My Blog List

Sunday, May 31, 2009

ಇಂದಿನ ಇತಿಹಾಸ History Today ಮೇ 30

ಇಂದಿನ ಇತಿಹಾಸ

ಮೇ 30

ಜನ ಸಾಗರದ ಹರ್ಷೋದ್ಘಾರ, ಕಿವಿಗಡಚಿಕ್ಕುವ ಪಟಾಕಿಗಳ ಸದ್ದು, ಮುಗಿಲು ಮುಟ್ಟುವ ಜಯ ಘೋಷಗಳ ನಡುವೆ ಬೂಕನಕೆರೆ ಸಿದ್ಧಲಿಂಗಪ್ಪ ಯಡಿಯೂರಪ್ಪ ಅವರು ನಾಡಿನ 19ನೇ ಮುಖ್ಯಮಂತ್ರಿಯಾಗಿ ರೈತ ಮತ್ತು ಭಗವಂತನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸುವುದರೊಂದಿಗೆ ದಕ್ಷಿಣ ಭಾರತದಲ್ಲಿ ಪ್ರಥಮ ಬಾರಿಗೆ ಪೂರ್ಣ ಪ್ರಮಾಣದ ಬಿಜೆಪಿ ಸರ್ಕಾರ ಕರ್ನಾಟಕದಲ್ಲಿ ಅಸ್ತಿತ್ವಕ್ಕೆ ಬಂದಿತು.

2008: ಜನ ಸಾಗರದ ಹರ್ಷೋದ್ಘಾರ, ಕಿವಿಗಡಚಿಕ್ಕುವ ಪಟಾಕಿಗಳ ಸದ್ದು, ಮುಗಿಲು ಮುಟ್ಟುವ ಜಯ ಘೋಷಗಳ ನಡುವೆ ಬೂಕನಕೆರೆ ಸಿದ್ಧಲಿಂಗಪ್ಪ ಯಡಿಯೂರಪ್ಪ ಅವರು ನಾಡಿನ 19ನೇ ಮುಖ್ಯಮಂತ್ರಿಯಾಗಿ ರೈತ ಮತ್ತು ಭಗವಂತನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸುವುದರೊಂದಿಗೆ ದಕ್ಷಿಣ ಭಾರತದಲ್ಲಿ ಪ್ರಥಮ ಬಾರಿಗೆ ಪೂರ್ಣ ಪ್ರಮಾಣದ ಬಿಜೆಪಿ ಸರ್ಕಾರ ಕರ್ನಾಟಕದಲ್ಲಿ ಅಸ್ತಿತ್ವಕ್ಕೆ ಬಂದಿತು. ಯಡಿಯೂರಪ್ಪ ಅವರೊಂದಿಗೆ ಐವರು ಪಕ್ಷೇತರರು, ಪಕ್ಷದ ಮೂವರು ವಿಧಾನ ಪರಿಷತ್ ಸದಸ್ಯರು ಮತ್ತು ಇಪ್ಪತ್ತು ಮಂದಿ ವಿಧಾನಸಭಾ ಸದಸ್ಯರು ಹಾಗೂ ಎರಡೂ ಸದನದ ಸದಸ್ಯರಲ್ಲದ ಡಾ.ಮುಮ್ತಾಜ್ ಅಲಿ ಖಾನ್ ಸೇರಿ ಇತರ 29 ಮಂದಿ ಸಂಪುಟ ದರ್ಜೆ ಸಚಿವರಾಗಿ ವಿಧಾನಸೌಧದ ಮುಂಭಾಗದಲ್ಲಿ ನಿರ್ಮಿಸಲಾಗಿದ್ದ ವಿಶೇಷ ವೇದಿಕೆಯಲ್ಲಿ ಪ್ರಮಾಣವಚನ ಸ್ವೀಕರಿಸಿದರು. ನೂತನ ಸಚಿವರು: ಕೆ.ಎಸ್.ಈಶ್ವರಪ್ಪ, ಡಾ.ವಿ.ಎಸ್. ಆಚಾರ್ಯ, ಗೋವಿಂದ ಕಾರಜೋಳ, ರಾಮಚಂದ್ರಗೌಡ, ಸಿ.ಎಂ.ಉದಾಸಿ, ಆರ್. ಅಶೋಕ್, ಮುಮ್ತಾಜ್ ಅಲಿಖಾನ್, ಶೋಭಾ ಕರಂದ್ಲಾಜೆ, ಬಿ.ಎನ್.ಬಚ್ಚೇಗೌಡ, ವಿಶ್ವೇಶ್ವರ ಹೆಗಡೆ ಕಾಗೇರಿ, ಬಿ.ಶ್ರೀರಾಮುಲು, ಕರುಣಾಕರ ರೆಡ್ಡಿ, ಜನಾರ್ದನ ರೆಡ್ಡಿ, ಎಸ್.ಎ. ರವೀಂದ್ರ ನಾಥ್, ಬಸವರಾಜ ಬೊಮ್ಮಾಯಿ, ಎಸ್. ಸುರೇಶ ಕುಮಾರ್, ರೇವುನಾಯ್ಕ್ ಬೆಳಮಗಿ, ಕೃಷ್ಣ ಪಾಲೆಮಾರ್, ಅರವಿಂದ ಲಿಂಬಾವಳಿ, ಎಸ್.ಕೆ.ಬೆಳ್ಳುಬ್ಬಿ, ಶಿವರಾಜ್ ತಂಗಡಗಿ, ಎಸ್.ಎನ್.ಕೃಷ್ಣಯ್ಯ ಶೆಟ್ಟಿ, ಲಕ್ಷ್ಮಣ ಸವದಿ, ಮುರುಗೇಶ್ ನಿರಾಣಿ, ನರೇಂದ್ರಸ್ವಾಮಿ, ಹಾಲಪ್ಪ
ವೆಂಕಟರಮಣಪ್ಪ, ಡಿ. ಸುಧಾಕರ್ ಮತ್ತು ಗೂಳಿಹಟ್ಟಿ ಶೇಖರ್.

2008: ಆಂಧ್ರಪ್ರದೇಶದ ವಿಶಾಖಪಟ್ಟಣಂನ ನೈಋತ್ಯ ಭಾಗದ ಹಲವು ಹಳ್ಳಿಗಳಲ್ಲಿ ಸಂಜೆ 4.50ರ ವೇಳೆಗೆ ಭೂಕಂಪ ಸಂಭವಿಸಿತು. ಈ ಕಂಪನದ ತೀವ್ರತೆ ರಿಕ್ಟರ್ ಮಾಪಕದಲ್ಲಿ 3.7ರಷ್ಟಿತ್ತು ಎಂದು ಚಂಡಮಾರುತ ಮುನ್ಸೂಚನಾ ಕೇಂದ್ರ ತಿಳಿಸಿತು. ನರ್ಸಿಪಟ್ನಂ ಗ್ರಾಮದಲ್ಲಿ ಮೂರು ಸೆಕೆಂಡುಗಳ ಕಾಲ ಭೂಮಿ ಕಂಪಿಸಿ, ಪಾತ್ರೆಗಳು ಉರುಳಿ ಬಿದ್ದವು. ಗಾಬರಿಯಾದ ಜನ ತಮ್ಮ ಮನೆಗಳಿಂದ ಹೊರಗೆ ಓಡಿ ಬಂದರು. ಮಕಾವರಿಪಲೇಂ, ಕೊಟೌರತ್ಲಾ, ನಟವರಂ, ಅನಕಪಲ್ಲಿ, ಪದೇರು, ಚೊಡಾವರಂ, ಕೊಥಾಕೊಟಾ, ಕಸ್ಮಿಕೊಟಾ, ಎಲೆಮಂಚಿಲಿ, ಬುಚ್ಚಿಯಪೇಟ ಮುಂತಾದೆಡೆ ಭೂಕಂಪದ ಅನುಭವವಾಯಿತು.

2008: ಆರು ವರ್ಷಗಳ ಹಿಂದೆ ದೇಶಾದ್ಯಂತ ಸಂಚಲನ ಮೂಡಿಸಿದ್ದ ನಿತೀಶ್ ಕಟಾರಾ ಕೊಲೆ ಪ್ರಕರಣದಲ್ಲಿ ಉತ್ತರ ಪ್ರದೇಶದ ರಾಜಕಾರಣಿ ಡಿ.ಪಿ. ಯಾದವ್ ಅವರ ಪುತ್ರ ವಿಕಾಸ್ ಯಾದವ್ ಹಾಗೂ ಆತನ ಸಹೋದರ ಸಂಬಂಧಿ ವಿಶಾಲ್ ಯಾದವ್ ಗೆ ದೆಹಲಿ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ಆದೇಶ ನೀಡಿತು. ಈ ಪ್ರಕರಣದಲ್ಲಿ ತೀರ್ಪು ನೀಡಿದ ಹೆಚ್ಚುವರಿ ಸೆಶನ್ಸ್ ನ್ಯಾಯಾಧೀಶೆ ರವೀಂದರ್ ಕೌರ್ 'ಇಬ್ಬರು ತಪ್ಪಿತಸ್ಥರಿಗೂ ನಾನು ಜೀವಾವಧಿ ಶಿಕ್ಷೆ ನೀಡಿದ್ದೇನೆ. ಮರಣ ದಂಡನೆಗೆ ಅರ್ಹವಾದ ಪ್ರಕರಣ ಇದಲ್ಲ' ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ವಿಕಾಸ್ ಹಾಗೂ ವಿಶಾಲ್ ಯಾದವ್ 2002ರ ಫೆಬ್ರುವರಿ 16ರಂದು ಘಜಿಯಾಬಾದಿನ ಮದುವೆ ಸಮಾರಂಭವೊಂದರಿಂದ ನಿತೀಶ್ ಕಟಾರಾನನ್ನು ಅಪಹರಿಸಿ ಕೊಂದು ಹಾಕಿದ್ದರು. ತನ್ನ ಸಹೋದರಿ ಭಾರತಿ ಯಾದವ್ ಜೊತೆ ಕಟಾರಾ ಆತ್ಮೀಯವಾಗಿದ್ದುದನ್ನು ವಿಕಾಸ್ ವಿರೋಧಿಸುತ್ತಿದ್ದ. ನಿತೀಶ್ ತಾಯಿ ನೀಲಂ ಕಟಾರಾ, ಮಗನ ಕೊಲೆಗಾರರಿಗೆ ಶಿಕ್ಷೆಯಾಗುವತನಕ ಹೋರಾಡುವುದಾಗಿ ಪಣ ತೊಟ್ಟಿದ್ದರು.

2008: ಮಾಟ ಮಂತ್ರ ಮಾಡುತ್ತಿದ್ದ ಆರೋಪದ ಮೇರೆಗೆ 31 ವರ್ಷದ ಬುಡಕಟ್ಟು ಮಹಿಳೆಯೊಬ್ಬರನ್ನು ಸಜೀವ ದಹನ ಮಾಡಿದ ದಾರುಣ ಘಟನೆ ದಕ್ಷಿಣ ಒರಿಸ್ಸಾದ ಕೋರಾಪಟ್ ಜಿಲ್ಲೆಯ ಬಾಡಮಾಥೂರ್ ಗ್ರಾಮದಲ್ಲಿ ನಡೆಯಿತು. ಮಾರಮಣಿ ಜುಗೂರ್ ಎಂಬಾಕೆ ಸಜೀವ ದಹನಗೊಂಡ ನತದೃಷ್ಟೆ. ಈ ಕೃತ್ಯ ಎಸಗಿದ ಮೂವರ ಪೈಕಿ ಒಬ್ಬನ ಪತ್ನಿ ಮಹಿಳೆಯ ಮಾಟ ಮಂತ್ರದಿಂದಲೇ ಮೃತಪಟ್ಟಿದ್ದಾಳೆ ಎಂದು ನಂಬಿ ಈ ಹೇಯ ಕೃತ್ಯ ಎಸಗಲಾಯಿತು.

2008: ಕೊಲೆ ಪ್ರಕರಣವೊಂದರಲ್ಲಿ ಬಿಹಾರದ ಮಾಜಿ ಪಶು ಸಂಗೋಪನಾ ಸಚಿವ ಆದಿತ್ಯ ಸಿಂಗ್ ಮತ್ತು ಅವರ ಪುತ್ರ ಸುಮನ್ ಸಿಂಗ್ ತಪ್ಪಿತಸ್ಥರು ಎಂದು ಬಿಹಾರದ ನವಾಡಾ ಸ್ಥಳೀಯ ನ್ಯಾಯಾಲಯ ತೀರ್ಪು ನೀಡಿತು.

2008: ರಾಜಸ್ಥಾನದ ಸವಾಯ್ ಮಾಧೋಪುರ ಜಿಲ್ಲೆಯಲ್ಲಿ ಗುಜ್ಜರ್ ಪ್ರತಿಭಟನೆಯ ವೇಳೆ ಹಿಂಸಾಚಾರಕ್ಕೆ ಇಳಿದ ಜನರ ಮೇಲೆ ಪೊಲೀಸರು ಗುಂಡು ಹಾರಿಸಿದ್ದರಿಂದ ಇಬ್ಬರು ಮೃತರಾಗಿ ಇತರ ಇಬ್ಬರು ಗಂಭೀರವಾಗಿ ಗಾಯಗೊಂಡರು.

2008: ಗ್ರಾಮೀಣ ಪ್ರವಾಸೋದ್ಯಮವನ್ನು ಬೆಳೆಸಲು ರೂಪಿಸಲಾಗಿರುವ `ವಿಸ್ಮಯ ಭಾರತ' ಆಂದೋಲನ ಯೋಜನೆಯ ಪಟ್ಟಿಗೆ ಹಂಪಿ ಸಮೀಪದ ಆನೆಗೊಂದಿಯನ್ನು ಸೇರಿಸಲು ಕೇಂದ್ರ ಸರ್ಕಾರ ನಿರ್ಧರಿಸಿತು. ವಿಜಯನಗರ ಸಾಮ್ರಾಜ್ಯದ ಮೊದಲ ರಾಜಧಾನಿಯಾದ ಆನೆಗೊಂದಿಗೆ ದೇಶೀಯ ಹಾಗೂ ವಿದೇಶಿ ಪ್ರವಾಸಿಗರನ್ನು ಸೆಳೆಯುವ ಉದ್ದೇಶದಿಂದ ಕೇಂದ್ರ ಪ್ರವಾಸೋದ್ಯಮ ಇಲಾಖೆಯು ಈ ನಿರ್ಧಾರಕ್ಕೆ ಬಂದಿತು. ಪ್ರವಾಸೋದ್ಯಮ ಕಾರ್ಯದರ್ಶಿ ಎಸ್.ಬ್ಯಾನರ್ಜಿ ಅವರು, `ಈ ಯೋಜನೆಯಡಿ ದೇಶದಲ್ಲಿ ಆಯ್ಕೆ ಮಾಡಲಾದ 36 ಸ್ಥಳಗಳಲ್ಲಿ ಆನೆಗೊಂದಿ ಕೂಡ ಒಂದು' ಎಂದು ತಿಳಿಸಿದರು.

2008: ನಾಸಾದ ಮೂರು ಮಹಾನ್ ವೀಕ್ಷಣಾ ಪರಿಕರಗಳು ಸಂಗ್ರಹಿಸಿದ `ಕ್ಯಾಸಿಯೊಪಿಯಾ ಎ' ಹೆಸರಿನ ಬೃಹತ್ ನಕ್ಷತ್ರದ ಅವಶೇಷದ ಕಣ್ಮನ ಸೆಳೆಯುವ `ತಾತ್ಕಾಲಿಕ' ಬಣ್ಣದ ಚಿತ್ರವನ್ನು ಬಿಡುಗಡೆ ಮಾಡಲಾಯಿತು. ಈ ಚಿತ್ರವು ನಕ್ಷತ್ರಗಳ ಆಯುಷ್ಯ ಸಹಿತ ಖಗೋಳದ ಹಲವು ವಿಸ್ಮಯಗಳನ್ನೂ ಬಿಚ್ಚಿಟ್ಟಿತು. ಸ್ಪಿಟ್ಜರ್ ಸ್ಪೇಸ್ ಟೆಲಿಸ್ಕೋಪಿನಿಂದ ತೆಗೆದ ಚಿತ್ರ ಕೆಂಪು ಬಣ್ಣವನ್ನು, ಹಬ್ಬಲ್ ಸ್ಪೇಸ್ ಟೆಲಿಸ್ಕೋಪ್ ಹಳದಿ ಬಣ್ಣವನ್ನು ಮತ್ತು ಚಂದ್ರ ಎಕ್ಸರೇ ಅಬ್ಸರ್ವೇಟರಿ ಹಸಿರು ಮತ್ತು ನೀಲಿ ಬಣ್ಣವನ್ನು ದಾಖಲಿಸಿವೆ. ಹಲವು ವರ್ಷಗಳ ಹಿಂದೆ ನಕ್ಷತ್ರಗಳು ಸ್ಫೋಟಗೊಂಡು ನಾಶಗೊಂಡದ್ದರ ನಿಗೂಢ ಅಂಶಗಳನ್ನು ಪತ್ತೆಹಚ್ಚುವುದಕ್ಕೆ ಖಗೋಳ ತಜ್ಞರಿಗೆ ಇಂತಹ ಚಿತ್ರಗಳು ನೆರವಿಗೆ ಬರುತ್ತವೆ. ನಮ್ಮ ಕ್ಷೀರಪಥದಲ್ಲಿನ ಬೃಹತ್ ನಕ್ಷತ್ರಗಳ ಆಯಸ್ಸು ಅಳೆಯುವ ಕಾರ್ಯಕ್ಕೆ ಇದರಿಂದ ಹೊಸ ಆಯಾಮ ದೊರಕಿತು. ಈ ನಕ್ಷತ್ರ ಭೂಮಿಯಿಂದ 11,000 ಜ್ಯೋತಿರ್ ವರ್ಷ ದೂರದಲ್ಲಿ ಇರುವುದರಿಂದ ಈ ಚಿತ್ರದಲ್ಲಿನ ನಕ್ಷತ್ರ 11,300 ಜ್ಯೋತಿರ್ ವರ್ಷಗಳ ಹಿಂದೆ ನಾಶವಾದುದು ಸ್ಪಷ್ಟವಾಯಿತು. ನಕ್ಷತ್ರದಲ್ಲಿ ಸ್ಫೋಟ ಸಂಭವಿಸಿ ಉಂಟಾದ ಈ ಅದ್ಭುತ ಬಣ್ಣದ ಬೆಳಕು ಭೂಮಿಗೆ ತಲುಪಲು 300 ವರ್ಷ ಹಿಡಿದಿತ್ತು.

2008: ನೇಪಾಳವನ್ನು ಗಣರಾಜ್ಯ ಎಂದು ಘೋಷಿಸಿದ ಬೆನ್ನಲ್ಲಿಯೇ ಪದಚ್ಯುತ ದೊರೆ ಜ್ಞಾನೇಂದ್ರ ಅವರು ತಮಗೆ ನೀಡಿದ ಗಡುವಿಗೆ ಮುನ್ನವೇ ಈದಿನ ಮಧ್ಯರಾತ್ರಿ ನಾರಾಯಣಹಿತಿ ಅರಮನೆಯನ್ನು ತೊರೆದರು. ಮಧ್ಯರಾತ್ರಿ ಅರಮನೆ ತೊರೆದ ದೊರೆ ತಮ್ಮ ಕುಟುಂಬ ವರ್ಗದೊಂದಿಗೆ ಖಾಸಗಿ ನಿವಾಸವಾದ ಮಹಾರಾಜಾಗಂಜ್ನ ನಿರ್ಮಲ್ ನಿವಾಸಕ್ಕೆ ತೆರಳಿದರು ಎಂದು ಟಿವಿ ಚಾನೆಲ್ ಒಂದು ಪ್ರಸಾರ ಮಾಡಿತು. ನಿರ್ಮಲ್ ನಿವಾಸ್ ನಾರಾಯಣಹಿತಿ ಅರಮನೆಯಿಂದ ಮೂರು ಮೈಲಿ ದೂರದಲ್ಲಿದೆ. ಆದರೆ ದೊರೆಯ ಆಪ್ತ ಕಾರ್ಯದರ್ಶಿ ಪಶುಪತಿ ಭಕ್ತಾ ಮಹಾರಾಜನ್ ಇದನ್ನು ಅಲ್ಲಗಳೆದು, ಅರಮನೆ ತೊರೆಯಲು 15 ದಿನಗಳು ಕಾಲಾವಕಾಶ ಪಡೆದಿರುವ ಜ್ಞಾನೇಂದ್ರ ಇನ್ನೂ ಅಲ್ಲಿಯೇ ವಾಸವಾಗಿದ್ದಾರೆ ಎಂದು ಸ್ಪಷ್ಟ ಪಡಿಸಿದರು.

2008: ಭಾರತೀಯ ಮೂಲದ ಬಿಬಿಸಿ ವರದಿಗಾರ್ತಿ ಆಂಜೆಲ್ ಸೈನಿ (27) ಅವರಿಗೆ ಯೂರೋಪಿನ ಪ್ರತಿಷ್ಠಿತ `ಪ್ರಿಕ್ಸ್ ಸಿರ್ಕೊಮ್' ಪತ್ರಿಕೋದ್ಯಮ ಪ್ರಶಸ್ತಿ ಲಭಿಸಿತು. ಬ್ರಿಟನ್ನಿನಲ್ಲಿನ ನಕಲಿ ವಿಶ್ವವಿದ್ಯಾಲಯಗಳ ಕಾರ್ಯವೈಖರಿ ಬಯಲುಗೊಳಿಸುವ ಸಾಕ್ಷ್ಯಚಿತ್ರ ನಿರ್ಮಿಸಿದ್ದಕ್ಕಾಗಿ ಅವರಿಗೆ ಈ ಪ್ರಶಸ್ತಿ ಲಭಿಸಿತು. ಭಾರತೀಯರ ಸಹಿತ ಸಾವಿರಾರು ವಿದೇಶಿ ವಿದ್ಯಾರ್ಥಿಗಳನ್ನು ಸೆಳೆಯುತ್ತಿದ್ದ `ಐರಿಷ್ ಇಂಟರ್ ನ್ಯಾಷನಲ್ ಯೂನಿವರ್ಸಿಟಿ' ಬಗ್ಗೆ ಅವರು ಈ ತನಿಖಾ ವರದಿ ಸಿದ್ಧಪಡಿಸಿದ್ದರು.

2007: ಭಾಷಾ ಮಾಧ್ಯಮದ ಉಲ್ಲಂಘನೆಯ ಆರೋಪದಿಂದ ಮಾನ್ಯತೆ ಕಳೆದುಕೊಂಡ 2215 ಖಾಸಗಿ ಶಾಲೆಗಳು ಇನ್ನು ಮುಂದೆ ತಾವು ಅನುಮತಿ ಪಡೆದಿರುವ ಮಾಧ್ಯಮದಲ್ಲಿಯೇ ಬೋಧಿಸುವಂತೆ ವಾರದ ಹಿಂದೆ ನೀಡಿದ ಆದೇಶದಲ್ಲಿ ಮಾರ್ಪಾಡು ಮಾಡಲು ಕರ್ನಾಟಕ ಹೈಕೋರ್ಟ್ ನಿರಾಕರಿಸಿತು.

2007: ಅಡುಗೆ ಅರಿಶಿಣದಿಂದ ಕ್ಯಾನ್ಸರ್ ಗುಣಪಡಿಸಬಹುದು ಎಂಬುದನ್ನು ತಾನು ಪತ್ತೆ ಹಚ್ಚಿರುವುದಾಗಿ ಆದಿ ಚುಂಚನಗಿರಿ ಮಹಾಸಂಸ್ಥಾನದ ಕ್ಯಾನ್ಸರ್ ಸಂಶೋಧನಾ ಸಂಸ್ಥೆ ಪ್ರಕಟಿಸಿತು. ಕ್ಯಾನ್ಸ ರಿಗಷ್ಟೇ ಅಲ್ಲ ಹಾವು ಕಡಿತಕ್ಕೂ ಅಡುಗೆ ಅರಿಶಿಣ ಮದ್ದು ಎಂಬುದು ಸಂಶೋಧನೆಯಿಂದ ದೃಢಪಟ್ಟಿದೆ ಎಂದು ಸಂಶೋಧಕಿ ಡಾ. ಲೀಲಾ ಶ್ರೀನಿವಾಸನ್ ಅವರು ಬೆಂಗಳೂರಿನಲ್ಲಿ ಆದಿ ಚುಂಚನಗಿರಿ ಮಠದಲ್ಲಿ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ಸಮ್ಮುಖದಲ್ಲಿ ಪ್ರಕಟಿಸಿದರು.

2007: ಮಹಿಳೆಯರು ಹಾನಿಕಾರಕ ಪ್ಲಾಸ್ಟಿಕ್ ಸ್ಟಿಕರ್ಸ್ ಗಳಿಗೆ (ಟಿಕಲಿ) ಬದಲಾಗಿ ಬಳಸಹುದಾದ ನಂಜುಮುಕ್ತ, ಪರಿಸರ ಸ್ನೇಹಿ ನೈಸರ್ಗಿಕ ಸಿಂಧೂರವನ್ನು ಅವಿಷ್ಕರಿಸಿರುವುದಾಗಿ ಲಖನೌ ಮೂಲದ ರಾಷ್ಟ್ರೀಯ ಸಸ್ಯ ಸಂಶೋಧನಾ ಸಂಸ್ಥೆ (ಎನ್ಬಿಆರ್ಐ) ಪ್ರಕಟಿಸಿತು.

2007: ಗುರ್ಜರ ಜನಾಂಗವನ್ನು ಪರಿಶಿಷ್ಟರ ಪಟ್ಟಿಗೆ ಸೇರಿಸಬೇಕು ಎಂದು ಸರ್ಕಾರವನ್ನು ಆಗ್ರಹಿಸಿ ಪ್ರತಿಭಟನೆ ಮಾಡಿದವರ ಮೇಲೆ ಪೊಲೀಸರು ಗೋಲಿಬಾರ್ ಮಾಡ್ದಿದನ್ನು ಖಂಡಿಸಿ ಗುರ್ಜರ ಮೀಸಲಾತಿ ಕ್ರಿಯಾ ಸಮಿತಿ ಕರೆಯ ಮೇರೆಗೆ ರಾಜಸ್ಥಾನದ ವಿವಿಧ ಪ್ರದೇಶಗಳಲ್ಲಿ ಸಂಪೂರ್ಣ ಬಂದ್ ಆಚರಿಸಲಾಯಿತು. ದೌಸಾ ಜಿಲ್ಲೆಯ ದುಬಿ ಮತ್ತು ಸಿಕಂದ್ರಾದಲ್ಲಿ ಎರಡು ಪೊಲೀಸ್ ಠಾಣೆಗಳಿಗೆ ಉದ್ರಿಕ್ತರು ಕಿಚ್ಚಿಟ್ಟರು.

2007: ಚಲನಚಿತ್ರೋದ್ಯಮ ರಂಗದಲ್ಲಿ `ಸ್ನೇಹಲ್ ಭಾಟ್ಕರ್' ಎಂದೇ ಖ್ಯಾತರಾಗಿದ್ದ ಗಾಯಕ ವಾಸುದೇವ ಗೋವಿಂದ ಭಾಟ್ಕರ್ (88) ಹೃದಯಾಘಾತದಿಂದ ನಿಧನರಾದರು. ಭಾಟ್ಕರ್ ಅವರು ಹಿಂದಿ ಮತ್ತು ಮರಾಠಿ ಚಿತ್ರಗಳಿಗೆ ಹಲವಾರು ಜನಪ್ರಿಯ ಹಾಡುಗಳನ್ನು ರಚಿಸಿದ್ದರು.

2006: ರಾಷ್ಟ್ರೀಯ ಸಲಹಾ ಮಂಡಳಿ ಅಧ್ಯಕ್ಷ ಹುದ್ದೆ ಸೇರಿದಂತೆ 56 ಹುದ್ದೆಗಳನ್ನು `ಲಾಭದಾಯಕ' ವ್ಯಾಪ್ತಿಯಿಂದ ಹೊರಗಿಡುವ ಮಸೂದೆಯನ್ನು ರಾಷ್ಟ್ರಪತಿ ಅಬ್ದುಲ್ ಕಲಾಂ ವಾಪಸ್ ಕಳುಹಿಸಿದರು. ಸಂಸದರು ಮತ್ತು ಶಾಸಕರನ್ನು `ಲಾಭದ ಹುದ್ದೆ' ವಿವಾದದಿಂದ ಪಾರುಮಾಡಲು ಯತ್ನಿಸಿದ್ದ ಕೇಂದ್ರ ಸರ್ಕಾರಕ್ಕೆ ರಾಷ್ಟ್ರಪತಿ ಕ್ರಮದಿಂದ ಹಿನ್ನಡೆಯಾಯಿತು.

2006: ಭಾರತದ ಗೌರಿ ಶಂಕರ್ ಅವರು ಚಿಕಾಗೊ ಅಂತಾರಾಷ್ಟ್ರೀಯ ಓಪನ್ ಚೆಸ್ ಚಾಂಪಿಯನ್ ಶಿಪ್ ನಲ್ಲಿ ಮೊದಲ ಸ್ಥಾನ ಪಡೆದುಕೊಂಡರು.

2006: ಕ್ಯಾನ್ನೆಸ್ಸಿನಲ್ಲಿ ಎರಡು ಬಾರಿ ಪ್ರತಿಷ್ಠಿತ ಪಾಲ್ಮೆ ಡಿ'ಓರ್ ಪ್ರಶಸ್ತಿಯನ್ನು ಗೆದ್ದ ಜಪಾನಿನ ಪ್ರಥಮ ಚಿತ್ರ ನಿರ್ದೇಶಕ ಶೋಹೆಲ್ ಇಮಾಮುರಾ ಈ ದಿನ 79ನೇ ವಯಸ್ಸಿನಲ್ಲಿ ನಿಧನರಾದರು. 1983ರಲ್ಲಿ ಪಾಲ್ಮೆ ಡಿ'ಓರ್ ಪ್ರಶಸ್ತಿಯನ್ನು `ದಿ ಬ್ಯಾಲ್ಲಡ್ ಆಫ್ ನರಯಾಮ'ಕ್ಕೆ ಪಡೆದಿದ್ದ ಇಮಾಮುರಾ, 1997ರಲ್ಲಿ `ದಿ ಎಲ್' ಗೆ ಈ ಪ್ರಶಸ್ತಿಯನ್ನು ಎರಡನೇ ಬಾರಿಗೆ ಪಡೆದರು.

1991: ಉಮಾಶಂಕರ ದೀಕ್ಷಿತ್ ನಿಧನರಾದರು.

