡಿತು. 

2005: ಎರಡನೇ ಜಾಗತಿಕ ಯುದ್ಧದ ಕಾಲದಲ್ಲಿ ಸ್ಫೋಟಗೊಳ್ಳದೇ ಉಳಿದಿದ್ದ ಭಾರಿ ಬಾಂಬ್ ಜಪಾನಿನ ಟೋಕಿಯೋದ ಜನವಸತಿ ಪ್ರದೇಶ ಕಾತ್ಸುಶಿಕಾದಲ್ಲಿ ಪತ್ತೆಯಾಯಿತು. ಯುದ್ಧಕಾಲದಲ್ಲಿ ಅಮೆರಿಕ ಎಸೆದಿತ್ತು ಎನ್ನಲಾಗಿರುವ ಈ ಬಾಂಬ್ 250 ಕಿಲೋ ಗ್ರಾಂ ಭಾರ, 36 ಸೆಂ.ಮೀ ವ್ಯಾಸ ಹಾಗೂ 120 ಸೆಂ.ಮೀ ಉದ್ದವಿತ್ತು. ಈ ಬಾಂಬ್ ತೆರವುಗೊಳಿಸುವ ಸಲುವಾಗಿ 4000 ಜನರನ್ನು ಸ್ಥಳಾಂತರಿಸಲಾಯಿತು.

2005: ಚೀನಾದ ಹರ್ಬಿನ್ ಕಲ್ಲಿದ್ದಲು ಗಣಿಯಲ್ಲಿ ಸ್ಫೋಟದಲ್ಲಿ 88 ಜನ ಮೃತರಾಗಿ 36ಕ್ಕೂ ಹೆಚ್ಚು ಜನ ಗಾಯಗೊಂಡರು. 

2000: ಜಗತ್ತಿನ ಅತೀ ಉದ್ದದ ಹೆದ್ದಾರಿ ಸುರಂಗ ಮಾರ್ಗವು ನಾರ್ವೆಯ ರಾಜಧಾನಿ ಓಸ್ಲೋದಿಂದ ವಾಯವ್ಯಕ್ಕೆ 300 ಕಿಮೀ ದೂರದ ಲಾಯೆರ್ಡಾಲಿನಲ್ಲಿ ಸಂಚಾರಕ್ಕೆ ಮುಕ್ತವಾಯಿತು. ಇದರ ಉದ್ದ 24.5 ಕಿ.ಮೀ.ಗಳು. 16.9 ಕಿ.ಮೀ. ಉದ್ದದ ಸ್ವಿಸ್ ಆಲ್ಪ್ಸ್ ನ ಸೇಂಟ್ ಗೊಥಾರ್ಡ್ ಸುರಂಗವನ್ನು ಇದು ಮೀರಿಸಿತು.

1981: ಆಡಳಿತ ಭಾಷೆಯಾಗಿ ಕನ್ನಡ ಕಡ್ಡಾಯಕ್ಕೆ ಸಂಬಂಧಿಸಿದಂತೆ ರಚಿಸಲಾಗಿದ್ದ ಗೋಕಾಕ್ ನೇತೃತ್ವದ ಸಮಿತಿಯ ವರದಿಯನ್ನು ಯಥಾವತ್ತಾಗಿ ರಾಜ್ಯ ಸರ್ಕಾರವು ಅಂಗೀಕರಿಸಿತು. ವರದಿಯ ಶಿಫಾರಸು ಪ್ರಕಾರ ರಾಜ್ಯದಲ್ಲಿ ಪ್ರೌಢಶಾಲೆಗಳಲ್ಲಿ ಕನ್ನಡವು ಪ್ರಥಮ ಕಡ್ಡಾಯ ಕಲಿಕೆ ಭಾಷೆ ಆಗಲಿದೆ.

1979: ಆಸ್ಟ್ರೇಲಿಯಾ ಮತ್ತು ವೆಸ್ಟ್ ಇಂಡೀಸ್ ನಡುವಣ ಮೊತ್ತ ಮೊದಲ ಅಧಿಕೃತ ಏಕದಿನ ಅಂತಾರಾಷ್ಟ್ರೀಯ ಪಂದ್ಯವು ಸಿಡ್ನಿ ಕ್ರಿಕೆಟ್ ಮೈದಾನದಲ್ಲಿ ನಡೆಯಿತು. ವಿಶ್ವ ಕ್ರಿಕೆಟ್ ಸರಣಿ ವಿಭಜನೆಗೊಂಡ ಬಳಿಕ ಮತ್ತೆ ಒಗ್ಗೂಡಿದ ಆಸ್ಟ್ರೇಲಿಯಾ ಪಾಲಿನ ಮೊತ್ತ ಮೊದಲಿನ ಪಂದ್ಯ ಇದು.

1958: ಸಾಹಿತಿ ಪ್ರೇಮಮಯಿ ಜನನ.

1954: ಸಾಹಿತಿ ಕೊಂಡಜ್ಜಿ ವೆಂಕಟೇಶ ಜನನ.

1953: ಅಮೆರಿಕನ್ ನಾಟಕಕಾರ ಯುಗೇನ್ ಒ'ನೀಲ್ ಅವರು ಬೋಸ್ಟನ್ನಿನಲ್ಲಿ ತಮ್ಮ 65ನೇ ವಯಸ್ಸಿನಲ್ಲಿ ಮೃತರಾದರು. ನ್ಯೂಯಾರ್ಕ್ ನಗರದ ಬ್ರಾಡ್ವೇಯ ಹೊಟೇಲ್ ಒಂದರ ಕೊಠಡಿಯಲ್ಲಿ ಹುಟ್ಟಿದ ನೀಲ್ ಸತ್ತದ್ದು ಕೂಡಾ ಬೋಸ್ಟನ್ನಿನ ಹೊಟೇಲಿನಲ್ಲಿಯೇ!

1940: ಮಾರ್ಷಲ್ ಆರ್ಟ್ಸ್ ನಿಪುಣ ಹಾಗೂ ನಟ ಬ್ರೂಸ್ ಲೀ (1940-1973) ಹುಟ್ಟಿದ ದಿನ. `ಎಂಟರ್ ದಿ ಡ್ರ್ಯಾಗನ್' ಚಿತ್ರ ಇವರಿಗೆ ಅಪಾರ ಖ್ಯಾತಿ ತಂದು ಕೊಟ್ಟಿತು.

1932: ಫಿಲಿಪ್ಪೈನ್ಸಿನ ಬಿ.ಎಸ್. ಅಕ್ವಿನೊ ಜ್ಯೂನಿಯರ್ (1932-1983) ಹುಟ್ಟಿದ ದಿನ. ಅಧ್ಯಕ್ಷ ಫರ್ಡಿನಾಂಡ್ ಇ. ಮಾರ್ಕೋಸ್ ನೇತೃತ್ವದಲ್ಲಿ ಫಿಲಿಪ್ಪೈನ್ಸಿನಲ್ಲಿ ಮಾರ್ಷಲ್ ಲಾ ಆಡಳಿತ ಇದ್ದಾಗ ಇವರು ಮುಖ್ಯ ವಿರೋಧಿ ನಾಯಕರಾಗಿದ್ದರು. 1983ರಲ್ಲಿ ಇವರ ಹತ್ಯೆ ನಡೆಯಿತು.

1915: ಜೈನ ಸಾಹಿತ್ಯ ಭೂಷಣ, ಸಿದ್ಧಾಂತ ಶಿರೋಮಣಿ ಪದ್ಮನಾಭ ಶರ್ಮ ಅವರು ದೇವಚಂದ್ರ ಜೋಯಿಸರು- ಚಂದ್ರಮತಮ್ಮ ದಂಪತಿಯ ಮಗನಾಗಿ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲ್ಲೂಕಿನ ಭುವನಹಳ್ಳಿಯಲ್ಲಿ ಜನಿಸಿದರು.

1871: ಇಟಲಿಯ ಭೌತತಜ್ಞ ಗಿಯೋವನ್ನಿ ಗಿಯೋರ್ಗಿ (1871-1950) ಹುಟ್ಟಿದ ದಿನ. ಇವರು `ಗಿಯೋರ್ಗಿ ಇಂಟರ್ ನ್ಯಾಷನಲ್ ಸಿಸ್ಟಮ್ ಆಫ್ ಮೆಷರ್ ಮೆಂಟ್ (ಇದಕ್ಕೆ ಮೆಕ್ಸ ಸಿಸ್ಟಮ್ ಎಂಬ ಹೆಸರೂ ಇದೆ) ಮೂಲಕ ಖ್ಯಾತರಾಗಿದ್ದಾರೆ. ಮೀಟರ್, ಕಿಲೋಗ್ರಾಂ, ಸೆಕಂಡ್ ಮತ್ತು ಜೂಲ್ಸ್ ಇವುಗಳನ್ನು ಒಳಗೊಂಡ ವೈಜ್ಞಾನಿಕ ಮಾಪಕ ಯುನಿಟ್ಟುಗಳೆಂದು ಪರಿಗಣಿಸಲಾದ ಈ ಸಿಸ್ಟಮನ್ನು 1960ರಲ್ಲಿ ತೂಕ ಮತ್ತು ಅಳತೆಯ ಸಾಮಾನ್ಯ ಸಮ್ಮೇಳನ ಅನುಮೋದಿಸಿತು. 

1701: ಖಗೋಳ ತಜ್ಞ ಆಂಡರ್ಸ್ ಸೆಲ್ಸಿಯಸ್ (1701-1744) ಹುಟ್ಟಿದ ದಿನ. ಈತ ಸೆಲ್ಸಿಯಸ್ ಥರ್ಮಾಮೀಟರ್ ಸ್ಕೇಲ್ ಸಂಶೋಧಿಸಿದ ವ್ಯಕ್ತಿ. ಈ ಮಾಪಕವನ್ನು `ಸೆಂಟಿಗ್ರೇಡ್ ಸ್ಕೇಲ್' ಎಂಬುದಾಗಿಯೂ ಕರೆಯಲಾಗುತ್ತದೆ.

(ಸಂಗ್ರಹ: ನೆತ್ರಕೆರೆ ಉದಯಶಂಕರ)

Thursday, November 27, 2008

ಇಂದಿನ ಇತಿಹಾಸ History Today ನವೆಂಬರ್ 26

ಇಂದಿನ ಇತಿಹಾಸ

ನವೆಂಬರ್ 26

ಆಕಾಶಯಾನಿ, 75 ವರ್ಷದ ವಿಜಯಪತ್ ಸಿಂಘಾನಿಯಾ ಅವರು ಬಿಸಿಗಾಳಿ ತುಂಬಿದ್ದ ಬಲೂನಿನ ಬುಟ್ಟಿಯಲ್ಲಿ ಸಮುದ್ರಮಟ್ಟಕ್ಕಿಂತ 69,852 ಅಡಿಗಳಷ್ಟು ಎತ್ತರಕ್ಕೆ ಏರಿ ವಿಶ್ವದಾಖಲೆ ನಿರ್ಮಿಸಿದರು. ಅಮೆರಿಕದ ಪೇರ್ ಲಿಂಡ್ ಸ್ಟ್ರ್ಯಾಂಡ್ 1988ರಲ್ಲಿ ಟೆಕ್ಸಾಸಿನ  ಪ್ಲ್ಯಾನೋದಲ್ಲಿ ಬಿಸಿಗಾಳಿಯ ಬಲೂನಿನಲ್ಲಿ 64,997 ಅಡಿ ಎತ್ತರದಲ್ಲಿ ವಿಹಾರ ನಡೆಸಿದ್ದೇ ಈ ಹಿಂದಿನ ವಿಶ್ವದಾಖಲೆಯಾಗಿತ್ತು.