1987: ಗೋವಾ ಭಾರತದ 25ನೇ ರಾಜ್ಯವಾಯಿತು. ಇಲ್ಲಿಯವರೆಗೆ ಅದು ಕೇಂದ್ರಾಡಳಿತ ಪ್ರದೇಶವಾಗಿತ್ತು.

1959: ಸರ್ ಕ್ರಿಸ್ಟೋಫರ್ ಕೋಕರೆಲ್ ಅವರು ವಿನ್ಯಾಸಗೊಳಿಸಿದ ಮೊತ್ತ ಮೊದಲ ಪ್ರಾಯೋಗಿಕ ಹೋವರ್ ಕ್ರಾಫ್ಟಿಗೆ ಐಲ್ ಆಫ್ ವೈಟ್ ನಲ್ಲಿ ಚಾಲನೆ ಸಿಕ್ಕಿತು. ಪ್ರಾರಂಭದಲ್ಲಿ ಇದನ್ನು ಸೇನಾ ಸೇವೆಗಾಗಿ ಮಾತ್ರ ಎಂಬುದಾಗಿ ರೂಪಿಸಲಾಗಿತ್ತಾದರೂ ನಂತರ ನಾಗರಿಕ ಬಳಕೆಗೆ ಇದನ್ನು ಬಿಡುಗಡೆ ಮಾಡಲಾಯಿತು.

1950: ಕಲಾವಿದೆ ಶೋಭಾ ಹುಣಸಗಿ ಜನನ.

1948: ಸುಗಮ ಸಂಗೀತರ ಗಾನ ಕೋಗಿಲೆ ಎಂದೇ ಖ್ಯಾತರಾಗಿದ್ದ ಪಂಕಜ ಸಿಂಹ (30-5-1948ರಿಂದ 20-12-2000) ಅವರು ಅಡ್ವೋಕೇಟ್ ಗೋವಿಂದರಾವ್- ಖ್ಯಾತ ಪಿಟೀಲು ವಾದಕಿ ಶಾರದಮ್ಮ ದಂಪತಿಯ ಮಗಳಾಗಿ ಹಾಸನದಲ್ಲಿ ಜನಿಸಿದರು.

1919: ಅಮೃತಸರದಲ್ಲಿ ನಡೆದ ಜಲಿಯನ್ ವಾಲಾ ಬಾಗ್ ಹತ್ಯಾಕಾಂಡವನ್ನು ಪ್ರತಿಭಟಿಸಿ ರಬೀಂದ್ರನಾಥ ಟ್ಯಾಗೋರ್ ಅವರು ತಮಗೆ ನೀಡಲಾಗಿದ್ದ `ನೈಟ್ ಹುಡ್' ಪದವಿಯನ್ನು ನಿರಾಕರಿಸಿ ಲಾರ್ಡ್ ಚೆಮ್ಸ್ ಫೋರ್ಡ್ ಅವರಿಗೆ ಪತ್ರ ಬರೆದರು.

1907: ನರೇಗಲ್ಲ ಮಾಸ್ತರ ಎಂದೇ ಖ್ಯಾತರಾಗಿದ್ದ ನರೇಗಲ್ಲ ಪ್ರಹ್ಲಾದರಾಯರು (30-5-1907ರಿಂದ 1977) ನವಲಗುಂದ ತಾಲ್ಲೂಕಿನ ಜಾವೂರಿನಲ್ಲಿ ಅನಂತರಾವ್ ನರೇಗಲ್ಲ- ಅಂಬಾಬಾಯಿ ಪುತ್ರನಾಗಿ ಜನಿಸಿದರು.

1895: ಖ್ಯಾತ ಇತಿಹಾಸಕಾರ ಪಾಂಡುರಂಗ ಶಂಕರಂ ಜನನ.

1606: ಸಿಖ್ ಧರ್ಮದ ಐದನೆಯ ಗುರುಗಳಾಗಿದ್ದ ಗುರು ಅರ್ಜುನ್ ದೇವ್ ಅವರನ್ನು ಬಂಡುಕೋರ ರಾಜಕುಮಾರ ಖುಸ್ರು ಬಗ್ಗೆ ಅನುಕಂಪ ವ್ಯಕ್ತಪಡಿಸಿದ ಕಾರಣಕ್ಕಾಗಿ ಮೊಘಲ್ ದೊರೆ ಜಹಾಂಗೀರ್ ಚಿತ್ರಹಿಂಸೆಗೆ ಗುರಿಪಡಿಸಿ ಕೊಲ್ಲಿಸಿದ. ಸಿಖ್ ಧರ್ಮದ ಮೊದಲನೆಯ ಹುತಾತ್ಮರಾದ ಅರ್ಜುನ್ ದೇವ್ `ಗುರು ಗ್ರಂಥ ಸಾಹಿಬ್'ನ್ನು ಸಂಕಲನಗೊಳಿಸಿದವರು.

(ಸಂಗ್ರಹ: ನೆತ್ರಕೆರೆ ಉದಯಶಂಕರ)

Saturday, May 30, 2009

ಇಂದಿನ ಇತಿಹಾಸ History Today ಮೇ 29

ಇಂದಿನ ಇತಿಹಾಸ

ಮೇ 29

ಜಾನ್ ಎಫ್. ಕೆನಡಿ ಜನ್ಮದಿನ(1917-63). ಇವರು 1961-63ರ ಅವಧಿಯಲ್ಲಿ ಅಮೆರಿಕದ 35ನೇ ಅಧ್ಯಕ್ಷರಾಗಿದ್ದರು. ಡಲ್ಲಾಸ್ನಲ್ಲಿ ಮೋಟಾರಿನಲ್ಲಿ ಹೋಗುತ್ತಿದ್ದಾಗ ಇವರನ್ನು ಗುಂಡಿಟ್ಟು ಕೊಲೆಗೈಯಲಾಯಿತು.

2008: ಹಾಸನ ಜಿಲ್ಲೆ ಅರಕಲಗೂಡಿನ ಅಗ್ರಹಾರ ಕೆರೆ ಏರಿಯಿಂದ ಕೆರೆಗೆ ಲಾರಿ ಮಗುಚಿಬಿದ್ದ ಕಾರಣ ಮಹಿಳೆಯರು, ಮಕ್ಕಳು ಸೇರಿದಂತೆ 25 ಜನ ಮೃತರಾಗಿ ಇತರ 46ಕ್ಕೂ ಹೆಚ್ಚು ಜನ ಗಾಯಗೊಂಡರು. ಮದುವೆ ಸಮಾರಂಭದ ಬೀಗರ ಊಟಕ್ಕೆ ಪಯಣಿಸುತ್ತಿದ್ದ ಲಾರಿ ಚಾಲಕನ ನಿರ್ಲಕ್ಷ್ಯದಿಂದಾಗಿ ಕಂದಕಕ್ಕೆ ಮಗುಚಿತು.

2008: ರಾಜ್ಯಪಾಲರ ಶಿಫಾರಸಿನ ಆಧಾರದಲ್ಲಿ ಹಿಂದಿನ ದಿನ ಕೇಂದ್ರ ಸಚಿವ ಸಂಪುಟ ರಾಜ್ಯದ ರಾಷ್ಟ್ರಪತಿ ಆಳ್ವಿಕೆಯನ್ನು ಹಿಂದಕ್ಕೆ ಪಡೆಯುವ ನಿಧರ್ಾರ ಕೈಗೊಂಡಿತ್ತು. ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಸಂಪುಟ ನಿರ್ಧಾರಕ್ಕೆ ಈದಿನ ಅಂಕಿತ ಹಾಕಿದರು.

2008: ಕಠ್ಮಂಡುವಿನಲ್ಲಿ ನಡೆದ ರಾಜಕೀಯ ವಿದ್ಯಮಾನಗಳಲ್ಲಿ ಅರಮನೆಯ ಮೇಲೆ ಹಾರಾಡುತ್ತಿದ್ದ ರಾಜಮನೆತನದ ಬಾವುಟವನ್ನು ಕೆಳಗಿಳಿಸಿ, ರಾಷ್ಟ್ರೀಯ ಬಾವುಟವನ್ನು ಏರಿಸಲಾಯಿತು. ಇದರೊಂದಿಗೆ ನೇಪಾಳದಲ್ಲಿ ಎರಡೂವರೆ ಶತಮಾನಗಳ ಅರಸೊತ್ತಿಗೆ ಆಳ್ವಿಕೆ ಅಧಿಕೃತವಾಗಿ ಕೊನೆಗೊಂಡಂತಾಯಿತು. ಮಾಜಿ ದೊರೆ ಜ್ಞಾನೇಂದ್ರ ಅವರಿಗೆ ಅರಮನೆ ಬಿಡುವಂತೆ ರಾಜಕೀಯ ಪಕ್ಷಗಳು 15 ದಿನ ಗಡುವು ನೀಡಿದವು. ಅಷ್ಟರೊಳಗೆ ಅರಮನೆ ಬಿಡದಿದ್ದಲ್ಲಿ ಬಲವಂತವಾಗಿ ಹೊರಗೆ ಕಳುಹಿಸಬೇಕಾಗುತ್ತದೆ ಎಂದು ಗೃಹ ಸಚಿವ ಕೃಷ್ಣಪ್ರಸಾದ್ ಸಿತೌಲ ಎಚ್ಚರಿಕೆ ನೀಡಿದರು. ನೇಪಾಳದ ಅರಸೊತ್ತಿಗೆ ರದ್ದುಪಡಿಸಿ ಹೊಸ ಸರ್ಕಾರವನ್ನು ಸ್ಥಾಪಿಸಲು 560 ಮಂದಿ ಪರವಾಗಿ ಹಾಗೂ ನಾಲ್ಕು ಮಂದಿ ವಿರೋಧವಾಗಿ ಮತ ಚಲಾಯಿಸಿದ್ದರು.

2008: ಬೆಂಗಳೂರಿನ ನಾಗರಬಾವಿ ರಸ್ತೆಯ ವಿಸ್ತರಣಾ ಕಾರ್ಯದಿಂದ ಧರೆಗುರುಳಬೇಕಿದ್ದ ಸುಮಾರು 40 ಮರಗಳಿಗೆ ಮರು ಜೀವ ಬಂದಿತು. ವಸಂತಕಾಲದಲ್ಲಿ ಹೂವುಗಳು ಚಿಗುರಿ ಆಕರ್ಷಕವಾಗಿ ಕಂಗೊಳಿಸುತ್ತಿರುವ ಸುಮಾರು 40 `ತಬಿಬುಯಾ ರೋಸಿಯಾ' ಮರಗಳ ಬುಡಕ್ಕೆ ಕೊಡಲಿ ಪೆಟ್ಟು ಬಿದ್ದರೂ ಜೀವ ಕಳೆದುಕೊಳ್ಳಲಿಲ್ಲ. ಹೀಗಾಗಿ ಈ ಮರಗಳನ್ನು ಬುಡಸಮೇತ ಕಿತ್ತು ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿ ಆವರಣದಲ್ಲಿನ ಕಾನೂನು ಕಾಲೇಜಿನ ಸುತ್ತಮುತ್ತ ನೆಡುವ ಮೂಲಕ ಮರು ಜೀವ ನೀಡಲಾಯಿತು.

2008: ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಅವರು ನವದೆಹಲಿಯ ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ಬೆಂಗಳೂರಿನ ಟಿ. ಎಲ್. ದೇವರಾಜ್ ಅವರಿಗೆ 2007ರ `ರಾಂ ನಾರಾಯಣ ವೈದ್ಯ ಪ್ರಶಸ್ತಿ' ಪ್ರದಾನ ಮಾಡಿದರು. ಆಯುರ್ವೇದ ಶಿಕ್ಷಣ ಮತ್ತು ಚಿಕಿತ್ಸೆಗೆ ನೀಡಿದ ಗಮನಾರ್ಹ ಕೊಡುಗೆಗಾಗಿ ದೇವರಾಜ್ 2007ರ `ರಾಂ ನಾರಾಯಣ ವೈದ್ಯ ಪ್ರಶಸ್ತಿ' ಪಡೆದುಕೊಂಡರು. ಆಯುರ್ವೇದ ರಂಗದಲ್ಲಿನ ಸಾಧನೆಗಾಗಿ ನೀಡಲಾಗುವ ದೇಶದ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ ಇದು. ಪ್ರಶಸ್ತಿಯು ರೂ 1.5 ಲಕ್ಷ ನಗದು ಒಳಗೊಂಡಿದೆ.

2007: ಹೊಟ್ಟೆಯ ಭಾಗದಲ್ಲಿ ಅಂಟಿಕೊಂಡಿದ್ದ 10 ತಿಂಗಳ ಗಂಡು ಸಯಾಮಿ ಅವಳಿ ಮಕ್ಕಳನ್ನು ಬೇರ್ಪಡಿಸುವ ಶಸ್ತ್ರಕ್ರಿಯೆಯನ್ನು ರಾಯಪುರ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ವೈದ್ಯರು ಯಶಸ್ವಿಯಾಗಿ ನೆರವೇರಿಸಿದರು. ದೇಶದಲ್ಲಿ ನಡೆದ ಸಯಾಮಿ ಅವಳಿ ಮಕ್ಕಳನ್ನು ಬೇರ್ಪಡಿಸುವ ನಾಲ್ಕನೇ ಶಸ್ತ್ರ ಚಿಕಿತ್ಸೆ ಇದು. ಅವಳಿ ಮಕ್ಕಳಾದ ರಾಮ ಮತ್ತು ಲಕ್ಷ್ಮಣನನ್ನು ಐದು ಗಂಟೆಗಳ ಶಸ್ತ್ರಚಿಕಿತ್ಸೆಯ ಬಳಿಕ ಯಶಸ್ವಿಯಾಗಿ ಬೇರ್ಪಡಿಸಲಾಯಿತು.

2007: ಪರಿಶಿಷ್ಟ ವರ್ಗದ ಸ್ಥಾನಮಾನ ನೀಡಬೇಕು ಎಂದು ಆಗ್ರಹಿಸಿ ಗುರ್ಜರ ಸಮುದಾಯದವರು ರಾಜಸ್ಥಾನದ ದೌಸಾ ಹಾಗೂ ಬಂಡಿ ಜಿಲ್ಲೆಯಲ್ಲಿ ನಡೆಸಿದ ಪ್ರತಿಭಟನೆ ಹಿಂಸಾರೂಪಕ್ಕೆ ತಿರುಗಿ, ಪೊಲೀಸರು ಗೋಲಿಬಾರ್ ಮಾಡಿದ ಪರಿಣಾಮವಾಗಿ 14 ಜನ ಗುಂಡಿಗೆ ಬಲಿಯಾದರು.

2007: ಸೌರ ಮಂಡಲ ಮತ್ತು ಭೂಮಿಯ ಅಸ್ತಿತ್ವವು ಊಹೆಗೂ ನಿಲುಕದ ಬ್ರಹ್ಮಾಂಡದಲ್ಲಿ ಅಪರೂಪದ ಸಂಗತಿಯೇನೂ ಅಲ್ಲ, ಅನಂತ ಆಕಾಶದಲ್ಲಿ ವಾಸಕ್ಕೆ ಯೋಗ್ಯವಾದ ಇಂತಹ ಕೋಟ್ಯಂತರ ಗ್ರಹಗಳು ಇರುವ ಸಾಧ್ಯತೆಗಳು ಹೆಚ್ಚು ಇವೆಎಂದು ವಿಜ್ಞಾನಿಗಳು ಅಭಿಪ್ರಾಯಪಟ್ಟರು. ಹೊನೊಲುಲುವಿನಲ್ಲಿ ನಡೆದ ಅಮೆರಿಕದ ಖಗೋಳ ವಿಜ್ಞಾನಿಗಳ ಸಮಾವೇಶದಲ್ಲಿ ಸಂಶೋಧಕರು ಈ ಅಭಿಪ್ರಾಯ ವ್ಯಕ್ತಪಡಿಸಿದರು. ಖಗೋಳ ವಿಜ್ಞಾನಿಗಳು ಕಳೆದ ವರ್ಷ ಒಟ್ಟು 28 ಹೊಸ ಗ್ರಹಗಳನ್ನು ಪತ್ತೆ ಹಚ್ಚಿದ್ದಾರೆ. ನಮ್ಮ ಸೌರವ್ಯೂಹದ ಆಚೆಗೆ ಈವರೆಗೆ 236 ಗ್ರಹಗಳನ್ನು ಗುರುತಿಸಲಾಗಿದೆ ಎಂಬುದು ಅವರ ಅಭಿಪ್ರಾಯ.

2007: ಮೆಕ್ಸಿಕೊದಲ್ಲಿ ನಡೆದ ಸೌಂದರ್ಯ ಸ್ಪರ್ಧೆಯಲ್ಲಿ ಜಪಾನಿನ ನೃತ್ಯ ಕಲಾವಿದೆ ರಿಯೋ ಮೋರಿ 2007ನೇ ಸಾಲಿನ ಭುವನಸುಂದರಿಯಾಗಿ ಆಯ್ಕೆಯಾದರು. `ಭಾರತ ಸುಂದರಿ' ಪೂಜಾ ಗುಪ್ತ ಕೊನೆಯ ಐವರು ಸ್ಪರ್ಧಿಗಳಲ್ಲಿ ಸೇರ್ಪಡೆ ಆಗುವ ಅವಕಾಶದಿಂದಲೂ ವಂಚಿತರಾದರು.

2007: ಮುಂಬೈಯಲ್ಲಿ 1993ರಲ್ಲಿ ಸಂಭವಿಸಿದ ಸರಣಿ ಬಾಂಬ್ ಸ್ಫೋಟಕ್ಕಿಂತ ಸ್ವಲ್ಪ ಮುಂಚೆ ತಲೆ ತಪ್ಪಿಸಿಕೊಂಡ ಪ್ರಮುಖ ಆರೋಪಿ ಟೈಗರ್ ಮೆಮನ್ ಗೆ ಶಸ್ತ್ರಾಸ್ತ್ರಗಳು, ಸ್ಫೋಟಕಗಳು ಮತ್ತು ಆರ್ ಡಿ ಎಕ್ಸ್ ಸಾಗಣೆಯಲ್ಲಿ ನೆರವಾದ ಅಪರಾಧಕ್ಕಾಗಿ ಕಸ್ಟಮ್ಸ್ ಇಲಾಖೆಯ ನಾಲ್ಕು ಮಂದಿ ಮಾಜಿ ಅಧಿಕಾರಿಗಳಿಗೆ ನಿಯೋಜಿತ ಟಾಡಾ ನ್ಯಾಯಾಲಯವು 7ರಿಂದ 9 ವರ್ಷಗಳವರೆಗಿನ ಕಠಿಣ ಸೆರೆವಾಸದ ಶಿಕ್ಷೆ ವಿಧಿಸಿತು.

2007: ಬಡಗುತಿಟ್ಟು ಯಕ್ಷಗಾನದ ಖ್ಯಾತ ಮದ್ದಳೆ ವಾದಕ, ಮಾಂತ್ರಿಕ ದುರ್ಗಪ್ಪ ಗುಡಿಗಾರ (65) ಮಣಿಪಾಲ ಆಸ್ಪತ್ರೆಯಲ್ಲಿ ನಿಧನರಾದರು. ಭಟ್ಕಳದ ಚೌತನಿಯವರಾದ ದುರ್ಗಪ್ಪ ಗುಡಿಗಾರ ತಮ್ಮ ಕಲಾ ಸೇವೆಗಾಗಿ ಕರ್ನಾಟಕ ಜಾನಪದ ಮತ್ತು ಯಕ್ಷಗಾನ ಅಕಾಡೆಮಿ ಪ್ರಶಸ್ತಿ, ಕನ್ನಡ ಸಾಹಿತ್ಯ ಪರಿಷತ್ತಿನ ಕರ್ನಾಟಕ ಶ್ರೀ, ಮುದೂರು ದೇವರು ಹೆಗ್ಗಡೆ ಪ್ರತಿಷ್ಠಾನ, ಮಸ್ಕತ್ ರಂಗಭೂಮಿ ಪ್ರಶಸ್ತಿ, ಜನಪದ ಪ್ರಶಸ್ತಿ ಸೇರಿದಂತೆ ಹತ್ತಾರು ಪ್ರಶಸ್ತಿ, ಸನ್ಮಾನಕ್ಕೆ ಪಾತ್ರರಾಗಿದ್ದರು.

2006: ಕಾವೇರಿ ನ್ಯಾಯಮಂಡಳಿಯ ನ್ಯಾಯದರ್ಶಿಗಳ ವರದಿಯನ್ನು ತಿರಸ್ಕರಿಸಿ 408 ಟಿಎಂಸಿ ನೀರಿಗೆ ಬೇಡಿಕೆ ಸಲ್ಲಿಸಲು ಕರ್ನಾಟಕ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅಧ್ಯಕ್ಷತೆಯಲ್ಲಿ ನಡೆದ ಸರ್ವಪಕ್ಷಗಳ ಸಭೆಯಲ್ಲಿ ಒಮ್ಮತದ ನಿರ್ಧಾರ ಕೈಗೊಳ್ಳಲಾಯಿತು. ಕರ್ನಾಟಕಕ್ಕೆ 251 ಟಿಂಎಸಿ ನೀರು ನಿಗದಿ ಪಡಿಸಿ ನ್ಯಾಯದರ್ಶಿಗಳು ತಯಾರಿಸಿದ ವರದಿ ನ್ಯಾಯೋಚಿತವಲ್ಲ, ಅದನ್ನು ಒಪ್ಪಲಾಗದು ಎಂದು ಸಭೆ ಸ್ಪಷ್ಟ ಪಡಿಸಿತು.

2006: ಸೇನಾ ತರಬೇತಿಯನ್ನು ಸಾಂಸ್ಥೀಕರಣಗೊಳಿಸುವ ಪ್ರಪ್ರಥಮ ಚಾರಿತ್ರಿಕ ಒಪ್ಪಂದಕ್ಕೆ ಭಾರತ ಮತ್ತು ಚೀನಾ ಸೋಮವಾರ ಬೀಜಿಂಗಿನಲ್ಲಿ ಸಹಿ ಹಾಕಿದವು. ಈ ಒಪ್ಪಂದವು ಜಂಟಿ ಸೇನಾ ಕವಾಯತು ಹಾಗೂ ವಿಚಾರ ವಿನಿಮಯಗಳಿಗೆ ಅವಕಾಶ ಕಲ್ಪಿಸಲಿದೆ. ಚೀನಾಕ್ಕೆ ಭೇಟಿ ನೀಡಿದ ಭಾರತದ ರಕ್ಷಣಾ ಸಚಿವ ಪ್ರಣವ್ ಮುಖರ್ಜಿ ಮತ್ತು ಚೀನಿ ರಕ್ಷಣಾ ಸಚಿವ ಜನರಲ್ ಕಾವೊ ಗಾಂಗ್ ಚುವಾನ್ ಅವರು ಇಲ್ಲಿ ಕೇಂದ್ರೀಯ ಸೇನಾ ಕಮೀಷನ್ ಮುಖ್ಯ ಕಚೇರಿಯಲ್ಲಿ 2 ಗಂಟೆಗಳ ಕಾಲ ನಡೆದ ಮಾತುಕತೆ ಬಳಿಕ ಈ ಒಪ್ಪಂದಕ್ಕೆ ಸಹಿ ಹಾಕಿದರು.

2006: ದಕ್ಷಿಣ ಬಾಂಗ್ಲಾದೇಶದಲ್ಲಿ ಕಳೆದ ವರ್ಷ ಬಾಂಬ್ ದಾಳಿ ನಡೆಸಿ ಇಬ್ಬರು ನ್ಯಾಯಾಧೀಶರನ್ನು ಕೊಲೆಗೈದ ಪ್ರಕರಣದಲ್ಲಿ ವಹಿಸಿದ ಪಾತ್ರಕ್ಕಾಗಿ ನಿಷೇಧಿತ ಇಸ್ಲಾಮಿಕ್ ಉಗ್ರಗಾಮಿ ಸಂಘಟನೆ ಜುಮತುಲ್ ಮುಜಾಹಿದೀನ್ ಬಾಂಗ್ಲಾದೇಶ್ ಸಂಘಟನೆಯ ಉನ್ನತ ನಾಯಕರಾದ ಷೇಕ್ ಅಬ್ದುರ್ ರಹಮಾನ್ ಮತ್ತು ಸಿದ್ದುಕಿಲ್ ಇಸ್ಲಾಂ ಸೇರಿದಂತೆ ಏಳು ಮಂದಿ ಇಸ್ಲಾಮಿಕ್ ಉಗ್ರಗಾಮಿಗಳಿಗೆ ಜéಲಕಥಿ ಪಟ್ಟಣದ ನ್ಯಾಯಾಲಯವೊಂದು ಮರಣದಂಡನೆ ವಿಧಿಸಿತು. ದಕ್ಷಿಣ ಜéಲಕಥಿ ಪಟ್ಟಣದಲ್ಲಿ ನ್ಯಾಯಾಧೀಶ ರೇಝಾ ತಾರಿಖ್ ಅಹಮದ್ ಅವರು ತೀರ್ಪನ್ನು ಓದಿ ಹೇಳಿದರು. ಈ ಪಟ್ಟಣದಲ್ಲೇ ನವೆಂಬರ್ 14ರಂದು ಇಬ್ಬರು ನ್ಯಾಯಾಧೀಶರನ್ನು ಕೊಲೆಗೈಯಲಾಗಿತ್ತು.

1973: ಕಲಾವಿದೆ ರೂಪ ಸಿ. ಜನನ.

1972: ಖ್ಯಾತ ಚಿತ್ರನಟ ಹಾಗೂ ರಂಗನಟ ಪೃಥ್ವಿರಾಜ್ ಕಪೂರ್ ತಮ್ಮ 65ನೇ ವಯಸ್ಸಿನಲ್ಲಿ ಅಸುನೀಗಿದರು. ಇವರು ಚಿತ್ರನಟರಾದ ರಾಜ್ ಕಪೂರ್, ಶಮ್ಮಿ ಕಪೂರ್ ಮತ್ತು ಶಶಿ ಕಪೂರ್ ಅವರ ತಂದೆ. ರಾಜ್ಯಸಭೆಗೆ ಸದಸ್ಯರಾಗಿ ನಾಮಕರಣಗೊಂಡ ಚಿತ್ರರಂಗದ ಪ್ರಪ್ರಥಮ ವ್ಯಕ್ತಿ ಇವರು. 1972 ರಲ್ಲಿ ಇವರಿಗೆ ಮರಣೋತ್ತರವಾಗಿ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಯನ್ನು ನೀಡಲಾಯಿತು.

1968: ಕಲಾವಿದ ದೊಡ್ಡಮನಿ ಎಂ.ಜಿ. ಜನನ.

1953: ನ್ಯೂಜಿಲ್ಯಾಂಡಿನ ಎಡ್ಮಂಡ್ ಹಿಲರಿ ಮತ್ತು ಶೆರ್ಪಾ ತೇನ್ ಸಿಂಗ್ ನೋರ್ಗೆ ಪ್ರಪ್ರಥಮ ಬಾರಿಗೆ ಜಗತ್ತಿನ ಅತ್ಯುನ್ನತ ಶಿಖರ ಎವರೆಸ್ಟನ್ನು ಏರಿದರು.

1917: ಜಾನ್ ಎಫ್. ಕೆನಡಿ ಜನ್ಮದಿನ(1917-63). ಇವರು 1961-63ರ ಅವಧಿಯಲ್ಲಿ ಅಮೆರಿಕದ 35ನೇ ಅಧ್ಯಕ್ಷರಾಗಿದ್ದರು. ಡಲ್ಲಾಸ್ನಲ್ಲಿ ಮೋಟಾರಿನಲ್ಲಿ ಹೋಗುತ್ತಿದ್ದಾಗ ಇವರನ್ನು ಗುಂಡಿಟ್ಟು ಕೊಲೆಗೈಯಲಾಯಿತು.

1906: ಮೈಸೂರು ಶೈಲಿಯ ಭರತನಾಟ್ಯದ ಪ್ರವರ್ತಕರಲ್ಲಿ ಒಬ್ಬರು ಎಂದೇ ಖ್ಯಾತರಾದ ಡಾ. ಕೆ. ವೆಂಕಟಲಕ್ಷ್ಮಮ್ಮ (19-5-1906ರಿಂದ 3-7-2002) ಅವರು ಕಡೂರಿನ ತಂಗಲಿ ತಾಂಡ್ಯದಲ್ಲಿ ಜನಿಸಿದರು.

1877: ಸಾಹಿತಿ ನವರತ್ನ ರಾಮರಾವ್ (29-5-1877ರಿಂದ 27-11-1960) ಅವರು ನವರತ್ನ ಬಾಲಕೃಷ್ಣರಾಯರ ಪುತ್ರನಾಗಿ ಬೆಂಗಳೂರು ಜಿಲ್ಲೆಯ ದೇವನಹಳ್ಳಿಯಲ್ಲಿ ಈ ದಿನ ಜನಿಸಿದರು. ಇವರ ದಕ್ಷ ಸೇವೆ, ಕನ್ನಡಕ್ಕೆ ನೀಡಿದ ಕೊಡುಗೆಗಾಗಿ ಮೈಸೂರಿನ ಮಹಾರಾಜರು `ರಾಜಸೇವಾಸಕ್ತ' ಬಿರುದು ನೀಡಿದ್ದರು.

1660: ಚಾರ್ಲ್ಸ್ ಸ್ಟುವರ್ಟ್ ತನ್ನ 30ನೇ ಹುಟ್ಟು ಹಬ್ಬದಂದು ಎರಡನೆಯ ಚಾರ್ಲ್ಸ್ ದೊರೆಯಾಗುವ ಸಲುವಾಗಿ ಲಂಡನ್ನಿಗೆ ಮರುಪ್ರವೇಶ ಮಾಡಿದ. 1651ರಲ್ಲಿ ವೋರ್ಸ್ಟರ್ ಯುದ್ಧದ ಬಳಿಕ ಇಂಗ್ಲೆಂಡಿನಿಂದ ಪರಾರಿಯಾಗಿದ್ದ. ಹಾಗೆ ಪರಾರಿಯಾಗುವಾಗ ಬೊಸ್ಕೊಬೆಲ್ನಲ್ಲಿ ಓಕ್ ಗಿಡವೊಂದನ್ನು ಅಡಗಿಸಿ ಇಟ್ಟಿದ್ದನಂತೆ. ಆತ ಮತ್ತೆ ದೊರೆಯಾದ ಸಂಭ್ರಮಕ್ಕಾಗಿ ಆತನಿಗೆ ನಿಷ್ಠರಾಗಿದ್ದ ಪ್ರಜೆಗಳು ಓಕ್ ಎಲೆಗಳನ್ನು ಧರಿಸಿ ಈ ದಿನವನ್ನು `ಓಕ್ ಆಪಲ್ ಡೇ' ಆಗಿ ಆಚರಿಸಿದರು.

(ಸಂಗ್ರಹ: ನೆತ್ರಕೆರೆ ಉದಯಶಂಕರ)

ಇಂದಿನ ಇತಿಹಾಸ History Today ಮೇ 28

ಇಂದಿನ ಇತಿಹಾಸ

ಮೇ 28

ಭ್ರಷ್ಟಾಚಾರ ಆರೋಪ ಎದುರಿಸುತ್ತಿದ್ದ ಜಪಾನಿನ ಕೃಷಿ ಸಚಿವ ತೊಷಿಕಾತ್ಸು ಮಾತ್ಸುಕಾ (62) ಆತ್ಮಹತ್ಯೆ ಮಾಡಿಕೊಂಡರು. ನೇಣು ಹಾಕಿಕೊಳ್ಳಲು ಯತ್ನಿಸಿ ಮನೆಯಲ್ಲಿ ಪ್ರಜ್ಞಾಹೀನರಾಗಿ ಬಿದ್ದಿದ್ದ ಮಾತ್ಸುಕಾ ಅವರನ್ನು ಟೋಕಿಯೋದ ಕಿಯೋ ವಿವಿ ಆಸ್ಪತ್ರೆಗೆ ತಂದಾಗ ಪ್ರಾಣ ಹಾರಿಹೋಗಿತ್ತು.

2008: ವಾಯುಮಾಲಿನ್ಯ ವಿಷಯದಲ್ಲಿ ದೇಶದ ರಾಜಧಾನಿ ದೆಹಲಿಯನ್ನೂ ಕೋಲ್ಕತ ಮೀರಿಸಿ ಪರಿಸರ ಮಾಲಿನ್ಯದಲ್ಲಿ ಮುಂಚೂಣಿಯಲ್ಲಿದೆ!. ದೆಹಲಿಗಿಂತಲೂ ಅತಿ ಹೆಚ್ಚು ಶ್ವಾಸಕೋಶ ಕ್ಯಾನ್ಸರ್ ಮತ್ತು ಹೃದಯಾಘಾತ ಸಂಭವಿಸುವುದು ಕೂಡಾ ಕೋಲ್ಕತದಲ್ಲೇ! ವರ್ಷವೊಂದರಲ್ಲಿ ಕೋಲ್ಕತದಲ್ಲಿ ಪ್ರತಿ ಲಕ್ಷ ಜನರಲ್ಲಿ 18ಕ್ಕೂ ಹೆಚ್ಚು ಮಂದಿ ಶ್ವಾಸಕೋಶ ಕ್ಯಾನ್ಸರ್ ಇಲ್ಲವೇ ಹೃದಯಾಘಾತಕ್ಕೆ ಬಲಿಯಾದರೆ ಅದೇ ದೆಹಲಿಯಲ್ಲಿ ಲಕ್ಷ ಜನರ್ಲಲಿ 13 ಮಂದಿ ಈ ಖಾಯಿಲೆಗಳಿಗೆ ಬಲಿಯಾಗುತ್ತಾರೆ ಎಂದು ಚಿತ್ತರಂಜನ್ ರಾಷ್ಟ್ರೀಯ ಕ್ಯಾನ್ಸರ್ ಇನ್ಸ್ಟಿಟ್ಯೂಟ್ (ಸಿಎನ್ಸಿಐ)ನ ಪರಿಸರ ವಿಜ್ಞಾನಿ ತ್ವಿಷಾ ಲಹಿರಿ ಬಹಿರಂಗ ಪಡಿಸಿದರು. ಕ್ಯಾನ್ಸರಿಗಿಂತಲೂ ಹೆಚ್ಚಾಗಿ ಹೃದಯಾಘಾತ ಪ್ರಕರಣಗಳ ಸಂಖ್ಯೆ ಕೋಲ್ಕತದಲ್ಲಿ ಹೆಚ್ಚಾಗಿದೆ ಎಂದು ಸಿಎನ್ಸಿಐನ ವರದಿ ತಿಳಿಸಿತು.

2008: ದೇಶದ ಹಲವಾರು ಕಡೆಗಳಲ್ಲಿ ಹಾಗೂ ಇತ್ತೀಚೆಗೆ ಜೈಪುರದಲ್ಲಿ ಸೈಕಲುಗಳನ್ನು ಬಳಸಿ ಉಗ್ರರು ಬಾಂಬ್ ಸ್ಫೋಟ ಕೃತ್ಯದಲ್ಲಿ ತೊಡಗಿದ ಹಿನ್ನೆಲೆಯಲ್ಲಿ ತಾಜ್ ಮಹಲ್ ಬಳಿ ಸೈಕಲ್ ನಿಲುಗಡೆಯನ್ನು ನಿಷೇಧಿಸಲಾಯಿತು. ವಿಶ್ವದ ಪ್ರಸಿದ್ಧ ತಾಜ್ ಮಹಲ್ ಭಯೋತ್ಪಾದಕ ಸಂಘಟನೆಗಳ ಕೆಂಗಣ್ಣಿಗೆ ಗುರಿಯಾದ ಹಿನ್ನೆಲೆಯಲ್ಲಿ ತಾಜ್ ಮಹಲ್ಗೆ ವಿವಿಧ ಏಜೆನ್ಸಿಗಳ ಭದ್ರತಾ ಪಡೆಗಳನ್ನು ಹಾಕಲಾಯಿತು.

2008: ಕನ್ನಡ ನೆಲದ ಕೀರ್ತಿ ಪತಾಕೆಯನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಎತ್ತಿ ಹಿಡಿದ ಅಂಪೈರ್ ಎ.ವಿ.ಜಯಪ್ರಕಾಶ್ ಮಟ್ಟಿಗೆ ಈದಿನ ತಮ್ಮೂರು ಬೆಂಗಳೂರಿನಲ್ಲಿಯೇ ಕೊನೆಯ ಬಾರಿಗೆ ಅಂಪೈರ್ ಆಗಿ ಕಾರ್ಯ ನಿರ್ವಹಿಸಿದರು. ಕ್ರಿಕೆಟ್ ವೃತ್ತಿಪರ ಅಂಪೈರ್ ಜೀವನದಿಂದ ನಿವೃತ್ತಿ ಹೊಂದುವ ನಿರ್ಧಾರ ಪ್ರಕಟಿಸಿದ ಜಯಪ್ರಕಾಶ್ ಕೊನೆಯ ಬಾರಿಗೆ ಕ್ಷೇತ್ರದ ಅಂಪೈರ್ ಆಗಿ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಣಿಸಿಕೊಂಡರು. ಮುಂಬೈ ಇಂಡಿಯನ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ತಂಡಗಳ ನಡುವೆ ನಡೆದ ಐಪಿಎಲ್ ಟ್ವೆಂಟಿ-20 ಟೂರ್ನಿಯ ಪಂದ್ಯದಲ್ಲಿ ಅವರು ತಮ್ಮ ಹೊಣೆಯನ್ನು ಕೊನೆಯ ಬಾರಿಗೆ ನಿಭಾಯಿಸಿದರು. 58 ವರ್ಷ ವಯಸ್ಸಿನ ಜಯಪ್ರಕಾಶ್ ದೀರ್ಘ ಕಾಲ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಅಂಪೈರ್ ಸಮಿತಿಯ ಸದಸ್ಯರಾಗಿಯೂ ಕಾರ್ಯ ನಿರ್ವಹಿಸಿದ್ದರು. ಅವರು ಕ್ಷೇತ್ರದ ಅಂಪೈರ್ ಆಗಿದ್ದಾಗಲೇ ನವದೆಹಲಿಯ ಫಿರೋಜ್ ಷಾ ಕೋಟ್ಲಾ ಕ್ರೀಡಾಂಗಣದಲ್ಲಿ ಪಾಕಿಸ್ಥಾನದ ವಿರುದ್ಧ ಲೆಗ್ ಸ್ಪಿನ್ನರ್ ಅನಿಲ್ ಕುಂಬ್ಳೆ ಒಂದೇ ಇನಿಂಗ್ಸಿನಲ್ಲಿ ಹತ್ತು ವಿಕೆಟ್ ಕಬಳಿಸಿ ಗಮನ ಸೆಳೆದಿದ್ದರು.

2008: ಬಾಲಿವುಡ್ ನಟ ಸಂಜಯ್ ದತ್ ಹಾಗೂ ಮಾನ್ಯತಾರ ವಿವಾಹಕ್ಕೆ ಕಡೆಗೂ ನ್ಯಾಯಾಲಯ ಒಪ್ಪಿಗೆಯ ಮುದ್ರೆ ಒತ್ತಿತು. ಇವರಿಬ್ಬರ ವಿವಾಹ ಕಾನೂನು ಬದ್ಧವಾಗಿದೆ ಎಂದು ಮುಂಬೈನ ಸೆಷನ್ಸ್ ಕೋರ್ಟ್ ಹೇಳಿತು. ವಿಚಾರಣಾಧೀನ ಕೈದಿ ಮೆಹ್ರಾಜ್ ಶೇಕ್ ಎಂಬುವವನು, `ಮಾನ್ಯತಾ ನನ್ನ ಹೆಂಡತಿ. ಆಕೆ ನನ್ನಿಂದ ಕಾನೂನು ಬದ್ಧವಾಗಿ ವಿಚ್ಛೇದನ ಪಡೆದಿಲ್ಲ. ಹೀಗಾಗಿ ಆಕೆ ಸಂಜಯ ದತ್ ಅವರನ್ನು ಮದುವೆಯಾಗಿರುವುದು ಕಾನೂನು ಬದ್ಧವಲ್ಲ. ಆದ್ದರಿಂದ ಆಕೆಯ ವಿರುದ್ಧ ಬಹುಪತಿತ್ವ ಕಾನೂನಿನಡಿ ಕ್ರಮ ಜರುಗಿಸಬೇಕು ಎಂದು ಮುಂಬೈ ಮೆಟ್ರೋಪಾಲಿಟನ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದ. ಸುಪ್ರೀಂ ಕೋರ್ಟಿನಿಂದ ಜಾಮೀನು ದೊರೆತ ನಂತರ ಸಂಜಯ್ ಮಾನ್ಯತಾರನ್ನು ಪ್ರಸಕ್ತ ವರ್ಷದ ಫೆಬ್ರುವರಿ ತಿಂಗಳ ಮೊದಲ ವಾರ ಗೋವಾದಲ್ಲಿ ಮದುವೆಯಾಗಿದ್ದರು. ತದನಂತರ ಫೆ.11ರಂದು ಅವರು ಮಾಧ್ಯಮದವರಿಗೆ ತಮ್ಮ ಮದುವೆ ವಿಷಯವನ್ನು ಬಹಿರಂಗಗೊಳಿಸಿ ಶಾಸ್ತ್ರೋಕ್ತವಾಗಿ ಮುಂಬೈಯಲ್ಲಿ ಮತ್ತೆ ಮದುವೆಯಾದರು.

2008: ಮಂಗಳೂರಿನಲ್ಲಿ ಬಹುಕೋಟಿ ರೂಪಾಯಿ ಬಂಡವಾಳದ ಪೆಟ್ರೋಲಿಯಂ, ರಾಸಾಯನಿಕ ಮತ್ತು ಪೆಟ್ರೋಕೆಮಿಕಲ್ ಹೂಡಿಕೆ ವಲಯವನ್ನು (ಪಿಸಿಪಿಐಆರ್) ಸ್ಥಾಪಿಸುವ ಕರ್ನಾಟಕದ ಪ್ರಸ್ತಾವಕ್ಕೆ ಕೇಂದ್ರ ಅನುಮೋದನೆ ನೀಡಿದೆ ಎಂದು ರಾಸಾಯನಿಕ ಮತ್ತು ಪೆಟ್ರೋಕೆಮಿಕಲ್ ಇಲಾಖೆ ಕಾರ್ಯದರ್ಶಿ ವಿ.ಎಸ್.ಸಂಪತ್ ಬಹಿರಂಗ ಪಡಿಸಿದರು. ರಾಜ್ಯ ಸರ್ಕಾರವು ಬಹಳ ಹಿಂದೆಯೇ ಈ ಕುರಿತ ಪ್ರಸ್ತಾವವನ್ನು ಕೇಂದ್ರಕ್ಕೆ ಸಲ್ಲಿಸಿತ್ತು. ಆದರೆ, ಕೇಂದ್ರವು ಭೂಮಿಯ ಲಭ್ಯತೆ ಹಾಗೂ ಇತರ ಮೂಲಸೌಕರ್ಯಗಳ ಬಗ್ಗೆ ಇನ್ನಷ್ಟು ವಿವರಣೆ ಕೋರಿ ಪ್ರಸ್ತಾವವನ್ನು ಹಿಂದಕ್ಕೆ ಕಳುಹಿಸಿತ್ತು.

2008: ಕರ್ನಾಟಕದ ವಿವಿಧೆಡೆ ಗುಡುಗು, ಸಿಡಿಲು, ಗಾಳಿಯಿಂದ ಕೂಡಿದ ಮಳೆ ಸುರಿದು ಆಸ್ತಿಪಾಸ್ತಿ ಹಾಗೂ ಜೀವಹಾನಿ ಸಂಭವಿಸಿತು. ಸಿಡಿಲು ಬಡಿದು ದಾವಣಗೆರೆ ಜಿಲ್ಲೆಯ ಹರಪನಹಳ್ಳಿ ತಾಲ್ಲೂಕಿನಲ್ಲಿ ನಾಲ್ವರು ಹಾಗೂ ಶಿವಮೊಗ್ಗ ಜಿಲ್ಲೆಯ ಗೋಂದಿಚಟ್ನಹಳ್ಳಿಯಲ್ಲಿ, ಉಡುಪಿ ಜಿಲ್ಲೆಯ ಹೆಜಮಾಡಿಕೋಡಿ ಎಂಬಲ್ಲಿ ತಲಾ ಒಬ್ಬರು ಮೃತರಾದರು.

2008: ಆರು ವರ್ಷಗಳ ಹಿಂದೆ ನಡೆದ ನಿತೀಶ್ ಕಟಾರಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನವದೆಹಲಿಯ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯವು ವಿಕಾಸ್ ಮತ್ತು ಆತನ ಸಹೋದರ ಸಂಬಂಧಿ ವಿಶಾಲ್ ಯಾದವ್ ಅಪರಾಧಿಗಳು ಎಂದು ಘೋಷಿಸಿತು. ಉತ್ತರಪ್ರದೇಶದ ರಾಜಕಾರಣಿ ಡಿ. ಪಿ.ಯಾದವ್ ಅವರ ಪುತ್ರನಾದ ವಿಕಾಸ್ ಮತ್ತು ಆತನ ಸಹೋದರ ಸಂಬಂಧಿ ವಿಶಾಲ್ ವಿರುದ್ಧದ ಕೊಲೆ, ಅಪಹರಣ ಮತ್ತು ಸಾಕ್ಷಿಗಳ ನಾಶ ಆಪಾದನೆಗಳು ಸಾಬಿತಾಗಿವೆ ಎಂದು ನ್ಯಾಯಾಧೀಶ ರವೀಂದ್ರ ಕೌರ್ ಪ್ರಕಟಿಸಿದರು.

2008: ವೀರರಾಣಿ ಕಿತ್ತೂರ ಚನ್ನಮ್ಮಾಜಿ ವಂಶಸ್ಥ ಹಾಗೂ ಸ್ವಾತಂತ್ರ್ಯ ಹೋರಾಟಗಾರ ತಾತ್ಯಾ ಸಾಹೇಬ ಬಾಪುಸಾಹೇಬ ದೇಸಾಯಿ (ಕಿತ್ತೂರಕರ) (89) ಈದಿನ ರಾತ್ರಿ ಚನ್ನಮ್ಮನ ಕಿತ್ತೂರಿನ ತಮ್ಮ ಸ್ವಗೃಹದಲ್ಲಿ ಹೃದಯಾಘಾತದಿಂದ ನಿಧನರಾದರು. ಸ್ವಾತಂತ್ರ್ಯ ಚಳವಳಿಯಲ್ಲಿ ಭಾಗವಹಿಸಿದ್ದ, ರಾಣಿ ಚನ್ನಮ್ಮಾಜಿಯ 5 ನೇ ವಂಶಸ್ಥರಾದ ಅವರು ಪಾಂಡಿಚೇರಿಯ ಅರವಿಂದ ಆಶ್ರಮದಲ್ಲಿ 25 ವರ್ಷಕಾಲ ಇದ್ದು ಕಿತ್ತೂರಿಗೆ ಆಗಮಿಸಿದ್ದರು. ಇಲ್ಲಿನ ಪ್ರತಿಷ್ಠಿತ ಕಿತ್ತೂರ ರಾಣಿ ಚನ್ನಮ್ಮ ಸ್ಮಾರಕ ಸಮಿತಿಯ ಆಡಳಿತ ಮಂಡಳಿ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದರು.

2007: ಎರಡನೇ ಮಹಾಯುದ್ಧ ಕಾಲದಲ್ಲಿ ಜಪಾನ್ ಸೈನಿಕ ಹಾರಿಸಿದ್ದ ಗುಂಡು ಹೊಕ್ಕು 64 ವರ್ಷಗಳಿಂದ ತಲೆನೋವಿನಿಂದ ನರಳುತ್ತಿದ್ದ ಚೀನೀ ಮಹಿಳೆಯ ತಲೆಯಿಂದ ಗುಂಡನ್ನು ವೈದ್ಯರು ಕೊನೆಗೂ ಹೊರತೆಗೆದರು. 1943ರಲ್ಲಿ ತನ್ನ ತಾತನನ್ನು ನೋಡಲು ಹೊಗ್ಲು ಪ್ರಾಂತ್ಯಕ್ಕೆ ತೆರಳಿದ ಸಂದರ್ಭದಲ್ಲಿ ಜಪಾನಿ ಸೇನಾಪಡೆಯವನೊಬ್ಬ ಹಾರಿಸಿದ ಗುಂಡು ಜಿನ್ ಗುಂಜಿಂಗ್ (77) ತಲೆಗೆ ಹೊಕ್ಕು ಆಕೆ ಪ್ರಜ್ಞೆ ಕಳೆದುಕೊಂಡಿದ್ದಳು. ಬಳಿಕ ಅಸಭ್ಯ ಮಾತುಗಳೊಂದಿಗೆ ನಿರಂತರ ತಲೆ ನೋವು ಅನುಭವಿಸುತ್ತಿದ್ದಳು. ಮಾನಸಿಕವಾಗಿ ಅಸ್ವಸ್ಥಗೊಂಡಿದ್ದಳು.

2007: ಭ್ರಷ್ಟಾಚಾರ ಆರೋಪ ಎದುರಿಸುತ್ತಿದ್ದ ಜಪಾನಿನ ಕೃಷಿ ಸಚಿವ ತೊಷಿಕಾತ್ಸು ಮಾತ್ಸುಕಾ (62) ಆತ್ಮಹತ್ಯೆ ಮಾಡಿಕೊಂಡರು. ನೇಣು ಹಾಕಿಕೊಳ್ಳಲು ಯತ್ನಿಸಿ ಮನೆಯಲ್ಲಿ ಪ್ರಜ್ಞಾಹೀನರಾಗಿ ಬಿದ್ದಿದ್ದ ಮಾತ್ಸುಕಾ ಅವರನ್ನು ಟೋಕಿಯೋದ ಕಿಯೋ ವಿವಿ ಆಸ್ಪತ್ರೆಗೆ ತಂದಾಗ ಪ್ರಾಣ ಹಾರಿಹೋಗಿತ್ತು.

2007: ಆದಾಯಕ್ಕೂ ಮೀರಿ ಆಸ್ತಿ ಹೊಂದಿದ ಆರೋಪ ಹೊತ್ತಿರುವ ಮಾಜಿ ಸಿಕ್ಕಿಂ ಮುಖ್ಯಮಂತ್ರಿ ಎನ್. ಬಿ. ಭಂಡಾರಿ ಅವರಿಗೆ ವಿಶೇಷ ಸಿಬಿಐ ನ್ಯಾಯಾಲಯವು ಒಂದು ತಿಂಗಳ ಕಾರಾಗೃಹ ಶಿಕ್ಷೆ ಮತ್ತು 5000 ರೂಪಾಯಿಗಳ ದಂಡ ವಿಧಿಸಿ ತೀರ್ಪು ನೀಡಿತು. ಸಿಕ್ಕಿಂ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಭಂಡಾರಿ ಅವರು ತಾವು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ತಮ್ಮ ಆದಾಯ ಮೀರಿ 15.22 ಲಕ್ಷ ರೂಪಾಯಿಗಳಷ್ಟು ಅಕ್ರಮ ಆಸ್ತಿ ಸಂಪಾದಿಸಿದ್ದನ್ನು ಸಿಬಿಐ ಪತ್ತೆ ಹಚ್ಚಿತ್ತು.

2007: ಶ್ರವಣಬೆಳಗೊಳದ ರಾಷ್ಟ್ರೀಯ ಪ್ರಾಕೃತ ಅಧ್ಯಯನ ಸಂಶೋಧನ ಸಂಸ್ಥೆಯ ನಿಯೋಜಿತ ನಿರ್ದೇಶಕ ಡಾ. ಪ್ರೇಮ ಸುಮನ್ ಜೈನ್ ಅವರು 35 ವರ್ಷಗಳಿಂದ ಪಾಲಿ, ಪ್ರಾಕೃತ ಭಾಷೆಯ ಶೈಕ್ಷಣಿಕ ಮತ್ತು ಸಂಶೋಧನ ಕ್ಷೇತ್ರದಲ್ಲಿ ಸಲ್ಲಿಸಿದ ಸೇವೆಗಾಗಿ ರಾಷ್ಟ್ರಪತಿ ಎ.ಪಿ.ಜೆ. ಅಬ್ದುಲ್ ಕಲಾಂ ಅವರಿಂದ ರಾಷ್ಟ್ರೀಯ ಗೌರವ ಪುರಸ್ಕಾರ ಪಡೆದರು.

2007: ಸ್ತನ ಕ್ಯಾನ್ಸರ್ ರೋಗಕ್ಕೆ ಕಾರಣವಾಗುವ ವಂಶವಾಹಿಗಳನ್ನು (ಜೀನ್ಸ್) ಪತ್ತೆ ಹಚ್ಚುವಲ್ಲಿ ತಾವು ಯಶಸ್ವಿಯಾಗಿರುವುದಾಗಿ ಕ್ಯಾನ್ಸರ್ ತಜ್ಞ ಕರೋಲ್ ಸಿಕೋರ ನೇತೃತ್ವದ ವಿಜ್ಞಾನಿಗಳ ತಂಡವೊಂದು ಲಂಡನ್ನಿನಲ್ಲಿ ಪ್ರಕಟಿಸಿತು. ಮಹಿಳೆಯರಲ್ಲಿ ಸ್ತನ ಕ್ಯಾನ್ಸರಿಗೆ ಕಾರಣವಾಗುವ ಕನಿಷ್ಠ ನಾಲ್ಕು ವಂಶವಾಹಿಗಳನ್ನು ತಾವು ಪತ್ತೆ ಹಚ್ಚಿರುವುದಾಗಿ ಈ ವಿಜ್ಞಾನಿಗಳು `ನೇಚರ್ ಅಂಡ್ ನೇಚರ್ ಜೆನೆಟಿಕ್ಸ್' ಪತ್ರಿಕೆಯ ಆನ್ ಲೈನ್ ಆವೃತ್ತಿಯಲ್ಲಿ ಪ್ರಕಟಿಸಿದರು. ವಂಶವಾಹಿ ವಿಜ್ಞಾನದಲ್ಲಿ ಇದೊಂದು ಮಹತ್ವದ ಮುನ್ನಡೆ.

2007: ಎಂಜಿನಿಯರಿಂಗ್ ಶಿಕ್ಷಣದ ಬಡ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ವಿಶ್ವೇಶ್ವರಯ್ಯ ತಾಂತ್ರಿಕ ವಶ್ವ ವಿದ್ಯಾಲಯವು (ವಿಟಿಯು) ತನ್ನ ವಾಪ್ತಿಗೆ ಒಳಪಟ್ಟ ಕಾಲೇಜುಗಳ ವಿದ್ಯಾರ್ಥಿಗಳಿಗೆ ಯಾವುದೇ ಭದ್ರತೆಯ ಆವಶ್ಯಕತೆ ಇಲ್ಲದೆ 4 ಲಕ್ಷ ರೂಪಾಯಿಗಳವರೆಗೆ ಸಾಲ ನೀಡಲು ನಿರ್ಧರಿಸಿತು. ವಿಟಿಯು ಕುಲಪತಿ ಡಾ. ಕೆ. ಬಾಲವೀರರೆಡ್ಡಿ ಈ ವಿಚಾರ ಪ್ರಕಟಿಸಿದರು.

2007: ಉಡುಪಿ ಜಿಲ್ಲೆಯ ಮೂಳೂರು ಪ್ರದೇಶದಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಮದುವೆಗೆ ಹೊರಟಿದ್ದ ವ್ಯಾನೊಂದು ಅಪಘಾತಕ್ಕೆ ಈಡಾದ ಪರಿಣಾಮವಾಗಿ 7 ಮಕ್ಕಳು, 9 ಮಹಿಳೆಯರು ಸೇರಿ ಒಟ್ಟು 17 ಜನ ಮೃತರಾದರು.

2007: ಸುಂದರಗಢ ಜಿಲ್ಲೆಯ ಖಂದಧರ್ ಬೆಟ್ಟಗಳಲ್ಲಿ ಸಮೀಕ್ಷೆ ಕಾಲದಲ್ಲಿ ಅವಯವ ರಹಿತ ಹಲ್ಲಿಗಳನ್ನು ಪತ್ತೆ ಹಚ್ಚಿದುದಾಗಿ ಒರಿಸ್ಸಾ ಪ್ರಾಣಿಶಾಸ್ತ್ರಜ್ಞರ ತಂಡ ಪ್ರಕಟಿಸಿತು.

2006: ಫಿಲಿಪ್ಪೀನ್ಸಿನ ರಾಜಧಾನಿ ಮನಿಲಾ ಸಮೀಪದ ಫೆಸಿಗ್ ನಗರದಲ್ಲಿ ಈದಿನ ಮುಕ್ತಾಯಗೊಂಡ ನಾಲ್ಕು ಸ್ಟಾರ್ ಫಿಲಿಪ್ಪೀನ್ಸ್ ಓಪನ್ ಬ್ಯಾಡ್ಮಿಂಟನ್ ಚಾಂಪಿಯನ್ ಶಿಪ್ಪಿನ ಫೈನಲ್ಲಿನಲ್ಲಿ ಪ್ರಶಸ್ತಿ ಗೆದ್ದ ನೈನಾ ನೆಹ್ವಾಲ್ ರಾಷ್ಟ್ರದ ಬ್ಯಾಡ್ಮಿಂಟನ್ ರಂಗದ ದಾಖಲೆಯ ಪುಟದಲ್ಲಿ ತಮ್ಮ ಹೆಸರು ಸೇರ್ಪಡೆ ಮಾಡಿದರು.

1998: ಭಾರತದ ಅಣ್ವಸ್ತ್ರ ಪರೀಕ್ಷೆಗಳಿಗೆ ಪ್ರತಿಯಾಗಿ ಪಾಕಿಸ್ಥಾನ ಐದು ಅಣ್ವಸ್ತ್ರಗಳನ್ನು ಸ್ಫೋಟಿಸಿತು. ಇದನ್ನು ಅನುಸರಿಸಿ ಅಮೆರಿಕ, ಜಪಾನ್ ಮತ್ತು ಇತರ ರಾಷ್ಟ್ರಗಳು ಪಾಕಿಸ್ಥಾನದ ವಿರುದ್ಧ ಆರ್ಥಿಕ ದಿಗ್ಬಂಧನ ಹೇರಿದವು.

1997: ಮಾಜಿ ಕೇಂದ್ರ ಸಚಿವರಾದ ಅರ್ಜುನ್ ಸಿಂಗ್, ಎನ್.ಡಿ. ತಿವಾರಿ, ಆರ್.ಕೆ. ಧವನ್ ಮತ್ತು ಮಾಧವರಾವ್ ಸಿಂಧಿಯಾ ಅವರನ್ನು ವಿ.ಬಿ. ಗುಪ್ತ ನೇತೃತ್ವದ ವಿಶೇಷ ನ್ಯಾಯಾಲಯವು ಜೈನ್ ಹವಾಲಾ ಹಗರಣದಿಂದ ಮುಕ್ತಗೊಳಿಸಿತು.

1964: ಪ್ಯಾಲಸ್ಥೈನ್ ಲಿಬರೇಶನ್ ಆರ್ಗನೈಸೇಷನ್ (ಪಿಎಲ್ಒ) ಸ್ಥಾಪನೆಗೊಂಡಿತು.

1961: ಮಾನವ ಹಕ್ಕುಗಳ ಉಲ್ಲಂಘನೆ ಕುರಿತು ಜನಾಭಿಪ್ರಾಯ ರೂಪಿಸಲು ಮತ್ತು ರಾಜಕೀಯ ಕೈದಿಗಳ ಬಿಡುಗಡೆಗೆ ಒತ್ತಾಯಿಸಲು ಬ್ರಿಟಿಷ್ ವಕೀಲ ಪೀಟರ್ ಬೆನೆನ್ಸನ್ ಲಂಡನ್ನಿನಲ್ಲಿ `ಅಮ್ನೆಸ್ಟಿ ಇಂಟರ್ ನ್ಯಾಷನಲ್' ಸಂಘಟನೆಯನ್ನು ಸ್ಥಾಪಿಸಿದರು. ಶಾಂತಿ, ನ್ಯಾಯ ಮತ್ತು ಜಗತ್ತಿನಲ್ಲಿ ಶಾಂತಿ ಸ್ಥಾಪನೆಗೆ ನೆಲೆಗಟ್ಟು ಒದಗಿಸಲು ಸಲ್ಲಿಸಿದ ಸೇವೆಗಾಗಿ ಈ ಸಂಘಟನೆಗೆ 1977ರ ನೊಬೆಲ್ ಪ್ರಶಸ್ತಿ ಲಭಿಸಿತು.

1930: ಕ್ರಾಂತಿಕಾರಿ ಸ್ವಾತಂತ್ರ್ಯ ಹೋರಾಟಗಾರ ಭಗವತಿ ಚರಣ ವೋಹ್ರಾ ನಿಧನರಾದರು.