2007: ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆಗೆ ಸಂಸತ್ತಿನ ಉಭಯ ಸದನಗಳ ಅಂಗೀಕಾರ ಪಡೆದ ಯುಪಿಎ ಸರ್ಕಾರ ಮರುಕ್ಷಣವೇ ವಿಧಾನಸಭೆಯನ್ನು ವಿಸರ್ಜಿಸಲು ನಿರ್ಧರಿಸುವ ಮೂಲಕ ಎರಡು ತಿಂಗಳ ಕಾಲ ರಾಜ್ಯದಲ್ಲಿದ್ದ ಅತಂತ್ರ ರಾಜಕೀಯ ಸ್ಥಿತಿಗೆ ಅಂತ್ಯ ಹಾಡಿತು.

2007: ಪಾಕಿಸ್ಥಾನದ ಅಧ್ಯಕ್ಷ ಜನರಲ್ ಪರ್ವೇಜ್ ಮುಷರಫ್ ಅವರು ಪಾಕಿಸ್ಥಾನದ ಸೇನಾ ಮುಖ್ಯಸ್ಥನ ಹುದ್ದೆಯನ್ನು ವಾರಾಂತ್ಯದಲ್ಲಿ ತ್ಯಜಿಸಿ ಪ್ರಜಾಸತ್ತಾತ್ಮಕ ರಾಷ್ಟ್ರಪತಿಯಾಗಿ ಹೊಸ ರೂಪ ಧರಿಸಲು ನಿರ್ಧರಿಸಿದರು. ಅ. 6ರಂದು ನಡೆದ ಅಧ್ಯಕ್ಷ ಚುನಾವಣೆಯಲ್ಲಿ ಮರುಆಯ್ಕೆಯಾದ ಮುಷರಫ್ ಅವರ ಗೆಲುವನ್ನು ಪರಿಗಣಿಸಬೇಕೆಂದು ಸುಪ್ರೀಂಕೋರ್ಟ್ ಪಾಕ್ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಿದ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಯಿತು. 1998ರ ಅಕ್ಟೋಬರ್ 7ರಂದು  ಜನರಲ್ ಮುಷರಫ್ ಅವರು ಪಾಕ್ ಸೇನಾ ಮುಖ್ಯಸ್ಥನ ಪದವಿಗೇರಿದ್ದರು. ಮೂರು ವರ್ಷಗಳ ಕಾಲ ಮಾತ್ರ ಸೇನಾ ಮುಖ್ಯಸ್ಥನ ಅಧಿಕಾರವಧಿ ನಿಗದಿಯಾಗಿದ್ದರೂ, ಮುಷರಫ್ ಸತತ 9 ವರ್ಷಗಳ ಕಾಲ ಈ ಹುದ್ದೆಯಲ್ಲಿ ಮುಂದುವರೆದಿದ್ದರು.

2007: ಆಗ್ನೇಯ ಇಂಡೋನೇಷ್ಯಾದ ಸುಂಬಾವಾ ದ್ವೀಪದಲ್ಲಿ ಸಂಭವಿಸಿದ ಎರಡು ಪ್ರಬಲ ಭೂಕಂಪಗಳಿಗೆ ಮೂವರು ಬಲಿಯಾಗಿ, 45ಕ್ಕೂ ಹೆಚ್ಚು ಜನರು ಗಾಯಗೊಂಡರು. ಭೂಕಂಪದ ತೀವ್ರತೆ ರಿಕ್ಟರ್ ಮಾಪಕದಲ್ಲಿ 6.7 ಹಾಗೂ 5.0ರಷ್ಟು ಇತ್ತು.

2007: ದೆಹಲಿ ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ಲಘು ಭೂಕಂಪ ಸಂಭವಿಸಿತು. ನಸುಕಿನ 4.42ರ ಸುಮಾರಿಗೆ ಕೆಲ ಸೆಕೆಂಡುಗಳ ಕಾಲ ಲಘುವಾಗಿ ಭೂಮಿ ಕಂಪಿಸಿದ್ದರಿಂದ ಬೆಳಗಿನ ಸಿಹಿನಿದ್ರೆಯಲ್ಲಿದ್ದ ಜನರು ಭಯಭೀತರಾಗಿ ಮನೆ ಬಿಟ್ಟು ಹೊರಗೋಡಿದರು. ಭೂಕಂಪದ ತೀವ್ರತೆ ರಿಕ್ಟರ್ ಮಾಪಕದಲ್ಲಿ 4.42ರಷ್ಟು ಇತ್ತು.

 2007: ಬಾಂಗ್ಲಾದೇಶದ ವಿವಾದಾತ್ಮಕ ಲೇಖಕಿ ತಸ್ಲಿಮಾ ನಸ್ರೀನ್ ಅವರು ಭಾರತದಲ್ಲಿ ಎಲ್ಲಿಆಶ್ರಯ ಪಡೆಯಬೇಕು ಎಂದು ನಿರ್ಧರಿಸುವ ಹೊಣೆ ಕೇಂದ್ರ ಸರ್ಕಾರದ್ದು ಎಂದು ಹೇಳುವ ಮೂಲಕ ಪಶ್ಚಿಮ ಬಂಗಾಳ ಸರ್ಕಾರ ಈ ವಿವಾದದಿಂದ ಕೈತೊಳೆದುಕೊಂಡಿತು. ನಸ್ರೀನ್ ಅವರಿಗೆ ಆಶ್ರಯ ನೀಡಿದ್ದರಿಂದ ಪಶ್ಚಿಮ ಬಂಗಾಳದ ಎಡರಂಗ ಸರ್ಕಾರ ಮುಸ್ಲಿಂ ಸಮುದಾಯದಿಂದ ಭಾರಿ ಟೀಕೆ ಹಾಗೂ ಪ್ರತಿಭಟನೆಗಳನ್ನು ಎದುರಿಸಿತ್ತು. ಇದೇ ಸಂದರ್ಭದಲ್ಲಿ ಸಚಿವರೊಬ್ಬರು ತಮ್ಮ ಮನೆಯಲ್ಲಿ ನಸ್ರೀನ್ ಅವರಿಗೆ ಆಶ್ರಯ ನೀಡುವುದಾಗಿ ಹೇಳಿದ್ದು ರಾಜ್ಯ ಸರ್ಕಾರಕ್ಕೆ ತೀವ್ರ ಮುಜುಗರ ಉಂಟು ಮಾಡಿತ್ತು. ಈ ಬೆಳವಣಿಗೆ ನಂತರ ನಸ್ರೀನ್ ಅವರು ಜೈಪುರಕ್ಕೆ ತೆರಳಿದ್ದರು.

2006: ಮಹಿಳೆಯರಿಗೆ ರಕ್ಷಣೆ ಒದಗಿಸುವ ಉದ್ದೇಶದ ಮಹತ್ವದ ಕ್ರಮವಾಗಿ ಅಖಿಲ ಭಾರತ ಶಿಯಾ ವೈಯಕ್ತಿಕ ಕಾನೂನು ಮಂಡಳಿಯು ಮುಂಬೈಯಲ್ಲಿ ನಡೆದ ಸರ್ವ ಸದಸ್ಯರ ಸಭೆಯಲ್ಲಿ `ಮಾದರಿ ನಿಕ್ಹಾನಾಮಾ'(ಮದುವೆ ಒಪ್ಪಂದ)ಕ್ಕೆ ಸರ್ವಾನುಮತದ ಮಂಜೂರಾತಿ ನೀಡಿತು. ಇದು ವಿಚ್ಛೇದನ ವಿಚಾರದಲ್ಲಿ ಮಹಿಳೆಯರಿಗೂ ಪುರುಷರಷ್ಟೇ ಹಕ್ಕುಗಳನ್ನು ಒದಗಿಸುತ್ತದೆ. `ನಮ್ಮ ಮಾದರಿ ನಿಕ್ಹಾನಾಮಾಕ್ಕೆ ಇರಾಕಿನ ಅತ್ಯುನ್ನತ ಧರ್ಮಗುರು ಅಯತ್ಲ್ಲೊಲಾ ಸಿಸ್ಟಾನಿ ಮತ್ತು ಸಂವಿಧಾನ ತಜ್ಞರು ಅನುಮೋದನೆ ನೀಡಿದ್ದು ಈ ದಿನದಿಂದಲೇ ಜಾರಿಗೆ ಬರುವುದು' ಎಂದು ಮಂಡಳಿ ಅಧ್ಯಕ್ಷ ಮೌಲಾನಾ ಮಿರ್ಜಾ ಮಹಮ್ಮದ್ ಅತಾರ್ ಪ್ರಕಟಿಸಿದರು. ಈ ಮದುವೆ ಒಪ್ಪಂದದ ಪ್ರಕಾರ ವಧು ಮತ್ತು ವರ ಮದುವೆ ಸಮಯದಲ್ಲಿ ತಮ್ಮ ಷರತ್ತುಗಳನ್ನು ಮುಂದಿಡಬಹುದು. ವಧುವಿಗೆ ಅಗತ್ಯ ಬಿದ್ದರೆ ವಿಚ್ಛೇದನಕ್ಕೆ ಒತ್ತಾಯಿಸುವ ಹಕ್ಕು ಇರುತ್ತದೆ. ಅಗತ್ಯ ಬಿದ್ದಾಗ ಆಕೆ ಅದನ್ನು ಬಳಸಿಕೊಳ್ಳಬಹುದು. ಮಂಡಳಿಯ ಎರಡನೇ ಸರ್ವ ಸದಸ್ಯರ ಸಭೆಯಲ್ಲಿ ನಿಕ್ಹಾನಾಮಾಕ್ಕೆ ಮಂಜೂರಾತಿ ನೀಡಲಾಯಿತು. ಭಾರಿ ಸಂಖ್ಯೆಯಲ್ಲಿ ಧರ್ಮಗುರುಗಳು ಮತ್ತು ದೇಶದಾದ್ಯಂತದಿಂದ ಧಾರ್ಮಿಕ ನಾಯಕರು ಸಭೆಗೆ ಆಗಮಿಸಿದ್ದರು.

2006: ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿ ರಾಜನಾಥ ಸಿಂಗ್ ಅವರು ಮುಂದಿನ ಮೂರು ವರ್ಷಗಳ ಅವಧಿಗೆ ಅವಿರೋಧವಾಗಿ ಆಯ್ಕೆಯಾದರು.

2006: ಭಾರತದ ಜೀವ್ ಮಿಲ್ಕಾ ಸಿಂಗ್ ಅವರು ಜಪಾನಿನ ಕೋಚಿಯಲ್ಲಿ ಮುಕ್ತಾಯಗೊಂಡ ಕ್ಯಾಸಿಯೋ ವಿಶ್ವ ಓಪನ್ ಗಾಲ್ಫ್ ಟೂರ್ನಿಯಲ್ಲಿ ಕಿರೀಟ ಮುಡಿಗೇರಿಸಿಕೊಂಡರು. ನ್ಯೂಜಿಲೆಂಡಿನ ಡೇವಿಡ್ ಸ್ಮೇಲ್ ಅವರನ್ನು ಅಂತಿಮ ಸುತಿನಲ್ಲಿ ಹಿಮ್ಮೆಟ್ಟಿಸಿದ ಅವರು ತಮ್ಮ ಚೊಚ್ಚಲ ಪ್ರಶಸ್ತಿಯನ್ನು ಗೆದ್ದುಕೊಂಡರು.

2005: ಆಕಾಶಯಾನಿ, 75 ವರ್ಷದ ವಿಜಯಪತ್ ಸಿಂಘಾನಿಯಾ ಅವರು ಬಿಸಿಗಾಳಿ ತುಂಬಿದ್ದ ಬಲೂನಿನ ಬುಟ್ಟಿಯಲ್ಲಿ ಸಮುದ್ರಮಟ್ಟಕ್ಕಿಂತ 69,852 ಅಡಿಗಳಷ್ಟು ಎತ್ತರಕ್ಕೆ ಏರಿ ವಿಶ್ವದಾಖಲೆ ನಿರ್ಮಿಸಿದರು. ಅಮೆರಿಕದ ಪೇರ್ ಲಿಂಡ್ ಸ್ಟ್ರ್ಯಾಂಡ್ 1988ರಲ್ಲಿ ಟೆಕ್ಸಾಸಿನ ಪ್ಲ್ಯಾನೋದಲ್ಲಿ ಬಿಸಿಗಾಳಿಯ ಬಲೂನಿನಲ್ಲಿ 64,997 ಅಡಿ ಎತ್ತರದಲ್ಲಿ ವಿಹಾರ ನಡೆಸಿದ್ದೇ ಈ ಹಿಂದಿನ ವಿಶ್ವದಾಖಲೆಯಾಗಿತ್ತು. ಸಿಂಘಾನಿಯಾ ಸಾಹಸದೊಂದಿಗೆ ಪೇರ್ ದಾಖಲೆ ಅಳಿಸಿಹೋಯಿತು.

2005: ಟೆಸ್ಟ್ ಕ್ರಿಕೆಟಿನಲ್ಲಿ ಆಸ್ಟ್ರೇಲಿಯಾದ ಆಲನ್ ಬಾರ್ಡರ್ ಅವರು ಸ್ಥಾಪಿಸಿದ್ದ 11,174 ರನ್ ಗಳಿಕೆಯ ವಿಶ್ವದಾಖಲೆಯನ್ನು ವೆಸ್ಟ್ ಇಂಡೀಸಿನ ಬ್ರಯನ್ ಲಾರಾ ಅವರು 11,187 ರನ್ ಗಳಿಸುವ ಮೂಲಕ ಅಳಿಸಿ ಹಾಕಿ ಹೊಸ ವಿಶ್ವದಾಖಲೆ ಬರೆದರು. ಅಡಿಲೇಡ್ ಕ್ರೀಡಾಂಗಣ ಈ ಹೊಸ ದಾಖಲೆ ನಿರ್ಮಾಣಕ್ಕೆ ಸಾಕ್ಷಿಯಾಯಿತು.

2005: ಸಂಗೀತ ಸಾಮ್ರಾಜ್ಞಿ ಲತಾ ಮಂಗೇಶ್ಕರ್ ಅವರು ಮೆರ್ರಿಲ್ ಲಿಂಚ್ ನೀಡುವ `ಜೀವಮಾನದ ಸಾಧನೆ' ಪ್ರಶಸ್ತಿಗೆ ಆಯ್ಕೆಯಾದರು. ಲತಾ ಅವರು ಕಲೆ, ಸಂಸ್ಕತಿ, ಸಂಗೀತ ಕ್ಷೇತ್ರಗಳಿಗೆ ನೀಡಿರುವ ಕೊಡುಗೆಯನ್ನು ಸ್ಮರಿಸಿ ಭಾರತದ ಎರಡನೇ ಅತಿದೊಡ್ಡ ವಜ್ರ ರಫ್ತುದಾರ ಸಂಸ್ಥೆ ಮೆರಿಲ್ ಲಿಂಚ್ ಇನ್ವೆಸ್ಟ್ಮೆಂಟ್ ಮತ್ತು ಅಡೋರ ಸಂಸ್ಥೆಯು ಈ ಪ್ರಶಸ್ತಿಯನ್ನು ನೀಡುತ್ತದೆ.

2005: ವೈಜ್ಞಾನಿಕ ಸಂಶೋಧನೆಗಾಗಿ 2005ನೇ ಸಾಲಿನ ಜಿ.ಡಿ. ಬಿರ್ಲಾ ಪ್ರಶಸ್ತಿಗೆ ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆಯ (ಐಐಎಸ್ಸಿ) ಪ್ರಾಧ್ಯಾಪಕ ಪ್ರೊ. ದೀಪಂಕರ್ ದಾಸ್ ಪಾತ್ರರಾದರು. ಈ ಪ್ರಶಸ್ತಿಯ ಮೊತ್ತ 1.50 ಲಕ್ಷ ರೂಪಾಯಿಗಳು.

2005: ಮಧ್ಯಪ್ರದೇಶದ ಮುಖ್ಯಮಂತ್ರಿಯಾಗಿ ಶಿವರಾಜ್ ಸಿಂಗ್ ಚೌಹಾಣ್ ಅವರನ್ನು ಆಯ್ಕೆ ಮಾಡಲು ಬಿಜೆಪಿ ವರಿಷ್ಠ ಮಂಡಳಿ ತೀರ್ಮಾನಿಸಿತು. 

1998: ಬ್ರಿಟಿಷ್ ಪ್ರಧಾನಿ ಟೋನಿ ಬ್ಲೇರ್ ಅವರು ಐರಿಷ್ ಸಂಸತ್ತನ್ನು ಉದ್ಧೇಶಿಸಿ ಮೊತ್ತ ಮೊದಲ ಭಾಷಣ ಮಾಡಿದರು. ಉತ್ತರ ಐರ್ಲೆಂಡಿನ ಶಾಂತಿ ಒಪ್ಪಂದವು ಅಂತಿಮವಾಗಿ ಬ್ರಿಟನ್ ಮತ್ತು ಐರ್ಲೆಂಡನ್ನು ಐಕ್ಯ ಗೊಳಿಸುವ ನಿಟ್ಟಿನಲ್ಲಿ ಸಹಕಾರಿಯಾಗಲಿದೆ ಎಂದು ಅವರು ಹೇಳಿದರು.

1981: ಹಿಂದೂ ಮಹಾಸಾಗರದಲ್ಲಿರುವ ಸೇಷೆಲ್ಸ್ ದ್ವೀಪದಿಂದ ಮುಂಬೈಗೆ 79 ಜನ ಪ್ರಯಾಣಿಕರು ಮತ್ತು ಚಾಲಕ ವರ್ಗವರೊಡನೆ ಯಾನ ಮಾಡುತ್ತಿದ್ದ ಏರ್ ಇಂಡಿಯಾ ಬೋಯಿಂಗ್ ವಿಮಾನ ಅಪಹರಣ ನಡೆದು ನಂತರ ಅಪಹರಣಗಾರರು ಶರಣಾಗತರಾದರು.

1978: ಸ್ವಾತಂತ್ರ್ಯ ಯೋಧ ಶೌಕತ್ ಅಲಿ ನಿಧನ.

1960: ಭಾರತದ ಕಾನ್ಪುರ ಮತ್ತು ಲಖನೌ ಮಧ್ಯೆ ಮೊತ್ತ ಮೊದಲ ಸಬ್ ಸ್ಕ್ರೈಬರ್ ಟ್ರಂಕ್ ಡಯಲಿಂಗ್ (ಎಸ್ ಟಿ ಡಿ) ಅಳವಡಿಸಲಾಯಿತು.

1956: ಅರಿಯಲೂರು ಬಳಿ ಸಂಭವಿಸಿದ ತೂತ್ತುಕುಡಿ ಎಕ್ಸ್ ಪ್ರೆಸ್ ರೈಲಿನ ದುರಂತದಿಂದ ವ್ಯಥೆಗೊಂಡ ರೈಲ್ವೆ ಸಚಿವ ಲಾಲ್ ಬಹ್ದದೂರ್ ಶಾಸ್ತ್ರಿ ಅವರು ತಮ್ಮ ಸಚಿವ ಪದವಿಗೆ ರಾಜೀನಾಮೆ ನೀಡಿದರು.

1954: ಭಾರತದಲ್ಲಿ ಪರಮಾಣು ಶಕ್ತಿ ಆಯೋಗ ಕಾರ್ಯ ಆರಂಭಿಸಿತು.

1949: ಸಂವಿಧಾನ ರಚನಾ ಸಭೆಯ ಅಧ್ಯಕ್ಷ ಡಾ. ರಾಜೇಂದ್ರ ಪ್ರಸಾದ್ ಅವರು ಭಾರತೀಯ ಸಂವಿಧಾನಕ್ಕೆ ಸಹಿ ಹಾಕಿದರು ಹಾಗೂ ಸಂವಿಧಾನವನ್ನು ಅಂಗೀಕರಿಸಲಾಗಿದೆ ಎಂದು ಘೋಷಿಸಿದರು. ಪೌರತ್ವ, ಚುನಾವಣೆಗಳು, ತಾತ್ಕಾಲಿಕ ಸಂಸತ್ತು, ತಾತ್ಕಾಲಿಕ ಮತ್ತು ವರ್ಗಾವಣಾ ವಿಧಿಗಳನ್ನು ತಕ್ಷಣದಿಂದಲೇ ಜಾರಿಗೊಳಿಸಲಾಯಿತು. ಸಂವಿಧಾನದ ಉಳಿದ ಭಾಗ 1950ರ ಜನವರಿ 26ರಂದು ಜಾರಿಗೆ ಬಂದಿತು.

1947: ಸ್ವತಂತ್ರ ಭಾರತದ ಮೊತ್ತ ಮೊದಲ ಮುಂಗಡಪತ್ರವನ್ನು ಆರ್. ಕೆ. ಷಣ್ಮುಖನ್ ಚೆಟ್ಟಿ ಅವರು ಶಾಸನ ಸಭೆಯಲ್ಲಿ ಮಂಡಿಸಿದರು.

1947: ಸಾಹಿತಿ ನಲ್ಲೂರು ಪ್ರಸಾದ್ ಜನನ.

1938: ಸಾಹಿತಿ ಅನಸೂಯಾರಾವ್ ಜನನ.

1932: ಸಾಹಿತಿ ಜನಾರ್ದನ ಗುರ್ಕಾರ ಜನನ.

1929: ಸಾಹಿತಿ ಬಿ.ಕೆ. ಸುಬ್ಬುಲಕ್ಷ್ಮಿ ಜನನ.

1926: ಅಮುಲ್ ಖ್ಯಾತಿಯ ರಾಷ್ಟ್ರೀಯ ಹೈನು ಅಭಿವೃದ್ಧಿ ಮಂಡಳಿ ಅಧ್ಯಕ್ಷ ವರ್ಗೀಸ್ ಕುರಿಯನ್ ಹುಟ್ಟಿದ ದಿನ. ಭಾರತದ `ಕ್ಷೀರಕ್ರಾಂತಿ' ಯೋಜನೆಯ ಮೂಲ ಪುರುಷ ಇವರು. ಹೈನೋದ್ಯಮದಲ್ಲಿ ಮಾಡಿದ ಸಾಧನೆಗಾಗಿ ಇವರಿಗೆ ದೇಶ ವಿದೇಶಗಳ ಪ್ರಶಸ್ತಿ ಲಭಿಸಿದೆ. ಅವರಿಗೆ ಲಭಿಸಿದ ಪ್ರಶಸ್ತಿಗಳು: ರಾಮನ್ ಮ್ಯಾಗ್ಸೇಸೆ (1963), ಪದ್ಮಶ್ರೀ (1965), ಪದ್ಮಭೂಷಣ (1966), ಕೃಷಿರತ್ನ (1986), ವಾಟೆಲರ್ ಶಾಂತಿ ಪ್ರಶಸ್ತಿ (1986), ವಿಶ್ವ ಆಹಾರ ಪ್ರಶಸ್ತಿ (1989), ಪದ್ಮವಿಭೂಷಣ ಪ್ರಶಸ್ತಿ (1999).

1924: ಭಾರತೀಯ ಕ್ರಿಕೆಟ್ ಆಟಗಾರ ಜಸುಭಾಯಿ ಪಟೇಲ್ (1924-1992) ಹುಟ್ಟಿದ ದಿನ. 