1906: ಸಾಹಿತಿ, ಕಾದಂಬರಿಕಾರ, ನಾಟಕಕಾರ ಕೆ. ವೆಂಕಟರಾಮಪ್ಪ (28-5-1906 ರಿಂದ 2-9-1991) ಅವರು ಸುಬ್ಬಾಶಾಸ್ತ್ರಿ- ಸಾವಿತ್ರಮ್ಮ ದಂಪತಿಯ ಪುತ್ರನಾಗಿ ಈ ದಿನ ಜನಿಸಿದರು. ಕರ್ನಾಟಕ ಸಾಹಿತ್ಯ ಪರಿಷತ್ ವೆಂಕಟರಾಮಪ್ಪ ಅವರ ವಿದ್ವತ್ತನ್ನು ಗುರುತಿಸಿ 1986ರಲ್ಲಿ ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ನೀಡಿ ಗೌರವಿಸಿತ್ತು.

1923: ತೆಲುಗು ಚಿತ್ರನಟ, ತೆಲುಗುದೇಶಂ ಪಕ್ಷದ ಸ್ಥಾಪಕ, ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಎನ್.ಟಿ. ರಾಮರಾವ್ (1923-96) ಜನ್ಮದಿನ.

1883: ಭಾರತದ ಕ್ರಾಂತಿಕಾರಿ ಸ್ವಾತಂತ್ರ್ಯ ಹೋರಾಟಗಾರ ವಿನಾಯಕ ದಾಮೋದರ ಸಾವರ್ಕರ್ (1883-1966) ಜನ್ಮದಿನ.

1865: `ಬ್ರೋಚೆವಾರೆವರುರಾ' ಕೃತಿ ರಚಿಸಿದ ಖ್ಯಾತ ಸಂಗೀತಗಾರ ಮೈಸೂರು ವಾಸುದೇವಾಚಾರ್ಯ (28-5-1865ರಿಂದ 17-5-1961) ಅವರು ಸುಬ್ರಹ್ಮಣ್ಯಾಚಾರ್ಯ- ಕೃಷ್ಣಾಬಾಯಿ ದಂಪತಿಯ ಮಗನಾಗಿ ಮೈಸೂರಿನಲ್ಲಿ ಜನಿಸಿದರು.

1759: ವಿಲಿಯಂ ಪಿಟ್ ಜನ್ಮದಿನ (1759-1806). ಈತ ಅತ್ಯಂತ ಕಿರಿಯ ಬ್ರಿಟಿಷ್ ಪ್ರಧಾನಿ. 1783ರಲ್ಲಿ ಪ್ರಧಾನಿಯಾದಾಗ ಈತನಿಗೆ 24 ವರ್ಷ ವಯಸ್ಸು. ಈತ ಪ್ರಧಾನಿ ಸ್ಥಾನಕ್ಕೆ ತಂದೆಯ ಉತ್ತರಾಧಿಕಾರಿಯಾಗಿ ಆಯ್ಕೆಯಾದ ಮೊತ್ತ ಮೊದಲ ವ್ಯಕ್ತಿ ಕೂಡಾ.

1738: ಜೋಸೆಫ್ ಗಿಲೋಟಿನ್ (1738-1814) ಹುಟ್ಟಿದ ದಿನ. ಫ್ರಾನ್ಸಿನ `ತಲೆ ಕಡಿಯುವ ಯಂತ್ರ'ಕ್ಕೆ ಈ ವ್ಯಕ್ತಿಯ ಹೆಸರನ್ನೇ ಇಡಲಾಯಿತು. ಇಂತಹ ಯಂತ್ರದ ಬಗ್ಗೆ ಬೋಧಿಸುತ್ತಿದ್ದ ಹಿನ್ನೆಲೆಯಲ್ಲಿ ಈತನ ಹೆಸರನ್ನು ಅದಕ್ಕೆ ನೀಡಲಾಯಿತು. ಆದರೆ ಈ ಯಂತ್ರ ಆತನ ಸಂಶೋಧನೆಯಲ್ಲ.

(ಸಂಗ್ರಹ: ನೆತ್ರಕೆರೆ ಉದಯಶಂಕರ)

ದಿನ ಇತಿಹಾಸ History Today ಮೇ 27

ಇಂದಿನ ಇತಿಹಾಸ

ಮೇ 27


ಖ್ಯಾತ ಚಿತ್ರ ನಿರ್ದೇಶಕ ಮಣಿರತ್ನಮ್ ಅವರ ಸಹೋದರ ಚಿತ್ರ ನಿರ್ಮಾಪಕ ಜಿ. ಶ್ರೀನಿವಾಸನ್ ಅವರು ಮನಾಲಿಯ ಹಾಲನ್ನಿನಲ್ಲಿ ಟ್ರೆಕ್ಕಿಂಗ್ ನಿರತರಾಗಿದ್ದಾಗ 50 ಅಡಿ ಆಳದ ಕಮರಿಗೆ ಬಿದ್ದು ಅಸು ನೀಗಿದರು. ಶ್ರೀನಿವಾಸನ್ ಅವರು ಗುರು ಚಿತ್ರದ ನಿರ್ಮಾಪಕರಾಗಿದ್ದು ಪತ್ನಿ ಸಂಧ್ಯಾ ಲಕ್ಷ್ಮಣ್, ಪುತ್ರಿ ಶ್ರೇಯಾ ಸೇರಿದಂತೆ ಕುಟುಂಬ ಸದಸ್ಯರೊಂದಿಗೆ ಟ್ರೆಕ್ಕಿಂಗ್ ನಡೆಸುತ್ತಿದ್ದಾಗ ದುರಂತಕ್ಕೆ ತುತ್ತಾದರು.

2008: ಕರ್ನಾಟಕ ರಾಜ್ಯದಲ್ಲಿ ಹೊಸದಾಗಿ 13ನೇ ವಿಧಾನಸಭೆ ರಚನೆಯಾಗಿರುವ ಹಿನ್ನೆಲೆಯಲ್ಲಿ ರಾಷ್ಟ್ರಪತಿ ಆಡಳಿತವನ್ನು ಹಿಂದಕ್ಕೆ ಪಡೆಯುವಂತೆ ಕೋರಿ ರಾಜ್ಯಪಾಲ ರಾಮೇಶ್ವರ ಠಾಕೂರ್ ಅವರು ರಾಷ್ಟ್ರಪತಿಗಳಿಗೆ ಪತ್ರ ಬರೆದರು. ಒಟ್ಟು 224 ಮಂದಿ ಶಾಸಕರ ಆಯ್ಕೆ ಕುರಿತು ಚುನಾವಣಾ ಆಯೋಗ ರಾಜ್ಯಪತ್ರ (ಗೆಜೆಟ್) ಪ್ರಕಟಿಸಿ, ಅದರ ಪ್ರತಿಯೊಂದನ್ನು ರಾಜ್ಯಪಾಲರಿಗೆ ಸಲ್ಲಿಸಿತು.

2008: ಟೆಂಪೊ ಮತ್ತು ಲಾರಿ ನಡುವೆ ಡಿಕ್ಕಿ ಸಂಭವಿಸಿ, ಗುಬ್ಬಿ ಶಾಸಕರನ್ನು ಅಭಿನಂದಿಸಲು ಹೋಗಿದ್ದ ನಾಲ್ವರು ಜೆಡಿಎಸ್ ಕಾರ್ಯಕರ್ತರು ಮೃತರಾಗಿ, ಇತರ 14 ಮಂದಿ ತೀವ್ರವಾಗಿ ಗಾಯಗೊಂಡ ಘಟನೆ ತುಮಕೂರು ನಗರ ಸಮೀಪದ ಮಲ್ಲಸಂದ್ರದ ಹಾಲಿನ ಡೇರಿ ಬಳಿ ರಾಷ್ಟ್ರೀಯ ಹೆದ್ದಾರಿ 206ರಲ್ಲಿ ಸಂಭವಿಸಿತು.

2008: ಜರ್ಮನ್ ಪ್ರವಾಸದಲ್ಲಿದ್ದ ರಕ್ಷಣಾ ಸಚಿವ ಎ.ಕೆ. ಆಂಟನಿ ಅವರು ಐತಿಹಾಸಿಕ ಬರ್ಲಿನ್ ಯುದ್ಧ ಸಮಾಧಿ ಸ್ಥಳಕ್ಕೆ ಭೇಟಿ ನೀಡಿ, ಎರಡನೇ ಮಹಾ ಯುದ್ಧದಲ್ಲಿ ಮಡಿದ ಭಾರತೀಯ ಯೋಧರಿಗೆ ಗೌರವ ನಮನ ಸಲ್ಲಿಸಿದರು. ಎರಡನೇ ಮಹಾಯುದ್ಧದಲ್ಲಿ ಮಡಿದ 50 ಭಾರತೀಯರನ್ನು ಇಲ್ಲಿ ಸಮಾಧಿ ಮಾಡಲಾಗಿತ್ತು.

2008: ತಮಿಳು ಉಗ್ರಗಾಮಿಗಳ ನೆಲೆಗಳ ಮೇಲೆ ಶ್ರೀಲಂಕಾ ವಾಯುಪಡೆ ನಡೆಸಿದ ದಾಳಿಯಲ್ಲಿ 36 ಮಂದಿ ಬಂಡುಕೋರರು ಹತರಾದರು. ಸ್ಫೋಟಕ ತಯಾರಿಕೆಯಲ್ಲಿ ನಿಷ್ಣಾತನಾಗಿದ್ದ ಡೋರಾ ಎಂಬ ಕುಖ್ಯಾತ ಉಗ್ರ ಈ ದಾಳಿಯಲ್ಲಿ ಮೃತನಾದ ಎಂದು ವರದಿಗಳು ತಿಳಿಸಿದವು.

2008: ಪ್ರಸಿದ್ಧ ಪರ್ವತಾರೋಹಿ ಹಾಗೂ ರಾಜತಾಂತ್ರಿಕ ದಿವಂಗತ ಸರ್ ಎಡ್ಮಂಡ್ ಹಿಲರಿ ಅವರಿಗೆ ದೇಶದ ಅತ್ಯುನ್ನತ ಗೌರವಗಳಲ್ಲಿ ಒಂದಾದ ಪದ್ಮ ವಿಭೂಷಣ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ದೇಶದ ಅತ್ಯುನ್ನತ ಪ್ರಶಸ್ತಿಯಾದ ಪದ್ಮ ವಿಭೂಷಣವನ್ನು ಮೆಲ್ಬೋರ್ನಿನಲ್ಲಿ ಆಯೋಜಿಸಲಾಗಿದ್ದ ಸಮಾರಂಭದಲ್ಲಿ ವಾಣಿಜ್ಯ ಸಚಿವ ಕಮಲ್ ನಾಥ್ ಅವರು ಸರ್ ಎಡ್ಮಂಡ್ ಹಿಲರಿ ಅವರ ಪತ್ನಿ ಜೂನ್ ಹಿಲರಿ ಅವರಿಗೆ ಪ್ರದಾನ ಮಾಡಿದರು.

2008: ಕಂಪ್ಯೂಟರ್ ಮುಂದೆ ಕುಳಿತು ಇ-ಮೇಲ್ ಮೂಲಕ ಬೆದರಿಕೆ ಹಾಕುವವರ ಪತ್ತೆಗೆ ಲಖನೌ ಮೂಲದ ಸಂಸ್ಥೆಯೊಂದು ಸಾಫ್ಟ್ವೇರ್ ಒಂದನ್ನು ತಯಾರಿಸಿತು. ಜೈಪುರದಲ್ಲಿ ಸಂಭವಿಸಿದ ಬಾಂಬ್ ಸ್ಫೋಟ ಪ್ರಕರಣದಲ್ಲಿ ಆರೋಪಿಗಳು ಇ-ಮೇಲ್ ತಂತ್ರಜ್ಞಾನವನ್ನು ಬಳಸಿದ್ದರ ಹಿನ್ನೆಲೆಯಲ್ಲಿ ಈ ಸಾಫ್ಟ್ವೇರನ್ನು ಅಭಿವೃದ್ಧಿಪಡಿಸಲಾಯಿತು ಎಂದು ಜಿಐ ಬಯೋಮೆಟ್ರಿಕ್ಸ್ನ ನಿರ್ದೇಶಕ ಅಮಿತ್ ಕೌಶಲ್ ತಿಳಿಸಿದರು. ಗ್ರಾಹಕ ನೊಂದಣಿ ಮತ್ತು ಗುರುತಿಸುವಿಕೆ (ಸಿಆರ್ಐಸಿಎಚ್-ಕ್ರಿಷ್) ಎಂಬ ಹೆಸರಿನ ಈ ಸಾಫ್ಟವೇರ್ ಬಳಸಿ ಕಂಪ್ಯೂಟರ್ ಮೂಲಕ ಇ-ಮೇಲ್ ಮಾಡುವವರ ಭಾವಚಿತ್ರ ಮತ್ತು ಬೆರಳಚ್ಚುಗಳನ್ನು ಪತ್ತೆ ಹಚ್ಚಬಹುದು. ಇದು ಆರೋಪಿಗಳ ಪತ್ತೆಗೆ ಬಹುಪಯೋಗಿಯಾಗಲಿದೆ ಎಂಬುದು ಅಮಿತ್ ಕೌಶಲ್ ಹೇಳಿಕೆ.

2008: ಪ್ರಸಿದ್ಧ ಶಬರಿಮಲೈ ದೇವಸ್ಥಾನದಲ್ಲಿ ಪ್ರತಿವರ್ಷ ಮಕರ ಸಂಕ್ರಾಂತಿಯಂದು ಭಕ್ತರಿಗೆ ಕಾಣಿಸಿಕೊಳ್ಳುವ `ಮಕರ ಜ್ಯೋತಿ' ಅತೀಂದ್ರಿಯ ಬೆಳಕಲ್ಲ. ಅದು ಮಾನವ ನಿರ್ಮಿತ ಎಂದು ಅಯ್ಯಪ್ಪ ಸ್ವಾಮಿ ದೇವಸ್ಥಾನದ ವಕ್ತಾರ ರಾಹುಲ್ ಈಶ್ವರ್ ತಿಳಿಸಿದರು. ಪೂರ್ವ ಪ್ರದೇಶದ ಪೊನ್ನಂಬಳಮೇಡು ಬೆಟ್ಟದ ನಡುವೆ ಬುಡಕಟ್ಟು ಜನರು ಈ ಬೆಳಕನ್ನು ಹಚ್ಚುತ್ತಾರೆ. ಇದು ಪವಿತ್ರ ಜ್ಯೋತಿ. ಇದನ್ನು ಮೊದಲು ಪರಶುರಾಮ ಆಚರಿಸಿದ ಎಂಬ ದಂತಕತೆಯಿದೆ. ಈ ಸಂದರ್ಭದಲ್ಲಿ ನಕ್ಷತ್ರ ಕಾಣಿಸಿಕೊಳ್ಳುತ್ತದೆ. ಆಗ ಬೆಟ್ಟದಲ್ಲಿನ ಬುಡಕಟ್ಟು ಜನರು ಜ್ಯೋತಿಯನ್ನು ಉರಿಸುತ್ತಾರೆ. ಆದರೆ ಯಾರು ಉರಿಸುತ್ತಾರೆ ಎಂಬುದು ತಮಗೆ ಗೊತ್ತಿಲ್ಲ ಎಂದು ಈಶ್ವರ ವಿವರಿಸಿದರು. ಶಬರಿಮಲೈ ದೇವಸ್ಥಾನವು ಅಸಂಖ್ಯ ಭಕ್ತರು ಭೇಟಿ ನೀಡುವ ಪ್ರಪಂಚದ ಐದು ಪ್ರಸಿದ್ಧ ದೇವಸ್ಥಾನಗಳಲ್ಲಿ ಒಂದು. ಇದು ವಿವಾದಗಳು ಹಾಗೂ ತಪ್ಪು ಮಾಹಿತಿಗಳಿಂದ ಮುಕ್ತವಾಗಿರಬೇಕೆಂಬ ಉದ್ದೇಶದಿಂದ ಈ ಸ್ಪಷ್ಟನೆ ನೀಡುತ್ತಿರುವುದಾಗಿ ಅವರು ಹೇಳಿದರು.

2008: ಬಾಲಿವುಡ್ ಮೆಘಾ ಸ್ಟಾರ್ ಅಮಿತಾಭ್ ಬಚ್ಚನ್ ಅವರು ಕುಟುಂಬದ ಸದಸ್ಯರೊಂದಿಗೆ ಪ್ರಭಾದೇವಿಯಲ್ಲಿ ಸಿದ್ಧಿವಿನಾಯಕ ದೇವಸ್ಥಾನಕ್ಕೆ ಭೇಟಿ ನೀಡಿ, ಪೂಜೆ ಸಲ್ಲಿಸಿದರು. ಅಮಿತಾಭ್ ಅವರು ಪುತ್ರ ಅಭಿಷೇಕ್ ಬಚ್ಚನ್ ಹಾಗೂ ಸೊಸೆ ಐಶ್ವರ್ಯ ರೈ ಅವರೊಂದಿಗೆ ಮುಂಬೈನ `ಜಲ್ಸಾ' ನಿವಾಸದಿಂದ ಬೆಳಿಗ್ಗೆ ಪ್ರಭಾದೇವಿಯಲ್ಲಿರುವ ಸಿದ್ಧಿವಿನಾಯಕ ದೇವಸ್ಥಾನಕ್ಕೆ ಕಾಲು ನಡಿಗೆಯಲ್ಲಿ ಆಗಮಿಸಿ, ಸೂರ್ಯ ಉದಯವಾಗುವ ಮುನ್ನ ದೇವಸ್ಥಾನದಲ್ಲಿ ನಡೆಯುವ ವಿಶೇಷ ಪೂಜೆ `ಕಾಕಡಾರತಿ'ಯಲ್ಲಿ ಪಾಲ್ಗೊಂಡರು. ಜಯಾಭಾದುರಿ ಅವರು ದೇವಸ್ಥಾನದಲ್ಲಿ ಅವರ ಜೊತೆಯಾದರು.

2008: ರಾಜ್ಯ ರಸ್ತೆ ಸಾರಿಗೆ ನಿಗಮ ಈ ವರ್ಷ ಉತ್ತಮ ಆದಾಯ ಗಳಿಸುವಲ್ಲಿ ದಾಪುಗಾಲು ಹಾಕಿತು. ಹಿಂದಿನ ದಿನ (ಮೇ 26) ಒಂದೇ ದಿನದಲ್ಲಿ 6.67ಕೋಟಿ ಆದಾಯಗಳಿಸಿ ಹೊಸ ದಾಖಲೆ ನಿರ್ಮಿಸಿತು. ಇದು ನಿಗಮದ ಇತಿಹಾಸದಲ್ಲಿಯೇ ಅತ್ಯಧಿಕ ಆದಾಯ ಗಳಿಸಿದ ದಿನವಾಯಿತು. ಇದೇ ಮೇ 19ರಂದು 5.95 ಕೋಟಿ ರೂ. ಹಾಗೂ ಮೇ 12ರಂದು 5.82 ಕೋಟಿ ರೂ. ಆದಾಯವನ್ನು ಗಳಿಸಿ ನಿಗಮ ದಾಖಲೆ ಮಾಡಿತ್ತು.

2007: ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಮತ್ತು ಸಿಬ್ಬಂದಿಯನ್ನು ಹೊತ್ತ ಹೆಲಿಕಾಪ್ಟರ್ ಪ್ರತಿಕೂಲ ಹವಾಮಾನದ ಪರಿಣಾಮವಾಗಿ ಚಾಮರಾಜನಗರ ಜಿಲ್ಲೆಯ ಯಳಂದೂರು ಬಳಿಯ ಕೆರೆ ಅಂಗಳದಲ್ಲಿ ಇಳಿಯಿತು. ಆದರೆ ಮುಖ್ಯಮಂತ್ರಿ ಸೇರಿದಂತೆ ಎಲ್ಲ ಸಿಬ್ಬಂದಿ ಅಪಾಯದಿಂದ ಪಾರಾದರು.

2007: ಖ್ಯಾತ ಚಿತ್ರ ನಿರ್ದೇಶಕ ಮಣಿರತ್ನಮ್ ಅವರ ಸಹೋದರ ಚಿತ್ರ ನಿರ್ಮಾಪಕ ಜಿ. ಶ್ರೀನಿವಾಸನ್ ಅವರು ಮನಾಲಿಯ ಹಾಲನ್ನಿನಲ್ಲಿ ಟ್ರೆಕ್ಕಿಂಗ್ ನಿರತರಾಗಿದ್ದಾಗ 50 ಅಡಿ ಆಳದ ಕಮರಿಗೆ ಬಿದ್ದು ಅಸು ನೀಗಿದರು. ಶ್ರೀನಿವಾಸನ್ ಅವರು ಗುರು ಚಿತ್ರದ ನಿರ್ಮಾಪಕರಾಗಿದ್ದು ಪತ್ನಿ ಸಂಧ್ಯಾ ಲಕ್ಷ್ಮಣ್, ಪುತ್ರಿ ಶ್ರೇಯಾ ಸೇರಿದಂತೆ ಕುಟುಂಬ ಸದಸ್ಯರೊಂದಿಗೆ ಟ್ರೆಕ್ಕಿಂಗ್ ನಡೆಸುತ್ತಿದ್ದಾಗ ದುರಂತಕ್ಕೆ ತುತ್ತಾದರು.

2007: ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ 50ನೇ ಜನ್ಮದಿನೋತ್ಸವದ ಸಂದರ್ಭದಲ್ಲಿ ಮಹಾರಾಷ್ಟ್ರದ ಸುಮಾರು 50,000 ದಲಿತರು ಬೌದ್ಧ ಧರ್ಮವನ್ನು ಸ್ವೀಕರಿಸಿದರು. ಮಹಾಲಕ್ಷ್ಮಿ ರೇಸ್ ಕೋರ್ಸಿನಲ್ಲಿ ಈ ಕಾರ್ಯಕ್ರಮ ನಡೆಯಿತು.

2007: ದೇಶದ ಪ್ರಮುಖ ಕಂಪೆನಿ ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಖೇಶ ಅಂಬಾನಿ ಅವರು ಭಾರತದ ಏಕೈಕ ಒಂದು ಲಕ್ಷ ಕೋಟ್ಯಧಿಪತಿ ಎಂಬ ಹೆಗ್ಗಳಿಕೆಗೆ ಪಾತ್ರರಾದರು.

2006: ಮಲಯಾಳಂ ಚಿತ್ರರಂಗದ ಖ್ಯಾತ ನಟ ಒಡವಿಲ್ ಉನ್ನಿಕೃಷ್ಣನ್ (62) ನಿಧನರಾದರು.

2006: ಸುನಾಮಿ ಏಟಿನಿಂದ ಇನ್ನೂ ಚೇತರಿಸದ ಇಂಡೋನೇಷ್ಯಕ್ಕೆ ಈದಿನ ನಸುಕಿನಲ್ಲಿ ಇನ್ನೊಂದು ಆಘಾತ. ಭಾರಿ ಜನಸಾಂದ್ರತೆ ಇರುವ ಜಾವಾ ಪ್ರಾಂತ್ಯದಲ್ಲಿ ಶಕ್ತಿಶಾಲಿ ಭೂಕಂಪ ಸಂಭವಿಸಿ ಒಟ್ಟು 5000ಕ್ಕೂ ಹೆಚ್ಚು ಮಂದಿ ಮೃತರಾದರು. ಸಹಸ್ರಾರು ಮಂದಿ ಗಾಯಗೊಂಡರು. ರಿಕ್ಟರ್ ಮಾಪಕದಲ್ಲಿ ಭೂಕಂಪದ ತೀವ್ರತೆ 6.2ರಷ್ಟಿತ್ತು. ಆ ಬಳಿಕ ಭೂಮಿ ಸುಮಾರು 45 ಸಲ ಕಂಪಿಸಿತು.

1999: ಕರ್ನಾಟಕದ ಜೆ.ಎಚ್. ಪಟೇಲ್ ನೇತೃತ್ವದ ಸರ್ಕಾರ ರಾಜ್ಯದಲ್ಲಿ ಭೂ ದಾಖಲೆಗಳ ಗಣಕೀಕರಣ ಕಾರ್ಯಕ್ರಮ ಆರಂಭಿಸಿತು. ಕಂದಾಯ ಸಚಿವ ಸೋಮಶೇಖರ್ ಕಾಲದಲ್ಲಿ ಚಿತ್ರದುರ್ಗ ಹಾಗೂ ಗುಲ್ಬರ್ಗದಲ್ಲಿ ಪ್ರಾಯೋಗಿಕವಾಗಿ ಕೇಂದ್ರ ನೆರವಿನೊಂದಿಗೆ ಈ ಕಾರ್ಯಕ್ರಮ ಆರಂಭಗೊಂಡಿತು. ಸರ್ಕಾರ ಅವಧಿಗೆ ಮುನ್ನ ಬಿದ್ದ ಕಾರಣ ಅದು ಮುಂದುವರೆಯಲಿಲ್ಲ. 2001ರಲ್ಲಿ ಎಸ್.ಎಂ. ಕೃಷ್ಣ ನೇತೃತ್ವದ ಸರ್ಕಾರ `ಭೂಮಿ' ಹೆಸರಿನಲ್ಲಿ ಈ ಕಾರ್ಯಕ್ರಮವನ್ನು ಮತ್ತೆ ಅನುಷ್ಠಾನಗೊಳಿಸಿತು. ಪಾರದರ್ಶಕತೆಗೆ ಅವಕಾಶ ಮಾಡಿಕೊಟ್ಟ ಈ ಕಾರ್ಯಕ್ರಮ 2006ರಲ್ಲಿ ವಿಶ್ವಸಂಸ್ಥೆಯ `ಸಾರ್ವಜನಿಕ ಸೇವಾ ಪ್ರಶಸ್ತಿ'ಗೆ ಪಾತ್ರವಾಯಿತು.

1994: ಅಲೆಗ್ಸಾಂಡರ್ ಸೋಲ್ಜೆನಿತ್ಸಿನ್ 20 ವರ್ಷಗಳ ವಿದೇಶವಾಸದ ನಂತರ ರಷ್ಯಕ್ಕೆ ಹಿಂತಿರುಗಿದರು.

1964: ಭಾರತದ ಮೊದಲ ಪ್ರಧಾನಿ ಜವಾಹರಲಾಲ್ ನೆಹರೂ ನವದೆಹಲಿಯಲ್ಲಿ ತಮ್ಮ 74ನೇ ವಯಸ್ಸಿನಲ್ಲಿ ನಿಧನರಾದರು.

1937: ಸ್ಯಾನ್ ಫ್ರಾನ್ಸಿಸ್ಕೊ ಮತ್ತು ಕ್ಯಾಲಿಫೋರ್ನಿಯಾದ ಮರೀನ್ ಕೌಂಟಿಯನ್ನು ಸಂಪರ್ಕಿಸಲು ಹೊಸದಾಗಿ ನಿರ್ಮಿಸಲಾದ ಗೋಲ್ಡನ್ ಗೇಟ್ ಬ್ರಿಜ್ಜನ್ನು ಸಾರ್ವಜನಿಕರಿಗೆ ಸಂಚಾರಕ್ಕಾಗಿ ತೆರೆಯಲಾಯಿತು. ಮೊದಲ ದಿನವೇ 2 ಲಕ್ಷ ಮಂದಿ ಸೇತುವೆಯನ್ನು ದಾಟಿದರು. ಈ ಸೇತುವೆಯನ್ನು ಪೂರ್ಣಗೊಳಿಸಲು 4 ವರ್ಷ, 4 ತಿಂಗಳು, 22 ದಿನಗಳು ಬೇಕಾದವು.

1914: ಅಗ್ರಗಣ್ಯ ಪಿಟೀಲು ವಿದ್ವಾಂಸರಲ್ಲಿ ಒಬ್ಬರಾದ ಆರ್. ಆರ್. ಕೇಶವ ಮೂರ್ತಿ (27-5-1914ರಿಂದ 23-10-2006ರ ವರೆಗೆ) ಅವರು ರಾಮಸ್ವಾಮಯ್ಯ- ಸುಬ್ಬಮ್ಮ ದಂಪತಿಯ ಮಗನಾಗಿ ಸಂಗೀತ ಕಾಶಿ ಎನಿಸಿದ್ದ ರುದ್ರಪಟ್ಟಣದಲ್ಲಿ ಜನಿಸಿದರು.

1902: ಕಲಾವಿದ ಹಾರಾಡಿ ರಾಮ ಗಾಣಿಗ ಜನನ.

1897: ಸಾಹಿತ್ಯ ಮತ್ತು ರಂಗಭೂಮಿ ಎರಡರಲ್ಲೂ ವಿಶಿಷ್ಟ ಸೇವೆ ಸಲ್ಲಿಸಿದ ಬಿ. ಪುಟ್ಟಸ್ವಾಮಯ್ಯ (27-5-1897ರಿಂದ 25-1-1984) ಅವರು ಬಸಪ್ಪ - ಮಲ್ಲಮ್ಮ ದಂಪತಿಯ ಪುತ್ರನಾಗಿ ಬೆಂಗಳೂರಿನಲ್ಲಿ ಜನಿಸಿದರು. ಹಲವಾರು ಪತ್ರಿಕೆಗಳ ಸಂಪಾದಕರಾಗಿಯೂ ಸೇವೆ ಸಲ್ಲಿಸಿದ ಇವರು ಕಥೆ, ಕಾದಂಬರಿ ನಾಟಕಗಳನ್ನು ಬರೆದಿದ್ದು, ಇವರ ಜನಪ್ರಿಯ `ಮಲ್ಲಮ್ಮನ ಪವಾಡ' ಕಾದಂಬರಿ ಚಲನಚಿತ್ರವಾಗಿತ್ತು.

1703: ತ್ಸಾರ್ ದೊರೆ ಪೀಟರ್ ದಿ ಗ್ರೇಟ್ ರಷ್ಯದ ನೂತನ ರಾಜಧಾನಿ ಸೇಂಟ್ ಪೀಟರ್ಸ್ ಬರ್ಗನ್ನು ನಿರ್ಮಿಸಿದ. 1914ರಲ್ಲಿ ಅದನ್ನು ಪೆಟ್ರೋಗ್ರಾಡ್ ಎಂದು ಹೆಸರಿಸಲಾಯಿತು. 1924ರಲ್ಲಿ ಅದಕ್ಕೆ `ಲೆನಿನ್ ಗ್ರಾಡ್' ಎಂದು ಸೋವಿಯತ್ ನಾಯಕ ವ್ಲಾಡಿಮೀರ್ ಲೆನಿನ್ ಹೆಸರನ್ನು ಇಡಲಾಯಿತು. 1991ರಲ್ಲಿ ಮತ್ತೆ ಅದಕ್ಕೆ ಮೂಲ ಹೆಸರನ್ನೇ (ಸೇಂಟ್ ಪೀಟರ್ಸ್ ಬರ್ಗ್) ಇಡಲಾಯಿತು.