1922: ಅಮೆರಿಕದ ಚಾರ್ಲ್ಸ್ ಶುಲ್ಜ್ (1922-2000) ಹುಟ್ಟಿದ ದಿನ. 20ನೇ ಶತಮಾನದಲ್ಲಿ ಅತ್ಯಂತ ಯಶಸ್ವೀ ಕಾಮಿಕ್ ಸ್ಟ್ರಿಪ್ ಎಂಬುದಾಗಿ ಹೆಸರು ಪಡೆದ `ಪೀನಟ್ಸ್' ಇವರ ಸೃಷ್ಟಿ.

1911: ಅಮೆರಿಕದ ಚೆಸ್ ಮಾಸ್ಟರ್ ಸ್ಯಾಮ್ಯುಯೆಲ್ ಹರ್ಮನ್ ರೆಶೆವ್ ಸ್ಕಿ (1911-1992) ಹುಟ್ಟಿದ ದಿನ. ಜಾಗತಿಕ ಚಾಂಪಿಯನ್ ಶಿಪ್ ಗಳಿಸದೇ ಇದ್ದರೂ ಇವರು ಅಪ್ರತಿಮ ಚೆಸ್ ಆಟಗಾರರಾಗಿದ್ದರು.

1906: ನಿಘಂಟು ರಚನಾಕಾರ, ಭಾಷಾಶಾಸ್ತ್ರ ಪಂಡಿತ ತೀ.ನಂ. ಶ್ರೀಕಂಠಯ್ಯ (26-11-1906ರಿಂದ 7-9-1966) ಅವರು ನಂಜುಂಡಯ್ಯ- ಭಾಗೀರಥಮ್ಮ ದಂಪತಿಯ ಮಗನಾಗಿ ತುಮಕೂರು ಜಿಲ್ಲೆ ಚಿಕ್ಕನಾಯಕನ ಹಳ್ಳಿ ತಾಲ್ಲೂಕಿನ ತೀರ್ಥಪುರಲದಲ್ಲಿ ಜನಿಸಿದರು.

 1890: ಶಿಕ್ಷಣ ತಜ್ಞ ಸತ್ಯಬೋಧ ಅವರು ಧಾರವಾಡದಲ್ಲಿ ಈದಿನ ಜನಿಸಿದರು.

(ಸಂಗ್ರಹ: ನೆತ್ರಕೆರೆ ಉದಯಶಂಕರ)

ಇಂದಿನ ಇತಿಹಾಸ History Today ನವೆಂಬರ್ 25

ಇಂದಿನ ಇತಿಹಾಸ 

ನವೆಂಬರ್ 25

ಭಾರತ ತಂಡದ ಸಚಿನ್ ತೆಂಡೂಲ್ಕರ್ ತೆಂಡೂಲ್ಕರ್ ಅವರು ಟೆಸ್ಟ್  ಕ್ರಿಕೆಟಿನಲ್ಲಿ ಅತ್ಯಂತ ಹೆಚ್ಚು ರನ್ ಗಳಿಸಿದ ಎರಡನೇ ಆಟಗಾರ ಎಂಬ ಗೌರವಕ್ಕೆ ಪಾತ್ರರಾಗುವ ಮೂಲಕ ಮತ್ತೊಂದು ವಿಶ್ವದಾಖಲೆ ಸ್ಥಾಪಿಸಿದರು. ಪಾಕಿಸ್ಥಾನ ವಿರುದ್ಧ ನವದೆಹಲಿಯಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ  ಸಚಿನ್ 11183 ರನ್ ಪಡೆಯುವ ಮೂಲಕ ಅವರು ಈ ಸಾಧನೆ ಮಾಡಿದರು.

2007: ಭಾರತ ತಂಡದ ಸಚಿನ್ ತೆಂಡೂಲ್ಕರ್ ತೆಂಡೂಲ್ಕರ್ ಅವರು ಟೆಸ್ಟ್  ಕ್ರಿಕೆಟಿನಲ್ಲಿ ಅತ್ಯಂತ ಹೆಚ್ಚು ರನ್ ಗಳಿಸಿದ ಎರಡನೇ ಆಟಗಾರ ಎಂಬ ಗೌರವಕ್ಕೆ ಪಾತ್ರರಾಗುವ ಮೂಲಕ ಮತ್ತೊಂದು ವಿಶ್ವದಾಖಲೆ ಸ್ಥಾಪಿಸಿದರು. ಪಾಕಿಸ್ಥಾನ ವಿರುದ್ಧ ನವದೆಹಲಿಯಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಸಚಿನ್ 11183 ರನ್ ಪಡೆಯುವ ಮೂಲಕ ಅವರು ಈ ಸಾಧನೆ ಮಾಡಿದರು. ಫಿರೋಜ್ ಷಾ ಕೋಟ್ಲಾ ಕ್ರೀಡಾಂಗಣದಲ್ಲಿ ಮೊದಲ ಟೆಸ್ಟ್ ಪಂದ್ಯದ ನಾಲ್ಕನೇ ದಿನ 24ನೇ ರನ್ ಗಳಿಸುವುದರೊಂದಿಗೆ ಅವರ ಟೆಸ್ಟ್ ಕ್ರಿಕೆಟ್ ಪಂದ್ಯದಲ್ಲಿ ಅತ್ಯಂತ ಹೆಚ್ಚು ರನ್ನು ಗಳಿಸಿದ ವಿಶ್ವದಾಖಲೆ (11,183) ಅವರದಾಯಿತು. ಅಂತಾರಾಷ್ಟ್ರೀಯ ಟೆಸ್ಟ್  ಕ್ರಿಕೆಟಿನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಬ್ಯಾಟ್ಸ್ ಮನ್ನರಲ್ಲಿ ಎರನೆಯವರೆಂಬ ಹೆಗ್ಗಳಿಕೆ ಭಾರತದ ತೆಂಡೂಲ್ಕರ್ ಅವರಿಗೆ ಪ್ರಾಪ್ತಿಯಾಯಿತು. ಮಾಸ್ಟರ್ ಬ್ಲಾಸ್ಟರ್ ಸಚಿನ್ ಅವರು 11174 ರನ್ ಪೇರಿಸಿದ್ದ ಆಸ್ಟ್ರೇಲಿಯಾದ ಮಾಜಿ ನಾಯಕ ಅಲನ್ ಬಾರ್ಡರ್ ದಾಖಲೆಯನ್ನು ಅಳಿಸಿಹಾಕಿದರು. ಈ ಪಂದ್ಯದಲ್ಲಿ 32 ರನ್ ಗಳಿಸಿ ಅಜೇಯರಾಗಿ ಉಳಿದ ತೆಂಡೂಲ್ಕರ್ ಅವರಿಗೆ ಇದು 141ನೇ ಟೆಸ್ಟ್ ಹಾಗೂ 228ನೇ ಇನಿಂಗ್ಸ್. ಅವರು ಈಗ 54.79 ಸರಾಸರಿಯಲ್ಲಿ 11183 ರನ್ ಕಲೆಹಾಕಿದರು. ವೆಸ್ಟ್ ಇಂಡೀಸಿನ ಮಾಜಿ ಆಟಗಾರ ಬ್ರಯನ್ ಲಾರಾ (11953 ರನ್) ಮೊದಲ ಸ್ಥಾನದಲ್ಲಿದ್ದಾರೆ.

2007: ಮೊಘಲ್ ಹಾಗೂ ಬಹಮನಿ ಆಡಳಿತ ಕಾಲಕ್ಕೆ ಸೇರಿರುವ ಐತಿಹಾಸಿಕ ಮೌಲ್ಯದ 640 ಬೆಳ್ಳಿ ನಾಣ್ಯಗಳು ಗುಲ್ಬರ್ಗದಲ್ಲಿ ಪತ್ತೆಯಾದವು. ಸುಮಾರು 7143 ಗ್ರಾಂ ತೂಕದ ಈ ನಾಣ್ಯಗಳನ್ನು ಜಿಲ್ಲಾಡಳಿತಕ್ಕೆ ಒಪ್ಪಿಸಲಾಯಿತು. ಪ್ರಾಚ್ಯವಸ್ತು ತಜ್ಞರ ಪ್ರಕಾರ ಈ ನಾಣ್ಯಗಳು 1269-1299ರ ಕಾಲಕ್ಕೆ ಸೇರಿದವು ಎಂದು ಖಚಿತಪಡಿಸಲಾಗಿದೆ ಎಂದು ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎಂ. ಎನ್. ನಾಗರಾಜ ಪ್ರಕಟಿಸಿದರು. ಗುಲ್ಬರ್ಗದ ಬ್ರಹ್ಮಪೂರ ಬಡಾವಣೆಯ ಕುಂಬಾರಗಲ್ಲಿಯ ಗುಂಡಪ್ಪ ಹಡಗಿಲ್ ಎಂಬುವರ ಬಿದ್ದುಹೋದ ಮನೆಯಲ್ಲಿ ಈ ನಾಣ್ಯಗಳು ದೊರಕಿದವು. ಇದೇ ಬಡಾವಣೆಯ ಪ್ರಕಾಶ ಪಾಟೀಲ್ ಎಂಬುವರ ಬಳಿ ಕೆಲಸಕ್ಕೆ ಇದ್ದ ಹಣಮಂತಪ್ಪ ಹರಗೆನೂರ ಹೂವಿನ ಕುಂಡಗಳಿಗೆ ಹಾಕಲು ಮಣ್ಣು ತರಲು ಹೋದಾಗ ಅವರಿಗೆ ನವೆಂಬರ್ 22ರಂದು ಈ ನಾಣ್ಯಗಳು ದೊರಕಿದವು. ಈ ನಾಣ್ಯಗಳ ಹಾಲಿ ಬೆಲೆ ಅಂದಾಜು 1.40 ಲಕ್ಷ ರೂಪಾಯಿಗಳು. ಐತಿಹಾಸಿಕ ಮೌಲ್ಯದ ಹಿನ್ನೆಲೆಯಲ್ಲಿ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಈ ನಾಣ್ಯಗಳ ಮೌಲ್ಯ ಸುಮಾರು 15-20 ಲಕ್ಷ ರೂ.ಗಳು ಎಂದು ಅಂದಾಜು. ಹರಗೇನೂರ ಕುಟುಂಬ ಸದಸ್ಯರು ಈ ನಾಣ್ಯಗಳನ್ನು ಸರ್ಕಾರಕ್ಕೆ ಒಪ್ಪಿಸಿದರು.

2007: ಗಡಿಪಾರಾದ ಸುಮಾರು 7 ವರ್ಷಗಳ ಬಳಿಕ ಪಾಕಿಸ್ಥಾನದ ಮಾಜಿ ಪ್ರಧಾನಿ ನವಾಜ್ ಶರೀಫ್ ಅವರು ಈದಿನ ಲಾಹೋರಿಗೆ ಆಗಮಿಸಿದರು. ಪಾಕಿಸ್ಥಾನದ ಮುಸ್ಲಿಂ ಲೀಗ್ (ಪಿಎಂಎಲ್ -ಎನ್) ಮುಖಂಡ ಶರೀಫ್ ಅವರು ಕಳೆದ ಸೆಪ್ಟೆಂಬರಿನಲ್ಲಿ ಮೊದಲ ಬಾರಿ ಪಾಕಿಸ್ಥಾನಕ್ಕೆ ಆಗಮಿಸಿದಾಗ ಅವರನ್ನು ಬಂಧಿಸಲಾಗಿತ್ತು. 

2007: ಪಶ್ಚಿಮ ಇಂಡೋನೇಷ್ಯದಲ್ಲಿ ಈದಿನ  ಬೆಳಗ್ಗೆ ಶಕ್ತಿಶಾಲಿ ಭೂಕಂಪ ಸಂಭವಿಸಿತು. ರಿಕ್ಟರ್ ಮಾಪಕದಲ್ಲಿ ಕಂಪನದ ತೀವ್ರತೆ 6.2 ರಷ್ಟಿತ್ತು. ಕರಾವಳಿ ಪ್ರದೇಶ ಸುಮಾತ್ರ  ದ್ವೀಪದ ಬೇಕ್ ಕುಲಾ ನಗರದ 28 ಕಿ.ಮೀ ದೂರದಲ್ಲಿ ಈ  ಕಂಪನದ ಕೇಂದ್ರಬಿಂದು ಇತ್ತು.  2004ರಲ್ಲಿ ಸಮುದ್ರದಲ್ಲಿ ಸಂಭವಿಸಿದ  ಭೂಕಂಪದಿಂದ ಉಂಟಾದ ಸುನಾಮಿಗೆ ಸುಮಾರು 1.70 ಲಕ್ಷ ಜನ ಬಲಿಯಾಗಿದ್ದರು.

2007: ತಮ್ಮ ಹೊಸ ಚಿತ್ರಕ್ಕಾಗಿ ಚೀನಾದ ಖ್ಯಾತ ಚಿತ್ರನಟ ಜೆಟ್ ಲೀ 100 ದಶಲಕ್ಷ ಯೂನ್ (13 ದಶಲಕ್ಷ ಡಾಲರುಗಳು)ಸಂಭಾವನೆ ಪಡೆದು ದಾಖಲೆ ನಿರ್ಮಿಸಿದರು. ಚೀನಾ ಭಾಷೆಯ ಚಿತ್ರಗಳಲ್ಲಿ ಇದುವರೆಗೆ ಯಾರೂ ಇಷ್ಟು  ದೊಡ್ಡ ಪ್ರಮಾಣದ ಸಂಭಾವನೆ ಪಡೆದಿರಲಿಲ್ಲ. ಜೆಟ್ ಲೀ ನಟಿಸಿದ `ದಿ ವಾರ್ ಲಾರ್ಡ್ಸ್' ಚಿತ್ರದ ಒಟ್ಟಾರೆ ಬಜೆಟ್ 40 ದಶಲಕ್ಷ ಡಾಲರುಗಳು.

2006: ಹಿರಿಯ ಕವಿ ಡಾ. ಕಯ್ಯಾರ ಕಿಂಞಣ್ಣರೈ, ಡಾ. ಎಂ. ಸರೋಜಿನಿ ಮಹಿಷಿ, ಜಾನಪದ ವಿದ್ವಾಂಸ ಮುದೇನೂರು ಸಂಗಣ್ಣ, ಸಾಹಿತಿ ಸಂಶೋಧಕ ಡಾ. ಹಂಪ ನಾಗರಾಜಯ್ಯ ಹಾಗೂ ಜನಪದ ಗಾಯಕಿ ಬುರ್ರಕಥಾ ಈರಮ್ಮ ಅವರಿಗೆ 2006ನೇ ಸಾಲಿನ `ನಾಡೋಜ' ಗೌರವವನ್ನು ಕನ್ನಡ ವಿಶ್ವವಿದ್ಯಾಲಯವು ಘೋಷಿಸಿತು.

2006: ರಾಷ್ಟ್ರದ ಮೊತ್ತ ಮೊದಲ `ಚಿಟ್ಟೆ ಉದ್ಯಾನ'ವನ್ನು ಬೆಂಗಳೂರಿನ ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನದ ಆವರಣದಲ್ಲಿ ಕೇಂದ್ರದ ವಿಜ್ಞಾನ ಮತ್ತು ತಂತ್ರಜ್ಞಾನ ರಾಜ್ಯ ಸಚಿವ ಕಪಿಲ್ ಸಿಬಲ್ ರಾಷ್ಟ್ರಕ್ಕೆ ಅರ್ಪಿಸಿದರು. 10,490 ಚದರಡಿ ವ್ಯಾಪ್ತಿಯಲ್ಲಿ ನಿರ್ಮಿತವಾದ `ಚಿಟ್ಟೆ ಉದ್ಯಾನ' ಜಗತ್ತಿನ ಇಂತಹ ವಿಶಾಲ ಉದ್ಯಾನಗಳ ಸಾಲಿನಲ್ಲಿ ಒಂದಾಗಲಿದೆ. ನಗರ ಮತ್ತು ಸುತ್ತಮುತ್ತಣ ಸುಮಾರು 42 ಜಾತಿಯ ಚಿಟ್ಟೆಗಳಿಗೆ ಆವಾಸ ಸ್ಥಾನವಾಗಲಿರುವ ಈ ಉದ್ಯಾನದಲ್ಲಿ 2ನೇ ಹಂತದಲ್ಲಿ ಪಶ್ಚಿಮ ಘಟ್ಟ ಪ್ರದೇಶದ ಚಿಟ್ಟೆಗಳನ್ನೂ ಸಾಕಲಾಗುವುದು. ಉದ್ಯಾನದ ನಿಮರ್ಾಣ ವೆಚ್ಚ 4.9 ಕೋಟಿ ರೂಪಾಯಿಗಳು.

2005: ಮಹಾತ್ಮ ಗಾಂಧಿ ಹತ್ಯೆ ಪ್ರಕರಣದ ಆರೋಪಿ ಹಾಗೂ ನಾಥೂರಾಂ ಗೋಡ್ಸೆ ಕಿರಿಯ ಸಹೋದರ ಗೋಪಾಲ್ ವಿನಾಯಕ ಗೋಡ್ಸೆ (86) ಈ ದಿನ ರಾತ್ರಿ ನಿಧನರಾದರು. ಗಾಂಧೀಜಿ ಹತ್ಯೆ ಪ್ರಕರಣದಲ್ಲಿ ಗೋಪಾಲ್ ಗೋಡ್ಸೆ ಜೀವಾವಧಿ ಶಿಕ್ಷೆಗೆ ಗುರಿಯಾಗಿ ಸೆರೆವಾಸ ಅನುಭವಿಸಿದ್ದರು.

2005: ಮಾಜಿ ಲೋಕಸಭಾಧ್ಯಕ್ಷ ಪಿ.ಎ. ಸಂಗ್ಮಾ ಅವರು ಲೋಕಸಭಾ ಸದಸ್ಯತ್ವಕ್ಕೆ ನೀಡಿದ ರಾಜೀನಾಮೆಯನ್ನು ಸಭಾಧ್ಯಕ್ಷ ಸೋಮನಾಥ ಚಟರ್ಜಿ ಅಂಗೀಕರಿಸಿದರು. 2004ರ ಸಾರ್ವತ್ರಿಕ ಚುನಾವಣೆಯಲ್ಲಿ ಅವರು ತೃಣಮೂಲ ಕಾಂಗ್ರೆಸ್ಸಿನಿಂದ ಮೇಘಾಲಯದ ತುರಾ ಕ್ಷೇತ್ರದಿಂದ ಆಯ್ಕೆಯಾಗಿದ್ದರು. ತಿಂಗಳ ಹಿಂದೆ ಈ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು.

2005: ಬಹು ವಿವಾದಿತ ಅರ್ಕಾವತಿ ಬಡಾವಣೆಗಾಗಿ ಭೂಸ್ವಾಧೀನ ಪ್ರಕ್ರಿಯೆಗೆ ಹೈಕೋರ್ಟ್ ಹಸಿರು ನಿಶಾನೆ ತೋರಿಸಿತು. ಇದರೊಂದಿಗೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಹಾಗೂ ಜಮೀನು ಮಾಲೀಕರ ನಡುವಣ ಕಾನೂನು ಸಮರಕ್ಕೆ ತೆರೆಬಿತ್ತು. ಬಡಾವಣೆಗಾಗಿ ಸ್ವಾಧೀನಪಡಿಸಿಕೊಂಡಿರುವ ಭೂಮಿಯ ಮಾಲೀಕತ್ವದ ಹಕ್ಕುಗಳನ್ನು ಮೂಲ ಮಾಲೀಕರಿಗೆ ವರ್ಗಾಯಿಸುವಂತೆ ಏಕಸದಸ್ಯ ಪೀಠ ನೀಡಿದ ತೀರ್ಪನ್ನು ಮುಖ್ಯ ನ್ಯಾಯಮೂರ್ತಿ ಎನ್. ಕೆ. ಸೋಧಿ ಹಾಗೂ ನ್ಯಾಯಮೂರ್ತಿ ಎನ್. ಕುಮಾರ್ ಅವರನ್ನು ಒಳಗೊಂಡ ವಿಭಾಗೀಯ ಪೀಠವು ರದ್ದುಪಡಿಸಿತು.

2005: ಆಫ್ಘಾನಿಸ್ಥಾನದಲ್ಲಿ ತಾಲಿಬಾನ್ ಉಗ್ರರಿಂದ ಹತ್ಯೆಗೀಡಾದ ಮಣಿಯಪ್ಪನ್ ಕುಟ್ಟಿಯ ಶವವನ್ನು ಹುಟ್ಟೂರಾದ ಅಳಪ್ಪುಳ ಗ್ರಾಮಕ್ಕೆ ತಂದು ಸೇನಾಪಡೆ ಗೌರವದ ಬಳಿಕ ಅಂತ್ಯಕ್ರಿಯೆ ನಡೆಸಲಾಯಿತು.

2002: ನ್ಯೂಕ್ಯಾಸಲ್ನ ಜಾನ್ ಹಂಟರ್ ಆಸ್ಪತ್ರೆಂಯಲ್ಲಿ ಹಾನಿಗೀಡಾದ ತನ್ನ ಹೃದಯವನ್ನು ದುರಸ್ತಿಪಡಿಸಲು ಆಸ್ಟ್ರೇಲಿಯಾದ ಜಿಮ್ ನಿಕೊಲ್ ವಿಶಿಷ್ಟ ಶಸ್ತ್ರಚಿಕಿತ್ಸೆಗೆ ಒಳಗಾದರು. `ಅಡಲ್ಟ್ ಸ್ಟೆಮ್ ಸೆಲ್ಸ್' (ಮೂಲಕೋಶ) ಬಳಸಿ ನಡೆಸಲಾದ ಜಗತ್ತಿನ ಮೊತ್ತ ಮೊದಲ ರಿಪೇರಿ ಕೆಲಸ ಇದು.

2001: ಜಗತ್ತಿನಲ್ಲಿ ಮೊತ್ತ ಮೊದಲಬಾರಿಗೆ ತಾನು ಮಾನವ ಭ್ರೂಣದ ತದ್ರೂಪು (ಕ್ಲೋನಿಂಗ್) ಸೃಷ್ಟಿ ಮಾಡಿರುವುದಾಗಿ ಮೆಸಾಚ್ಯುಸೆಟ್ಸಿನ ಎಸಿಟಿ ಕಂಪೆನಿ ಈ ದಿನ ಪ್ರಕಟಿಸಿತು. ತನಗೆ ಮಾನವ ಸೃಷ್ಟಿಯ ಉದ್ದೇಶವಿಲ್ಲ. ಆದರೆ ರೋಗಗಳಿಗೆ ಚಿಕಿತ್ಸೆ ನೀಡುವ ಮೂಲಕೋಶಗಳಿಗಾಗಿ ಭ್ರೂಣವನ್ನು ಬಳಸುವ ಉದ್ದೇಶವಿದೆ ಎಂದು ಅದು ಹೇಳಿತು. ಮನುಕುಲವನ್ನು ಕಾಡುವ ವ್ಯಾಪಕ ಕಾಯಿಲೆಗಳಿಂದ ಪ್ರಾಣ ಉಳಿಸುವ ಚಿಕಿತ್ಸಾ ವಿಧಾನ ರೂಪಿಸುವ ಉದ್ದೇಶ ತಮ್ಮದು ಎಂದು ಅದು ಹೇಳಿತು. ಭ್ರೂಣದಿಂದ ಪಡೆದ ಭ್ರೂಣ ಮೂಲಕೋಶವನ್ನು ದೇಹದ ಯಾವುದೇ ಅಂಗವಾಗಿ ಬೆಳೆಸಬಹುದು.