1679: ಇಂಗ್ಲೆಂಡಿನ ಸಂಸತ್ತು ಸಾರ್ವಜನಿಕರಿಗೆ ಅನಗತ್ಯ ಬಂಧನದಿಂದ ರಕ್ಷಣೆ ಒದಗಿಸುವ ಸಲುವಾಗಿ ಹೇಬಿಯಸ್ ಕಾರ್ಪಸ್ ಕಾನೂನನ್ನು ಅಂಗೀಕರಿಸಿತು. ಈ ಕಾನೂನಿನ ಮುಖ್ಯಾಂಶಗಳನ್ನು ನಂತರ ಅಮೆರಿಕದ ಸಂವಿಧಾನದಲ್ಲಿ ಸೇರ್ಪಡೆ ಮಾಡಲಾಯಿತು.

(ಸಂಗ್ರಹ: ನೆತ್ರಕೆರೆ ಉದಯಶಂಕರ)

ಇಂದಿನ ಇತಿಹಾಸ History Today ಮೇ 26

ಇಂದಿನ ಇತಿಹಾಸ

ಮೇ 26

ಹಿಂದೂಗಳ ಪವಿತ್ರ ನಗರ ವಾರಣಾಸಿಯಲ್ಲಿ ಸದಾ ಮೈತುಂಬಿಕೊಂಡು ಜುಳುಜುಳು ಎಂದು ಹರಿಯುತ್ತಿದ್ದ ಗಂಗಾ ನದಿ ಈಗ ಬಡಕಲಾಗಿರುವುದು ಬೆಳಕಿಗೆ ಬಂತು. ಈ ವರ್ಷದ ಬೇಸಿಗೆಯಲ್ಲಿ ಹಿಂದೆಂದೂ ಕಡಿಮೆಯಾಗದಷ್ಟು ನೀರು ಕಡಿಮೆಯಾಗಿ ಮರಳ ದಂಡೆಗಳು ಎದ್ದು ಕಾಣಿಸತೊಡಗಿದವು. ನದಿಯಲ್ಲಿ ನೀರು ಕಡಿಮೆಯಾಗಲು ಅನೇಕ ಅಂಶಗಳು ಕಾರಣ ಎಂಬುದು ತಜ್ಞರು ಹಾಗೂ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಅಭಿಪ್ರಾಯ. ಕಳೆದ ಎರಡು ದಶಕಗಳಲ್ಲಿ ವಾರಣಾಸಿಯಲ್ಲಿ ಗಂಗಾನದಿಯ ನೀರಿನ ಪ್ರಮಾಣ 1.5 ಮೀಟರಿನಿಂದ 2 ಮೀಟರಿನವರೆಗೆ ಕಡಿಮೆಯಾಗಿದೆ ಎಂಬುದು ಬನಾರಸ್ ಹಿಂದೂ ವಿಶ್ವವಿದ್ಯಾಲಯದ ಗಂಗಾ ಸಂಶೋಧನಾ ಪ್ರಯೋಗಾಲಯದ ಪ್ರೊ. ಉದಯಕಾಂತ್ ಚೌಧರಿ ಹೇಳಿಕೆ.

2008: ಹಿಂದೂಗಳ ಪವಿತ್ರ ನಗರ ವಾರಣಾಸಿಯಲ್ಲಿ ಸದಾ ಮೈತುಂಬಿಕೊಂಡು ಜುಳುಜುಳು ಎಂದು ಹರಿಯುತ್ತಿದ್ದ ಗಂಗಾ ನದಿ ಈಗ ಬಡಕಲಾಗಿರುವುದು ಬೆಳಕಿಗೆ ಬಂತು. ಈ ವರ್ಷದ ಬೇಸಿಗೆಯಲ್ಲಿ ಹಿಂದೆಂದೂ ಕಡಿಮೆಯಾಗದಷ್ಟು ನೀರು ಕಡಿಮೆಯಾಗಿ ಮರಳ ದಂಡೆಗಳು ಎದ್ದು ಕಾಣಿಸತೊಡಗಿದವು. ನದಿಯಲ್ಲಿ ನೀರು ಕಡಿಮೆಯಾಗಲು ಅನೇಕ ಅಂಶಗಳು ಕಾರಣ ಎಂಬುದು ತಜ್ಞರು ಹಾಗೂ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಅಭಿಪ್ರಾಯ. ಕಳೆದ ಎರಡು ದಶಕಗಳಲ್ಲಿ ವಾರಣಾಸಿಯಲ್ಲಿ ಗಂಗಾನದಿಯ ನೀರಿನ ಪ್ರಮಾಣ 1.5 ಮೀಟರಿನಿಂದ 2 ಮೀಟರಿನವರೆಗೆ ಕಡಿಮೆಯಾಗಿದೆ ಎಂಬುದು ಬನಾರಸ್ ಹಿಂದೂ ವಿಶ್ವವಿದ್ಯಾಲಯದ ಗಂಗಾ ಸಂಶೋಧನಾ ಪ್ರಯೋಗಾಲಯದ ಪ್ರೊ. ಉದಯಕಾಂತ್ ಚೌಧರಿ ಹೇಳಿಕೆ. 1988ರಲ್ಲಿ 340ರಿಂದ 355 ಮೀಟರ್ ಅಗಲದಲ್ಲಿ ಹರಿಯುತ್ತಿದ್ದ ಗಂಗೆ ಈ ವರ್ಷ 250 ಮೀಟರಿಗೆ ಇಳಿದಳು. ಇದೊಂದು ಆತಂಕಕಾರಿ ಬೆಳವಣಿಗೆಯಾದ್ದರಿಂದ ಸಾರ್ವಜನಿಕರು ಮತ್ತು ಸರ್ಕಾರ ಪವಿತ್ರವಾದ ಗಂಗಾ ನದಿಯನ್ನು ಉಳಿಸಿಕೊಳ್ಳಲು ಶೀಘ್ರ ಕ್ರಮ ತೆಗೆದುಕೊಳ್ಳಬೇಕು ಎಂಬುದು ಚೌಧರಿ ಸಲಹೆ. 1988ರಲ್ಲಿ ವಾರಣಾಸಿಯಲ್ಲಿ ಗಂಗಾ ನದಿಯಲ್ಲಿ ಎಂಟು ಸಾವಿರದಿಂದ ಒಂಭತ್ತು ಸಾವಿರ ಕ್ಯೂಸೆಕ್ ನೀರು ಹರಿಯುತ್ತಿತ್ತು. ಈಗ ಈ ಪ್ರಮಾಣ ಐದರಿಂದ ಆರು ಸಾವಿರಕ್ಕೆ ಇಳಿದಿದೆ. ಒಳಚರಂಡಿ ಮತ್ತು ಕೈಗಾರಿಕಾ ತ್ಯಾಜ್ಯಗಳು ಗಂಗಾ ನದಿಗೆ ಸೇರುತ್ತಿರುವುದರಿಂದ ನೀರಿನ ಮಾಲಿನ್ಯ ಪ್ರಮಾಣವೂ ಹೆಚ್ಚಳವಾಗಿದೆ. ತೆಹರಿ ಅಣೆಕಟ್ಟು ಸೇರಿದಂತೆ ಅನೇಕ ಅಣೆಕಟ್ಟುಗಳ ನಿರ್ಮಾಣ, ನೀರಾವರಿ ಕಾಲುವೆಗಳ ನಿರ್ಮಾಣದಿಂದಾಗಿ ಗಂಗಾ ನದಿಯಲ್ಲಿ ನೀರಿನ ಪ್ರಮಾಣ ಕಡಿಮೆಯಾಗಿದೆ ಹಾಗೂ ವಾರಣಾಸಿಯಲ್ಲಿ ಅಂತರ್ಜಲ ಮಟ್ಟವೂ ಗಣನೀಯವಾಗಿ ಕುಸಿದಿದೆ ಎಂಬುದು ತಜ್ಞರ ಅಭಿಪ್ರಾಯ.

2008: ಪಕ್ಷೇತರ ಶಾಸಕರ ಒಲವು ಸಂಪಾದಿಸುವ ಪ್ರಯತ್ನದಲ್ಲಿ ಸಫಲವಾದ ಭಾರತೀಯ ಜನತಾ ಪಕ್ಷವು, ನೂತನ ಸರ್ಕಾರ ರಚನೆಗೆ ಈದಿನ ರಾತ್ರಿ ರಾಜ್ಯಪಾಲರ ಮುಂದೆ ಹಕ್ಕು ಮಂಡಿಸಿತು. ಮುಖ್ಯಮಂತ್ರಿ ಅಭ್ಯರ್ಥಿ ಬಿ.ಎಸ್.ಯಡಿಯೂರಪ್ಪ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಾದ ಅರುಣ್ ಜೇಟ್ಲಿ, ಅನಂತಕುಮಾರ್, ಜಗದೀಶ್ ಶೆಟ್ಟರ್, ಶ್ರೀರಾಮುಲು ಮೊದಲಾದವರು ರಾಜ್ಯಪಾಲ ರಾಮೇಶ್ವರ ಠಾಕೂರ್ ಅವರನ್ನು ಭೇಟಿ ಮಾಡಿ 115 ಶಾಸಕರ ಪಟ್ಟಿಯನ್ನು ಸಲ್ಲಿಸಿ, ಸರ್ಕಾರ ರಚಿಸಲು ಆಹ್ವಾನ ನೀಡುವಂತೆ ಮನವಿ ಮಾಡಿದರು. ಪಕ್ಷೇತರ ಶಾಸಕರಾದ ನರೇಂದ್ರಸ್ವಾಮಿ, ಶಿವರಾಜ್ ತಂಗಡಗಿ, ಗೂಳಿಹಟ್ಟಿ ಶೇಖರ್, ವೆಂಕಟರವಣಪ್ಪ, ಡಿ.ಸುಧಾಕರ್ ಅವರು ರಾಜ್ಯಪಾಲರ ಮುಂದೆ ಹಾಜರಾಗಿ ಬಿಜೆಪಿಗೆ ಬೆಂಬಲ ಘೋಷಿಸಿದರು. ಇದರೊಂದಿಗೆ ಬಹುಮತಕ್ಕೆ ಬೇಕಾದ ಸಂಖ್ಯೆಗಿಂತ (113) ಎರಡು ಹೆಚ್ಚು ಸ್ಥಾನಗಳನ್ನು ಬಿಜೆಪಿ ಹೊಂದಿದಂತಾಯಿತು.

2008: ಅಮೆರಿಕದ ಪುಟ್ಟ ಬಾಹ್ಯಾಕಾಶ ನೌಕೆ `ಫೀನಿಕ್ಸ್' ಮಂಗಳ ಗ್ರಹವನ್ನು ತಲುಪಿ, ಉತ್ತರ ಧ್ರುವದಲ್ಲಿ ಇಳಿದ ಎರಡೇ ತಾಸುಗಳಲ್ಲಿ ಅಲ್ಲಿನ ಮಂಜುಗಟ್ಟಿದ ಪರಿಸರದ ಚಿತ್ರಗಳನ್ನು ಕಳುಹಿಸಿತು. ಮೂರು ತಿಂಗಳ ಕಾಲ ಮಂಗಳ ಗ್ರಹದಲ್ಲಿ ಇರಲಿರುವ `ಫೀನಿಕ್ಸ್' ನೌಕೆ, ಅಲ್ಲಿ ನೀರಿನ ಲಭ್ಯತೆ ಮತ್ತು ಜೀವೋತ್ಪತಿಗೆ ಕಾರಣವಾಗುವ ಅಂಶಗಳ ಬಗ್ಗೆ ಹುಡುಕಾಟ ನಡೆಸುವುದು. ಕಳೆದ 10 ತಿಂಗಳ ಅವಧಿಯಲ್ಲಿ 423 ದಶಲಕ್ಷ ಮೈಲು ದೂರ ಕ್ರಮಿಸಿದ ಬಳಿಕ ಈ ನೌಕೆ ಹಿಂದಿನ ದಿನ ರಾತ್ರಿ ಮಂಗಳ ಗ್ರಹವನ್ನು ತಲುಪಿದ್ದು ಅದು ಈಗ ಕಳುಹಿಸಿದ ಚಿತ್ರಗಳಿಂದ ದೃಢಪಟ್ಟದ್ದು ನಾಸಾ ವಿಜ್ಞಾನಿಗಳಿಗೆ ಸಂತಸ ತಂದಿತು. ಸೌರ ಶಕ್ತಿಯನ್ನು ಬಳಸಿ ಮಂಗಳನ ಅಂಗಳಕ್ಕೆ ಇಳಿಯುವ ನೌಕೆಯನ್ನು ನಾಲ್ಕು ವರ್ಷಗಳಲ್ಲಿ ಅಭಿವೃದ್ಧಿಪಡಿಸಿದ ಭಾರತ ಮೂಲದ ಎಂಜಿನಿಯರ್ ಪ್ರಸನ್ನ ದೇಸಾಯಿ, `ಎಲ್ಲವೂ ಅದ್ಭುತವಾಗಿ ನಡೆಯುತ್ತಿದೆ` ಎಂದರು. ಮಂಗಳನ ಅಂಗಳದಲ್ಲಿ ನೌಕೆಯನ್ನು ಇಳಿಸುವುದು ಸವಾಲಿನ ಕಾರ್ಯವಾಗಿತ್ತು. ಗಂಟೆಗೆ 12 ಸಾವಿರ ಮೈಲು ವೇಗದಲ್ಲಿ ಸಂಚರಿಸುತ್ತಿದ್ದ `ಫೀನಿಕ್ಸ್'ನ್ನು ಮೆತ್ತನೆಯ ಹಾಸಿಗೆಯ ಮೇಲೆ ಬೀಳಿಸುವ ಬದಲು ಮೂರು ಕಾಲುಗಳ ಮೇಲೆಯೇ ನಿಲ್ಲಿಸುವ ತಂತ್ರ ಹೆಣೆಯಲಾಗಿತ್ತು. ಮಂಗಳನ ವಾತಾವರಣವನ್ನು ನೌಕೆ ಪ್ರವೇಶಿಸುತ್ತಿದ್ದಂತೆಯೇ ನೌಕೆಯ ಪ್ಯಾರಾಚೂಟ್ ಬಿಚ್ಚಿಕೊಂಡು ಅದರ ವೇಗವನ್ನು ತಗ್ಗಿಸಿತು. ನೌಕೆಯ ಉಷ್ಣ ತಡೆ ಗುರಾಣಿಯೂ ಚಾಚಿಕೊಂಡಿತು. ಜೆಟ್ ರಾಕೆಟ್ ಎಂಜಿನ್ ಉರಿಸಿ ವೇಗವನ್ನು ಕಡಿತಗೊಳಿಸಲಾಯಿತು. ಕೊನೆಗೆ ಮಂಗಳನ ಅಂಗಳಕ್ಕೆ ಇಳಿಯುವ ಹೊತ್ತಿಗೆ `ಫೀನಿಕ್ಸ್'ನ ವೇಗ ಗಂಟೆಗೆ 5 ಮೈಲುಗಳಿಗೆ ಇಳಿಯಿತು. ನೌಕೆ ನೆಲದಲ್ಲಿ ತಳ ಊರುತ್ತಿದ್ದಂತೆಯೇ ದೂಳು ಎದ್ದಿತು. ವಿಜ್ಞಾನಿಗಳ ಪಾಲಿಗೆ ಇದು `ಏಳು ನಿಮಿಷಗಳ ಆತಂಕದ ಕ್ಷಣ'ವಾಗಿತ್ತು. ದೂಳು ಚದುರಿದ ತತ್ ಕ್ಷಣ ನೌಕೆ ತನ್ನ ಸೌರ ಫಲಕವನ್ನು ಬಿಚ್ಚಿಕೊಂಡಿತು. ಕಳೆದ ವರ್ಷ ಆಗಸ್ಟ್ 4ರಂದು `ಫೀನಿಕ್ಸ್'ನ್ನು ಉಡಾಯಿಸಲಾಗಿತ್ತು. 420 ದಶಲಕ್ಷ ಡಾಲರ್ ವೆಚ್ಚದಲ್ಲಿ ಲಾಕ್ ಹೀಡ್ ಮಾರ್ಟಿನ್ ಕಂಪೆನಿಯು ಈ ನೌಕೆಯನ್ನು ನಿರ್ಮಿಸಿತ್ತು. ಮಂಗಳನ ಅಂಗಳಕ್ಕೆ ಇಳಿದು ಸಂಶೋಧನೆ ನಡೆಸುವ ಈ ಮೊದಲಿನ ಹಲವು ಯತ್ನಗಳು ವಿಫಲವಾಗಿದ್ದವು.

2008: ಮಣಿಪುರದ ಕೇಂದ್ರ ಸ್ಥಳ ರಾಜಧಾನಿ ಇಂಫಾಲದ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ(ರಿಮ್ಷ್) ಉಗ್ರರು ಶಕ್ತಿಶಾಲಿ ಬಾಂಬ್ ಸ್ಫೋಟಿಸಿದರು.

2008: 66 ಜನರನ್ನು ಬಲಿ ತೆಗೆದುಕೊಂಡಿದ್ದ ಜೈಪುರ ಸರಣಿ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಭರತ್ ಪುರ ಜಾಮಾ ಮಸೀದಿಯ ಇಮಾಮ್ ಮೊಹಮ್ಮದ್ ಇಲಯಾಸ್ ಅವರನ್ನು ವಿಚಾರಣೆಗೆ ಒಳಪಡಿಸಲಾಯಿತು.

2008: ವಿವಿಧ ರಾಜ್ಯಗಳಲ್ಲಿ ಲೋಕಸಭೆ ಹಾಗೂ ವಿಧಾನಸಭೆಗೆ ನಡೆದ ಉಪಚುನಾವಣೆಯಲ್ಲಿ ಬಹುತೇಕ ಆ ಕ್ಷೇತ್ರವನ್ನು ಪ್ರತಿನಿಧಿಸಿದ್ದ ರಾಜಕೀಯ ಪಕ್ಷಗಳ ಅಭ್ಯರ್ಥಿಗಳೇ ಗೆಲುವು ಸಾಧಿಸಿದರು. ಕಾಂಗ್ರೆಸ್ ಪಕ್ಷ ನೆಲ ಕಚ್ಚಿತು. ಥಾಣೆ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಶಿವಸೇನೆ ಜಯಭೇರಿ ಭಾರಿಸಿತು. ಹಿಮಾಚಲ ಪ್ರದೇಶದ ಹಮಿರ್ ಪುರ್ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಅಲ್ಲಿನ ಮುಖ್ಯಮಂತ್ರಿ ಪ್ರೇಮ್ ಕುಮಾರ್ ಧುಮಾಲ್ ಅವರ ಪುತ್ರ ಅನುರಾಗ್ ಠಾಕೂರ್, ಮೇಘಾಲಯದ ಟುರಾ ಲೋಕಸಭಾ ಕ್ಷೇತ್ರದಲ್ಲಿ ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್ ಸಿ ಪಿ) ಅಭ್ಯರ್ಥಿ ಲೋಕಸಭೆಯ ಮಾಜಿ ಸ್ಪೀಕರ್ ಪಿ.ಎ. ಸಂಗ್ಮಾ ಅವರ ಪುತ್ರಿ ಅಗಾಥಾ ಸಂಗ್ಮಾ, ಹರಿಯಾಣದ ಗೊಹಾನಾ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ಸಿನ ಜಗಬೀರ್ ಸಿಂಗ್ ಮಲಿಕ್, ಆದಂಪುರ ಕ್ಷೇತ್ರದಲ್ಲಿ ಹರಿಯಾಣ ಜನಹಿತ ಕಾಂಗ್ರೆಸ್ ಅಭ್ಯರ್ಥಿ ಮಾಜಿ ಮುಖ್ಯಮಂತ್ರಿ ಭಜನ್ ಲಾಲ್, ಅಮೃತಸರ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಶಿರೋಮಣಿ ಅಕಾಲಿ ದಳ- ಬಿಜೆಪಿ ಅಭ್ಯರ್ಥಿ ಇಂದೇರ್ಬಿರ್ ಸಿಂಗ್ ಬೊಲಾರಿಯಾ ಜಯಗಳಿಸಿದರು.

2008: ಚಂಡಮಾರುತದಿಂದ ತತ್ತರಿಸಿದ ಮ್ಯಾನ್ಮಾರಿನ ಜನರು ಸೇನೆ ರೂಪಿಸಿರುವ ನೂತನ ಸಂವಿಧಾನವನ್ನು ಸ್ವಾಗತಿಸಿದ್ದು, ಜನಮತಗಣನೆಯಲ್ಲಿ ಶೇ 93 ಮಂದಿ ಇದಕ್ಕೆ ಸಮ್ಮತಿ ಸೂಚಿಸಿದ್ದಾರೆ ಎಂದು ಸರ್ಕಾರಿ ಮಾಧ್ಯಮ ವರದಿ ಮಾಡಿತು. ನರ್ಗಿಸ್ ಚಂಡಮಾರುತದಿಂದ ತತ್ತರಿಸಿದ ಪ್ರದೇಶದಲ್ಲಿ ಜನಮತಗಣೆ ನಡೆದಿತ್ತು.

2008: ಪತ್ರಿಕೋದ್ಯಮ, ಕಲೆ, ಶಿಕ್ಷಣ ಹಾಗೂ ಹಣಕಾಸು ಕ್ಷೇತ್ರದಲ್ಲಿ ಸಾಧನೆ ಮಾಡಿದ ಭಾರತೀಯ ಮೂಲದ ಮಹಿಳೆಯರಿಗೆ ಈ ಸಾಲಿನ `ಏಷ್ಯನ್ ವುಮೆನ್ ಆಫ್ ಅಚೀವ್ಮೆಂಟ್' ಪ್ರಶಸ್ತಿ ನೀಡಿ ಗೌರವಿಸಲಾಯಿತು. ಹಿಲ್ಟನ್ನಿನಲ್ಲಿ ನಡೆದ 9 ನೇ ವಾರ್ಷಿಕ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಐಟಿಎನ್ ಸುದ್ದಿ ಸಂಪಾದಕಿ ಆರತಿ ಲುಖಾ, ನೃತ್ಯ ನಿರ್ದೇಶಕಿ ಶೋಭನಾ ಜಯಸಿಂಗ್ ಹಾಗೂ ವೆಸ್ಟ್ ನಟ್ಟಿಂಗ್ ಹ್ಯಾಮ್ ಶೈರ್ ಕಾಲೇಜಿನ ಆಶಾ ಖೇಮ್ಕಾ ಮತ್ತು ಬಾಲಾ ಠಾಕ್ರಾರ್ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು. ಅಂತಾರಾಷ್ಟ್ರೀಯ ಹಾಗೂ ಸಮುದಾಯ ಮಟ್ಟದ ಅನೇಕ ಕಾರ್ಯಕ್ರಮಗಳಲ್ಲಿ ಕೆಲಸ ಮಾಡಿದ ಭಾರತೀಯ ಮೂಲದ ಸ್ವಯಂಸೇವಕ ಗೋಪಾಲ್ ದಾಸ್ ಪೋಪಟ್ (85) ಅವರಿಗೆ ಅಂತಾರಾಷ್ಟ್ರೀಯ ಸ್ವಯಂಸೇವಕ ಪ್ರಶಸ್ತಿ ನೀಡಿ ಗೌರವಿಸಲಾಯಿತು.

2008: ಬಹ್ರೇನ್ ಏರ್ ಸಂಸ್ಥೆಯು ಕೊಚ್ಚಿಗೆ ನೇರ ವಿಮಾನಯಾನ ಸೇವೆ ಆರಂಭಿಸಿತು.

2008: ಇರಾಕ್ ಫುಟ್ಬಾಲ್ ತಂಡ ಒಂದು ವರ್ಷದ ಅವಧಿಗೆ ಯಾವುದೇ ರೀತಿಯ ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಪಾಲ್ಗೊಳ್ಳುವುದರ ಮೇಲೆ ಫಿಫಾ ನಿಷೇಧ ಹೇರಿತು.
ಇರಾಕ್ ತಂಡವನ್ನು 12 ತಿಂಗಳುಗಳ ಅವಧಿಗೆ ಅಮಾನತು ಮಾಡಿರುವ ನಿರ್ಧಾರವನ್ನು ಫಿಫಾ ಆಡಳಿತ ಮಂಡಳಿ ಈದಿನ ಪ್ರಕಟಿಸಿತು.

2008: ಕೊಯಮತ್ತೂರಿನ ಉದುಮಲ್ಪೇಟೆ ಸಮೀಪದ ತಿರುಮೂರ್ತಿ ಅಣೆಕಟ್ಟಿನ ಪಂಚಲಿಂಗ ಜಲಪಾತದ ಕ್ಷಿಪ್ರ ಪ್ರವಾಹಕ್ಕೆ ಸಿಲುಕಿ 13 ಮಂದಿ ಪ್ರವಾಸಿಗರು ಅಸು ನೀಗಿದ ಘಟನೆ ಹಿಂದಿನ ದಿನ ನಡೆಯಿತು. ಕೇರಳದ ಮರೈಯೂರಿನಲ್ಲಿ ಬಿದ್ದ ಭಾರಿ ಮಳೆಯೇ ಈ ಪ್ರವಾಹಕ್ಕೆ ಕಾರಣ ಎಂದು ಪೊಲೀಸರು ತಿಳಿಸಿದರು.

2008: ಚನ್ನರಾಯಪಟ್ಟಣ ತಾಲ್ಲೂಕಿನ ಗಡಿಭಾಗದಲ್ಲಿರುವ ಇತಿಹಾಸ ಪ್ರಸಿದ್ಧ ಗಿರಿಕ್ಷೇತ್ರದಲ್ಲಿ 18 ಲಕ್ಷ ರೂ. ವೆಚ್ಚದಲ್ಲಿ ಜೀರ್ಣೋದ್ಧಾರಗೊಂಡ ಶ್ರೀ ಲಕ್ಷ್ಮಿವೆಂಕಟೇಶ್ವರ ಸ್ವಾಮಿ ದೇಗುಲದ ಉದ್ಘಾಟನೆ ವಿಜೃಂಭಣೆಯಿಂದ ನೆರವೇರಿತು.

2007: ಕೇಂದ್ರದ ಮಾಜಿ ಸಚಿವ, ರಾಷ್ಟ್ರೀಯ ನ್ಯಾಯಮಂಡಳಿಯ ಅಧ್ಯಕ್ಷ ಚಂದ್ರಜಿತ್ ಯಾದವ್ ನವದೆಹಲಿಯಲ್ಲಿ ನಿಧನರಾದರು. ಅವರು ಇಂದಿರಾಗಾಂಧಿ ಸಂಪುಟದಲ್ಲಿ ಉಕ್ಕು ಮತ್ತು ಗಣಿ ಸಚಿವರಾಗಿ ಕಾರ್ಯ ನಿರ್ವಹಿಸಿದ್ದರು.

2007: ರಾಷ್ಟ್ರದ ಭದ್ರತಾ ಸಮಸ್ಯೆಗಳನ್ನು ಸಮರ್ಥವಾಗಿ ನಿಭಾಯಿಸುವ ಸಲುವಾಗಿ ಕೇಂದ್ರ ಸರ್ಕಾರವು ವಿವಿಧೋದ್ದೇಶ ರಾಷ್ಟ್ರೀಯ ಗುರುತು ಚೀಟಿ ಯೋಜನೆಗೆ ಚಾಲನೆ ನೀಡಿತು. ರಾಜಧಾನಿಯ ನರೇಲಾದಲ್ಲಿ ಭಾರತದ ರಿಜಿಸ್ಟ್ರಾರ್ ಜನರಲ್ ದೇವೇಂದರ್ ಕುಮಾರ್ ಸಿಕ್ರಿ ಅವರು ವಾಯವ್ಯ ದೆಹಲಿಯ ನರೇಲಾದ ಮಹಿಳೆಯೊಬ್ಬರಿಗೆ ಮೊತ್ತ ಮೊದಲ ರಾಷ್ಟ್ರೀಯ ಗುರುತು ಚೀಟಿ ವಿತರಿಸಿದರು.

2007: ಪಕ್ಷದ ನಿಯಮ ಉಲ್ಲಂಘಿಸಿ ಪರಸ್ಪರ ಆರೋಪ- ಪ್ರತ್ಯಾರೋಪದಲ್ಲಿ ತೊಡಗಿದ್ದ ಕೇರಳದ ಮುಖ್ಯಮಂತ್ರಿ ವಿ.ಎಸ್. ಅಚ್ಯುತಾನಂದನ್ ಮತ್ತು ಸಿಪಿ ಎಂ ರಾಜ್ಯ ಕಾರ್ಯದರ್ಶಿ ಪಿನರಾಯಿ ವಿಜಯನ್ ಅವರನ್ನು ಸಿಪಿಎಂನ ಉನ್ನತ ನೀತಿ ನಿರೂಪಕ ಸಮಿತಿಯಾದ ಪಾಲಿಟ್ ಬ್ಯೂರೋದಿಂದ ಅಮಾನತುಗೊಳಿಸಲಾಯಿತು.

2007: ಭಾರತೀಯ ಕ್ರಿಕೆಟ್ ತಂಡದ ಅಗ್ರಶ್ರೇಯಾಂಕದ ನಾಲ್ವರು ಆಟಗಾರರು ಢಾಕಾದ ಮೀರ್ ಪುರ ಬೆಂಗಾಲ್ ಜೈತಿಯಾ ಕ್ರೀಡಾಂಗಣದಲ್ಲಿ ಮೊತ್ತ ಮೊದಲ ಬಾರಿಗೆ ಶತಕ ಗಳಿಸುವುದರೊಂದಿಗೆ ವಿಶ್ವದಾಖಲೆ ನಿರ್ಮಿಸಿದರು. ವಾಸಿಂ ಜಾಫರ್ (ಗಾಯಗೊಂಡು ನಿವೃತ್ತಿ 138), ದಿನೇಶ್ ಕಾರ್ತಿಕ್ (129), ರಾಹುಲ್ ದ್ರಾವಿಡ್ (129) ಹಾಗೂ ಸಚಿನ್ ತೆಂಡೂಲ್ಕರ್ (ಔಟಾಗದೇ 122) ಅವರು ಇತಿಹಾಸ ನಿರ್ಮಿಸಿದ ಆಟಗಾರರು.

2007: ಜರ್ಮನಿಯಿಂದ ಅಟ್ಲಾಂಟಾಕ್ಕೆ ಹೊರಟಿದ್ದ ಡೆಲ್ಟಾ ಏರ್ ಲೈನ್ಸ್ ವಿಮಾನದಲ್ಲಿ ಡಾ. ರಾಬರ್ಟ್ ವಿನ್ಸೆಂಟ್ ಮತ್ತು ಡಾ. ಡಿಯೇಟರ್ ಕೆ. ಗುಣ್ ಕಲ್ ಅವರು ಹಾರುತ್ತಿದ್ದ ವಿಮಾನದಲ್ಲೇ ಮಹಿಳೆಯೊಬ್ಬರಿಗೆ ಹೆರಿಗೆ ನೋವು ಕಾಣಿಸಿಕೊಂಡಾಗ ಸೂಕ್ತ ವೈದ್ಯೋಪಚಾರ ಮಾಡಿ ಹೆರಿಗೆ ಮಾಡಿಸಿದರು. ಹುಟ್ಟಿದ ಗಂಡು ಮಗು ಉಸಿರಾಡದೇ ಇದ್ದಾಗ ಬಾಯಿಯ ಮೂಲಕ ಉಸಿರೆಳೆದು ಕೃತಕ ಉಸಿರಾಟ ನಡೆಸಿ ಮಗುವನ್ನು ಬದುಕಿಸಿದರು.