1981: ಭಾರತದಲ್ಲಿ ನಡೆದ ಮೊತ್ತ ಮೊದಲ ಏಕದಿನ ಅಂತಾರಾಷ್ಟ್ರೀಯ ಕ್ರಿಕೆಟ್ ಪಂದ್ಯದ ಕ್ರೀಡಾಂಗಣ ಎಂಬ ಹೆಗ್ಗಳಿಕೆಗೆ ಅಹಮದಾಬಾದಿನ ಸರ್ದಾರ್ ಪಟೇಲ್ ಸ್ಟೇಡಿಯಂ ಪಾತ್ರವಾಯಿತು. ಪಂದ್ಯದಲ್ಲಿ ಭಾರತವನ್ನು ಇಂಗ್ಲೆಂಡ್ ಐದು ವಿಕೆಟ್ ಅಂತರದಲ್ಲಿ ಸೋಲಿಸಿತು.

1952: ಅಗಾಥಾ ಕ್ರಿಸ್ಟೀ ಅವರ ನಾಟಕ `ದಿ ಮೌಸ್ ಟ್ರ್ಯಾಪ್'ನ ಮೊತ್ತ ಮೊದಲ ಪ್ರದರ್ಶನ ಲಂಡನ್ನಿನ ಅಂಬಾಸಡರ್ ಥಿಯೇಟರಿನಲ್ಲಿ ನಡೆಯಿತು.

1948: ನ್ಯಾಷನಲ್ ಕೆಡೆಟ್ ಕೋರ್ (ಎನ್ ಸಿ ಸಿ) ಎನ್ ಸಿ ಸಿ ಕಾಯ್ದೆಗೆ ಅನುಗುಣವಾಗಿ ಈ ದಿನ ಅಸ್ತಿತ್ವಕ್ಕೆ ಬಂತು. ಭಾರತೀಯ ವಿದ್ಯಾರ್ಥಿಗಳ ಕಲ್ಯಾಣದ ದೃಷ್ಟಿಯಿಂದ ಇದನ್ನು ರೂಪಿಸಲಾಗಿದ್ದು `ಏಕತೆ ಮತ್ತು ಶಿಸ್ತು' ಇದರ ಪ್ರಮುಖ ಗುರಿ. 

1945: ನಾಜಿ ನಾಯಕರ ವಿಚಾರಣೆಯನ್ನು ಅಂತಾರಾಷ್ಟ್ರೀಯ ಮಿಲಿಟರಿ ಟ್ರಿಬ್ಯೂನಲ್ ಈದಿನ ನ್ಯೂರೆಂಬರ್ಗಿನ ನ್ಯಾಯ ಅರಮನೆಯಲ್ಲಿ (ಪ್ಯಾಲೇಸ್ ಆಫ್ ಜಸ್ಟೀಸ್) ಆರಂಭಿಸಿತು. `ನ್ಯೂರೆಂಬರ್ಗ್ ಟ್ರಯಲ್' (ನ್ಯೂರೆಂಬರ್ಗ್ ವಿಚಾರಣೆ) ಎಂದೇ ಖ್ಯಾತಿ ಪಡೆದ ಈ ವಿಚಾರಣೆ 1946ರ ಸೆಪ್ಟೆಂಬರ್ 30ರಂದು ಕೊನೆಗೊಂಡಿತು. ಅಕ್ಟೋಬರ್ 1ರಂದು ತೀರ್ಪು ಪ್ರಕಟಿಸಲಾಯಿತು. ಒಳಸಂಚು, ಶಾಂತಿ ವಿರೋಧಿ ಅಪರಾಧಗಳು, ಯುದ್ಧ ಅಪರಾಧಗಳು ಹಾಗೂ ಮಾನವತೆ ವಿರುದ್ಧ ಎಸಗಿದ ಅಪರಾಧಗಳಿಗೆ ಅವರನ್ನು ಹೊಣೆಗಾರರನ್ನಾಗಿ ಮಾಡಲಾಯಿತು.10 ಮಂದಿಗೆ ಮರಣದಂಡನೆ, 7 ಮಂದಿಗೆ ಸೆರೆವಾಸದ ಶಿಕ್ಷೆ ವಿಧಿಸಿದರೆ, ಮೂವರನ್ನು ಖುಲಾಸೆ ಮಾಡಲಾಯಿತು.

1916: ಕನ್ನಡಕ್ಕಿಂತ ಇಂಗ್ಲಿಷಿನಲ್ಲಿಯೇ ಹೆಚ್ಚು ಕವನ ಸಂಕಲನಗಳನ್ನು ಪ್ರಕಟಿಸಿ ಅಂತಾರಾಷ್ಟ್ರೀಯ ಖ್ಯಾತಿ ಗಳಿಸಿದ್ದ  ಸಾಹಿತಿ ಹೇಮಂತ ಕುಲಕರ್ಣಿ (21-11-1916ರಿಂದ 22-7-1994) ಅವರು ಬಿಜಾಪುರದಲ್ಲಿ ಜನಿಸಿದರು.

1916: ಸಾಹಿತಿ ರಾಮಕೃಷ್ಣ ಉಡುಪ ಜನನ.

(ಸಂಗ್ರಹ: ನೆತ್ರಕೆರೆ ಉದಯಶಂಕರ)

Wednesday, November 26, 2008

ಬೊಕ್ಕ ತಲೆಗೆ 'ವಾರೆಕೋರೆ' ಮದ್ದು ಬಂದೈತ್ರಿ.....!

ಬೊಕ್ಕ ತಲೆಗೆ 'ವಾರೆಕೋರೆ'

ಮದ್ದು ಬಂದೈತ್ರಿ.....! 


ಕೇಳ್ರಪ್ಪೋ ಕೇಳ್ರೀ... ಬೊಕ್ಕ ತಲೆಗೆ ಮದ್ದು ಬಂದೈತ್ರಿ...!. ಅಂತಿಂಥ ಮದ್ದಲ್ಲ. ಬಲು ಘಾಟಿ ಮದ್ದಂತ್ರೀ.. ಬಕ್ರಿ ಮೂತ್ರಾಂತ್ರೀ...! ಈ ಮದ್ದು ಹಚ್ಕೊಂಡ್ರೆ  ದ್ಯಾವೇಗೌಡ್ರ ತಲೀಮ್ಯಗೂ ಕೂದ್ಲ ಬರ್ತೈತಂತ್ರೀ..! 

ಈ ವಿಷ್ಯ ಎಲ್ಲೈತಿ ಅಂತಾ ಹುಡುಕಾಕ ಹತ್ತೀರೇನ್ರೀ... ಇತ್ಲಾಗ ಬರ್ರೀ.. ಈ 'ವಾರೆ ಕೋರೆ' ನೋಡ್ರೀ... ಇದ್ರಾಗ ಎಲ್ಲಾ ವಿಷ್ಯಾ ಬರೆದಾರ್ರೀಯಪ್ಪಾ....!

ಇನ್ನೂ ಯಾಕ ತಲೆ ಕೆರ್ಕೋತಾ ಇದೀರ್ರೀ? ಅರ್ಥ ಆಗಿಲ್ಲೇನು?

ಪ್ರಕಾಶಪ್ನೋರು ಹೊಸ ಪತ್ರಿಕೆ ತರಾಕ್ಹತ್ತಾರ್ರೀ...! ಅದ್ರಾಗೆ ಬಾಳ ಬಾಳ ವಿಷ್ಯಾ  ಬರೆದಾರ್ರೀ..

ಇನ್ನೂ ಗೊತ್ತಾಗಿಲ್ಲಾಂದ್ರ ನೇರ ಡಬ್ಲೂಡಡ್ಲೂಡಬ್ಲೂ.ವಾರೆಕೋರೆ.ಬ್ಲಾಗ್ಸ್ಪಾಟ್.ಕಾಮ್  (www.vaarekore.blogspot.com) ಗೆ ನುಗ್ರೀ.. ನಿಮ್ಗೇ ಎಲ್ಲಾ ಗೊತ್ತಾಗ್ತೈತ್ರೀ..! ಅದ್ರಾಗೆ 'ವಾರೆ ಕೋರೆ' ಪ್ರಯೋಗ ಸಂಚಿಕೆ ಅದೇ ರೀ..!

'ವಾರೆ ಕೋರೆ' ಬಿಡಬ್ಯಾಡ್ರಿ... ಗಟ್ಟಿಯಾಗಿ ಹಿಡಕೋರ್ರೀ.. ಖರೇ.. ನಕ್ಕು ನಕ್ಕು ಸುಸ್ತಾಗ್ತೀರಿ..ನೋಡ್ರೀ... ಆಮ್ಯಾಲೂ ನಗು ಬರ್ಲಿಲ್ಲಾಂದ್ರೆ... ನನ್ನಾಣೆ ಕಣ್ರೀ..! 

ಇಲ್ನೋಡ್ರಿ.. ಒಂದೆರಡು ಸ್ಯಾಂಪಲ್ಲು ಪುಟ ಐತ್ರೀ.. ಇದ್ನ ನೋಡ್ಕೊಂಡು ಪ್ರಕಾಶಪ್ನೋರ ಬೆನ್ನು ಹತ್ರೀ..

ನಿಜವಾಗ್ಲೂ ಪ್ರಕಾಶಪ್ನೋರೇ...! 'ವಾರೆ ಕೋರೆ' ಭಾಳಾ ಮಜಾ ಕೊಡ್ತದ್ರೀಯಪ್ಪಾ..! ನಿಮ್ ಸಾಹ್ಸ ಯಶಸ್ವಿ ಆಗ್ಲೀ ಅಂತ ನಾನಂತೂ ಹಾರೈಸ್ತೀನ್ರಿ..





ಇಂದಿನ ಇತಿಹಾಸ History Today ನವೆಂಬರ್ 24

ಇಂದಿನ ಇತಿಹಾಸ

ನವೆಂಬರ್ 24

ಇಂಗ್ಲೆಂಡಿನಲ್ಲಿ ಭಾರತೀಯ ರಾಯಭಾರಿಯಾಗಿ ಕೆಲಸ ನಿರ್ವಹಿಸುತ್ತಿದ್ದ ಕಮಲೇಶ್ ಶರ್ಮಾ ಅವರು ಕಾಮನ್ವೆಲ್ತ್ ಒಕ್ಕೂಟದ ನೂತನ ಮಹಾ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾದರು. ಉಗಾಂಡದ ಕಂಪಾಲಾದಲ್ಲಿ ನಡೆದ ಕಾಮನ್ವೆಲ್ತ್ ಸದಸ್ಯ ರಾಷ್ಟ್ರಗಳ ಪ್ರತಿನಿಧಿಗಳ ಸಭೆಯಲ್ಲಿ 66 ವರ್ಷದ ಐ ಎಫ್ ಎಸ್ ಅಧಿಕಾರಿ ಕಮಲೇಶ್ ಅವರನ್ನು ಈ ಮಹತ್ವದ ಹುದ್ದೆಗೆ ಬಹುಮತದಿಂದ ಆಯ್ಕೆ ಮಾಡಲಾಯಿತು.