2006: ರಷ್ಯದ ಸೆವೆರ್ ಸ್ಟಾಲ್ ಉಕ್ಕು ಕಂಪೆನಿಯನ್ನು ಖರೀದಿಸಲು ಆರ್ಸೆಲರ್ ಸಂಸ್ಥೆ ನಿರ್ಧರಿಸಿತು. ಇದರಿಂದ ಆರ್ಸೆಲರ್ ಸಂಸ್ಥೆಯನ್ನು ಖರೀದಿಸುವ ಮಿತ್ತಲ್ ಉಕ್ಕು ಸಂಸ್ಥೆಯ ಯತ್ನಕ್ಕೆ ಅಡ್ಡಗಾಲು ಬಿದ್ದಂತಾಯಿತು.

2006: ಮಾವೋವಾದಿ ಹಿಂಸಾಚಾರವನ್ನು ಕೊನೆಗಾಣಿಸಲು ಮುಂದಡಿ ಇಟ್ಟ ನೇಪಾಳ ಸರ್ಕಾರವು ಶಾಂತಿ ಮಾತುಕತೆ ಆರಂಭಿಸುವ ದ್ಯೋತಕವಾಗಿ 467 ಮಾವೋವಾದಿ ಉಗ್ರಗಾಮಿಗಳನ್ನು ಬಿಡುಗಡೆ ಮಾಡಿತು.

2002: `ಒಡಿಸ್ಸಿ' ಹೆಸರಿನ ನೌಕೆಯು ಮಂಗಳ ಗ್ರಹದಲ್ಲಿ ಹೆಪ್ಪುಗಟ್ಟಿದ ನೀರಿನ ನಿಕ್ಷೇಪವನ್ನು ಪತ್ತೆ ಮಾಡಿತು.

1999: ಬಟಾಲಿಕ್ನಿಂದ ಲಡಾಖ್ ನ ಡ್ರಾಸ್ ವರೆಗಿನ ಗಡಿ ನಿಯಂತ್ರಣ ರೇಖೆಯನ್ನು ಅತಿಕ್ರಮಿಸಿದ್ದ ಪಾಕಿಸ್ಥಾನಿ ಬೆಂಬಲಿತ ಉಗ್ರಗಾಮಿಗಳ ವಿರುದ್ಧ ಭಾರತ `ಆಪರೇಷನ್ ವಿಜಯ್' ಆರಂಭಿಸಿತು. ಅತಿಕ್ರಮಿಗಳನ್ನು ತೆರವುಗೊಳಿಸುವ ಈ ಕಾರ್ಯಾಚರಣೆ ಯಶಸ್ವಿಯಾಯಿತು ಎಂದು ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಜುಲೈ 14ರಂದು ಘೋಷಿಸಿದರು.

1976: ಕಲಾವಿದ ವೇಣುಗೋಪಾಲ್ ವಿ.ಜಿ. ಜನನ.

1972: ಯುದ್ಧ ಕ್ಷಿಪಣಿಗಳನ್ನು ನಿಯಂತ್ರಿಸುವ `ಆಯಕಟ್ಟಿನ ಶಸ್ತ್ರಾಸ್ತ್ರ ಮಿತಿ ಒಪ್ಪಂದ'ಕ್ಕೆ (ಸಾಲ್ಟ್ 1) ಅಮೆರಿಕ ಮತ್ತು ಯುಎಸ್ಸೆಸ್ಸಾರ್ ಸಹಿ ಹಾಕಿದವು.

1966: ಬ್ರಿಟಿಷ್ ಗಯಾನಾಕ್ಕೆ ಸ್ವಾತಂತ್ರ್ಯ ಸಿಕ್ಕಿತು. ಅದು ಈ ದಿನದಿಂದ `ಗಯಾನಾ' ಅಷ್ಟೆ.

1951: ಅಮೆರಿಕದ ಮಹಿಳಾ ಗಗನಯಾನಿ ಸ್ಯಾಲ್ಲಿ ರೈಡ್ ಜನ್ಮದಿನ. ಈಕೆ 1983ರಲ್ಲಿ ಬಾಹ್ಯಾಕಾಶ ಷಟ್ಲ್ ನೌಕೆ ಚಾಲೆಂಜರ್ ಮೂಲಕ ಭೂಮಿಗೆ ಪ್ರದಕ್ಷಿಣೆ ಹಾಕಿದ ಮೊತ್ತ ಮೊದಲ ಮಹಿಳೆ.

1948: ಜಾನಪದ ಕಲಾವಿದರ ಕುಟುಂಬದಿಂದ ಬಂದ ಕಲಾವಿದ ಗುರುರಾಜ ಹೊಸಕೋಟೆ ಅವರು ರುದ್ರಪ್ಪ ಹೊಸಕೋಟೆ ಹಾಗೂ ಹಾಡುಗಾರ್ತಿ ಗೌರಮ್ಮ ದಂಪತಿಯ ಮಗನಾಗಿ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲ್ಲೂಕಿನ ಮಹಾಲಿಂಗಪುರದಲ್ಲಿ ಜನಿಸಿದರು.

1940: ಕಲಾವಿದ ಚನ್ನವೀರೇಶ ಸಂಪಗಿ ಜನನ.

1926: ಉಜ್ವಲ ರಾಷ್ಟ್ರಪ್ರೇಮಿ, ಚಿಂತಕ, ಬಹುಭಾಷಾ ಕೋವಿದ ಖ್ಯಾತ ಲೇಖಕ ಹೊ.ವೆ. ಶೇಷಾದ್ರಿ (26-5-1926ರಿಂದ 14-8-2005) ಅವರು ಹೊಂಗಸಂದ್ರದಲ್ಲಿ ವೆಂಕಟರಾಮಯ್ಯ- ಪಾರ್ವತಮ್ಮ ದಂಪತಿಯ ಪುತ್ರನಾಗಿ ಈ ದಿನ ಜನಿಸಿದರು. ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಧಾನ ಕಾರ್ಯದರ್ಶಿ 9 ವರ್ಷ ಸೇವೆ ಸಲ್ಲಿಸಿದ ಇವರ ಲೇಖನಿಯಿಂದ ಬಂದ ಗ್ರಂಥಗಳು ಅಸಂಖ್ಯಾತ. ಇವರ ಲಲಿತ ಪ್ರಬಂಧಗಳ ಸಂಕಲನ ತೋರ್ ಬೆರಳುಗೆ 1982ರಲ್ಲಿ ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ನೀಡಿ ಗೌರವಿಸಿತು.

(ಸಂಗ್ರಹ: ನೆತ್ರಕೆರೆ ಉದಯಶಂಕರ)

Monday, May 25, 2009

ಇಂದಿನ ಇತಿಹಾಸ History Today ಮೇ 25

ಇಂದಿನ ಇತಿಹಾಸ

ಮೇ 25

ಕನೆಕ್ಟಿಕಟ್ಟಿನ ಸರ್ಜನ್ ಅರುವತ್ತನಾಲ್ಕು ವರ್ಷದ ಶೆರ್ಮನ್ ಬುಲ್ ಅವರು ಎವರೆಸ್ಟ್ ಶಿಖರವನ್ನು ಏರುವ ಮೂಲಕ ಜಗತ್ತಿನ ಅತ್ಯುನ್ನತ ಶಿಖರವನ್ನು ಏರಿದ ಅತ್ಯಂತ ಹಿರಿಯ ವ್ಯಕ್ತಿ ಎಂಬ ಹೆಗ್ಗಳಿಕೆ ಗಳಿಸಿಕೊಂಡರು.

2008: ದಕ್ಷಿಣ ಭಾರತದಲ್ಲಿ ಪ್ರಪ್ರಥಮ ಬಾರಿಗೆ ಸ್ವಂತ ಬಲದಿಂದ ಅಧಿಕಾರಕ್ಕೆ ಬರುವ ಭಾರತೀಯ ಜನತಾ ಪಕ್ಷದ ಕನಸು ನನಸಾಗುವ ಕಾಲ ಸನ್ನಿಹಿತವಾಯಿತು. ಆದರೆ ಸರ್ಕಾರ ರಚಿಸಲು ಮೂರು ಸ್ಥಾನಗಳ ಕೊರತೆ ಬಿಜೆಪಿಯನ್ನು ಕಾಡಿತು. ಮೂರು ಹಂತದಲ್ಲಿ ನಡೆದ ಮತದಾನದ ಫಲಿತಾಂಶ ಪ್ರಕಟಗೊಂಡು, ಒಟ್ಟು 224 ವಿಧಾನಸಭಾ ಕ್ಷೇತ್ರಗಳ ಪೈಕಿ ಬಿಜೆಪಿ 110, ಕಾಂಗ್ರೆಸ್ 80 ಮತ್ತು ಜನತಾದಳ (ಎಸ್) 28 ಸ್ಥಾನಗಳಲ್ಲಿ ಜಯಗಳಿಸಿದವು. ಕಾಂಗ್ರೆಸ್ಸಿನಿಂದ ಬಂಡೆದ್ದು ಸ್ಪರ್ಧಿಸಿದ್ದ ನಾಲ್ವರು ಹಾಗೂ ಬಿಜೆಪಿ ಮತ್ತು ಜೆಡಿಎಸ್ನ ತಲಾ ಒಬ್ಬೊಬ್ಬರು ಬಂಡಾಯ ಅಭ್ಯರ್ಥಿಗಳು ಗೆದ್ದರು. ಒಟ್ಟಾರೆ  ಮೂವರು ಮಹಿಳೆಯರಿಗೆ ಮಾತ್ರ ವಿಧಾನಸಭೆ ಪ್ರವೇಶಿಸಲು ಸಾಧ್ಯವಾಯಿತು. ಅತಂತ್ರ ವಿಧಾನಸಭೆಯಿಂದಾಗಿ ಕಳೆದ ನಾಲ್ಕು ವರ್ಷಗಳ ರಾಜಕೀಯ ಪ್ರಹಸನಗಳಿಂದ ರೋಸಿಹೋದಂತೆ ಕಂಡು ಬಂದ ರಾಜ್ಯದ ಮತದಾರರು ಹೆಚ್ಚು ಕಡಿಮೆ ಒಂದು ಪಕ್ಷಕ್ಕೆ ಬಹುಮತ ನೀಡುವ ಇಂಗಿತ ವ್ಯಕ್ತಪಡಿಸಿದರು.

2008: ಚಿತ್ತಾಪುರ ಕ್ಷೇತ್ರದಿಂದ ಕರ್ನಾಟಕ ವಿಧಾನಸಭೆಗೆ ಆಯ್ಕೆಯಾಗುವ ಮೂಲಕ ಮಲ್ಲಿಕಾರ್ಜುನ  ಖರ್ಗೆ ಅವರು ಸತತ 9ನೇ ಸಲ ವಿಧಾನಸಭೆ ಪ್ರವೇಶಿಸಿ ವಿಶ್ವದಾಖಲೆ ಮಾಡಿದರು. ಜೇವರ್ಗಿಯಲ್ಲಿ ಸೋಲುವ ಮೂಲಕ ಧರ್ಮಸಿಂಗ್ ಅವರು ಸತತ 9ನೇ ಬಾರಿ ಆಯ್ಕೆಯಾಗಿ ವಿಶ್ವ ದಾಖಲೆ ಮಾಡುವ ಅವಕಾಶದಿಂದ ವಂಚಿತರಾದರು. 

2008: ಚೀನಾದಲ್ಲಿ ಭೂಕಂಪದ ಅವಶೇಷಗಳಡಿ ಹೂತುಹೋಗಿದ್ದ 80 ವರ್ಷದ ಕ್ಷತಾ ಝೀಹು ಎಂಬ ಪಾರ್ಶ್ವವಾಯು ಪೀಡಿತ ವ್ಯಕ್ತಿಯನ್ನು 11 ದಿನಗಳ ಬಳಿಕ ಜೀವಂತವಾಗಿಯೇ ಹೊರ ತೆಗೆಯಲಾಯಿತು ಎಂದು ಸರ್ಕಾರಿ ಸುದ್ದಿ ವಾಹಿನಿ ಪ್ರಸಾರ ಮಾಡಿತು. ಈತ ಭೂಕಂಪದಲ್ಲಿ ಕುಸಿದುಬಿದ್ದ ತನ್ನ ಮನೆಗಳ ಅವಶೇಷಗಳ ಅಡಿಯಲ್ಲಿ ಸಿಕ್ಕಿಕೊಂಡಿದ್ದ.

2008: ನ್ಯೂಯಾರ್ಕಿನ `ಫೋಬ್ಸರ್್' ಪತ್ರಿಕೆ ಪ್ರಕಟಿಸಿದ ಮಲೇಷ್ಯಾದ 40 ಮಂದಿ ಶ್ರೀಮಂತರ ಪಟ್ಟಿಯಲ್ಲಿ ಭಾರತೀಯ ಮೂಲದ ಆನಂದ ಕೃಷ್ಣನ್ ಮತ್ತು ವಿನೋದ್ ಶೇಖರ್ ಸ್ಥಾನ ಪಡೆದರು. ಆನಂದ ಕೃಷ್ಣನ್ ಅವರು 7.2 ಶತಕೋಟಿ ಡಾಲರ್ ವಹಿವಾಟು ಹೊಂದಿದ್ದು ಟೆಲಿಕಾಂ ವಾಣಿಜ್ಯ ಸಂಸ್ಥೆಯೊಂದನ್ನು ನಡೆಸುತ್ತಿದ್ದು ಪಟ್ಟಿಯಲ್ಲಿ ಎರಡನೇ ಸ್ಥಾನ ಗಳಿಸಿದರು. 320 ದಶಲಕ್ಷ ಡಾಲರ್ ಮೌಲ್ಯದ ಆಸ್ತಿ ಹೊಂದಿದ ವಿನೋದ್ ಶೇಖರ್ (40) ಪಟ್ಟಿಯಲ್ಲಿ 16ನೇ ಸ್ಥಾನ ಗಳಿಸಿದರು. ಇವರು ತಮ್ಮ ಮಗಳ ಹೆಸರಿನಲ್ಲಿ `ಪೆಟ್ರಾ ಸಮೂಹ'ವನ್ನು ಸ್ಥಾಪಿಸಿದ್ದು, ಅದು ಪುನರ್ ಬಳಕೆ ಮಾಡಬಹುದಾದ ಹಸಿರು ರಬ್ಬರನ್ನು ಉತ್ಪಾದಿಸುತ್ತದೆ. 

2007: ಮುಂಬೈಯಲ್ಲಿ 1993ರಲ್ಲಿ ಸಂಭವಿಸಿದ ಸರಣಿ ಸ್ಫೋಟಕ್ಕೆ ಮುನ್ನ ಶಸ್ತ್ರಾಸ್ತ್ರ ಹಾಗೂ ಮದ್ದುಗುಂಡು ಸಾಗಿಸಿದ 8 ಮಂದಿಗೆ ವಿಶೇಷ ಟಾಡಾ ನ್ಯಾಯಾಲಯವು ಐದರಿಂದ ಹತ್ತು ವರ್ಷಗಳ ಕಠಿಣ ಸಜೆ ವಿಧಿಸಿತು.

2007: ಭಾರತ ಕ್ರಿಕೆಟ್ ತಂಡದ ನಾಯಕ ರಾಹುಲ್ ದ್ರಾವಿಡ್ ಅವರು ಅತಿ ಹೆಚ್ಚು ಶತಕಗಳ ಜೊತೆಯಾಟ (65ನೇ ಪಂದ್ಯದಲ್ಲಿ) ನಿಭಾಯಿಸಿದ ಹೊಸ ದಾಖಲೆ ಸ್ಥಾಪಿಸಿದರು. ಬಾಂಗ್ಲಾದೇಶದ ಢಾಕಾದಲ್ಲಿ ಆರಂಭವಾದ ಎರಡನೇ ಟೆಸ್ಟ್ ಪಂದ್ಯದ ಮೊದಲ ದಿನ ವಾಸಿಂ ಜಾಫರ್ ಜೊತೆಗೆ 106 ರನ್ನುಗಳ ಜೊತೆಯಾಟ ನಿಭಾಯಿಸುವ ಮೂಲಕ ದ್ರಾವಿಡ್ ಈ ಗೌರವ ಪಡೆದರು. ಆಸ್ಟ್ರೇಲಿಯಾದ ಸ್ಟೀವ್ ವಾ ಅವರ ಹೆಸರಿನಲ್ಲಿ (64 ಪಂದ್ಯಗಳು) ಈ ದಾಖಲೆ ಇತ್ತು.

2007: ಹೈದರಾಬಾದಿನ ಮೆಕ್ಕಾ ಮಸೀದಿಯಲ್ಲಿ ವಾರದ ಹಿಂದೆ ಸಂಭವಿಸಿದ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರದ ಜಲ್ಸಾ ಪಟ್ಟಣದ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದರು.

2006: ಕನ್ನಡ ಭಾಷೆ 2300 ವರ್ಷಗಳಿಗೂ ಹೆಚ್ಚಿನ ಇತಿಹಾಸ ಹೊಂದಿದೆ ಎಂಬುದನ್ನು ವಿವರಿಸುವ ದಾಖಲೆಗಳನ್ನು ಒಳಗೊಂಡ ವರದಿಯನ್ನು ಕರ್ನಾಟಕ ಸರ್ಕಾರವು ಕೇಂದ್ರ ಸರ್ಕಾರಕ್ಕೆ ಸಲ್ಲಿಸಿತು. ಕನ್ನಡಕ್ಕೆ ಶಾಸ್ತ್ರೀಯ ಭಾಷೆ ಗೌರವ ನೀಡಬೇಕೆಂಬ ಮನವಿಗೆ ಪೂರಕವಾಗಿ ಸಂಶೋಧಕ ಸಾಹಿತಿ ಡಾ. ಎಂ. ಚಿದಾನಂದ ಮೂರ್ತಿ ನೇತೃತ್ವದ ಸಮಿತಿಯು ಸಿದ್ಧಪಡಿಸಿದ ಈ ವರದಿಯನ್ನು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರ ಸಂಸ್ಕೃತಿ ಸಚಿವೆ ಅಂಬಿಕಾ ಸೋನಿ ಅವರಿಗೆ ಸಲ್ಲಿಸಿದರು.

2001: ಕನೆಕ್ಟಿಕಟ್ಟಿನ ಸರ್ಜನ್ ಅರುವತ್ತನಾಲ್ಕು ವರ್ಷದ ಶೆರ್ಮನ್ ಬುಲ್ ಅವರು ಎವರೆಸ್ಟ್ ಶಿಖರವನ್ನು ಏರುವ ಮೂಲಕ ಜಗತ್ತಿನ ಅತ್ಯುನ್ನತ ಶಿಖರವನ್ನು ಏರಿದ ಅತ್ಯಂತ ಹಿರಿಯ ವ್ಯಕ್ತಿ ಎಂಬ ಹೆಗ್ಗಳಿಕೆ ಗಳಿಸಿಕೊಂಡರು.

1982: ಮರುಸೃಷ್ಟಿಯಾದ ವೆನಿಸ್ ಸಿಂಪ್ಲೊನ್ ಓರಿಯಂಟ್ ಎಕ್ಸ್ ಪ್ರೆಸ್ ಮೊತ್ತ ಮೊದಲ ಬಾರಿಗೆ ಲಂಡನ್ನಿನಿಂದ ಪ್ರಯಾಣ ಹೊರಟಿತು. ಶಿಪ್ಪಿಂಗ್ ಉದ್ಯಮಿ ಜೇಮ್ಸ್ ಶೆರ್ ವುಡ್ ಅವರು ಹಳೆ ಓರಿಯಂಟ್ ಎಕ್ಸ್ ಪ್ರೆಸ್ಸಿನ ಬೋಗಿಗಳನ್ನು ಸೋದ್ ಬಿಯ ಹರಾಜಿನಲ್ಲಿ ಖರೀದಿಸಿ ತಂದು ಹೊಸ ವೆನಿಸ್ ಸಿಂಪ್ಲೋನ್ ಓರಿಯಂಟ್ ಎಕ್ಸ್ ಪ್ರೆಸ್ಸಿಗಾಗಿ ಬಳಸಿಕೊಂಡರು. ಈ ರೈಲುಗಾಡಿ ಲಂಡನ್ನಿನ ವಿಕ್ಟೋರಿಯಾ ಟರ್ಮಿನಸ್ ಮತ್ತು ವೆನಿಸ್ ಮಧ್ಯೆ ಓಡಾಡುತ್ತದೆ.

1950: ಖ್ಯಾತ ಸುಗಮ ಸಂಗೀತಗಾರ ಯಶವಂತ ಹಳಿಬಂಡಿ ಅವರು ಕರ್ನಾಟಕ ಜಾನಪದ ಹಾಡುಗಾರಿಕೆಯ ಮನೆತನದ  ಹನುಮಂತಪ್ಪ- ಬಸವೇಶ್ವರಿ ದಂಪತಿಯ ಮಗನಾಗಿ ಉತ್ತರ ಕರ್ನಾಟಕದ ತೇರಗಾಂವದಲ್ಲಿ ಜನಿಸಿದರು.

1948: ಕಲಾವಿದ ಸುರೇಶ ವೆಂಕಟೇಶ ಕುಲಕರ್ಣಿ ಜನನ.

1940: ಆಕ್ಸಫರ್ಡ್ ವಿಶ್ವವಿದ್ಯಾಲಯದ ಪೆಥಾಲಜಿ ವಿಭಾಗದಲ್ಲಿ ಅರ್ನೆಸ್ಟ್ ಚೈನ್ ಮತ್ತು ನಾರ್ಮನ್ ಜಿ. ಹೀಟ್ಲೆ ಅವರು ಎಂಟು ಇಲಿಗಳಿಗೆ ಸ್ಟ್ರೆಪ್ಟೋಕೋಕ್ಸಿಯನ್ನು ನೀಡಿದರು. ಅವುಗಳಲ್ಲಿ ನಾಲ್ಕು ಇಲಿಗಳಿಗೆ ನಂತರ ಪೆನಿಸಿಲಿನ್ ನೀಡಲಾಯಿತು. ಮರುದಿನ ಮುಂಜಾನೆ ವೇಳೆಗೆ ಪೆನಿಸಿಲಿನ್ ನೀಡಲಾಗಿದ್ದ ಇಲಿಗಳು ಜೀವಂತವಾಗಿದ್ದರೆ, ಉಳಿದ ನಾಲ್ಕು ಇಲಿಗಳು ಸತ್ತು ಬಿದ್ದಿದ್ದವು. ಸೋಂಕಿಗೆ ಚಿಕಿತ್ಸೆ ನೀಡಲು ಪೆನಿಸಿಲಿನ್ ಬಳಸುವ ಸಾಧ್ಯತೆ ಈ ಮೂಲಕ ಮೊತ್ತ ಮೊದಲ ಬಾರಿಗೆ ಪತ್ತೆಯಾಯಿತು.

1935: ಕಲಾವಿದ ನೀಲಾರಾಮ್ ಗೋಪಾಲ್ ಜನನ.

1908: ಸಾಹಿತಿ ವಾಸಂತಿ ದೇವಿ (25-5-1908ರಿಂದ 1-4-1995) ಅವರು ಅಣ್ಣಾಜಿರಾವ್- ರಾಧಾಬಾಯಿ ದಂಪತಿಯ ಮಗಳಾಗಿ ಬರ್ಮಾ ದೇಶದ (ಈಗಿನ ಮ್ಯಾನ್ಮಾರ್) ಮಿಥಿಲದಲ್ಲಿ ಹುಟ್ಟಿದರು. ಚಿತ್ರರಂಗ, ಸಾಹಿತ್ಯ, ರಂಗಭೂಮಿ, ಚಿತ್ರಕಲೆಗಳಿಗೆ ಕಾಣಿಕೆ ನೀಡಿರುವ ವಾಸಂತಿ ದೇವಿ ಅವರ ಪ್ರಮುಖ ಕೃತಿಗಳಲ್ಲಿ ಒಂದು `ನನ್ನ ಮಗ ಗುರುದತ್ತ'.

1889: ಸಿಕೊರಸ್ಕಿ (1889-1972) ಜನ್ಮದಿನ. ರಷ್ಯ ಮೂಲದ ಈ ಅಮೆರಿಕನ್ ವಿಮಾನ ವಿನ್ಯಾಸಗಾರ ಹೆಲಿಕಾಪ್ಟರನ್ನು ಯಶಸ್ವಿಯಾಗಿ ಅಭಿವೃದ್ಧಿ ಪಡಿಸಿದ ವ್ಯಕ್ತಿ.

1886: ಭಾರತದ ಕ್ರಾಂತಿಕಾರಿ ಸ್ವಾತಂತ್ರ್ಯ ಹೋರಾಟಗಾರ ರಾಸ್ ಬಿಹಾರಿ ಬೋಸ್ (1886-1945) ಜನ್ಮದಿನ.

(ಸಂಗ್ರಹ: ನೆತ್ರಕೆರೆ ಉದಯಶಂಕರ)

Sunday, May 24, 2009

ಇಂದಿನ ಇತಿಹಾಸ History Today ಮೇ 24

ಇಂದಿನ ಇತಿಹಾಸ 

ಮೇ 24

 ಕರ್ನಾಟಕದ ವಿವಿಧೆಡೆ ಅಕ್ರಮ ಗಣಿಗಾರಿಕೆ ನಡೆಸುತ್ತಿದ್ದ 15ಕ್ಕೂ ಹೆಚ್ಚು ಮಂದಿ ಪ್ರಭಾವಿ ರಾಜಕೀಯ ವ್ಯಕ್ತಿಗಳಿಗೆ ಲೋಕಾಯುಕ್ತ, ನ್ಯಾಯಮೂರ್ತಿ ಎನ್. ಸಂತೋಷ್ ಹೆಗ್ಡೆ ನೋಟಿಸ್ ಜಾರಿ ಮಾಡಿದರು. ಪರವಾನಗಿ ಇಲ್ಲದೇ ಸರ್ಕಾರಿ ಭೂಮಿಯಲ್ಲಿ ಗಣಿಗಾರಿಕೆ ನಡೆಸುತ್ತಿರುವುದು, ಸರ್ಕಾರದ ಬೊಕ್ಕಸಕ್ಕೆ ನಷ್ಟ ಉಂಟು ಮಾಡಿರುವುದು, ಪರಿಸರಕ್ಕೆ ಹಾನಿ ಮಾಡಿರುವುದು ಮತ್ತಿತರ ಪ್ರಶ್ನೆಗಳಿಗೆ ಉತ್ತರ ನೀಡುವಂತೆ ನೋಟಿಸಿನಲ್ಲಿ ಸೂಚಿಸಲಾಯಿತು.

2008: ಪರಿಶಿಷ್ಟ ಪಂಗಡ (ಎಸ್ ಟಿ) ಸ್ಥಾನಕ್ಕಾಗಿ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿದ್ದ ಗುಜ್ಜರ್ ಸಮುದಾಯದವರ ಮೇಲೆ ಪೊಲೀಸರು ಗುಂಡು ಹಾರಿಸಿದ ಪರಿಣಾಮ ರಾಜಸ್ಥಾನದ ಡೌಸಾ ಜಿಲ್ಲೆಯ ಸಿಕಂದರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 16 ಜನರು ಮೃತರಾದರು. ಮಧ್ಯಾಹ್ನದ ವೇಳೆಗೆ ಹಿಂಸಾರೂಪಕ್ಕಿಳಿದ ಪ್ರತಿಭಟನಾಕಾರರು ಸಿಕಂದರ ಪೊಲೀಸ್ ಠಾಣೆಯನ್ನು  ಸುಟ್ಟುಹಾಕಲು ಪ್ರಯತ್ನಿಸಿದಾಗ ಪೊಲೀಸರು ಗೋಲಿಬಾರ್ ಮಾಡಿದರು. ಹಿಂದಿನ ದಿನ ಭರತ್ ಪುರದಲ್ಲೂ ಇದೇ ರೀತಿ ಪ್ರತಿಭಟನೆ ನಡೆಸುತ್ತಿದ್ದ ಗುಜ್ಜರ್ ಸಮುದಾಯದ ಪ್ರತಿಭಟನಾಕಾರರ ಮೇಲೆ ಪೊಲೀಸರು ಗೋಲಿಬಾರ್ ನಡೆಸಿದ್ದರಿಂದ ಕನಿಷ್ಠ 15 ಜನರು ಮೃತರಾಗಿದ್ದರು. ಇದರೊಂದಿಗೆ ಗುಜ್ಜರ್ ಚಳವಳಿ ಗೋಲಿಬಾರಿಗೆ ಬಲಿಯಾದವರ ಸಂಖ್ಯೆ 31ಕ್ಕೆ ಏರಿತು.

2008: ಕರ್ನಾಟಕದ ವಿವಿಧೆಡೆ ಅಕ್ರಮ ಗಣಿಗಾರಿಕೆ ನಡೆಸುತ್ತಿದ್ದ 15ಕ್ಕೂ ಹೆಚ್ಚು ಮಂದಿ ಪ್ರಭಾವಿ ರಾಜಕೀಯ ವ್ಯಕ್ತಿಗಳಿಗೆ ಲೋಕಾಯುಕ್ತ, ನ್ಯಾಯಮೂರ್ತಿ ಎನ್. ಸಂತೋಷ್ ಹೆಗ್ಡೆ ನೋಟಿಸ್ ಜಾರಿ ಮಾಡಿದರು. ಪರವಾನಗಿ ಇಲ್ಲದೇ ಸರ್ಕಾರಿ ಭೂಮಿಯಲ್ಲಿ ಗಣಿಗಾರಿಕೆ ನಡೆಸುತ್ತಿರುವುದು, ಸರ್ಕಾರದ ಬೊಕ್ಕಸಕ್ಕೆ ನಷ್ಟ ಉಂಟು ಮಾಡಿರುವುದು, ಪರಿಸರಕ್ಕೆ ಹಾನಿ ಮಾಡಿರುವುದು ಮತ್ತಿತರ ಪ್ರಶ್ನೆಗಳಿಗೆ ಉತ್ತರ ನೀಡುವಂತೆ ನೋಟಿಸಿನಲ್ಲಿ ಸೂಚಿಸಲಾಯಿತು.