2007: ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ವ್ಯವಸ್ಥಾಪಕ ನಿರ್ದೇಶಕ ಬಿ. ಶ್ರೀನಿವಾಸರೆಡ್ಡಿ ಅವರ ಬೆಂಗಳೂರು, ಆನೆಕಲ್ಲಿನ ಮನೆ ಮತ್ತು ಕಚೇರಿ ಮೇಲೆ ಈದಿನ ಬೆಳಗ್ಗೆ ದಾಳಿ ನಡೆಸಿದ ಲೋಕಾಯುಕ್ತ ಪೊಲೀಸರು 20 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ಅಕ್ರಮ ಆಸ್ತಿಯನ್ನು ಪತ್ತೆ ಹಚ್ಚಿದರು. ಖಚಿತ ಮಾಹಿತಿಯನ್ನು ಆಧರಿಸಿ ರೆಡ್ಡಿ ಅವರ ಸದಾಶಿವನಗರದ ನಿವಾಸ, ಅವರ ಅತ್ತೆ (ಪತ್ನಿಯ ತಾಯಿ) ಚೌಡಮ್ಮ ಅವರ ಇಂದಿರಾನಗರದ ನಿವಾಸ ಮತ್ತು ಬೆಂಗಳೂರು ಉತ್ತರ ತಾಲ್ಲೂಕಿನ ತಿರುಮಗೊಂಡನಹಳ್ಳಿಯ ರಮಣ ಮಹರ್ಷಿ ಸೇವಾ ಟ್ರಸ್ಟ್ ಕಚೇರಿಯ ಮೇಲೆ ಏಕಕಾಲಕ್ಕೆ ದಾಳಿ ನಡೆಸಿದ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳು ನಗದು, ಬ್ಯಾಂಕ್ ಖಾತೆಗಳು ಮತ್ತು ಸ್ಥಿರಾಸ್ತಿಗೆ ಸಂಬಂಧಿಸಿದ ಎಲ್ಲ ದಾಖಲೆಗಳನ್ನು ವಶಪಡಿಸಿಕೊಂಡರು. ಆದಾಯಕ್ಕಿಂತ 57 ಪಟ್ಟು ಅಧಿಕ ಆಸ್ತಿಪಾಸ್ತಿ ಶ್ರೀನಿವಾರ ರೆಡ್ಡಿ ಅವರ ಬಳಿ ದೊರಕಿತು. ಅವರ ಒಟ್ಟು ಸೇವಾ ಅವಧಿಯಲ್ಲಿ ಸರ್ಕಾರದಿಂದ ಪಡೆದ ಸಂಬಳ ಮತ್ತು ಇತರೆ ಸೌಲಭ್ಯಗಳ ಮೊತ್ತ ಕೇವಲ ರೂ 35 ಲಕ್ಷ! ಅದರೆ ದಾಳಿ ಕಾಲದಲ್ಲಿ ಪತ್ತೆಯಾದದ್ದು 20 ಕೋಟಿ ರೂಪಾಯಿಗಳಿಗೂ ಹೆಚ್ಚಿನ ಮೌಲ್ಯದ ಆಸ್ತಿಪಾಸ್ತಿ ಎಂದು ಲೋಕಾಯುಕ್ತ ಸಂತೋಷ ಹೆಗ್ಡೆ ಹೇಳಿದರು.

2007: ಪರಿಶಿಷ್ಟ ಪಂಗಡದ ಸ್ಥಾನಮಾನ ನೀಡುವಂತೆ ಒತ್ತಾಯಿಸಿ ಆದಿವಾಸಿ ವಿದ್ಯಾರ್ಥಿಗಳ ಸಂಘಟನೆ ಅಸ್ಸಾಮಿನ ಗುವಾಹಟಿಯಲ್ಲಿ ನಡೆಸಿದ ಪ್ರತಿಭಟನೆ ಹಿಂಸಾರೂಪಕ್ಕೆ ತಿರುಗಿ, ಅದನ್ನು ನಿಯಂತ್ರಿಸಲು ಪೊಲೀಸರು ನಡೆಸಿದ ಗೋಲಿಬಾರಿಗೆ ಐವರು ಬಲಿಯಾದರು. ರಾಜ್ಯದ 2.6 ಕೋಟಿ ಜನ ಸಂಖ್ಯೆಯಲ್ಲಿ ಶೇ 6 ರಷ್ಟಿರುವ ಸಂತಲ್ ಆದಿವಾಸಿಗಳು ಬಹುತೇಕ ಚಹಾ ತೋಟಗಳಲ್ಲಿ ಕೆಲಸ ಮಾಡುವವರು. ತಮ್ಮನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಬೇಕೆಂದು ಕಳೆದ ಹಲವಾರು ವರ್ಷಗಳಿಂದ  ಹೋರಾಟ ನಡೆಸಿದ್ದು, ಇದೇ ಆಗ್ರಹ ಮುಂದಿಟ್ಟು ಬೃಹತ್ ಪ್ರತಿಭಟನಾ ರ್ಯಾಲಿ ನಡೆಸಿದ್ದರು.

2007: ಜೈಪುರದಿಂದ ನವದೆಹಲಿಗೆ ಕರೆತರಲಾದ ಬಾಂಗ್ಲಾದೇಶದ ವಿವಾದಿತ ಲೇಖಕಿ ತಸ್ಲಿಮಾ ನಸ್ರೀನ್ ಅವರನ್ನು ರಾಜಸ್ಥಾನ ಹೌಸಿನಲ್ಲಿ ಇರಿಸಿ ದೆಹಲಿ ಹಾಗೂ ರಾಜಸ್ಥಾನೀ ಪೊಲೀಸರು ಬಿಗಿ ಭದ್ರತೆ ಒದಗಿಸಿದರು. ಅತಿಥಿ ಗೃಹಕ್ಕೆ ಸಾರ್ವಜನಿಕರ ಪ್ರವೇಶವನ್ನು ನಿಷೇಧಿಸಲಾಯಿತು. `ಲಜ್ಜಾ' ಪುಸ್ತಕ ಬರೆದು ತಸ್ಲಿಮಾ  ಮುಸ್ಲಿಂ ಮೂಲಭೂತವಾದಿಗಳ ಕೆಂಗಣ್ಣಿಗೆ ಗುರಿಯಾದರು.

2007: ಪಾಕಿಸ್ಥಾನದ ರಾವಲ್ಪಿಂಡಿ ಹಾಗೂ ಆಪ್ಘಾನಿಸ್ಥಾನದ ಕಾಬೂಲಿನಲ್ಲಿ ಸಂಭವಿಸಿದ ಪ್ರತ್ಯೇಕ  ಆತ್ಮಹತ್ಯಾ ದಾಳಿಗಳಲ್ಲಿ ಒಟ್ಟು 39ಮಂದಿ ಮೃತರಾದರು. ರಾವಲ್ಪಿಂಡಿಯಲ್ಲಿ 30 ಜನ, ಕಾಬೂಲಿನಲ್ಲಿ 9 ಮಂದಿ ಸಾವನ್ನಪ್ಪಿದರು.

2007: ಹುಬ್ಬಳ್ಳಿ - ಧಾರವಾಡ ಅವಳಿ ನಗರದ ಕೆಲವೆಡೆ ಈದಿನ ಸಂಜೆ ಲಘು ಭೂಕಂಪದ ಅನುಭವವಾಯಿತು. ಸಂಜೆ 5ರ ಸುಮಾರಿಗೆ ಮನೆಗಳಲ್ಲಿ ಮೇಜು, ಕುರ್ಚಿ, ಪಾತ್ರೆಗಳು ಅಲುಗಾಡಿದ ಅನುಭವವಾಯಿತು.

2007: ವಿಚಾರವಾದಿ ದಿವಂಗತ ಕೆ.ರಾಮದಾಸ್ ಅವರ ಪತ್ನಿ ಆರ್. ನಿರ್ಮಲ (59) ದೀರ್ಘಕಾಲದ ಅನಾರೋಗ್ಯದಿಂದಾಗಿ ಮೈಸೂರಿನ ನಿವಾಸದಲ್ಲಿ ನಿಧನರಾದರು. ಕೆಲವು ತಿಂಗಳ ಹಿಂದೆಯಷ್ಟೆ ಪತಿ ಕೆ.ರಾಮದಾಸ್ ತೀರಿಕೊಂಡಿದ್ದರು. ಮೂರು ದಶಕಗಳ ಕಾಲ ಕನ್ನಡ ಅಧ್ಯಾಪಕಿಯಾಗಿ ಕೆಲಸ  ಮಾಡಿ ನಿವೃತ್ತಿಹೊಂದಿದ್ದ ನಿರ್ಮಲ ತಮ್ಮ ಪತಿಯೊಂದಿಗೆ ಸೇರಿ ನಾಡಿನ ಹಲವಾರು ಪ್ರಗತಿಪರ ಹೋರಾಟಗಳಲ್ಲಿ ಪಾಲ್ಗೊಂಡಿದ್ದರು. ನಿರ್ಮಲ ಅವರ  `ಚಲ್ ಮೇರಿ ಲೂನಾ' ಎಂಬ ಲಲಿತ ಪ್ರಬಂಧ ಸಂಕಲನಕ್ಕೆ ರಾಜ್ಯ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಲಭಿಸಿತ್ತು. ಪಚ್ಚೆಪೈರು (ಮಕ್ಕಳ  ಸಾಹಿತ್ಯ), ಉರಿವ ಒಲೆಗಳ ಮುಂದೆ (ಕವನ ಸಂಕಲನ) ಪ್ರಕಟವಾಗಿವೆ.  

2007: ಇಂಗ್ಲೆಂಡಿನಲ್ಲಿ ಭಾರತೀಯ ರಾಯಭಾರಿಯಾಗಿ ಕೆಲಸ ನಿರ್ವಹಿಸುತ್ತಿದ್ದ ಕಮಲೇಶ್ ಶರ್ಮಾ ಅವರು ಕಾಮನ್ವೆಲ್ತ್ ಒಕ್ಕೂಟದ ನೂತನ ಮಹಾ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾದರು. ಉಗಾಂಡದ ಕಂಪಾಲಾದಲ್ಲಿ ನಡೆದ ಕಾಮನ್ವೆಲ್ತ್ ಸದಸ್ಯ ರಾಷ್ಟ್ರಗಳ ಪ್ರತಿನಿಧಿಗಳ ಸಭೆಯಲ್ಲಿ 66 ವರ್ಷದ ಐ ಎಫ್ ಎಸ್ ಅಧಿಕಾರಿ ಕಮಲೇಶ್ ಅವರನ್ನು ಈ ಮಹತ್ವದ ಹುದ್ದೆಗೆ ಬಹುಮತದಿಂದ ಆಯ್ಕೆ ಮಾಡಲಾಯಿತು.

2007: ಅಂಟಾರ್ಟಿಕ್ ಸಾಗರದಲ್ಲಿ ಮುಳುಗುತ್ತಿದ್ದ ಹಡಗಿನಿಂದ ಬಹುತೇಕ ಎಲ್ಲ 154 ಪ್ರಯಾಣಿಕರು ಹಾಗೂ ಸಿಬ್ಬಂದಿ ಪ್ರಾಣಾಪಾಯದಿಂದ ಪಾರಾದರು ಎಂದು ಬ್ರಿಟಿಷ್ ಕರಾವಳಿ ರಕ್ಷಣಾ ಪಡೆ ವಕ್ತಾರ ಆ್ಯಂಡಿ ಕಟ್ರೆಲ್ ತಿಳಿಸಿದರು. 154 ಮಂದಿಯನ್ನು ರಕ್ಷಿಸಲು ಅರ್ಜೆಂಟೀನಾ ಹಾಗೂ ಅಮೆರಿಕಾ ಕರಾವಳಿ ರಕ್ಷಣಾ ಪಡೆ ಸಿಬ್ಬಂದಿ ನೆರವು ನೀಡಿದರು.