2008: ಲೋಕಪಾಲ ಮಸೂದೆ ವ್ಯಾಪ್ತಿಯಡಿ ಪ್ರಧಾನಿ ಹುದ್ದೆಯನ್ನು ತರುವಂತೆ, ಪ್ರಧಾನಿ ಮನ ಮೋಹನ ಸಿಂಗ್ ಅವರೇ ಸೂಚಿಸಿದ್ದರೂ, ಕೇಂದ್ರ ಸಚಿವ ಸಂಪುಟ ಅದನ್ನು ತಿರಸ್ಕರಿಸಿತು.  

2008: ಬಣ್ಣ ಅದರಲ್ಲೂ ಗ್ಲೈಕೋಲ್ ಇಥರ್ಸ್ ನಂತಹ ರಾಸಾಯನಿಕಗಳನ್ನು ಒಳಗೊಂಡ ಬಣ್ಣದ ಕೆಲಸಗಳನ್ನು ಮಾಡುವ ಕಾರ್ಮಿಕರ ವೀರ್ಯದಲ್ಲಿ ದೋಷ ಕಂಡುಬರುತ್ತದೆ ಎಂದು ಹೊಸ ಸಂಶೋಧನೆಯಿಂದ ಬೆಳಕಿಗೆ ಬಂದಿತು. ಗ್ಲೈಕೋಲ್ ಇಥರ್ಸ್ ನಂತಹ ರಾಸಾಯನಿಕ ಬಳಸಿ ಬಣ್ಣ ತಯಾರಿಸುವುದು ಈಗ ಕಡಿಮೆಯಾಗಿದೆ. ಆದರೂ ಕೆಲವು ಸಂದರ್ಭದಲ್ಲಿ ಅವುಗಳ ಬಳಕೆ ಆಗುತ್ತಿರುವುದರಿಂದ ಪುರುಷ ಕಾರ್ಮಿಕರಿಗೆ ಅಪಾಯ ಉಂಟಾಗುತ್ತದೆ ಎಂದು ಲಂಡನ್ನಿನ ಮ್ಯಾಂಚೆಸ್ಟರ್ ವಿಶ್ವವಿದ್ಯಾಲಯದ ಸಂಶೋಧಕರು ತಿಳಿಸಿದರು.

2008: ಬೆಂಗಳೂರಿನ ವಿಜಯನಗರದ ಸಮಾಜ ಸಂಪರ್ಕ ವೇದಿಕೆಯ ವತಿಯಿಂದ ನೀಡಲಾಗುವ ಪ್ರಸಕ್ತ ಸಾಲಿನ `ರಾಷ್ಟ್ರಕವಿ ಕುವೆಂಪು ಶತಮಾನೋತ್ಸವ ಪ್ರಶಸ್ತಿ'ಗೆ ಕುವೆಂಪು ಅವರ ಪುತ್ರಿ ತಾರಿಣಿ ಚಿದಾನಂದಗೌಡ ಅವರನ್ನು ಆಯ್ಕೆ ಮಾಡಲಾಯಿತು. ಸಂಗೀತ, ಸಾಹಿತ್ಯ ಮತ್ತು ಚಿತ್ರಕಲೆಯಲ್ಲಿ ಆಸಕ್ತಿ ಹೊಂದಿದ ತಾರಿಣಿ ಅವರು ಈವರೆಗೆ ಮಾಡಿರುವ ಸಾಧನೆಯನ್ನು ಗಮನಿಸಿ ಅವರಿಗೆ ಈ ಪ್ರಶಸ್ತಿ ನೀಡಲು ನಿರ್ಧರಿಸಲಾಯಿತು. 

2008: ಶಿರಸಿಯ ಎ.ಪಿ.ಎಂ.ಸಿ ಮಾರುಕಟ್ಟೆ ಪ್ರಾಂಗಣದ ಕದಂಬ ಮಾರ್ಕೆಟಿಂಗ್ ಸೌಹಾರ್ದ ಸಹಕಾರಿ ನಿಯಮಿತ ಆವರಣದಲ್ಲಿ ನಡೆದ ಎರಡು ದಿನಗಳ ರಾಜ್ಯ ಮಟ್ಟದ ಹಲಸು ಮೇಳ ಸಮಾರೋಪಗೊಂಡಿತು. `ಹಲಸಿನ ಹಣ್ಣು ಕೂಡ ಒಂದು ಹಾರ್ಟ್ ಟಾನಿಕ್. ದೇಹದ ಪುಷ್ಟಿಗೆ, ಪುರುಷತ್ವದ ವೃದ್ಧಿಗೆ, ಬಂಜೆತನ ನಿವಾರಣೆಗೆ ಹಲಸು ಉಪಯುಕ್ತವಾಗಿದೆ ಎಂಬ ಸಂಗತಿಯನ್ನು ಆಯುರ್ವೇದದಲ್ಲಿ ಹೇಳಲಾಗಿದೆ. ಹಲಸನ್ನು ಸರಿಯಾದ ರೀತಿಯಲ್ಲಿ ಬಳಸಿದಲ್ಲಿ ಅದು ಆರೋಗ್ಯದಾಯಕ ಫಲವಾಗುವುದು' ಎಂದು ಕರ್ನಾಟಕ ಜೀವ ವೈವಿಧ್ಯ ಮಂಡಳಿಯ ಡಾ. ಸತ್ಯನಾರಾಯಣ ಭಟ್ಟ ಹೇಳಿದರು. ದ್ರಾಕ್ಷಿ, ಕವಳಿ, ನೆಲ್ಲಿ, ದಾಳಿಂಬೆ, ಮುರುಗಲು ಹೇಗೆ ಆಯುರ್ವೇದದಲ್ಲಿ ಹಾರ್ಟ್ ಟಾನಿಕ್ ಸ್ಥಾನವನ್ನು ಪಡೆದುಕೊಂಡಿವೆಯೋ ಹಾಗೆಯೇ ಹಲಸು ಕೂಡ ಆರೋಗ್ಯ ವೃದ್ಧಿಯಲ್ಲಿ ಜಾಗ ಪಡೆದುಕೊಂಡಿದೆ. ಆದರೆ ಅಗ್ನಿಮಾಂದ್ಯ, ಪಿತ್ತ, ಗುಲ್ಮಾ, ಜೀರ್ಣ ಶಕ್ತಿ ಕಡಿಮೆ ಇರುವವರು ಹಲಸಿನ ಹಣ್ಣನ್ನು ಉಪಯೋಗಿಸಬಾರದು. ಹಲಸು ದೇಹಕ್ಕೆ ಕ್ಯಾನ್ಸರ್ ರೋಗ ನಿರೋಧಕ ಶಕ್ತಿಯನ್ನು ನೀಡಬಲ್ಲುದು. ಕಲಶಕ್ಕೆ ಹಲಸಿನ ಎಲೆ ಇಟ್ಟು ಅದರಲ್ಲಿರುವ ನೀರನ್ನು ತೀರ್ಥವಾಗಿ ಸ್ವೀಕರಿಸುವುದು ಕೂಡ ಆರೋಗ್ಯದ ದೃಷ್ಟಿಯನ್ನು ಹೊತ್ತಿದೆ. ಹಲಸಿನ ಎಲೆಯಿಂದ ಬರುವ ಹಾಲು ನೀರಿನೊಂದಿಗೆ ಬೆರೆತು ಅದು ಆರೋಗ್ಯಕ್ಕೆ ದಾರಿಯಾಗಲಿದೆ ಎಂಬುದು ವೈಜ್ಞಾನಿಕವಾಗಿ ದೃಢಪಟ್ಟಿದೆ ಎಂದು ಅವರು ವಿವರಿಸಿದರು.

2007: ಭಾಷಾ ಮಾಧ್ಯಮದ ಉಲ್ಲಂಘನೆಯ ಆರೋಪದಿಂದ ಮಾನ್ಯತೆ ಕಳೆದುಕೊಂಡಿರುವ 2215 ಖಾಸಗಿ ಪ್ರಾಥಮಿಕ ಶಾಲೆಗಳು ಇನ್ನು ಮುಂದೆ ಕನ್ನಡ ಮಾಧ್ಯಮದಲ್ಲೇ ಬೋಧಿಸಬೇಕು ಎಂದು ಕರ್ನಾಟಕ ಹೈಕೋರ್ಟ್ ಮಧ್ಯಂತರ ಆದೇಶದಲ್ಲಿ ಆಜ್ಞಾಪಿಸಿತು. ನ್ಯಾಯಮೂರ್ತಿ ಎ.ಸಿ. ಕಬ್ಬಿಣ ಅವರು ಈ ಆದೇಶ ನೀಡಿದರು.

2007: ಒಂದು ನಿಮಿಷದಲ್ಲಿ ಮೇಕಪ್, ಹೇರ್ ಸ್ಟೈಲ್ ಇತ್ಯಾದಿ ಮಾಡಿ ಈಗಾಗಲೇ ಲಿಮ್ಕಾ ದಾಖಲೆ ಮಾಡಿರುವ `ಒನ್ ಮಿನಿಟ್ ಉಮಾ' ಎಂದೇ ಖ್ಯಾತಿ ಪಡೆದಿರುವ ಸೌಂದರ್ಯ ತಜ್ಞೆ ಉಮಾ ಜಯಕುಮಾರ್ ಅವರು ಈದಿನ ಬೆಂಗಳೂರು ಮಹಾಲಕ್ಷ್ಮಿಪುರಂ  ಕ್ಲಬ್ಬಿನಲ್ಲಿ ಮಂಜುಗಡ್ಡೆಯ ಮೇಲೆ ನಿಂತು ಒಂದು ನಿಮಿಷದಲ್ಲಿ ಕೇಶ ವಿನ್ಯಾಸ, ಮೇಕಪ್, ಮದುಮಗಳ ಸಿಂಗಾರ ಇತ್ಯಾದಿ ಹತ್ತಕ್ಕೂ ಹೆಚ್ಚು ಕಾರ್ಯಗಳನ್ನು ಮಾಡಿ ತಮ್ಮ ದಾಖಲೆಯನ್ನು ತಾವೇ ಮುರಿದರು.

2007: ಈ ಹಿಂದೆ ಒಂದು ಕೈಯಲ್ಲಿ 21 ಮೊಟ್ಟೆಗಳನ್ನು ಹಿಡಿದು ದಾಖಲೆ ಮಾಡಿದ್ದ ಮೈಸೂರಿನ ಎಂ.ಎಲ್. ಶಿವಕುಮಾರ್ (44) ಅವರು ತಮ್ಮ ಬಲಗೈಯಲ್ಲಿ 120 ಸೆಕೆಂಡುಗಳಲ್ಲಿ 23 ಕೋಳಿ ಮೊಟ್ಟೆಗಳನ್ನು ಇಟ್ಟುಕೊಳ್ಳುವ ಮೂಲಕ ತಮ್ಮ ಹಿಂದಿನ ದಾಖಲೆ ಮುರಿದರು.

2007: ಜಾಗತಿಕ, ಆರ್ಥಿಕ ಮತ್ತು ರಾಜಕೀಯ ರಂಗದಲ್ಲಿ ಭಾರತ ನಿರ್ವಹಿಸುತ್ತಿರುವ ಪ್ರಮುಖ ಪಾತ್ರವನ್ನು ಗುರುತಿಸಿ ಇಲ್ಲಿಯ ನ್ಯೂ ಮೆಕ್ಸಿಕೊ ಟೆಕ್ ವಿಶ್ವ ವಿದ್ಯಾಲಯವು ಭಾರತದ ತಜ್ಞರ ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಳ್ಳಲು ಚಿಂತಕರ ಚಾವಡಿಯೊಂದನ್ನು ಆರಂಭಿಸಿತು.

2007: ಶ್ರೀಲಂಕೆಯಲ್ಲಿ ಎಲ್ ಟಿ ಟಿ ಇ ಬಂಡುಕೋರರು ಉತ್ತರ ಜಾಫ್ನಾ ದ್ವೀಪದ ಬಳಿಕ ಸಣ್ಣ ದ್ವೀಪವೊಂದರ ಆಯಕಟ್ಟಿನ ನೌಕಾ ನೆಲೆ ಮೇಲೆ ದಾಳಿ ನಡೆಸಿದ್ದಲ್ಲದೆ  ಕೊಲಂಬೋ ಸಮೀಪ ಸೇನಾ ಬಸ್ಸನ್ನು ಸ್ಫೋಟಿಸಿದ ಪರಿಣಾಮವಾಗಿ 35 ಮಂದಿ ಹತರಾದರು. 

2006: ಭಾರತೀಯ ಗಡಿ ರಕ್ಷಣಾ ಪಡೆಯ ಹಿರಿಯ ಅಧಿಕಾರಿ ಎಸ್.ಸಿ. ನೇಗಿ (56) ಅವರು ಪ್ರಪಂಚದ ಅತಿ ಎತ್ತರದ ಶಿಖರ ಮೌಂಟ್ ಎವರೆಸ್ಟ್ ಏರಿದ ಅತ್ಯಂತ ಹಿರಿಯ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾದರು. 

2006: ರಾಜ್ಯಸಭೆಯ ಮಾಜಿ ಸದಸ್ಯೆ ಜಯಾ ಬಚ್ಚನ್ ಅವರು ಉತ್ತರ ಪ್ರದೇಶ ಚಲನಚಿತ್ರ ಮಂಡಳಿಯ  (ಯು ಪಿ ಎಫ್ ಡಿ ಸಿ) ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿ, ರಾಜ್ಯಸಭಾ ಉಪಚುನಾವಣೆಯಲ್ಲಿ ಮತ್ತೆ ಸ್ಪರ್ಧಿಸಲು ಮಾರ್ಗ ಸುಗಮಗೊಳಿಸಿಕೊಂಡರು.

1968: ಕಲಾವಿದೆ ಶುಭ ಧನಂಜಯ ಜನನ.

1946: ಕಲಾವಿದೆ ಮರಿಗೆಮ್ಮ ಎಂ. ಜನನ.

1941: ಜರ್ಮನ್ ಸಮರನೌಕೆ ಬಿಸ್ಮಾರ್ಕ್ ಉತ್ತರ ಅಟ್ಲಾಂಟಿಕ್ ಸಾಗರದಲ್ಲಿ ಗ್ರೀನ್ ಲ್ಯಾಂಡ್ ಕರಾವಳಿ ಸಮೀಪ ಬ್ರಿಟಿಷರ ಎಚ್ ಎಂಎಸ್ `ಹುಡ್' ನೌಕೆಯನ್ನು ಮುಳುಗಿಸಿತು. ನೌಕೆಯಲ್ಲಿದ್ದ 1421 ಮಂದಿಯ ಪೈಕಿ ಕೇವಲ 3 ಮಂದಿಯನ್ನು ರಕ್ಷಿಸಲು ಸಾಧ್ಯವಾಯಿತು.

1927: ಹಿರಿಯ ಮೃದಂಗ ವಿದ್ವಾಂಸರಲ್ಲೊಬ್ಬರಾದ ಎಂ.ಎಸ್. ರಾಮಯ್ಯ ಅವರು ತಬಲ ವಿದ್ವಾಂಸ ಸುಬ್ಬಣ್ಣ ಪುತ್ರನಾಗಿ ಮೈಸೂರಿನಲ್ಲಿ ಜನಿಸಿದರು.

1922: ಕಲಾವಿದ ರಾಮನರಸಯ್ಯ ಜನನ.

1905: ಕಲಾವಿದ ಹರ್ತಿಕೋಟೆ ಸುಬ್ಬಣ್ಣ ಜನನ.

1875: ಸರ್ ಸೈಯದ್ ಅಹಮದ್ ಖಾನ್ ಮತ್ತು ಅವರ ಮಗ ಸೈಯದ್ ಮಹಮೂದ್ ಆಲಿಘಡದಲ್ಲಿ ಮಹಮ್ಮಡನ್ ಆಂಗ್ಲೋ - ಓರಿಯಂಟಲ್ ಸ್ಕೂಲ್  ಸ್ಥಾಪಿಸಿದರು. 1920ರಲ್ಲಿ ಅದು ಅಲಿಘಡ ಮುಸ್ಲಿಂ ವಿಶ್ವ ವಿದ್ಯಾಲಯವಾಯಿತು.

1844: ಸ್ಯಾಮ್ಯುಯೆಲ್ ಮೋರ್ಸ್, ಬಾಲ್ಟಿಮೋರಿನಿಂದ ವಾಷಿಂಗ್ಟನ್ನಿಗೆ ಟೆಲಿಗ್ರಾಫ್ ಸಂದೇಶವನ್ನು ಕಳುಹಿಸುವ ಮೂಲಕ ಅಮೆರಿಕದ ಮೊತ್ತ ಮೊದಲ ಟೆಲಿಗ್ರಾಫ್ ಲೈನ್ ಉದ್ಘಾಟಿಸಿದ. 

1819: ರಾಣಿ ವಿಕ್ಟೋರಿಯಾ ಜನ್ಮದಿನ. ವಿಕ್ಟೋರಿಯಾ (1819-1901) ಇಂಗ್ಲೆಂಡಿನ ಅತ್ಯಂತ ದೀರ್ಘ ಅವಧಿಯ ರಾಣಿ ಎಂಬ ಖ್ಯಾತಿ ಪಡೆದ ವ್ಯಕ್ತಿ.

1686: ಡೇನಿಯಲ್ ಗ್ಯಾಬ್ರಿಯಲ್ ಫ್ಯಾರನ್ ಹೀಟ್ (1686-1736) ಜನ್ಮದಿನ. ಜರ್ಮನಿಯ ವೈದ್ಯನಾದ ಈತ  ಆಲ್ಕೋಹಾಲ್ ಥರ್ಮಾಮೀಟರ್, ಮರ್ಕ್ಯುರಿ ಥರ್ಮಾಮೀಟರ್ ಮುಂತಾದ ಉಷ್ಣಮಾಪಕಗಳನ್ನು ಸಂಶೋಧಿಸಿದ. ಈತ ಸಂಶೋಧಿಸಿದ ಉಷ್ಣಮಾಪಕಕ್ಕೆ ಈತನ ಹೆಸರನ್ನೇ ಇಟ್ಟು ಗೌರವಿಸಲಾಯಿತು.

(ಸಂಗ್ರಹ: ನೆತ್ರಕೆರೆ ಉದಯಶಂಕರ)

Saturday, May 23, 2009

Moratorium there and Launching here..!

Moratorium there and

 Launching here..!



While America is thinking to put moratorium on Genetically Modified Food, India is moving towards Launching it. Why America is thinking to put moratorium on it?  

Nethrakere Udaya Shankara

Within a week I got two forwarded mails warning about Genetically Modified Food (GM Food) from GM Free India which is launching a vigorous movement against the introduction of GM Food in India.

The first letter detailed about the Warning of US Doctors on the dangers of GM Food and their call to Avoid Genetically Modified Food.
 
The mail hints about the  country which developed, promoted, and ate GM food for a decade has also waken up to its dangers and requests to decide whether the GM Foods are 'necessary' or 'the solution to the world hunger' after reading this mail.

It points out that http://www.aaemonline.org/pressrelease.html has the press release and their position paper on GMOs can be accessed at http://www.aaemonline.org/gmopost.html

 The details of the mail are below: 

Press Advisory May 19, 2009   Contact Information

Dr. Amy L. Dean, D.O. Public Relations Chair Member, Board of Directors American Academy of Environmental Medicine 734-213-4901environmentalmed@yahoo.com

The American Academy of Environmental Medicine Calls For Immediate Moratorium on Genetically Modified Foods

Wichita, KS - The American Academy of Environmental Medicine (AAEM) today (on 19 May 2009) released its position paper on Genetically Modified foods stating that "GM foods pose a serious health risk" and calling for a moratorium on GM foods. Citing several animal studies, the AAEM concludes "there is more than a casual association between GM foods and adverse health effects" and that "GM foods pose a serious health risk in the areas of toxicology, allergy and immune function, reproductive health, and metabolic, physiologic and genetic health." The AAEM calls for:

A moratorium on GM food, implementation of immediate long term safety testing and labeling of GM food.

Physicians to educate their patients, the medical community and the public to avoid GM foods.

Physicians to consider the role of GM foods in their patients' disease processes.

More independent long term scientific studies to begin gathering data to investigate the role of GM foods on human health.

"Multiple animal studies have shown that GM foods cause damage to various organ systems in the body. With this mounting evidence, it is imperative to have a moratorium on GM foods for the safety of our patients' and the public's health," said Dr. Amy Dean, PR chair and Board Member of AAEM.

 "Physicians are probably seeing the effects in their patients, but need to know how to ask the right questions," said Dr. Jennifer Armstrong, President of AAEM. "The most common foods in North America which are consumed that are GMO are corn, soy, canola, and cottonseed oil."

 The AAEM's position paper on Genetically Modified foods can be found at http:aaemonline.org/gmopost.html. AAEM is an international association of physicians and other professionals dedicated to addressing the clinical aspects of environmental health. More information is available at www.aaemonline.org.

 And the Second Mail from GM Free India touches about the position in India  And appeals everyone to urge the Prime Minister of India to stop launching of GM food - Bt. Brinjal in the country. 

Go through the mail contents:

Our last chance

You may be shocked but this is the truth. We just have one last chance to prevent this from happening to us. An unpredictable, dangerous Technology is soon to be tested out on all Indians.

The first Genetically Modified (GM) food – Bt Brinjal, will soon be Launched in India on a commercial basis. GM food is created by taking Genes from one organism like bacteria, spiders, frogs etc. and Inserting them into the genome (gene sequence) of another unrelated
Organism like rice, wheat, brinjals etc.

The insertion disrupts the genome and it is modified in ways one can’t predict. These unpredictable modifications can result in adverse health-impacts for those who consume GM food.

 Studies with lab rats  fed on GM, linked GM to stunted growth, impaired immune systems,
bleeding stomachs, liver and kidney lesions etc. So, it is no surprise that majority of countries around the world have rejected GM food. The only proof in support of GM food safety comes from the companies themselves, who stand to gain from this?

It is time we stood up and refused to become lab rats in some genetic
Experiment of big companies. Send a petition to the prime minister
Now!

ಇಂದಿನ ಇತಿಹಾಸ History Today ಮೇ 23

ಇಂದಿನ ಇತಿಹಾಸ

ಮೇ 23

ಸರಿಯಾಗಿ ಮಧ್ಯರಾತ್ರಿ 12.05ಕ್ಕೆ ಏರ್ ಇಂಡಿಯಾ ವಿಮಾನವು ಬೆಂಗಳೂರಿನಿಂದ ಸಿಂಗಾಪುರಕ್ಕೆ ಪ್ರಯಾಣ ಬೆಳೆಸುವುದರೊಂದಿಗೆ ದೇವನಹಳ್ಳಿ ಸಮೀಪ ನಿರ್ಮಿಸಿದ ನೂತನ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ಅಧಿಕೃತವಾಗಿ ಕಾರ್ಯಾರಂಭ ಮಾಡಿತು.

2008: ಸರಿಯಾಗಿ ಮಧ್ಯರಾತ್ರಿ 12.05ಕ್ಕೆ ಏರ್ ಇಂಡಿಯಾ ವಿಮಾನವು ಬೆಂಗಳೂರಿನಿಂದ ಸಿಂಗಾಪುರಕ್ಕೆ ಪ್ರಯಾಣ ಬೆಳೆಸುವುದರೊಂದಿಗೆ ದೇವನಹಳ್ಳಿ ಸಮೀಪ ನಿರ್ಮಿಸಿದ ನೂತನ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ಅಧಿಕೃತವಾಗಿ ಕಾರ್ಯಾರಂಭ ಮಾಡಿತು. ಮುಂಬೈಯಿಂದ ಏರ್ ಇಂಡಿಯಾದ (ಐಸಿ 609) ಮೊದಲ ವಿಮಾನವು ಇದಕ್ಕೆ ಮುನ್ನ ರಾತ್ರಿ 10ಕ್ಕೆ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದು ಇಳಿಯುತ್ತಿದ್ದಂತೆಯೇ ಪ್ರಯಾಣಿಕರನ್ನು ಸಂಭ್ರಮದಿಂದ ಸ್ವಾಗತಿಸಲಾಯಿತು. ನೂತನ ವಿಮಾನ ನಿಲ್ದಾಣದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಪ್ರಯಾಣಿಕರು ಎಚ್ ಎ ಎಲ್ ವಿಮಾನ ನಿಲ್ದಾಣಕ್ಕಿಂತ ಇದು ತುಂಬಾ ಚೆನ್ನಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.  ವಿಮಾನ ನಿಲ್ದಾಣ ಕಾರ್ಯಾರಂಭದ ಕ್ಷಣಗಳು: ರಾತ್ರಿ 10ಕ್ಕೆ ಮುಂಬೈನಿಂದ ಏರ್  ಇಂಡಿಯಾದ ಮೊದಲ ವಿಮಾನ ಆಗಮನ. 12.05ಕ್ಕೆ ಏರ್ ಇಂಡಿಯಾ ವಿಮಾನ ಸಿಂಗಪುರಕ್ಕೆ ನಿರ್ಗಮನ. ರಾತ್ರಿ 11.30ಕ್ಕೆ ಎಚ್ಎಎಲ್ ವಿಮಾನನಿಲ್ದಾಣದಿಂದ ಸಿಂಗಪುರ ಏರ್ಲೈನ್ಸ್ ವಿಮಾನದ ಕೊನೆಯ ಪ್ರಯಾಣ. ಇದರೊಂದಿಗೆ ಎಚ್ಎ ಎಲ್ ವಿಮಾನ ನಿಲ್ದಾಣ ಸ್ಥಗಿತಗೊಂಡಿತು. ದೇವನಹಳ್ಳಿ ನಿಲ್ದಾಣದ ಕಾರ್ಯಾರಂಭ ಸಮಾರಂಭಕ್ಕಾಗಿ ವಿಮಾನ ನಿಲ್ದಾಣವನ್ನು ನವ ವಧುವಿನಂತೆ ಸಿಂಗರಿಸಲಾಗಿತ್ತು. ಇದಕ್ಕೆ ಮೊದಲು ಈ ಸಮಾರಂಭ ಮೂರು ಬಾರಿ ಮುಂದೂಡಿಕೆಯಾಗಿತ್ತು.

2008: ಸ್ಥಗಿತಗೊಂಡ ವಿವಾದಿತ ಹೊಗೇನಕಲ್ ಕುಡಿಯುವ ನೀರಿನ ಯೋಜನೆಯ ಕಾಮಗಾರಿ ಆರಂಭದ ಇಂಗಿತವನ್ನು ನೀಡಿದ ತಮಿಳನಾಡು ಮುಖ್ಯಮಂತ್ರಿ ಎಂ.ಕರುಣಾನಿಧಿ ಅವರು, ಕಾಮಗಾರಿಯನ್ನು ನಿಗದಿತ ಸಮುಯ 2011ರ ಹೊತ್ತಿಗೆ ಮುಗಿಸಬೇಕೆಂದು  ಈದಿನ ಅಧಿಕಾರಿಗಳಿಗೆ ಸೂಚನೆ ನೀಡಿದರು. ತಮಿಳುನಾಡು ವ್ಯಾಪ್ತಿಯಲ್ಲಿ ಹರಿಯುವ ಕಾವೇರಿನದಿಗೆ ಕಟ್ಟೆ ಕಟ್ಟಿ ಧರ್ಮಪುರಿ ಮತ್ತು ಕೃಷ್ಣಗಿರಿ ಜಿಲ್ಲೆಗಳಿಗೆ ಕುಡಿಯುವ ನೀರು ಒದಗಿಸುವ 1,334 ಕೋಟಿ ರೂಪಾಯಿಯ ಯೋಜನೆಯನ್ನು ಕರ್ನಾಟಕದಲ್ಲಿ ಚುನಾವಣೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಸ್ಥಗಿತಗೊಳಿಸಲಾಗಿತ್ತು.
ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ಗಡಿಯಲ್ಲಿ ಕೈಗೆತ್ತಿಕೊಂಡ ಈ ಯೋಜನೆ, ಕರುಣಾನಿಧಿ ಮತ್ತು ಯೋಜನೆ ವಿರೋಧಿಸುವ ಕರ್ನಾಟಕದ ರಾಜಕಾರಣಿಗಳ ನಡುವೆ ಮಾತಿನ ಸಮರಕ್ಕೆ ಕಾರಣವಾಗಿತ್ತು. ಕನ್ನಡಪರ  ಸಂಘಟನೆಗಳೂ ಈ ಯೋಜನೆ ಜಾರಿಗೆ  ಆಕ್ಷೇಪ ವ್ಯಕ್ತಪಡಿಸಿದ್ದವು.

2008: ರಾಷ್ಟ್ರದ ರಾಜಧಾನಿ ದೆಹಲಿ ಸುತ್ತಮುತ್ತ ತಲ್ಲಣ ಎಬ್ಬಿಸಿದ್ದ ಬಾಲಕಿ ಮತ್ತು ಮನೆ ಕೆಲಸಗಾರನ ಕೊಲೆ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಬಾಲಕಿಯ ತಂದೆ, ಹೆಸರಾಂತ ದಂತವೈದ್ಯ ರಾಜೇಶ್ ತಲ್ವಾರ್ ಅವರನ್ನು ಬಂಧಿಸಿದರು. ಘಟನೆ ಬಗ್ಗೆ ಪ್ರಾಥಮಿಕ ತನಿಖೆ ನಡೆಸಿ ತಲ್ವಾರ್ ಅವರನ್ನು ಬಂಧಿಸಲಾಗಿದೆ ಎಂದು ಮೀರತ್ ವಲಯದ ಐಜಿಪಿ ಗುರುದರ್ಶನ್ ಸಿಂಗ್  ತಿಳಿಸಿದರು. 2008ರ ಮೇ 15-16ರ ನಡುವಿನ ರಾತ್ರಿ ನೋಯ್ಡಾದಲ್ಲಿ ನಡೆದ ಘಟನೆಯಲ್ಲಿ ದೆಹಲಿ ಪಬ್ಲಿಕ್ ಶಾಲೆಯ ವಿದ್ಯಾರ್ಥಿನಿ ಆಋಷಿಯನ್ನು (14) ಮಲಗುವ ಕೊಠಡಿಯಲ್ಲಿ ಗಂಟಲು ಸೀಳಿ ಕೊಲೆ ಮಾಡಲಾಗಿತ್ತು. ಆರಂಭದಲ್ಲಿ ಈ ದುಷ್ಕೃತ್ಯವನ್ನು ನಾಪತ್ತೆಯಾಗಿದ್ದ ಮನೆ ಕೆಲಸಗಾರ ಹೇಮರಾಜ್ (45) ಎಸಗಿರಬೇಕೆಂದು ಶಂಕಿಸಲಾಗಿತ್ತು. ಆದರೆ ಮರುದಿನವೇ ಹೇಮರಾಜನ ಶವ ಅದೇ ಮನೆಯ ಛಾವಣಿ ಮೇಲೆ ಪತ್ತೆಯಾದ ನಂತರ ಪ್ರಕರಣ ತಿರುವು ಪಡೆದುಕೊಂಡಿತ್ತು.