2006: ಕೆನ್ ಶಾಲೆಯ ಹಳೆಯ ವಿದ್ಯಾರ್ಥಿಗಳ ಹಾಗೂ ಹಿತೈಷಿಗಳ ಸಂಘವು ಖ್ಯಾತ ಕಲಾವಿದ ಆರ್. ಎಂ. ಹಡಪದ್ ಹೆಸರಿನಲ್ಲಿ ನೀಡುವ ಪ್ರಶಸ್ತಿಯು ಕೆನ್ ಕಲಾ ಶಾಲೆಯ ಪ್ರಾಚಾರ್ಯ ಹಾಗೂ ಕಲಾವಿದ ಜಿ.ಎಂ.ಎನ್. ಮಣಿ ಅವರಿಗೆ ಲಭಿಸಿತು.

2006: ಭೋಪಾಲಿನಿಂದ 30 ಕಿ.ಮೀ. ದೂರದ ಭೋಜಪುರದಲ್ಲಿ ಪರ್ಮಾರ್ ರಾಜಮನೆತನದ ರಾಜಾ ಭೋಜಪಾಲ್ ನಿರ್ಮಿಸಿ ಕಾರಣಾಂತರಗಳಿಂದ ಅಪೂರ್ಣವಾಗಿ ಬಿಟ್ಟಿದ್ದ ಒಂದು ಸಹಸ್ರ ವರ್ಷಗಳ ಹಿಂದಿನ ಶಿವ ದೇವಸ್ಥಾನವನ್ನು ಭಾರತೀಯ ಸರ್ವೇಕ್ಷಣಾಲಯ ಇಲಾಖೆಯು ಪೂರ್ಣಗೊಳಿಸಿತು. ರಾಷ್ಟ್ರದಲ್ಲೇ ಅತ್ಯಂತ ದೊಡ್ಡದಾದ ಈ ದೇವಸ್ಥಾನವು ಕಳೆದ 1000 ವರ್ಷಗಳಿಂದ ಛಾವಣಿ ಇಲ್ಲದೆ ನಿಂತಿತ್ತು. ಸ್ಥಂಭಗಳ ಕೆಲಸವೂ ಅಪೂರ್ಣವಾಗಿತ್ತು. ಶಿವಲಿಂಗ ಬಿಸಿಲಿಗೆ ಒಣಗಿ ಮಳೆಗೆ ನೆನೆಯುತ್ತಿತ್ತು.

2006: ಭಾರತೀಯ ಏರೋನಾಟಿಕಲ್ ಎಂಜಿನಿಯರ್ ಬೆಂಗಳೂರಿನ ಜೋಸೆಫ್ ಪಿಚಮುತ್ತು ಅವರು ವಿಮಾನಗಳ ಸುರಕ್ಷಿತ ಭೂಸ್ಪರ್ಶಕ್ಕೆ ಅನುವು ಮಾಡುವ ಉಪಕರಣವೊಂದನ್ನು ಸಂಶೋಧಿಸಿರುವುದಾಗಿ ಪ್ರಕಟಿಸಿದರು. ಹವಾಮಾನ ವೈಪರೀತ್ಯಗಳ ನಡುವೆಯೂ ವಿಮಾನ ಭೂಸ್ಪರ್ಶ ಮಾಡಬೇಕಿರುವ ರನ್ ವೇ ನಡುವಿನ ಅಂತರವನ್ನು ಈ ಉಪಕರಣದ ಮೂಲಕ ನಿಖರವಾಗಿ ತಿಳಿಯಬಹುದು. ಇದರಿಂದ ಸುರಕ್ಷಿತ ಭೂಸ್ಪರ್ಶ ಮಾಡಲು ಪೈಲಟ್ ಗೆ ಅನುಕೂಲವಾಗುತ್ತದೆ.

2005: ಎನ್ ಡಿ ಎ ನಾಯಕ ನಿತೀಶ್ ಕುಮಾರ್ ಅವರು ಪಟ್ನಾದ ಚಾರಿತ್ರಿಕ ಗಾಂಧಿ ಮೈದಾನದಲ್ಲಿ ಬಿಹಾರದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಇದರೊಂದಿಗೆ ಎಂಟೂವರೆ ತಿಂಗಳ ರಾಷ್ಟ್ರಪತಿ ಆಡಳಿತ ಕೊನೆಗೊಂಡು ಜೆಡಿ (ಯು)-ಬಿಜೆಪಿ ಮೈತ್ರಿಕೂಟದ ಆಡಳಿತ ಆರಂಭಗೊಂಡಿತು.

2005: ಸರ್ಕಾರಿ ಸ್ವಾಮ್ಯದ ಎನ್ ಜಿ ಇ ಎಫ್ ಕಾರ್ಖಾನೆಗೆ ಬೀಗಮುದ್ರೆ ಘೋಷಿಸಿ ಆಸ್ತಿ ಮಾರಾಟ ಮಾಡುವ ನಿರ್ಧಾರವನ್ನು ಕೈಬಿಡಲು ಕರ್ನಾಟಕ ಸಚಿವ ಸಂಪುಟ ನಿರ್ಧರಿಸಿತು.

1992: ಲೋಕಸಭೆ ಅಧಿವೇಶನವು ವಂದೇ ಮಾತರಂನಿಂದ ಆರಂಭಗೊಂಡು ಜನಗಣಮನದೊಂದಿಗೆ ಅಂತ್ಯಗೊಳ್ಳುವಂತೆ ನಿರ್ಣಯ ಕೈಗೊಳ್ಳಲಾಯಿತು.

1991: ಬ್ರಿಟಿಷ್ ರಾಕ್ ಗ್ರೂಪಿನ ಸಂಗೀತ ರಾಣಿ ಫ್ರೆಡ್ಡೀ ಮರ್ಕ್ಯೂರಿ ಲಂಡನ್ನಿನಲ್ಲಿ ಏಡ್ಸ್ ಪರಿಣಾಮವಾಗಿ ತನ್ನ 45ನೇ ವಯಸ್ಸಿನಲ್ಲಿ ಮೃತರಾದರು.

1969: ಚಂದ್ರ ಗ್ರಹಕ್ಕೆ ಎರಡನೇ ಯಾತ್ರೆಯನ್ನು ಮುಗಿಸಿದ ಅಪೋಲೊ 12 ಗಗನನೌಕೆ ಕ್ಷೇಮವಾಗಿ ಪೆಸಿಫಿಕ್ ಸಾಗರಕ್ಕೆ ಬಂದಿಳಿಯಿತು.

1961: ಖ್ಯಾತ ಲೇಖಕಿ, ಪರಿಸರ ಚಿಂತಕಿ ಅರುಂಧತಿ ರಾಯ್ ಹುಟ್ಟಿದ ದಿನ. ಅವರ ಕಾದಂಬರಿ `ದಿ ಗಾಡ್ ಆಫ್ ಸ್ಮಾಲ್ ಥಿಂಗ್ಸ್' (ಕ್ಷುದ್ರದೇವತೆ) ಪುಸ್ತಕಕ್ಕೆ ಬೂಕರ್ ಪ್ರಶಸ್ತಿ ಲಭಿಸಿದೆ.

1952: ಮಾಜಿ ಕ್ರಿಕೆಟ್ ಆಟಗಾರ ಬ್ರಿಜೇಶ್ ಪಟೇಲ್ ಹುಟ್ಟಿದ ದಿನ. 

1926: ಶ್ರೀ ಅರಬಿಂದೊ ಘೋಷ್ ಅವರು ಪಾಂಡಿಚೇರಿಯಲ್ಲಿ `ಪೂರ್ಣಸಿದ್ಧಿ' ಪಡೆದರು. ಈ ದಿನವನ್ನು ಶ್ರೀ ಅರಬಿಂದೋ ಆಶ್ರಮ ಸ್ಥಾಪನಾ ದಿನ ಎಂಬುದಾಗಿ  ಪರಿಗಣಿಸಲಾಗಿದೆ.

1924: ಖ್ಯಾತ ವ್ಯಂಗ್ಯಚಿತ್ರಕಾರ ರಾಸಿಪುರಂ ಕೃಷ್ಣಸ್ವಾಮಿ ಲಕ್ಷ್ಮಣ್ (ಆರ್. ಕೆ. ಲಕ್ಷ್ಮಣ್) ಹುಟ್ಟಿದ ದಿನ. ಇವರು ಖ್ಯಾತ ಕಾದಂಬರಿಕಾರ ಆರ್. ಕೆ. ನಾರಾಯಣ್ ಅವರ ಸಹೋದರ. ಲಕ್ಷ್ಮಣ್ ಅವರ ಸೃಷ್ಟಿ `ಕಾಮನ್ ಮ್ಯಾನ್' ತುಂಬ ಜನಪ್ರಿಯ.

1917: ಐತಿಹಾಸಿಕ ಕಾದಂಬರಿಕಾರರೆಂದೇ ಖ್ಯಾತರಾಗಿದ್ದ ಸಮೇತನಹಳ್ಳಿ ರಾಮರಾಯರು (24-11-1917ರಿಂದ 5-1-1999) ಶ್ರೀನಿವಾಸರಾವ್- ರುಕ್ಮಿಣಿಯಮ್ಮ ದಂಪತಿಯ ಮಗನಾಗಿ ಬೆಂಗಳೂರು ಜಿಲ್ಲೆ ಹೊಸಕೋಟೆಯ ಸಮೇತನಹಳ್ಳಿಯಲ್ಲಿ ಜನಿಸಿದರು.

1896: ಸಂಸ್ಕೃತ ವಿದ್ವಾಂಸ ಕ್ಷಿತಿಶ್ ಚಂದ್ರ ಚಟರ್ಜಿ (1896-1961) ಹುಟ್ಟಿದ ದಿನ.

1859: ಚಾರ್ಲ್ಸ್ ಡಾರ್ವಿನ್ ಅವರ `ಆನ್ ದಿ ಒರಿಜಿನ್ ಆಫ್ ಸ್ಪೀಸೀಸ್' ಪುಸ್ತಕ ಪ್ರಕಟಗೊಂಡಿತು. ಈ ಪುಸ್ತಕ ಡಾರ್ವಿನ್ ಅವರ ವಿಕಾಸವಾದವನ್ನು ವಿವರಿಸುತ್ತದೆ. ಮೊದಲ ಆವೃತ್ತಿಯ ಎಲ್ಲ 1250 ಪ್ರತಿಗಳು ಪ್ರಕಟವಾದ ದಿನವೇ ಮಾರಾಟವಾಗಿ ಹೋದವು.

1642: ಟಾಸ್ಮಾನಿಯಾವನ್ನು ಡಚ್ ಸಂಶೋಧಕ ಅಬೆಲ್ ಟಾಸ್ಮನ್ ಪತ್ತೆ ಹಚ್ಚಿದ. ಈ ಭೂಪ್ರದೇಶಕ್ಕೆ ಆತ ವ್ಯಾನ್ ಡೇಮಿನ್ಸ್ ಲ್ಯಾಂಡ್ ಎಂಬುದಾಗಿ ಡಚ್ ಈಸ್ಟ್ ಇಂಡೀಸ್ ನ ಗವರ್ನರ್ ಜನರಲನ ಹೆಸರನ್ನು ಇಟ್ಟ. ವ್ಯಾನ್ ಡೇಮಿನ್ಸ್ ಆತನ ಸಂಶೋಧನೆಗೆ ನೆರವು ನೀಡಿದ ವ್ಯಕ್ತಿ. 1853ರಲ್ಲಿ ಇದಕ್ಕೆ `ಟಾಸ್ಮಾನಿಯಾ' ಎಂಬುದಾಗಿ ಮರುನಾಮಕರಣ ಮಾಡಲಾಯಿತು.

(ಸಂಗ್ರಹ: ನೆತ್ರಕೆರೆ ಉದಯಶಂಕರ)

Advertisement