2008: `ಪೃಥ್ವಿ' ಕ್ಷಿಪಣಿಯ ಪರೀಕ್ಷಾರ್ಥ ಪ್ರಯೋಗ ಒರಿಸ್ಸಾದ ಬಾಲಸೋರಿನ ಚಂಡೀಪುರದಲ್ಲಿ ಯಶಸ್ವಿಯಾಗಿ ನಡೆಯಿತು. ಒಂದು ಭೂಪ್ರದೇಶದಿಂದ ಸುಮಾರು 150ರಿಂದ 250 ಕಿ.ಮೀ. ದೂರದವರೆಗೆ ನೆಗೆಯಬಲ್ಲ `ಪೃಥ್ವಿ' ಕ್ಷಿಪಣಿಯು ಒಂದು ಸಾವಿರ ಕೆಜಿ ಸ್ಫೋಟಕಗಳನ್ನು ಸಾಗಿಸಬಲ್ಲುದು. ಈಗಾಗಲೇ ಈ ಕ್ಷಿಪಣಿ ದೇಶದ ಸೇನಾ ಬತ್ತಳಿಕೆ ಸೇರಿದೆ. ದೇಶೀಯವಾಗಿ ನಿರ್ಮಾಣವಾದ ಪೃಥ್ವಿ ಕ್ಷಿಪಣಿಯನ್ನು ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ ಅಭಿವೃದ್ಧಿ ಪಡಿಸಿದೆ.

2008: ದೀರ್ಘ ಕಾಲದಿಂದ ಅಸ್ವಸ್ಥರಾಗಿದ್ದ ಹಿರಿಯ ಕಾರ್ಮಿಕ ನಾಯಕ ಹಾಗೂ ಮಾಜಿ ಲೋಕಸಭಾ ಸದಸ್ಯ ಗೋಪೇಶ್ವರ (88) ಅವರು ಹಿಂದಿನ ದಿನ ರಾತ್ರಿ ಜಮ್ಷೆಡ್ ಪುರದಲ್ಲಿ ನಿಧನರಾದರು. ಟೆಲ್ಕೊ ಕಾರ್ಮಿಕರ ಸಂಘಟನೆಯ ಪ್ರಧಾನ ಕಾರ್ಯದರ್ಶಿಯಾಗಿದ್ದ ಗೋಪೇಶ್ವರ ಅಂತಾರಾಷ್ಟ್ರೀಯ ಕಾರ್ಮಿಕ ಸಮಾವೇಶ ಸೇರಿದಂತೆ ಹಲವು ದೇಶಗಳಲ್ಲಿ ನಡೆದ ಕಾರ್ಮಿಕ ಸಮಾವೇಶಗಳಲ್ಲಿ ಭಾರತದ ಕಾರ್ಮಿಕರನ್ನು ಪ್ರತಿನಿಧಿಸಿದ್ದರು. 1984ರಲ್ಲಿ ಕಾಂಗ್ರೆಸ್ ಸದಸ್ಯರಾಗಿ ಲೋಕಸಭೆಗೆ ಆಯ್ಕೆಯಾಗಿದ್ದರು.  

2008: ಉಭಯ ದೇಶಗಳ ದ್ವಿಪಕ್ಷೀಯ ಮಾತುಕತೆಗೆ ಮುನ್ನ ತಿಳಿಸಿದ್ದಂತೆ ಪಾಕಿಸ್ಥಾನ ಸರ್ಕಾರ ಭಾರತದ 96 ಮೀನುಗಾರರು ಮತ್ತು ಮೂವರು ನಾಗರಿಕರನ್ನು ಬಿಡುಗಡೆ ಮಾಡಿತು.

2008: ಒಂದು ವಾರದ ಹಿಂದೆ ಅಪಹರಿಸಲಾಗಿದ್ದ 10 ಜನ ಭಾರತೀಯ ಸಿಬ್ಬಂದಿ ಇದ್ದ ಜೋರ್ಡಾನ್ ಹಡಗನ್ನು ಅಪಹರಣಕಾರರು ಬಿಡುಗಡೆ ಮಾಡಿದರು. ಒತ್ತೆಯಲ್ಲಿದ್ದ `ಎಂವಿ- ವಿಕ್ಟೋರಿಯಾ' ಹಡಗನ್ನು ಅಪಹರಣಕಾರರು ಸ್ಥಳೀಯ ಸಮಯ ಮಧ್ಯಾಹ್ನ 12.50ಕ್ಕೆ ಬಿಡುಗಡೆ ಮಾಡಿದರು ಎಂದು ನೈರೋಬಿಯ ಸಮುದ್ರ ವಹಿವಾಟು ಅಧಿಕಾರಿ ಆಂಡ್ರ್ಯೂ ತಿಳಿಸಿದರು. 4200 ಟನ್ ಸಕ್ಕರೆ ಹೊತ್ತೊಯ್ಯುತ್ತಿದ್ದ ಈ ಹಡಗನ್ನು ಮೊಗದಿಶು ಬಳಿ ಸೊಮಾಲಿಯಾ ಅಪಹರಣಕಾರರು ಅಪಹರಿಸಿದ್ದರು. ಇದರಲ್ಲಿ 10 ಜನ ಭಾರತೀಯ ಸಿಬ್ಬಂದಿಯಲ್ಲದೆ ಬಾಂಗ್ಲಾದೇಶ, ಪಾಕಿಸ್ಥಾನ, ತಾಂಜಾನಿಯಾಕ್ಕೆ ಸೇರಿದ ಸಿಬ್ಬಂದಿಯೂ ಇದ್ದರು.  

2008: ಮಂಗಳ ಗ್ರಹದಲ್ಲಿ ಹಿಂದೊಮ್ಮೆ ಬಿಸಿನೀರ ಚಿಲುಮೆಗಳು, ಬುಗ್ಗೆಗಳು ಇದ್ದಿರುವ ಸಾಧ್ಯತೆಯಿದೆ ಎಂದು ವಿಜ್ಞಾನಿಗಳು ನ್ಯೂಯಾರ್ಕಿನಲ್ಲಿ ತಿಳಿಸಿದರು. ಮಂಗಳ ಗ್ರಹ ಅನ್ವೇಷಣೆಗಾಗಿ `ನಾಸಾ' ಕಳುಹಿಸಿದ್ದ ಸ್ಪಿರಿಟ್ ರೋವರ್ ನೌಕೆ ಅಗೆದು ತೆಗೆದಿರುವ ಸಿಲಿಕಾ ಪದರಗಳನ್ನು ಅಂತಾರಾಷ್ಟ್ರೀಯ ವಿಜ್ಞಾನಿಗಳ ತಂಡ ವಿಶ್ಲೇಷಣೆಗೆ ಒಳಪಡಿಸಿ ಈ ತೀರ್ಮಾನಕ್ಕೆ ಬಂದಿತು. ಜ್ವಾಲಾಮುಖಿಯಿಂದ ಚಿಮ್ಮಿದ ಹಬೆ ಅಥವಾ ಬಿಸಿ ನೀರು ಮಂಗಳ ಗ್ರಹದ ಗರ್ಭಕ್ಕೆ ಇಳಿದು ಇಂಗುವಾಗ ಈ ಸಿಲಿಕಾ ಪದರಗಳು ಉಂಟಾಗಿವೆ. ಅಲ್ಲದೆ  `ಸಿಲಿಕಾ'ದ ಪದರಗಳು ಕೋಟ್ಯಂತರ ವರ್ಷಗಳ ಹಿಂದೆ ಮಂಗಳನಲ್ಲಿ ಜೀವಿ ಇದ್ದಿರಬಹುದಾದ ಸಾಧ್ಯತೆಗೆ ಪುರಾವೆ ಒದಗಿಸಿವೆ ಎಂದು ವಿಜ್ಞಾನಿಗಳು ಹೇಳಿದರು. ಭೂಮಿಯ ಮೇಲೆ ಈ ರೀತಿ ಬಿಸಿನೀರ ಚಿಲುಮೆಗಳು ಕಾಣಿಸಿದಲ್ಲೆಲ್ಲ ಸಿಲಿಕಾ  ಪದರಗಳು ಉಂಟಾಗಿದ್ದು, ಈ ಪದರಗಳಲ್ಲಿ ಪುರಾತನ ಜೀವಿಗಳ ಅವಶೇಷಗಳು ಪತ್ತೆಯಾಗಿವೆ.  

2008: ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆ ಅನುಷ್ಠಾನದಲ್ಲಿ ಕರ್ನಾಟಕ ರಾಜ್ಯವು 2007-08ನೇ ಸಾಲಿನಲ್ಲಿ ಮೊದಲ ಸ್ಥಾನ ಗಳಿಸಿತು. ನಂತರದ ಸ್ಥಾನಗಳನ್ನು ಮಹಾರಾಷ್ಟ್ರ, ಆಂಧ್ರಪ್ರದೇಶ, ಕೇರಳ ಹಾಗೂ ತಮಿಳುನಾಡು ರಾಜ್ಯಗಳು ಗಳಿಸಿದವು ಎಂದು ತೋಟಗಾರಿಕೆ ಇಲಾಖೆಯ ಕಾರ್ಯದರ್ಶಿ ಪಿ.ಗಣೇಶನ್ ತಿಳಿಸಿದರು.

2007: ಎಂಭತ್ತೇಳರ ಹರೆಯದ ಅಜ್ಜ ಅಬ್ದುಲ್ ಅಜೀಜ್ ಹಾರಿ ಘರತಕ್ಕರ್ ಗೆ ಮುಂಬೈ ಸರಣಿ ಬಾಂಬ್ ಸ್ಫೋಟದ ಪ್ರಕರಣಗಳ ವಿಚಾರಣೆ ನಡೆಸಿರುವ ವಿಶೇಷ ಟಾಡಾ ನ್ಯಾಯಾಲಯವು 6 ವರ್ಷಗಳ ಕಠಿಣಶಿಕ್ಷೆ ಹಾಗೂ 50,000 ರೂಪಾಯಿಗಳ ದಂಡವನ್ನು ವಿಧಿಸಿತು.

2007: ಮೊಬೈಲ್ ಫೋನಿನಲ್ಲಿ ದೂರದರ್ಶನ ಕಾರ್ಯಕ್ರಮ ವೀಕ್ಷಣೆ ಸೌಲಭ್ಯವು ಈದಿನ ನವದೆಹಲಿಯಲ್ಲಿ ಚಾಲನೆಗೊಂಡಿತು. ಇದರೊಂದಿಗೆ ದೂರದರ್ಶನವು ತನ್ನ ಸಾಧನೆಗೆ ಮತೊಂದು ಗರಿ ಸೇರಿಸಿಕೊಂಡಿತು.

2007: ತಮಿಳುನಾಡಿನ ತಿರುಪುರದಲ್ಲಿ ನಿರ್ಮಾಣ ಹಂತದಲ್ಲಿದ್ದ ಕಾರ್ಖಾನೆಯೊಂದರ ಗೋಡೆಯು ಪಕ್ಕದ ಸಾರಾಯಿ ಅಂಗಡಿ ಮೇಲೆ ಕುಸಿದು ಬಿದ್ದು 27 ಜನ ಮೃತರಾಗಿ ಇತರ ಐವರು ಗಾಯಗೊಂಡರು.

2007: ಮಾಹಿತಿ ಹಕ್ಕು ಅಧಿನಿಯಮವನ್ನು ಕಟ್ಟು ನಿಟ್ಟಾಗಿ ಅನುಷ್ಠಾನಗೊಳಿಸುವ ಸಲುವಾಗಿ ಕರ್ನಾಟಕ ಶಿಕ್ಷಣ ಇಲಾಖೆಯು `ಇ- ಆಡಳಿತ ವಿಭಾಗ'ದ ವತಿಯಿಂದ `ಕೇಂದ್ರೀಕೃತ ಶಿಕ್ಷಣ ಇಲಾಖೆ'ಯ ಮಾಹಿತಿ ಕೇಂದ್ರವನ್ನು ಆರಂಭಿಸಿತು.

2007: ಪ್ರೊಬೆಬಿಲಿಟಿ ಸಿದ್ಧಾಂತದ ಮೇಲೆ ಸಂಶೋಧನೆ ನಡೆಸಿದ ಓಸ್ಲೋದ ಭಾರತೀಯ ಮೂಲದ ಅಧ್ಯಾಪಕ 67 ವರ್ಷದ ಶ್ರೀನಿವಾಸ ವರದನ್ ಅವರಿಗೆ ಒಂದು ದಶಲಕ್ಷ ಡಾಲರ್ ಮೊತ್ತದ ಬಹುಮಾನ ದೊರಕಿತು. ಈ ಬಹುಮಾನದ ಬಹುತೇಕ ಹಣವನ್ನು ಅವರು ಚೆನ್ನೈ ಬಳಿಯಲ್ಲಿರುವ ತಮ್ಮ ತವರೂರು ತಂಬರಂನಲ್ಲಿ ಶೈಕ್ಷಣಿಕ ಅಭಿವೃದ್ಧಿಗೆ ಬಳಸುವುದಾಗಿ ಪ್ರಕಟಿಸಿದರು. ವರದನ್ ಅವರು ಮುಂದೆ ನಡೆಯಬಹುದಾದ ಅಪಘಾತಗಳ ಸಂಖ್ಯೆಯನ್ನು ಅಂದಾಜು ಮಾಡಲು ಕಾರು ವಿಮಾ ಕಂಪೆನಿಗಳಿಗೆ ನೆರವಾಗುವುದರಿಂದ ಹಿಡಿದು, ನೂರು ವರ್ಷಗಳ ಕಾಲ ಸಮುದ್ರದ ಅಲೆಗಳ ಹೊಡೆತವನ್ನು ಸಹಿಸಿಕೊಳ್ಳುವ ತೈಲ ಘಟಕ ಸ್ಥಾಪನೆಯವರೆಗೆ ಬಳಸಲು ಸಾಧ್ಯವಾಗುವಂತೆ ಪ್ರೊಬೆಬಿಲಿಟಿ ಸಿದ್ಧಾಂತವನ್ನು ರೂಪಿಸಿದ್ದರು.

2006: ವೈದ್ಯ ವಿದ್ಯಾರ್ಥಿಗಳು ಮತ್ತು ಇತರ ವಿದ್ಯಾರ್ಥಿಗಳ ಮೀಸಲು ವಿರೋಧಿ ಮುಷ್ಕರವನ್ನು ನಿರ್ಲಕ್ಷಿಸಿ, 2007ರ ಜೂನ್ ತಿಂಗಳಿನಿಂದ ಉನ್ನತ ಕೇಂದ್ರೀಯ ಶಿಕ್ಷಣ ಸಂಸ್ಥೆಗಳಲ್ಲಿ ಇತರ ಹಿಂದುಳಿದ ವರ್ಗಗಳಿಗೆ (ಒಬಿಸಿ) ಶೇಕಡಾ 27ರಷ್ಟು ಮೀಸಲಾತಿ ಜಾರಿಗೊಳಿಸಲು ಕೇಂದ್ರದ  ಯುಪಿಎ ಸರ್ಕಾರ ನಿರ್ಧರಿಸಿತು. ಸಾಮಾನ್ಯ ವರ್ಗಕ್ಕೆ ತೊಂದರೆಯಾಗದಂತೆ ಸೀಟುಗಳ ಸಂಖ್ಯೆಯನ್ನು ಹೆಚ್ಚಿಸಲೂ ಅದು ತೀರ್ಮಾನಿಸಿತು. ಯುಪಿಎ ಸಮನ್ವಯ ಸಮಿತಿ ಸಭೆಯಲ್ಲಿ ಎಡಪಕ್ಷಗಳು ಸರ್ಕಾರದ ಕ್ರಮವನ್ನು ಸಂಪೂರ್ಣವಾಗಿ ಬೆಂಬಲಿಸಿದ ಹಿನ್ನೆಲೆಯಲ್ಲಿ ಆಳುವ ಮೈತ್ರಿಕೂಟ ಈ ನಿರ್ಧಾರಕ್ಕೆ ಬಂದಿತು.

2006: ಭಾರತೀಯ ಗಡಿ ರಕ್ಷಣಾ ಪಡೆಯ ಹಿರಿಯ ಅಧಿಕಾರಿ ಎಸ್.ಸಿ. ನೇಗಿ (56) ಅವರು ಪ್ರಪಂಚದ ಅತಿ ಎತ್ತರದ ಶಿಖರ ಮೌಂಟ್ ಎವರೆಸ್ಟ್ ಏರಿದ ಅತ್ಯಂತ ಹಿರಿಯ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾದರು.

2006: ವಿಶ್ವದ ಅತಿ ಎತ್ತರದ ಎವರೆಸ್ಟ್ ಪರ್ವತ ಶಿಖರವನ್ನು ಏರಿದ ವಯೋವೃದ್ಧ 70 ವರ್ಷದ ಜಪಾನಿ ಪರ್ವತಾರೋಹಿ ಟಕೊವ್ ಅರಯಾಮ ಅವರಿಗೆ ಕಠ್ಮಂಡುವಿನಲ್ಲಿ ಟಿಬೆಟ್ ಸ್ವಾಯತ್ತ ಪ್ರಾಂತ್ಯದ ಚೀನಾ ಪರ್ವತಾರೋಹಣ ಸಂಘ ಈ ಸಂಬಂಧ ಪ್ರಮಾಣಪತ್ರ ನೀಡಿತು.

1999: `ಸ್ಟಾರ್ ವಾರ್ ಎಪಿಸೋಡ್ 1: ದಿ ಫ್ಯಾಂಟಮ್ ಮೆನೇಸ್' ಚಲನಚಿತ್ರವು ಐದು ದಿನಗಳಲ್ಲಿ 100 ಮಿಲಿಯನ್ ಡಾಲರುಗಳಿಗೂ ಹೆಚ್ಚು ಆದಾಯ ಗಳಿಸಿದ ಪ್ರಥಮ ಚಲನ ಚಿತ್ರವಾಯಿತು.

1984: ಬಚೇಂದ್ರಿಪಾಲ್ ಅವರು ಎವರೆಸ್ಟ್ ಶಿಖರವನ್ನು ಏರುವ ಮೂಲಕ ಜಗತ್ತಿನ ಅತ್ಯುನ್ನತ ಶಿಖರವನ್ನು ಏರಿದ ಪ್ರಥಮ ಭಾರತೀಯ ಮಹಿಳೆ ಎಂಬ ಕೀರ್ತಿಗೆ ಭಾಜನರಾದರು.

1952: ಸಿ.ಡಿ. ದೇಶಮುಖ್ ಅವರು ತಮ್ಮ ಆರು ಮುಂಗಡಪತ್ರಗಳ ಪೈಕಿ ಮೊದಲನೆಯ ಮುಂಗಡಪತ್ರವನ್ನು ಭಾರತದ ಸಂಸತ್ತಿನಲ್ಲಿ ಮಂಡಿಸಿದರು. ಇದು ಭಾರತದ ಸಂಸತಿನಲ್ಲಿ ಮಂಡನೆಯಾದ ಮೊತ್ತ ಮೊದಲನೆಯ ಮುಂಗಡಪತ್ರ.

1934: `ಬೋನಿ' ಮತ್ತು `ಗ್ಲೈಡ್' ಎಂದೇ ಪರಿಚಿತರಾಗಿದ್ದ ಅಮೆರಿಕದ ಕುಖ್ಯಾತ ಅಪರಾಧಿಗಳಾದ ಬೋನಿ ಪಾರ್ಕರ್ ಮತ್ತು ಗ್ಲೈಡ್ ಬ್ಯಾರೋ ಲೌಸಿಯಾನಾ ಸಮೀಪದ ಗಿಬ್ ಲ್ಯಾಂಡಿನಲ್ಲಿ ನಡೆದ ಘರ್ಷಣೆಯೊಂದರಲ್ಲಿ ಮೃತರಾದರು.

1926: ಮೃದಂಗ ಹಾಗೂ ಘಟಂ ವಾದನದಲ್ಲಿ ಖ್ಯಾತರಾಗಿರುವ ಕೆ.ಎನ್. ಕೃಷ್ಣಮೂರ್ತಿ ಅವರು ಕೆ.ಕೆ. ನಾರಾಯಣನ್ ಅಯ್ಯರ್- ಪಾರ್ವತಿ ಅಮ್ಮಾಳ್ ದಂಪತಿಯ ಮಗನಾಗಿ ಪಾಲ್ಘಾಟಿನ ಕೊಯಲ್ ಮನ್ನಂ ಗ್ರಾಮದಲ್ಲಿ ಜನಿಸಿದರು.

1734: ಫ್ರಾಂಜ್ ಆಂಟನ್ ಮೆಸ್ಮರ್ (1734-1815) ಜನ್ಮದಿನ. ಈಗ `ಹಿಪ್ನಾಟಿಸಂ' ಹೆಸರಿನಲ್ಲಿ ಜನಪ್ರಿಯವಾಗಿರುವ ಸಮ್ಮೋಹಿನಿಯನ್ನು `ಮೆಸ್ಮರಿಸಂ' ಹೆಸರಿನಲ್ಲಿ ಖ್ಯಾತಿಗೆ ತಂದಿದ್ದ ಜರ್ಮನಿಯ ವೈದ್ಯನೀತ.

(ಸಂಗ್ರಹ: ನೆತ್ರಕೆರೆ ಉದಯಶಂಕರ)

Friday, May 22, 2009

Issue jumps to the Governor's Court..

Issue jumps to the

 Governor's Court...

 In a decision on 21st May 2009, Thursday, Justice N. K. Patil and Mr. Justice V. Jagannathan, constituting the Division Bench of the Hon'ble High Court of Karnataka granted Bangalore Metro Rail Corporation Ltd. (BMRCL) permission to fell trees in Lalbagh and Lakshman Rao Boulevard after obtaining orders from the Tree Officer. Disappointed by this decision, petitioners Environment Support Group and others met with the Private Secretary to His Excellency the Governor of Karnataka and have submitted the representation, requesting to take firm action to ensure that Metro project is not implemented in blatant disregard for the rule of law. 

Petitioners felt that what is happening is the utter violation of rule of law and they urged the Governor to safeguard the rule of law.

 How rule of law is being violated? Go through the memorandum submitted to the Governor. The Press Note below has been jointly issued by Leo F. Saldanha, Coordinator, Environment Support Group, Sunil Dutt Yadav, Advocate and Vinay Sreenivasa, Volunteer, Hasiru Usiru.

 Karnataka High Court refuses to entertain pleas to stay Metro implementation in Lalbagh and Lakshman Rao Boulevard

 In a deeply disappointing decision earlier today (21 May 2009), Mr. Justice N. K. Patil and Mr. Justice V. Jagannathan, constituting the Division Bench of the Hon'ble High Court of Karnataka granted Bangalore Metro Rail Corporation Ltd. (BMRCL) permission to fell trees in Lalbagh and Lakshman Rao Boulevard after obtaining orders from the Tree Officer. In passing this direction, the Court disregarded fervent pleas of petitioners Environment Support Group and ors. seeking a stay of work on the southern reach of the Bangalore Metro, as it was based on an Ordinance which had lapsed and involved absolute lack of compliance with the provisions of the Karnataka Town and Country Planning Act, Government Parks (Protection) Act, Karnataka Parks, Open Spaces Playfields (Protection and Regulation) Act, Karnataka Preservation of Trees Act, and various other applicable laws.

 The Petitioners strongly advanced the contention that the State or its instrumentality cannot carry on developmental works in disregard of existing laws. It was pointed out in the PIL that the ongoing work of the Metro in Lalbagh and on R. V. Road was shockingly in contempt of the honour of the Office of His Excellency the Governor of Karnataka and the Legislature, for the following reasons:

 It has been claimed by BMRCL that they have absolutely followed all laws and procedures in implementing the Bangalore Metro project. However, close scrutiny of documents reveal that BMRCL and the State of Karnataka secured alienation of precious and irreplaceable parts of heritage public spaces such as Lalbagh in the most devious manner. Even prior to His Excellency the Governor of Karnataka passing Ordinance 4 of 2008 on 22 November 2008 to alienate a portion of Lalbagh (for Metro station) and Indira Gandhi Musical Fountain (for road widening) a preliminary Notification was issued per Sec 28 (1) of the Karnataka Industrial Area Development Board Act to acquire about 1189 sq. meters of Lalbagh along its western wall for locating a station by BMRCL. This Notification was issued on 20 November 2008, and must have obviously been preceded by a Cabinet decision.

 Such a move to acquire Lalbagh which is especially protected under the Government Parks (Protection) Act, 1975, and in principle attracts the protection under the Karnataka Government Parks, Playfields and Open Spaces (Protection and Regulation) Act, 1985, is clearly unprecedented. It would have been appropriate for the Government to first seek an amendment to these acts before proceeding to acquire the land in Lalbagh in keeping with the Principle of Separation of Powers as envisaged in the Constitution.

 The the choice of utilising the KIADB Act to acquire Lalbagh is particularly shocking as the consequent result is to convert the world famous Botanical Garden into an industrial area! Such abuse of power is totally unanticipated in the history of the State of Karnataka and is in contravention of applicable laws and various judgments of the Hon'ble Supreme Court and the High Court of Karnataka. As is well known, acquisition per this Act also provides the beneficiary full rights to commercialise the land. This flies in the face of oft stated comments by various Metro officials and even the Hon'ble Chief Minister of Karnataka that Lalbagh has been taken only to locate a portion of the station. The Detailed Project Report of the Metro on the contrary clearly confirms that every station is potential zone for commercialising assets in order to recover the high capital cost of the project. In addition, there is an order of the Ministry of Railways that clearly makes it conditional for the State to ensure that every station is fully exploited to be developed into an inter-modal transport zone and for revenue generation by exploiting its commercial value. (Copy of this order is enclosed).

 Most interestingly, and disturbingly, it is learnt from highly placed sources that this KIADB Notification was not at all brought to the attention of His Excellency the Governor, when seeking his approval for amendment of the Government Parks Act 1975 by way of the Ordinance. It is apparent that the Governor would surely have not lent his support were he fully apprised of the fact that an industrial acquisition Notification had preceded his Act of causing such alienation by way of an Ordinance.

 What follows, thereafter, are a further series of actions that amount to demonstrating contempt for the office of the Governor and the Legislature, while setting a stage for Constitutional Anarchy.

 It is widely known that as per Article 213 of the Constitution of India, it is mandatory that the Ordinance, even if accepted for the present argument to be tenable, should have been placed in the form of a Bill before the Legislature within six weeks of the next Legislature Session. From the records it is evident that a L. A. Bill No. 11 of 2009 was in fact ready to be presented to the 2nd Session of the 13th Assembly. But for reasons best known to the Government, the Bill has been withheld. Consequently, the Ordinance having spent itself, has lapsed.

 In light of this, it is sacrilegious that the portion of Lalbagh sought by BMRCL for the station, is in fact being sold at market rates based on a GO passed on 25 February 2009 invoking the Ordinance that has lapsed (copy of this order is enclosed). If Lalbagh can be sold, then there is no guarantee whatsoever that any other park, playfield or open space can be protected in future. The immediate pressing issue is whether portions of Lakshman Rao Park and K. R. Road Park, have also been sold in a similar manner.

 Based on these submissions in the PIL, it was argued that in the light of financial assistance being taken from Japan Bank, and there being a clause enabling BMRCL to mortgage property to foreign and Indian banks on first charge, the Petitioners sought to know if Lalbagh, Lakshman Rao Boulevard and K. R. Road Parks have also been mortgaged. They sought a direction from the Court to BMRCL to come clean by placing all records before the Court. The Petitioners also opposed the direction that the Tree Officer would decide regarding tree felling, especially in light of such constitutional violations, and also in view of the absence of power of the Tree Officer to go into the larger questions raised by the Petitioners.

 It was further brought to the notice of the Court that the Tree Officer was functioning under duress of senior governmental authorities, which made it impossible for him to exercise his independent discretion and power to taken an impartial decision.

 Given all the above mentioned reasons, it was finally pleaded before the Court to post the matter before the regular Bench so that the deeper issues were fully appreciated and until then to pass an interim order of stay on work. But all these pleas were in vain as the Court relied merely on the claim of the Advocate General Mr. Udaya Holla that the Town and Country Planning Act does not apply to the Metro. The Court subsequently appears to have relied on this submission, and proceeded to allow tree felling in these precious parks based merely on the review of the Tree Officer.

 It is well known that in blatant violation of all norms, laws, traditions and Constitutional obligations, and as well in total disregard to the sensitivity to heritage park spaces, the BMRCL officials engaged in the wanton act of destroying the western portion of Lalbagh on the night of 13/14 April 2009. Because of widespread public protests the issue has now assumed critical importance. It would seem appropriate in such circumstances, especially given the aforementioned illegalities and subterfuge employed by BMRCL, that the Government would take a clear and correct stand and restrain BMRCL from implementing the southern reach of the Metro. This particularly in light of the fact that Lakshman Park and K. R. Road parks, along with Lalbagh, are critical and irreplaceable public commons, and the State is expected to be a Trustee and Custodian to ensure their timeless protection.

 Subsequent to this very disappointing decision by the High Court, Mrs. Dharma Somashekar and Mrs. Chandra Ravikumar of Sanmathi and Mrs. Kathyayini Chamaraj of CIVIC Bangalore approached Mr. Baligar, IAS, Principal Secretary to the Chief Minister, to seek the Government's reconsideration of its present stand to proceed with the implementation of the Metro in the southern reach. They were stunned when greeted with ridicule and scolded for coming to the Chief Minister's office when a final decision has already been taken to put the Metro through Lalbagh and Lakshman Rao Park. When questioned how the KIADB Notification could have preceded the Ordinance by the Governor, following a moment of hesitation, Mr. Baligar claimed that this was legal as the “KIADB was an independent authority and could do as they please”. He threatened them of being in Contempt of Court by approaching the Chief Minister's and also of trying to influence the Chief Minister when the matter is sub judice. He rebuked them for wasting precious time of the Chief Minister's office for bringing such “useless” causes to his attention and taunted to contest elections to spearhead such causes.

 If this is the view at the highest level of Government, which also is the highest appellate authority for the people of the State, there is little hope for the rule of law in protecting our parks and public spaces and ensuring that public projects are implemented in a planned and lawful manner.

 Notwithstanding the above developments, the Petitioners met with the Private Secretary to His Excellency the Governor of Karnataka and have submitted the enclosed representation.

 It is now our hope that the Governor will take a firm and clear view on the matter that will ensure the protection of the Honour of his office, the Legislature and thereby ensure the Metro project is not implemented in blatant disregard for the rule of law.

Advertisement